Homeಕರ್ನಾಟಕಬೆಂಗಳೂರಿನಲ್ಲಿ ಆಟೋ ದರ ಹೆಚ್ಚಳ; ಎಷ್ಟು ದೂರಕ್ಕೆ ಎಷ್ಟಾಗುತ್ತದೆ? ಇಲ್ಲಿದೆ ಸುಲಭ ಲೆಕ್ಕ!

ಬೆಂಗಳೂರಿನಲ್ಲಿ ಆಟೋ ದರ ಹೆಚ್ಚಳ; ಎಷ್ಟು ದೂರಕ್ಕೆ ಎಷ್ಟಾಗುತ್ತದೆ? ಇಲ್ಲಿದೆ ಸುಲಭ ಲೆಕ್ಕ!

- Advertisement -
- Advertisement -

ಡಿಸೆಂಬರ್‌ 1 ರ ಬುಧವಾರದಿಂದ ಆಟೋ ರಿಕ್ಷಾದ ಹೊಸ ದರಗಳು ಜಾರಿಗೆ ಬಂದಿವೆ. ಇದು 8 ವರ್ಷಗಳ ಬಳಿಕ ರಾಜಧಾನಿಯಲ್ಲಿ ಮಾಡಲಾಗಿರುವ ಆಟೋರಿಕ್ಷಾ ದರಗಳನ್ನು ಪರಿಷ್ಕರಣೆಯಾಗಿದೆ. ಇಂಧನ ದರಗಳು, ವಾಹನ ಬಿಡಿಬಾಗಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದರಿಂದ ದರ ಏರಿಕೆ ಮಾಡುವುದು ದುಡಿಯುವ ವರ್ಗಕ್ಕೆ ಅನಿವಾರ್ಯವಾಗಿದೆ. ದರ ಏರಿಕೆಯಾಗಿದ್ದು ನಿಜವಾದರೂ, ಹಲವು ಆಟೋಗಳಲ್ಲಿ ಹಳೆಯ ಮೀಟರುಗಳೇ ಚಲಾವಣೆಯಲ್ಲಿದೆ. ಕಳೆದ ನವೆಂಬರ್‌ನಲ್ಲಿ ಸರ್ಕಾರವು ದರ ಹೆಚ್ಚಳಕ್ಕೆ ಅನುಮತಿ ನೀಡಿರುವುದರಿಂದ ಮುಂದಿನ ಫೆಬ್ರವರಿ ತಿಂಗಳ ಒಳಗಡೆ ಮೀಟರ್‌ಗಳನ್ನು ಅಪ್‌ಡೇಟ್‌‌ ಮಾಡಿಕೊಳ್ಳಲು ಚಾಲಕರಿಗೆ ಸಮಯ ನೀಡಲಾಗಿದೆ.

ಈ ಹಿಂದೆ ಬೆಂಗಳೂರಿನಲ್ಲಿ ಎರಡು ಕಿ.ಮೀ. ವರೆಗೆ ಕನಿಷ್ಠ ದರ 25 ರೂಪಾಯಿ ಇತ್ತು. ಈಗ ಈ ಕನಿಷ್ಠ ದರವು 30 ರೂಗೆ ಹೆಚ್ಚಾಗಿದೆ. ಜೊತೆಗೆ ನಂತರದ ಪ್ರತಿ ಕಿ.ಮೀ ಗೆ 15 ರೂ. ಆಗಿದೆ. ದರ ಹೆಚ್ಚಳದ ಬಗ್ಗೆ ಸರ್ಕಾರದಿಂದ ಅಧಿಸೂಚನೆ ಬಂದು ಕೇವಲ ಒಂದೇ ತಿಂಗಳು ಆಗಿರುವುದರಿಂದ ಮುಂದಿನ ವರ್ಷದ ಫೆಬ್ರವರಿವೆರೆಗೆ ಆಟೋದಲ್ಲಿನ ಮೀಟರ್‌ ಅಪ್‌ಡೇಟ್‌ ಮಾಡಲು ಚಾಲಕರಿಗೆ ಸಮಯವಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಆಟೋರಿಕ್ಷಾ ದರ ಏರಿಕೆ: ಕನಿಷ್ಠ ಬೆಲೆ 25 ರೂ.ನಿಂದ 30 ರೂಪಾಯಿಗೆ ಹೆಚ್ಚಳ

ಪ್ರಸ್ತುತ ಹೆಚ್ಚಿನ ಆಟೋಗಳಲ್ಲಿ ಹಳೆಯ ಮೀಟರ್‌ ಇರುವುದರಿಂದ ಆಟೋ ಚಾಲಕರಿಗೆ ಮತ್ತು ಪ್ರಯಾಣಿಕರಿಗೆ ಗೊಂದಲಗಳಿರುವ ಕಾರಣಕ್ಕೆ ನಾನುಗೌರಿ.ಕಾಂ ಓದುಗರಿಗಾಗಿ ಕೆಲವು ಮಾದರಿಗಳನ್ನು ನೀಡಿದ್ದ ಕೆಳಗಿನಂತಿವೆ.

ಪ್ರಯಾಣದ ದೂರ (ಕಿ. ಮೀ)ನಲ್ಲಿಡಿಸೆಂಬರ್‌ 1 ರಿಂದ ಅನ್ವಯಾಗಲಿರುವ ಹೊಸ ದರ
ಮೊದಲ 2 ಕಿ.ಮೀ ವರೆಗೆ30 ರೂ.
2.2 ಕಿ.ಮೀ 33 ರೂ.
2.4 ಕಿ.ಮೀ 36 ರೂ.
2.6 ಕಿ.ಮೀ 39 ರೂ.
2.8 ಕಿ.ಮೀ 42 ರೂ.
03 ಕಿ.ಮೀ 45 ರೂ.
3.2 ಕಿ.ಮೀ48 ರೂ.
3.4 ಕಿ.ಮೀ 51 ರೂ.
3.6 ಕಿ.ಮೀ 54 ರೂ.
ಹೀಗೇ ಪ್ರತಿ 0.2 ಕಿ.ಮಿಗೆ ಮೂರು ರೂ ಹೆಚ್ಚಾಗುತ್ತಾ ಹೋಗುತ್ತದೆ. (ಅಂದರೆ ಪ್ರತಿ 0.1 ಕಿ.ಮೀ.ಗೆ 1.5 ರೂ)
ಚಿತ್ರದಲ್ಲಿರುವ ಮೀಟರ್‌ ಹಳೆಯ ದರವೇ(37) ತೋರಿಸುತ್ತಿದೆ. ಹೊಸ ದರದ ಅನ್ವಯ, 2.9 ಕಿ.ಮೀ ಗೆ 43.5 ರೂ ಅಗಲಿದೆ. (2.9×15=43.5)

ಜೊತೆಗೆ, ಹೊಸ ಪರಿಷ್ಕೃತ ದರದಂತೆ, ಕಾಯುವಿಕೆಯ ದರ ಮೊದಲ 5 ನಿಮಿಷ ಉಚಿತವಾಗಿದೆ. ನಂತರ ಪ್ರತಿ  15 ನಿಮಿಷಕ್ಕೆ 5 ರೂಪಾಯಿ ಹೆಚ್ಚುವರಿಯಾಗಿ ಪ್ರಯಾಣಿಕರು ಪಾವತಿಸಬೇಕಾಗಿದೆ. ಅಲ್ಲದೆ, ಪ್ರಯಾಣಿಕರ ಲಗೇಜು 20 ಕೆಜಿ ಒಳಗಿದ್ದರೆ ಉಚಿತವೆಂದು ಪರಿಗಣಿಸಬೇಕಾಗಿದೆ. ಪ್ರಯಾಣಿಕರ ಲಗೇಜು 20 ಕೆಜಿಗಿಂತಲೂ ಅಧಿಕವಾಗಿದ್ದರೆ, ಪ್ರತಿ 20 ಕೆಜಿ ಲಗೇಜಿಗೆ 5 ರೂಪಾಯಿ ಹೆಚ್ಚುವರಿಯಾಗಿ ಪಾವತಿಸಬೇಕಾಗಿದೆ. ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 5 ಗಂಟೆಯವರೆಗೆ ಒಳಗೆ ಸಾಮಾನ್ಯ ದರದ ಜೊತೆಗೆ ಅದರ ಅರ್ಧ ಪಟ್ಟು ದರವನ್ನು ಪ್ರಯಾಣಿಕರು ಆಟೋಗೆ ಪಾವತಿಸಬೇಕಾಗಿದೆ.

ಪೆಟ್ರೋಲ್, ಡೀಸೆಲ್, ಗ್ಯಾಸ್‌ ಸಿಲಿಂಡರ್‌ ಬೆಲೆ ಏರಿಕೆಯಿಂದಾಗಿ ಆಟೋ ಚಾಲಕರು ಸರ್ಕಾರಕ್ಕೆ ಬೆಲೆ ಏರಿಕೆ ಮಾಡಲು ಮನವಿ ಸಲ್ಲಿಸಿದ್ದರು. ಚಾಲಕರ ಈ ಮನವಿಯನ್ನು ಪುರಸ್ಕರಿಸಿ ದರ ಹೆಚ್ಚಳಕ್ಕೆ ಅನುಮತಿ ನೀಡಿದೆ. ಬೆಂಗಳೂರಿನಲ್ಲಿ 8 ವರ್ಷಗಳ ಬಳಿಕ ಆಟೋರಿಕ್ಷಾ ದರಗಳನ್ನು ಪರಿಷ್ಕರಣೆ ಮಾಡಲಾಗಿದೆ. 8 ವರ್ಷಗಳ ಹಿಂದೆ 2013 ರಲ್ಲಿ ಆಟೋರಿಕ್ಷಾ ದರವನ್ನು ಕೊನೆಯ ಬಾರಿಗೆ ಏರಿಕೆ ಮಾಡಲಾಗಿತ್ತು.

ಇದನ್ನೂ ಓದಿ: ತೈಲ ದರ ಹೆಚ್ಚಳ: ಆಟೋ ಎಳೆದ ಶಶಿ ತರೂರ್, ಸೈಕಲ್ ಸವಾರರಾದ ತೇಜಸ್ವಿ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...