Homeಕರ್ನಾಟಕಮಳೆಗಾಗಿ ಪರ್ಜನ್ಯ ಜಪ, ಹೋಮ, ಪೂಜೆಗೆ ಆದೇಶ: ಈ ತಲೆಕೆಟ್ಟ ಸರ್ಕಾರಕ್ಕೆ ಬುದ್ದಿ ಬರುವುದಿಲ್ಲ

ಮಳೆಗಾಗಿ ಪರ್ಜನ್ಯ ಜಪ, ಹೋಮ, ಪೂಜೆಗೆ ಆದೇಶ: ಈ ತಲೆಕೆಟ್ಟ ಸರ್ಕಾರಕ್ಕೆ ಬುದ್ದಿ ಬರುವುದಿಲ್ಲ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಒಂದು ಕಡೆ ಗಣಿಗಾರಿಕೆ ನಡೆಸಲು ಸಮೃದ್ಧ ಜಮೀನನ್ನು ಅರ್ಪಿಸುವುದು. ಸುಂದರ ಕಾಡು ಕಡಿದು ಅಭಿವೃದ್ದಿ ಎನ್ನುವುದು. ಮರ ಉರುಳಿಸಿ ರಸ್ತೆ ಮಾಡುವುದು. ಕೊನೆಗೆ ಮಳೆ ಬರುತ್ತಿಲ್ಲ ಹಾಗಾಗಿ ಸಕಾಲದಲ್ಲಿ ಮಳೆ ಬರಲೆಂದು ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ಪರ್ಜನ್ಯ ಜಪ ಮತ್ತು ವಿಶೇಷ ಪೂಜೆ ನಡೆಸುವಂತೆ ಸುತ್ತೋಲೆ ಹೊರಡಿಸುವುದು. ಡೌಟೇ ಬೇಡ ಈ ಸರ್ಕಾರಕ್ಕೆ ಸಂಪೂರ್ಣ ತೆಲೆಕೆಟ್ಟು ಹೋಗಿದೆ.

ಮೇ 31ರಂದು ಕರ್ನಾಟಕ ರಾಜ್ಯ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ರಾಜ್ಯದಲ್ಲಿ ಸಕಾಲದಲ್ಲಿ ಮಳೆ ಬೆಳೆಯಾಗದೇ, ರಾಜ್ಯದ ಜನತೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಅಭಾವ ಉಂಟಾಗಿದೆ. ಹಾಗಾಗಿ ಆರ್ಥಿಕವಾಗಿ ಸದೃಢವಾಗಿರುವ ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಅಭಿಷೇಕ, ಪರ್ಜನ್ಯ ಜಪ, ಹೋಮದೊಂದಿಗೆ ಮೇ 6 ರಂದು ಬ್ರಾಹ್ಮೀ ಮೂಹೂರ್ತದೊಂದಿಗೆ ವಿಶೇಷ ಪೂಜೆಗಳನ್ನು ನಡೆಸಲು ಆದೇಶಿಸಿದೆ. 10,001/- ರೂಗಳು ವೆಚ್ಚ ಮೀರದಂತೆ ಆಯಾಯಾ ದೇವಾಲಯಗಳ ನಿಧಿಯಿಂದ ಭರಿಸಲು ಅನುಮತಿ ಸಹ ನೀಡಿದೆ

ದೇವರು ಧರ್ಮಗಳನ್ನು ನಂಬುವು ಮತ್ತು ಪಾಲಿಸುವ, ಪೂಜಿಸುವ ಹಕ್ಕನ್ನು ನಮ್ಮ ಸಂವಿಧಾನ ಎಲ್ಲರಿಗೂ ನೀಡಿದೆ. ಆದರೆ ಅದು ಖಾಸಗಿ ಹಕ್ಕಾಗಿದ್ದು ಖಾಸಗಿ ಸ್ಥಳಗಳಲ್ಲಿ ಯಾರು ಎಷ್ಟು ಬೇಕಾದರೂ ಹೋಮ ಪೂಜೆ ಮಾಡಿದರೆ ನಮಗೇನು ತೊಂದರೆಯಿಲ್ಲ. ಆದರೆ ಚುನಾಯಿತ ಸರ್ಕಾರವೊಂದು, ಸರ್ಕಾರಿ ಇಲಾಖೆಗೆ ಒಳಪಡುವ ದೇವಾಲಯಗಳಲ್ಲಿ ಈ ರೀತಿಯ ಆಚರಣೆ ಮಾಡಲು ಆದೇಶ ನೀಡಿರುವುದು ಎಲ್ಲಾ ವಿಧಗಳಿಂದಲೂ ಒಪ್ಪುವಂತಹದಲ್ಲ. ಇದು ಮೌಡ್ಯದ ಪರಮಾವಧಿ ಮಾತ್ರವಲ್ಲ ಇದರಿಂದ ಮಳೆ ಬರದಿರುವುದಕ್ಕೆ ವೈಜ್ಞಾನಿಕ ಕಾರಣಗಳನ್ನು ಮರೆಮಾಚಿ ಜನರನ್ನು ದಿಕ್ಕುತಪ್ಪಿಸುವ ಹುನ್ನಾರವೂ ಇದರಿಂದ ಅಡಗಿದೆ.

ಜನರು ಹಲವು ಊರಿನಲ್ಲಿ ಅವರ ನಂಬಿಕೆಗನುಗುಣವಾಗಿ ಈ ರೀತಿ ಮಳೆಗಾಗಿ ಪ್ರಾರ್ಥಿಸುವುದು ಸಾಮಾನ್ಯ. ಹೆಚ್ಚು ಖರ್ಚಿಲ್ಲದೇ ತಮಗೆ ಗೊತ್ತಿರುವ ವಿಧಾನಗಳಲ್ಲಿ ಅವರು ಪೂಜೆ ಮಾಡುತ್ತಾರೆ. ಹೀಗಿರುವಾಗ ಮತ್ತೆ ಸರ್ಕಾರ ದೊಡ್ಡ ಮಟ್ಟದಲ್ಲಿ ಈ ರೀತಿ ಪೂಜೆಗೆ ಆದೇಶ ನೀಡುವುದು ಸರಿಯಲ್ಲ. ಅದೇ ಹಣದಿಂದ ಕೆರೆ ಹೂಳೆತ್ತಲು ಬಳಸಿದರೆ ಒಂದಷ್ಟು ಮಳೆ ನೀರನ್ನು ಸಂಗ್ರಹಿಸಿಟ್ಟುಕೊಳ್ಳಬಹುದು ಎಂಬ ಸಾಮಾನ್ಯ ಜ್ಞಾನವೂ ನಮ್ಮ ಸರ್ಕಾರಕ್ಕಿಲ್ಲ.

ಇಷ್ಟೆಲ್ಲಾ ಅವಾಂತರುಗಳು ನಡೆಯುತ್ತಿದ್ದರೆ ಅದರ ಬಗ್ಗೆ ವಿರೋಧ ಪಕ್ಷ ಚಕಾರವನ್ನೇನು ಎತ್ತಿಲ್ಲ. ಅವರಿಗೆ ಸದಾ ಸರ್ಕಾರ ಬೀಳಿಸುವ ಚಿಂತೆ ಬಿಟ್ಟರೆ ಮತ್ತೇನಿಲ್ಲ. ಇದರಿಂದ ನಲುಗುವವರು ಮತ್ತೆ ಬಡವರು, ರೈತರೇ ಆಗಿರುವುದು ದೊಡ್ಡ ದುರಂತ.

ಹೌದು ಇಂದು ಕಾಲಕಾಲಕ್ಕೆ ಸರಿಯಾಗಿ ಮಳೆ ಬೆಳೆ ಆಗುತ್ತಿಲ್ಲ. ಇದಕ್ಕೆ ವೈಜ್ಞಾನಿಕ ಕಾರಣಗಳು ಮುಖಕ್ಕೆ ಹೊಡೆದಂತೆ ರಾಚುತ್ತಿವೆ. ಕಾಡುಗಳ ನಾಶ, ಮಿತಿ ಮೀರಿದ ಪರಿಸರ ಮಾಲಿನ್ಯದಿಂದ ಉಂಟಾಗುತ್ತಿರುವ ಹವಾಮಾನ ವೈಪರಿತ್ಯ ಕಾರಣದಿಂದ ಮಳೆಯಾಗುತ್ತಿಲ್ಲ. ಇದಕ್ಕೆ ಪರಿಹಾರಗಳು ಸಹ ಅಲ್ಲೆ ಇವೆ. ಹೆಚ್ಚು ಹೆಚ್ಚು ಮರಗಳನ್ನು ಬೆಳೆಸುವುದು, ಕಾಡುಗಳನ್ನು ಸಂರಕ್ಷಿಸುವುದು, ಮಾಲಿನ್ಯ ಉಂಟು ಮಾಡುತ್ತಿರುವ ದೊಡ್ಡ ದೊಡ್ಡ ಕಾರ್ಖಾನೆಗಳಿಗೆ ಕಡಿವಾಣ ಹಾಕುವುದು, ನೀರಿನ ಮಿತ ಬಳಕೆ ಮತ್ತು ಜಲಸಂರಕ್ಷಣೆಯ ಪಾಠಗಳನ್ನು ಜಾರಿಗೊಳಿಸುವುದು, ವೈಜ್ಞಾನಿಕ ಕೃಷಿ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಇತ್ಯಾದಿ

ಈ ಮೇಲಿನ ವಿಧಾನಗಳನ್ನು ಜಾರಿಗೊಳಿಸುವ ಹೊಣೆಯು ಪ್ರತಿಯೊಬ್ಬರ ಕರ್ತವ್ಯವಾಗಿದ್ದರೂ ಅದರ ಪ್ರಧಾನ ಜವಾಬ್ದಾರಿ ಸರ್ಕಾರದ್ದೆ. ಒಂದು ಕಡೆ ದೊಡ್ಡ ಬಂಡವಾಳಶಾಹಿಗಳು ಮಿತಿಮೀರಿದ ಪರಿಸರ ನಾಶ ಮಾಡುತ್ತಿದ್ದರೆ ಅವರಿಗೆ ಕಡಿವಾಣ ಹಾಕುವ ಬದಲು ಸರ್ಕಾರ ಅವರಿಗೆ ತೆರಿಗೆ ವಿನಾಯಿತಿ, ಹೆಚ್ಚಿನ ಸಾಲ ಸೌಲಭ್ಯ, ಕಡಿಮೆ ಬೆಲೆಗೆ ಭೂಮಿ, ನೀರು ಮತ್ತು ವಿದ್ಯುತ್ ನೀಡಿ ಮತ್ತಷ್ಟು ಕೊಬ್ಬಿಸುತ್ತಿದೆ. ನಮ್ಮ ನಾಡಿನ ಜೀವನಾಡಿಯಾದ ಪಶ್ಚಿಮ ಘಟ್ಟಗಳು ದಿನೇ ದಿನೇ ಬರಿದಾಗುತ್ತಿದೆ. ಇದನ್ನು ತಡೆಗಟ್ಟಬೇಕಾದ ಸರ್ಕಾರ ಪೂಜೆ ಮಾಡಿ ಮಳೆ ತರಲು ಮುಂದಾಗಿರುವುದು ನಮ್ಮೆಲ್ಲರ ದುರಂತವಾಗಿದೆ.

ಅಂದ ಮಾತ್ರಕ್ಕೆ ನಾವು ರಸ್ತೆ ಕಟ್ಟುವುದರ, ದೊಡ್ಡ ಬಿಲ್ಡಿಂಗ್ ಕಟ್ಟುವುದನ್ನು, ಅಭಿವೃದ್ಧಿಯನ್ನು ವಿರೋಧಿಸುತ್ತಿದ್ದೇವೆ ಅಂತ ಅಲ್ಲ. ಬದಲಿಗೆ ಆ ಅಭಿವೃದ್ಧಿ ಜನಕ್ಕೆ, ಪರಿಸರಕ್ಕೆ ಧಕ್ಕೆ ತರುವಂತೆ ಇರಬಾರದು. ಪರಿಸರ ಸ್ನೇಹಿ ಅಭಿವೃದ್ದಿ ಮಾದರಿಯನ್ನು ಬೆಂಬಲಿಸಬೇಕು..

ಇನ್ನೊಂದು ಕಡೆ ಮಳೆಗಾಗಿ ಮೋಡ ಬಿತ್ತನೆ ಮಾಡಲು 91ಕೋಟಿ ರೂಗಳ ಅನುದಾನಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಈ ಮೋಡ ಬಿತ್ತನೆ ಎಂಬುದು ಬರಗಾಲದಲ್ಲಿಯೂ ಒಂದಷ್ಟು ದುಡ್ಡು ಮಾಡಿಕೊಳ್ಳಲು ಸಚಿವರಿಗೆ, ಅಧಿಕಾರಿಗಳಿಗೆ ಇನ್ನೊಂದು ಮಾರ್ಗವೇ ಹೊರತು ಈ ಮೋಡ ಬಿತ್ತನೆಯಿಂದ ಮಳೆ ಬಂದ ಉದಾಹರಣೆ ಮಾತ್ರ ಇಲ್ಲ.

ಹೆಸರಾಂತ ಪತ್ರಕರ್ತ ಪಿ ಸಾಯಿನಾಥ್‍ರವರು ‘ಬರ ಅಂದ್ರೆ ಎಲ್ಲರಿಗೂ ಇಷ್ಟ’ ಎಂಬ ಪುಸ್ತಕ ಬರೆದು ದುರಂತಗಳನ್ನು ಎಳೆ ಎಳೆಯಾಗಿ ವಿವರಿಸಿದ್ದರು. ಆದರೇನು ಮಾಡುವುದು ಬಹುಶಃ ಹೀಗಿನ ಸರ್ಕಾರದ ಯಾವೊಬ್ಬರು ಅದನ್ನು ಓದಿರುವುದಿಲ್ಲ. ಅಷ್ಟು ಮಾತ್ರವಲ್ಲ ಪ್ರತಿ ವಾರ ಪರಿಸರ ಉಳಿಸಿಕೊಳ್ಳುವ ಸರಳ ವಿಧಾನಗಳ ಬಗ್ಗೆ ನಮ್ಮ ನಾಗೇಶ್ ಹೆಗಡೆಯವರು ಲೇಖನ, ಪತ್ರ ಬರೆಯುತ್ತಿರುತ್ತಾರೆ. ನಮ್ಮ ದುರಾದೃಷ್ಟವೋ ಎನೋ ಇವರ್ಯಾರು ಅದನ್ನು ಸಹ ಓದಿದಂತೆ ಕಾಣುವುದಿಲ್ಲ. ಓದಿದರೆ ಇಂತಹ ಪ್ಲಾಪ್ ಶೋ ಮಾಡಲು ಮುಂದಾಗುತ್ತಿರಲಿಲ್ಲ.

ಹಿಂದೆ ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಮೌಡ್ಯ ನಿಷೇಧ ಕಾಯ್ದೆ ತರಲು ಹೊರಟಾಗ ವಿರೋಧಿಸಿದರು ಇವರೆ ಇರಬೇಕು. ಪಾಪಾ ಅಂತಹ ಸಿದ್ದರಾಮಯ್ಯನವರು ಸಹ ಈಗ ಮೌನವಾಗಿರುವುದು ದುರಂತದ ಮೇಲೆ ದುರಂತ ಎನ್ನಬಹುದು. ಈಗ ಜನರೆ ಎಚ್ಚೆತ್ತುಕೊಂಡು ಮಂತ್ರಕ್ಕೆ ಮಾವಿನ ಕಾಯಿ ಉದುರುವುದಿಲ್ಲ, ಇಂತಹ ಗಿಮಿಕ್ ಮಾಡುವುದು ಬಿಟ್ಟು ಸರಿಯಾಗಿ ಕೆಲಸ ಮಾಡುವಂತೆ ಸರ್ಕಾರನ್ನು ಆಗ್ರಹಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...