Homeಕರ್ನಾಟಕಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ

ಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ

- Advertisement -
- Advertisement -

ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪರಿಚಯಿಸಲಾಗುತ್ತಿದೆ. ತರಗತಿಗಳು ಆರಂಭವಾಗಿ ಸುಮಾರು ಒಂದು ತಿಂಗಳ ಬಳಿಕ ಸರ್ಕಾರ ಎನ್‌ಇಪಿಯ ಪಠ್ಯಕ್ರಮವನ್ನು ಬದಲಾಯಿಸಿದೆ ಎಂದು ಮೈಸೂರು ಮಹಾರಾಜ ಕಾಲೇಜು ವಿದ್ಯಾರ್ಥಿಗಳು ಕಾಲೇಜು ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸಿದರು.

ಆಲ್‌ ಇಂಡಿಯಾ ಡೆಮಾಕ್ರಟಿಕ್ ಸ್ಟುಡೆಂಟ್ ಆರ್ಗನೈಸೇಷನ್‌ (ಎಐಡಿಎಸ್‌ಒ) ನೇತೃತ್ವದಲ್ಲಿ ಕಾಲೇಜು ಕ್ಯಾಂಪಸ್‌ನಲ್ಲಿ ಸೇರಿದ ವಿದ್ಯಾರ್ಥಿಗಳು ಸರ್ಕಾರ ಹಾಗೂ ಮೈಸೂರು ವಿವಿಯ ನೂತನ ಸುತ್ತೋಲೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಏನಿದು ಹೊಸ ಸುತ್ತೋಲೆ? ವಿದ್ಯಾರ್ಥಿಗಳ ವಿರೋಧವೇಕೆ?

‘ಓಪನ್‌ ಎಲೆಕ್ಟಿವ್‌’ (ಮುಕ್ತ ಐಚ್ಛಿಕ) ವಿಷಯದ ಕುರಿತು ಮಾಡಿರುವ ಸುತ್ತೋಲೆ ಆತಂಕ ಸೃಷ್ಟಿಸಿದೆ. “ಕಲಾ ವಿದ್ಯಾರ್ಥಿಗಳು- ‘ಓಪನ್ ಎಲೆಕ್ಟಿವ್‌’ ವಿಷಯವನ್ನು ‘ವಾಣಿಜ್ಯ’ ಅಥವಾ ‘ವಿಜ್ಞಾನ’ ವಿಷಯಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಿಕೊಳ್ಳಬೇಕು. ವಾಣಿಜ್ಯ ವಿದ್ಯಾರ್ಥಿಗಳು- ಕಲಾ ಅಥವಾ ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಳ್ಳಬೇಕು. ವಿಜ್ಞಾನ ವಿದ್ಯಾರ್ಥಿಗಳು- ಕಲಾ ಅಥವಾ ವಾಣಿಜ್ಯ ವಿಷಯವನ್ನು ಆಯ್ಕೆ ಮಾಡಿಕೊಳ್ಳಬೇಕು” ಎಂದು ಸರ್ಕಾರ ಸೂಚಿಸಿದೆ. ಅದರನ್ವಯ ಮೈಸೂರು ವಿಶ್ವವಿದ್ಯಾನಿಲಯ ನೀಡಿರುವ ಹೊಸ ಸುತ್ತೋಲೆ ಹೊರಡಿಸಿದ್ದು, ವಿದ್ಯಾರ್ಥಿಗಳು ಆತಂಕ ಹೊರಹಾಕಿದ್ದಾರೆ.

ಇಲ್ಲಿಯವರೆಗೆ ವಿದ್ಯಾರ್ಥಿಗಳು ಬಹುಶಿಸ್ತೀಯ ಪಠ್ಯಕ್ರಮದಲ್ಲಿ ಅಧ್ಯಯನ ಮಾಡಿದವರಲ್ಲ. ಪಿಯುಸಿಯಲ್ಲಿ ಕಲಾ ವಿಷಯವೆಂದರೆ ಕಲಾ ವಿಷಯವನ್ನಷ್ಟೇ ಓದಿಕೊಂಡು ಬಂದಿದ್ದೇವೆ. ವಿಜ್ಞಾನ, ವಾಣಿಜ್ಯ ವಿಷಯದ ವಿದ್ಯಾರ್ಥಿಗಳೂ ತಮ್ಮ ಆಯ್ಕೆಗಳಿಗೆ ಸೀಮಿತವಾಗಿದ್ದಾರೆ. ಎನ್‌ಇಪಿಯಿಂದಾಗಿ ಏಕಾಏಕಿ ಬಹುಶಿಸ್ತೀಯ ಪಠ್ಯಕ್ರಮಕ್ಕೆ ಹೋಗಬೇಕಾಗಿದೆ. ವಾಣಿಜ್ಯ ಹಾಗೂ ಸೈನ್ಸ್ ವಿದ್ಯಾರ್ಥಿಗಳು ಸುಲಭವಾಗಿ ಆರ್ಟ್ಸ್ ತೆಗೆದುಕೊಂಡು ತಮ್ಮ ಅಂಕಗಳನ್ನು ಹೆಚ್ಚಿಸಿಕೊಳ್ಳಲು ಅವಕಾಶಗಳಿವೆ. ಆದರೆ ಕಲಾ ವಿದ್ಯಾರ್ಥಿಗಳು ವಿಜ್ಞಾನ ಅಥವಾ ವಾಣಿಜ್ಯ ವಿಷಯವನ್ನು ತೆಗೆದುಕೊಂಡು ಓದುವುದು ಕಷ್ಟವಾಗುತ್ತದೆ ಎಂಬುದು ಪ್ರತಿಭಟನೆಗೆ ಕಾರಣ.

ಎಐಡಿಎಸ್‌ಒ ಸಂಘಟನೆಯ ಉಪಾಧ್ಯಕ್ಷರಾದ ಆಸಿಯಾ ಮಾತನಾಡಿ, “ಐಚ್ಛಿಕ ವಿಷಯ ಎಂದರೆ ಏನು? ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳುವಂತಹದ್ದು. ಓಪನ್ ಎಲೆಕ್ಟಿವ್‌ ಅಂದ ಮೇಲೆ ಇವರು ಕಡ್ಡಾಯವೆಂದು ಬೇರೆ ವಿಷಯ ತೆಗೆದುಕೊಳ್ಳಿ ಎನ್ನುವುದು ಸರಿಯೇ? ವಿದ್ಯಾರ್ಥಿಗಳಿಗೆ ಹೇಳೋದೊಂದು ಮಾಡೋದೊಂದು ಆಗುವುದಿಲ್ಲವೆ? ಇವರು ವಿದ್ಯಾರ್ಥಿಗಳ ಪರವೋ? ಪಾಲಿಸಿಗಳನ್ನು ಮಾಡುವುದಕ್ಕಾಗಿಯೇ ಬಂದಿದ್ದಾರೋ? ಇಂತಹ ಪಾಲಿಸಿಗಳನ್ನು ಏತಕ್ಕಾಗಿ ತರುತ್ತಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದರು.

“ಬೆಳಿಗ್ಗೆಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಸಮಸ್ಯೆಯನ್ನು ಕುಲಪತಿಯವರು ಕೇಳಲು ಬಂದಿಲ್ಲ. ವಿದ್ಯಾರ್ಥಿಗಳು ತರಗತಿ ಬಿಟ್ಟು ಕುಳಿತ್ತಿದ್ದಾರೆ. ವಿದ್ಯಾರ್ಥಿಗಳ ಪರ ಇರಬೇಕಾದ ಸರ್ಕಾರಗಳು, ಕುಲಪತಿಗಳು ಕಿವಿಮುಚ್ಚಿ ಕುಳಿತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಇದನ್ನೂ ಓದಿರಿ: ರಾಶ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020: ಹಿಂದು-ಮುಂದು


ಸರ್ಕಾರದ ಸೂಚನೆಯನ್ವಯ ಮೈಸೂರು ವಿಶ್ವವಿದ್ಯಾನಿಲಯ ಸುತ್ತೋಲೆ ಹೊರಡಿಸಿರುವುದು…
ಮುಕ್ತ ಐಚ್ಛಿಕ (ಓಪನ್‌ ಎಲೆಕ್ಟಿವ್) ಸಂಬಂಧಿಸಿದಂತೆ ವಿವಿ ಹೊಸ ಪಠ್ಯಕ್ರಮಕ್ಕೆ ಸುತ್ತೋಲೆ ಹೊರಡಿಸಿರುವುದು.

ಓಪನ್‌ ಎಲೆಕ್ಟಿವ್‌ (ಮುಕ್ತ ಐಚ್ಛಿಕ) ವಿಷಯವು ವಿದ್ಯಾರ್ಥಿಗಳ ಆಯ್ಕೆಗೆ ಬಿಟ್ಟಿದ್ದು. ವಿದ್ಯಾರ್ಥಿಗಳೇ ಆಯ್ಕೆ ಮಾಡಿಕೊಳ್ಳಬೇಕಲ್ಲವೇ? ಆದರೆ ಸರ್ಕಾರ ಮುಕ್ತ ಐಚ್ಛಿಕ ವಿಷಯವನ್ನು ವಿದ್ಯಾರ್ಥಿಗಳ ಮೇಲೆ ಹೇರುತ್ತಿದೆ. ಮುಖ್ಯವಾಗಿ ಎನ್‌ಇಪಿ ಜಾರಿಯಾಗುತ್ತಿರುವುದು ಕೊರೊನಾದಿಂದಾಗಿ ಸುಮಾರು ಒಂದೂವರೆ ವರ್ಷ ಮನೆಯಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಎಂಬುದು ತಜ್ಞರ ಅಭಿಪ್ರಾಯ.

ಎನ್‌ಇಪಿ ವಿದ್ಯಾರ್ಥಿ ಸ್ನೇಹಿ ಎಂಬುದಕ್ಕೆ ಅರ್ಥವಿಲ್ಲ. ಈಗಾಗಲೇ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳು ಐಚ್ಛಿಕ ವಿಷಯಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕೆಲವು ಕಡೆ ಬಿ.ಎ. ವಿದ್ಯಾರ್ಥಿಗಳು ಬಿ.ಕಾಂ.ನಿಂದ ಓಪನ್ ಎಲೆಕ್ಟಿವ್‌ ಅಥವಾ ವಿಜ್ಞಾನದ ಓಪನ್ ಎಲೆಕ್ಟಿವ್ ತೆಗೆದುಕೊಂಡಿದ್ದಾರೆ. ಆದರೆ ಕಡ್ಡಾಯವಾಗಿ ತೆಗೆದುಕೊಳ್ಳಬೇಕೆಂಬ ಒತ್ತಾಯವಿರಲಿಲ್ಲ. ದುರಂತವೆಂದರೆ ಹೀಗೆ ಒತ್ತಾಯಪೂರ್ವಕವಾಗಿ ಹೇರಿದಾಗ ಹೈರಾಣುಗುತ್ತೇವೆ ಎಂಬುದು ತಜ್ಞರ ಆತಂಕ.

ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳ ಜೊತೆಗೆ ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಸುಭಾಷ್‌, ಉಪಾಧ್ಯಕ್ಷರಾದ ಆಸಿಯಾ, ಕಾರ್ಯದರ್ಶಿ ಚಂದ್ರಕಲಾ ಹಾಜರಿದ್ದರು.


ಇದನ್ನೂ ಓದಿರಿ: ಈ ಎನ್‌ಇಪಿ ಅಂದ್ರೆ ಏನು? ಅದರೊಳಗ ಏನೈತಿ, ಏನಿಲ್ಲ?


ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್‌ ಹೇಳುವುದೇನು?

ಎನ್‌ಇಪಿ ಜಾರಿಯಲ್ಲಿ ಹೆಚ್ಚು ಧಾವಂತದಲ್ಲಿರುವ ವಿವಿಗಳಲ್ಲಿ ಮೈಸೂರು ವಿವಿಯೂ ಒಂದು. ಸರ್ಕಾರದ ಹೊಸ ನಿಯಮವನ್ನು ಜಾರಿಗೊಳಿಸುವಂತೆ ಮೈಸೂರು ವಿವಿ ಸುತ್ತೋಲೆ ಹೊರಡಿಸಿರುವ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿದ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್‌, “ಪ್ರಥಮ ವರ್ಷದ ಪ್ರವೇಶಾತಿ ಡಿ.2ರಂದು ಆರಂಭವಾಗಿದೆ. ಈವರೆಗೆ ಕಾಲೇಜುಗಳು ಆರಂಭವಾಗಿರಲಿಲ್ಲ. ಹೀಗಾಗಿ ಈ ಸುತ್ತೋಲೆಯಿಂದ ತೊಂದರೆಯಾಗದು” ಎಂದರು.

‘ಗ್ರಾಮಾಂತರ ವಿದ್ಯಾರ್ಥಿಗಳ ಕಷ್ಟಕ್ಕೆ ಪರಿಹಾರವೇನು?’ ಎಂದು ಕೇಳಿದಾಗ, “ಎಲ್ಲಿಲ್ಲಿ ಇದು ಜಾರಿಗೆ ಸಾಧ್ಯವಿಲ್ಲವೋ ಅಲ್ಲಿ ಬಿಟ್ಟುಬಿಡಿ ಎಂದು ಸರ್ಕಾರ ಹೇಳಿದೆ. ಆರ್ಟ್ಸ್‌ ಇರುವ ಕಡೆ ಕಾಮರ್ಸ್ ಇದ್ದೇ ಇರುತ್ತದೆ. ಕಾಮರ್ಸ್ ವಿದ್ಯಾರ್ಥಿಗಳು ಆರ್ಟ್ಸ್ ವಿಷಯವನ್ನು, ಆರ್ಟ್ಸ್ ವಿದ್ಯಾರ್ಥಿಗಳು ಕಾಮರ್ಸ್ ತೆಗೆದುಕೊಳ್ಳಬಹುದು. ಎನ್‌ಇಪಿಯ ಮುಖ್ಯ ಉದ್ದೇಶ ಬಹುಶಿಸ್ತೀಯ ಪಠ್ಯಕ್ರಮ. ಕಲಾ ವಿದ್ಯಾರ್ಥಿ ವಾಣಿಜ್ಯದ ಒಂದು ವಿಷಯವನ್ನು, ವಿಜ್ಞಾನದ ಒಂದು ವಿಷಯವನ್ನು ತೆಗೆದುಕೊಂಡರೆ ಕೌಶಲ ವೃದ್ಧಿಯಾಗುತ್ತದೆ” ಎಂದು ತಿಳಿಸಿದರು.

‘ವಿದ್ಯಾರ್ಥಿಗಳಿಗೆ ಕಷ್ಟವಾಗುವಂತೆ ಐಚ್ಛಿಕ ವಿಷಯವನ್ನು ಹೇರುವುದು ಸರಿಯೇ?’ ಎಂದು ಪ್ರಶ್ನಿಸಿದಾಗ, “ಐಚ್ಛಿಕ ವಿಷಯಗಳು ಕಷ್ಟವಾಗಿರುವುದಿಲ್ಲ. ಪ್ರಾಥಮಿಕ ವಿಷಯಗಳನ್ನಷ್ಟೇ ಪರಿಚಯಿಸಲಾಗುತ್ತದೆ. ಉದ್ಯೋಗ ಕೇಂದ್ರಿತ ವಿಷಯಕ್ಕೆ ಐಚ್ಛಿಕ ಆಯ್ಕೆ ಆದ್ಯತೆ ನೀಡುತ್ತದೆ” ಎಂದರು. ಐಚ್ಛಿಕ ವಿಷಯ ಕಷ್ಟವಾಗಿರುವುದಿಲ್ಲ ಆದರೆ ಉದ್ಯೋಗ ದೊರಕಿಸಿಕೊಡುತ್ತದೆ ಎಂಬುದು ಕುಲಪತಿಯವರ ಅಭಿಪ್ರಾಯ. ಆದರೆ ಬೋಧಕರ ಪ್ರಕಾರ, ಈ ಐಚ್ಛಿಕ ವಿಷಯಗಳು ವಿದ್ಯಾರ್ಥಿಗಳಿಗೆ ತಲೆಬಿಸಿಯಾಗುವಂತಿವೆ.

ಈ ವಿಚಾರವಾಗಿ ಮೈಸೂರು ವಿವಿ ಕುಲಪತಿಯವರು ಅರ್ಧಸತ್ಯಗಳನ್ನು ಹೇಳುತ್ತಿದ್ದಾರೆ ಎಂಬುದನ್ನು ‘ನಾನುಗೌರಿ.ಕಾಂ’ ವರದಿ ಮಾಡಿದೆ (ಪೂರ್ಣ ವಿವರಗಳಿಗೆ ‘ದಿಢೀರ್‌ ಪಠ್ಯ ಬದಲಾವಣೆ ಸುತ್ತೋಲೆ: ಎನ್‌ಇಪಿಯಿಂದ ವಿದ್ಯಾರ್ಥಿಗಳು ಹೈರಾಣು’ ವರದಿ ಓದಿರಿ)


ಇದನ್ನೂ ಓದಿರಿ: ದಿಢೀರ್‌ ಪಠ್ಯ ಬದಲಾವಣೆ ಸುತ್ತೋಲೆ: ಎನ್‌ಇಪಿಯಿಂದ ವಿದ್ಯಾರ್ಥಿಗಳು ಹೈರಾಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...