Homeಕರ್ನಾಟಕಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ

ಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ

- Advertisement -
- Advertisement -

ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪರಿಚಯಿಸಲಾಗುತ್ತಿದೆ. ತರಗತಿಗಳು ಆರಂಭವಾಗಿ ಸುಮಾರು ಒಂದು ತಿಂಗಳ ಬಳಿಕ ಸರ್ಕಾರ ಎನ್‌ಇಪಿಯ ಪಠ್ಯಕ್ರಮವನ್ನು ಬದಲಾಯಿಸಿದೆ ಎಂದು ಮೈಸೂರು ಮಹಾರಾಜ ಕಾಲೇಜು ವಿದ್ಯಾರ್ಥಿಗಳು ಕಾಲೇಜು ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸಿದರು.

ಆಲ್‌ ಇಂಡಿಯಾ ಡೆಮಾಕ್ರಟಿಕ್ ಸ್ಟುಡೆಂಟ್ ಆರ್ಗನೈಸೇಷನ್‌ (ಎಐಡಿಎಸ್‌ಒ) ನೇತೃತ್ವದಲ್ಲಿ ಕಾಲೇಜು ಕ್ಯಾಂಪಸ್‌ನಲ್ಲಿ ಸೇರಿದ ವಿದ್ಯಾರ್ಥಿಗಳು ಸರ್ಕಾರ ಹಾಗೂ ಮೈಸೂರು ವಿವಿಯ ನೂತನ ಸುತ್ತೋಲೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಏನಿದು ಹೊಸ ಸುತ್ತೋಲೆ? ವಿದ್ಯಾರ್ಥಿಗಳ ವಿರೋಧವೇಕೆ?

‘ಓಪನ್‌ ಎಲೆಕ್ಟಿವ್‌’ (ಮುಕ್ತ ಐಚ್ಛಿಕ) ವಿಷಯದ ಕುರಿತು ಮಾಡಿರುವ ಸುತ್ತೋಲೆ ಆತಂಕ ಸೃಷ್ಟಿಸಿದೆ. “ಕಲಾ ವಿದ್ಯಾರ್ಥಿಗಳು- ‘ಓಪನ್ ಎಲೆಕ್ಟಿವ್‌’ ವಿಷಯವನ್ನು ‘ವಾಣಿಜ್ಯ’ ಅಥವಾ ‘ವಿಜ್ಞಾನ’ ವಿಷಯಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಿಕೊಳ್ಳಬೇಕು. ವಾಣಿಜ್ಯ ವಿದ್ಯಾರ್ಥಿಗಳು- ಕಲಾ ಅಥವಾ ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಳ್ಳಬೇಕು. ವಿಜ್ಞಾನ ವಿದ್ಯಾರ್ಥಿಗಳು- ಕಲಾ ಅಥವಾ ವಾಣಿಜ್ಯ ವಿಷಯವನ್ನು ಆಯ್ಕೆ ಮಾಡಿಕೊಳ್ಳಬೇಕು” ಎಂದು ಸರ್ಕಾರ ಸೂಚಿಸಿದೆ. ಅದರನ್ವಯ ಮೈಸೂರು ವಿಶ್ವವಿದ್ಯಾನಿಲಯ ನೀಡಿರುವ ಹೊಸ ಸುತ್ತೋಲೆ ಹೊರಡಿಸಿದ್ದು, ವಿದ್ಯಾರ್ಥಿಗಳು ಆತಂಕ ಹೊರಹಾಕಿದ್ದಾರೆ.

ಇಲ್ಲಿಯವರೆಗೆ ವಿದ್ಯಾರ್ಥಿಗಳು ಬಹುಶಿಸ್ತೀಯ ಪಠ್ಯಕ್ರಮದಲ್ಲಿ ಅಧ್ಯಯನ ಮಾಡಿದವರಲ್ಲ. ಪಿಯುಸಿಯಲ್ಲಿ ಕಲಾ ವಿಷಯವೆಂದರೆ ಕಲಾ ವಿಷಯವನ್ನಷ್ಟೇ ಓದಿಕೊಂಡು ಬಂದಿದ್ದೇವೆ. ವಿಜ್ಞಾನ, ವಾಣಿಜ್ಯ ವಿಷಯದ ವಿದ್ಯಾರ್ಥಿಗಳೂ ತಮ್ಮ ಆಯ್ಕೆಗಳಿಗೆ ಸೀಮಿತವಾಗಿದ್ದಾರೆ. ಎನ್‌ಇಪಿಯಿಂದಾಗಿ ಏಕಾಏಕಿ ಬಹುಶಿಸ್ತೀಯ ಪಠ್ಯಕ್ರಮಕ್ಕೆ ಹೋಗಬೇಕಾಗಿದೆ. ವಾಣಿಜ್ಯ ಹಾಗೂ ಸೈನ್ಸ್ ವಿದ್ಯಾರ್ಥಿಗಳು ಸುಲಭವಾಗಿ ಆರ್ಟ್ಸ್ ತೆಗೆದುಕೊಂಡು ತಮ್ಮ ಅಂಕಗಳನ್ನು ಹೆಚ್ಚಿಸಿಕೊಳ್ಳಲು ಅವಕಾಶಗಳಿವೆ. ಆದರೆ ಕಲಾ ವಿದ್ಯಾರ್ಥಿಗಳು ವಿಜ್ಞಾನ ಅಥವಾ ವಾಣಿಜ್ಯ ವಿಷಯವನ್ನು ತೆಗೆದುಕೊಂಡು ಓದುವುದು ಕಷ್ಟವಾಗುತ್ತದೆ ಎಂಬುದು ಪ್ರತಿಭಟನೆಗೆ ಕಾರಣ.

ಎಐಡಿಎಸ್‌ಒ ಸಂಘಟನೆಯ ಉಪಾಧ್ಯಕ್ಷರಾದ ಆಸಿಯಾ ಮಾತನಾಡಿ, “ಐಚ್ಛಿಕ ವಿಷಯ ಎಂದರೆ ಏನು? ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳುವಂತಹದ್ದು. ಓಪನ್ ಎಲೆಕ್ಟಿವ್‌ ಅಂದ ಮೇಲೆ ಇವರು ಕಡ್ಡಾಯವೆಂದು ಬೇರೆ ವಿಷಯ ತೆಗೆದುಕೊಳ್ಳಿ ಎನ್ನುವುದು ಸರಿಯೇ? ವಿದ್ಯಾರ್ಥಿಗಳಿಗೆ ಹೇಳೋದೊಂದು ಮಾಡೋದೊಂದು ಆಗುವುದಿಲ್ಲವೆ? ಇವರು ವಿದ್ಯಾರ್ಥಿಗಳ ಪರವೋ? ಪಾಲಿಸಿಗಳನ್ನು ಮಾಡುವುದಕ್ಕಾಗಿಯೇ ಬಂದಿದ್ದಾರೋ? ಇಂತಹ ಪಾಲಿಸಿಗಳನ್ನು ಏತಕ್ಕಾಗಿ ತರುತ್ತಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದರು.

“ಬೆಳಿಗ್ಗೆಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಸಮಸ್ಯೆಯನ್ನು ಕುಲಪತಿಯವರು ಕೇಳಲು ಬಂದಿಲ್ಲ. ವಿದ್ಯಾರ್ಥಿಗಳು ತರಗತಿ ಬಿಟ್ಟು ಕುಳಿತ್ತಿದ್ದಾರೆ. ವಿದ್ಯಾರ್ಥಿಗಳ ಪರ ಇರಬೇಕಾದ ಸರ್ಕಾರಗಳು, ಕುಲಪತಿಗಳು ಕಿವಿಮುಚ್ಚಿ ಕುಳಿತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಇದನ್ನೂ ಓದಿರಿ: ರಾಶ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020: ಹಿಂದು-ಮುಂದು


ಸರ್ಕಾರದ ಸೂಚನೆಯನ್ವಯ ಮೈಸೂರು ವಿಶ್ವವಿದ್ಯಾನಿಲಯ ಸುತ್ತೋಲೆ ಹೊರಡಿಸಿರುವುದು…
ಮುಕ್ತ ಐಚ್ಛಿಕ (ಓಪನ್‌ ಎಲೆಕ್ಟಿವ್) ಸಂಬಂಧಿಸಿದಂತೆ ವಿವಿ ಹೊಸ ಪಠ್ಯಕ್ರಮಕ್ಕೆ ಸುತ್ತೋಲೆ ಹೊರಡಿಸಿರುವುದು.

ಓಪನ್‌ ಎಲೆಕ್ಟಿವ್‌ (ಮುಕ್ತ ಐಚ್ಛಿಕ) ವಿಷಯವು ವಿದ್ಯಾರ್ಥಿಗಳ ಆಯ್ಕೆಗೆ ಬಿಟ್ಟಿದ್ದು. ವಿದ್ಯಾರ್ಥಿಗಳೇ ಆಯ್ಕೆ ಮಾಡಿಕೊಳ್ಳಬೇಕಲ್ಲವೇ? ಆದರೆ ಸರ್ಕಾರ ಮುಕ್ತ ಐಚ್ಛಿಕ ವಿಷಯವನ್ನು ವಿದ್ಯಾರ್ಥಿಗಳ ಮೇಲೆ ಹೇರುತ್ತಿದೆ. ಮುಖ್ಯವಾಗಿ ಎನ್‌ಇಪಿ ಜಾರಿಯಾಗುತ್ತಿರುವುದು ಕೊರೊನಾದಿಂದಾಗಿ ಸುಮಾರು ಒಂದೂವರೆ ವರ್ಷ ಮನೆಯಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಎಂಬುದು ತಜ್ಞರ ಅಭಿಪ್ರಾಯ.

ಎನ್‌ಇಪಿ ವಿದ್ಯಾರ್ಥಿ ಸ್ನೇಹಿ ಎಂಬುದಕ್ಕೆ ಅರ್ಥವಿಲ್ಲ. ಈಗಾಗಲೇ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳು ಐಚ್ಛಿಕ ವಿಷಯಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕೆಲವು ಕಡೆ ಬಿ.ಎ. ವಿದ್ಯಾರ್ಥಿಗಳು ಬಿ.ಕಾಂ.ನಿಂದ ಓಪನ್ ಎಲೆಕ್ಟಿವ್‌ ಅಥವಾ ವಿಜ್ಞಾನದ ಓಪನ್ ಎಲೆಕ್ಟಿವ್ ತೆಗೆದುಕೊಂಡಿದ್ದಾರೆ. ಆದರೆ ಕಡ್ಡಾಯವಾಗಿ ತೆಗೆದುಕೊಳ್ಳಬೇಕೆಂಬ ಒತ್ತಾಯವಿರಲಿಲ್ಲ. ದುರಂತವೆಂದರೆ ಹೀಗೆ ಒತ್ತಾಯಪೂರ್ವಕವಾಗಿ ಹೇರಿದಾಗ ಹೈರಾಣುಗುತ್ತೇವೆ ಎಂಬುದು ತಜ್ಞರ ಆತಂಕ.

ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳ ಜೊತೆಗೆ ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಸುಭಾಷ್‌, ಉಪಾಧ್ಯಕ್ಷರಾದ ಆಸಿಯಾ, ಕಾರ್ಯದರ್ಶಿ ಚಂದ್ರಕಲಾ ಹಾಜರಿದ್ದರು.


ಇದನ್ನೂ ಓದಿರಿ: ಈ ಎನ್‌ಇಪಿ ಅಂದ್ರೆ ಏನು? ಅದರೊಳಗ ಏನೈತಿ, ಏನಿಲ್ಲ?


ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್‌ ಹೇಳುವುದೇನು?

ಎನ್‌ಇಪಿ ಜಾರಿಯಲ್ಲಿ ಹೆಚ್ಚು ಧಾವಂತದಲ್ಲಿರುವ ವಿವಿಗಳಲ್ಲಿ ಮೈಸೂರು ವಿವಿಯೂ ಒಂದು. ಸರ್ಕಾರದ ಹೊಸ ನಿಯಮವನ್ನು ಜಾರಿಗೊಳಿಸುವಂತೆ ಮೈಸೂರು ವಿವಿ ಸುತ್ತೋಲೆ ಹೊರಡಿಸಿರುವ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿದ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್‌, “ಪ್ರಥಮ ವರ್ಷದ ಪ್ರವೇಶಾತಿ ಡಿ.2ರಂದು ಆರಂಭವಾಗಿದೆ. ಈವರೆಗೆ ಕಾಲೇಜುಗಳು ಆರಂಭವಾಗಿರಲಿಲ್ಲ. ಹೀಗಾಗಿ ಈ ಸುತ್ತೋಲೆಯಿಂದ ತೊಂದರೆಯಾಗದು” ಎಂದರು.

‘ಗ್ರಾಮಾಂತರ ವಿದ್ಯಾರ್ಥಿಗಳ ಕಷ್ಟಕ್ಕೆ ಪರಿಹಾರವೇನು?’ ಎಂದು ಕೇಳಿದಾಗ, “ಎಲ್ಲಿಲ್ಲಿ ಇದು ಜಾರಿಗೆ ಸಾಧ್ಯವಿಲ್ಲವೋ ಅಲ್ಲಿ ಬಿಟ್ಟುಬಿಡಿ ಎಂದು ಸರ್ಕಾರ ಹೇಳಿದೆ. ಆರ್ಟ್ಸ್‌ ಇರುವ ಕಡೆ ಕಾಮರ್ಸ್ ಇದ್ದೇ ಇರುತ್ತದೆ. ಕಾಮರ್ಸ್ ವಿದ್ಯಾರ್ಥಿಗಳು ಆರ್ಟ್ಸ್ ವಿಷಯವನ್ನು, ಆರ್ಟ್ಸ್ ವಿದ್ಯಾರ್ಥಿಗಳು ಕಾಮರ್ಸ್ ತೆಗೆದುಕೊಳ್ಳಬಹುದು. ಎನ್‌ಇಪಿಯ ಮುಖ್ಯ ಉದ್ದೇಶ ಬಹುಶಿಸ್ತೀಯ ಪಠ್ಯಕ್ರಮ. ಕಲಾ ವಿದ್ಯಾರ್ಥಿ ವಾಣಿಜ್ಯದ ಒಂದು ವಿಷಯವನ್ನು, ವಿಜ್ಞಾನದ ಒಂದು ವಿಷಯವನ್ನು ತೆಗೆದುಕೊಂಡರೆ ಕೌಶಲ ವೃದ್ಧಿಯಾಗುತ್ತದೆ” ಎಂದು ತಿಳಿಸಿದರು.

‘ವಿದ್ಯಾರ್ಥಿಗಳಿಗೆ ಕಷ್ಟವಾಗುವಂತೆ ಐಚ್ಛಿಕ ವಿಷಯವನ್ನು ಹೇರುವುದು ಸರಿಯೇ?’ ಎಂದು ಪ್ರಶ್ನಿಸಿದಾಗ, “ಐಚ್ಛಿಕ ವಿಷಯಗಳು ಕಷ್ಟವಾಗಿರುವುದಿಲ್ಲ. ಪ್ರಾಥಮಿಕ ವಿಷಯಗಳನ್ನಷ್ಟೇ ಪರಿಚಯಿಸಲಾಗುತ್ತದೆ. ಉದ್ಯೋಗ ಕೇಂದ್ರಿತ ವಿಷಯಕ್ಕೆ ಐಚ್ಛಿಕ ಆಯ್ಕೆ ಆದ್ಯತೆ ನೀಡುತ್ತದೆ” ಎಂದರು. ಐಚ್ಛಿಕ ವಿಷಯ ಕಷ್ಟವಾಗಿರುವುದಿಲ್ಲ ಆದರೆ ಉದ್ಯೋಗ ದೊರಕಿಸಿಕೊಡುತ್ತದೆ ಎಂಬುದು ಕುಲಪತಿಯವರ ಅಭಿಪ್ರಾಯ. ಆದರೆ ಬೋಧಕರ ಪ್ರಕಾರ, ಈ ಐಚ್ಛಿಕ ವಿಷಯಗಳು ವಿದ್ಯಾರ್ಥಿಗಳಿಗೆ ತಲೆಬಿಸಿಯಾಗುವಂತಿವೆ.

ಈ ವಿಚಾರವಾಗಿ ಮೈಸೂರು ವಿವಿ ಕುಲಪತಿಯವರು ಅರ್ಧಸತ್ಯಗಳನ್ನು ಹೇಳುತ್ತಿದ್ದಾರೆ ಎಂಬುದನ್ನು ‘ನಾನುಗೌರಿ.ಕಾಂ’ ವರದಿ ಮಾಡಿದೆ (ಪೂರ್ಣ ವಿವರಗಳಿಗೆ ‘ದಿಢೀರ್‌ ಪಠ್ಯ ಬದಲಾವಣೆ ಸುತ್ತೋಲೆ: ಎನ್‌ಇಪಿಯಿಂದ ವಿದ್ಯಾರ್ಥಿಗಳು ಹೈರಾಣು’ ವರದಿ ಓದಿರಿ)


ಇದನ್ನೂ ಓದಿರಿ: ದಿಢೀರ್‌ ಪಠ್ಯ ಬದಲಾವಣೆ ಸುತ್ತೋಲೆ: ಎನ್‌ಇಪಿಯಿಂದ ವಿದ್ಯಾರ್ಥಿಗಳು ಹೈರಾಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...