Homeಕರ್ನಾಟಕMLC ಚುನಾವಣೆ: ಪರೇಶ್ ಮೇಸ್ತ ತಂದೆಗೇಕೆ ಬಿಜೆಪಿ ಟಿಕೆಟ್ ಕೊಟ್ಟಿಲ್ಲ? ಮಾಜಿ ಶಾಸಕ ಸತೀಶ್ ಸೈಲ್...

MLC ಚುನಾವಣೆ: ಪರೇಶ್ ಮೇಸ್ತ ತಂದೆಗೇಕೆ ಬಿಜೆಪಿ ಟಿಕೆಟ್ ಕೊಟ್ಟಿಲ್ಲ? ಮಾಜಿ ಶಾಸಕ ಸತೀಶ್ ಸೈಲ್ ಪ್ರಶ್ನೆ

- Advertisement -
- Advertisement -

ಉತ್ತರ ಕನ್ನಡದಲ್ಲಿ ವಿಧಾನ ಪರಿಷತ್ ಚುನಾವಣೆ ಕಾವೇರಿದ್ದು, ಸಮಬಲದ ಆಖಾಡದಲ್ಲಿ ಕಾಂಗ್ರೆಸ್-ಬಿಜೆಪಿ ಘಟಾನುಘಟಿಗಳು ದಾಳಿ-ಪ್ರತಿದಾಳಿ ಬಿರುಸಾಗಿ ನಡೆಸಿದ್ದಾರೆ. ಕಾರವಾರ-ಅಂಕೋಲಾದಲ್ಲಿ ಕಾಂಗ್ರೆಸ್‌ನ ಪ್ರಚಾರ ಉಸ್ತವಾರಿ ಹೊತ್ತುಕೊಂಡಿರುವ ಮಾಜಿ ಶಾಸಕ ಸತೀಶ್ ಸೈಲ್ ಹೋದಲ್ಲಿ ಬಂದಲ್ಲಿ ಬಿಜೆಪಿಗೆ ಹಿಂದುತ್ವ ಮತ್ತು ಮೀನುಗಾರರ ಮೇಲೆ ಪ್ರೀತಿ ಇದ್ದಿದ್ದರೆ ಮೀನುಗಾರರ ಹುಡುಗ ಪರೇಶ್ ಮೇಸ್ತನ ತಂದೆಯನ್ನು ಎಮ್ಮೆಲ್ಸಿ ಮಾಡಬಹುದಿತ್ತಲ್ಲವೇ ಎಂದು ಪ್ರಶ್ನಿಸುತ್ತಿದ್ದಾರೆ.

ಕಳೆದ ವಿಧಾನ ಸಭೆ ಚುನಾವಣೆ ಸಂದರ್ಭದಲ್ಲಿ ಸಾವಿಗೀಡಾದ ಹೊನ್ನಾವರದ ಪರೇಶ್ ಮೇಸ್ತ ಪ್ರಕರಣ ಮುಂದಿಟ್ಟುಕೊಂಡು ಬಿಜೆಪಿಗರು ಕರಾವಳಿಯ ಮೂರು ಜಿಲ್ಲೆಗಳಲ್ಲಿ ಗೆದ್ದು ಬಂದಿದ್ದಾರೆ. ಮಗನ ಸಾವಿನ ನೋವಿನಲ್ಲಿದ್ದ ಪರೇಶ್‌ನ ತಂದೆಯನ್ನು ಮನೆಯಲ್ಲಿ ಇರಲುಬಿಡದೆ ಕರಾವಳಿ ಉದ್ದಕ್ಕೆ ಓಡಾಡಿಸಿ ಪ್ರಚಾರಕ್ಕೆ ಬಳಸಿಕೊಂಡು ದೊಡ್ಡ ಲಾಭ ಮಾಡಿಕೊಂಡಿದ್ದಾರೆ. ಆದರೆ ಈಗ ದೊರವಿಟ್ಟಿದದ್ದಾರೆ. ಅಂದು ಕಾಂಗ್ರೆಸ್ ಸರಕಾರವಿತ್ತು. ಬಿಜೆಪಿಯವರು ಪರೇಶ್ ಪ್ರಕರಣ ಸಿಬಿಐಗೆ ಕೊಡುವಂತೆ ಹಠ ಹಿಡಿದಿದ್ದರು. ಸಿದ್ದರಾಮಯ್ಯ ಸರಕಾರ ತಕ್ಷಣ ಸಿಬಿಐಗೆ ಕೇಸ್ ವಹಿಸಿತ್ತು. ಈಗ ರಾಜ್ಯ-ರಾಷ್ಟ್ರ ಎರಡು ಕಡೆ ಬಿಜೆಪಿಯೇ ಅಧಿಕಾರದಲ್ಲಿದೆ. ಆದರೂ ಪರೇಶ್ ಸಾವಿಗೆ ಅವರಿಂದ ನ್ಯಾಯ ಕೊಡಿಸಲಾಗಿಲ್ಲ ಎಂದು ಸೈಲ್ ವಾಗ್ದಾಳಿ ನಡೆಸಿದ್ದಾರೆ.

ಪರೇಶ್ ತಂದೆಗೆ ಎಮ್ಮೆಲ್ಸಿ ಟಿಕೆಟ್ ಬಿಜೆಪಿ ಕೊಟ್ಟು ಋಣ ತೀರಿಸುವ ಪ್ರಯತ್ನ ಮಾಡಬಹುದಿತ್ತು. ಅಂದು ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದ ದೇಶಪಾಂಡೆ ಪರೇಶ್ ಮನೆಗೆ ಹೋಗಿ ಆರ್ಥಿಕ ಸಹಾಯ ಮಾಡಲು ಮುಂದಾಗಿದ್ದರು; ಕೆಡಿಸಿಸಿ ಬ್ಯಾಂಕಲ್ಲಿ ಉದ್ಯೋಗ ಕೊಡುವುದಾಗಿ ಅದರ ಅಧ್ಯಕ್ಷರಾಗಿದ್ದ ಎಸ್.ಎಲ್.ಘೋಟನೇಕರ್ ಹೇಳಿದ್ದರು. ಆದರೆ ಪರೇಶ್ ಕುಟುಂಬದವರು ಅದನ್ನು ತಿರಸ್ಕರಿಸುವಂತೆ ಬಿಜೆಪಿಯವರು ಮಾಡಿದ್ದರು. ಬಿಜೆಪಿಗರು ಪರೇಶ್ ಪರಿವಾರವನ್ನು ಬಳಸಿಕೊಂಡು ದೂರ ಮಾಡಿದರಷ್ಟೇ ಎಂದು ಅವರು ದೂರಿದ್ದಾರೆ.

ಬಿಜೆಪಿಯವರಿಗೆ ಹಿಂದುತ್ವದ ಹೆಸರಲ್ಲಿ ರಾಜಕಾರಣ ಮಾಡುವುದು ಬಿಟ್ಟು ಬೇರೇನು ಗೊತ್ತಿಲ್ಲ. ಚುನಾವಣೆಗಾಗಿ ಹಿಂದುತ್ವ ಮಾಡುವುದನ್ನು ಬಿಟ್ಟು ಇನ್ನಾದರು ಸಮಾಜದ ಒಳಿತಿಗೆ ಕೆಲಸ ಮಾಡುವುದನ್ನು ಬಿಜೆಪಿಗರು ಕಲಿಯಲಿಯೆಂದು ಸತೀಶ್ ಸೈಲ್ ಹೇಳಿದ್ದಾರೆ.


ಇದನ್ನೂ ಓದಿ: ಒಮೈಕ್ರಾನ್‌ಗೆ ಬೂಸ್ಟರ್ ಡೋಸ್ ಶಿಫಾರಸು; ಕರ್ನಾಟಕದಲ್ಲಿ ದ.ಆಫ್ರಿಕಾದ 10 ಜನರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...