Homeಕರೋನಾ ತಲ್ಲಣ2 ಡೋಸ್‌ ಪಡೆದವರಿಗಷ್ಟೇ ಮಾಲ್, ಥಿಯೇಟರ್‌‌ಗೆ ಪ್ರವೇಶ: ರಾಜ್ಯ ಸರ್ಕಾರ ನಿರ್ಧಾರ

2 ಡೋಸ್‌ ಪಡೆದವರಿಗಷ್ಟೇ ಮಾಲ್, ಥಿಯೇಟರ್‌‌ಗೆ ಪ್ರವೇಶ: ರಾಜ್ಯ ಸರ್ಕಾರ ನಿರ್ಧಾರ

ವಿದ್ಯಾರ್ಥಿಗಳ ಪೋಷಕರು ಸಂಪೂರ್ಣವಾಗಿ ಲಸಿಕೆ ಪಡೆಯದ ಹೊರತು ಶಾಲೆಗಳಲ್ಲಿ ಆಫ್‌ಲೈನ್ ತರಗತಿಗಳಿಗೆ ಹಾಜರಾಗಲು ಅನುಮತಿಯಿಲ್ಲ.

- Advertisement -
- Advertisement -

ಕರ್ನಾಟಕದಲ್ಲಿ ಒಮೈಕ್ರಾನ್ ಪ್ರಕರಣಗಳ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ರಾಜ್ಯ ಸರ್ಕಾರವು ಶಿಕ್ಷಣ ಸಂಸ್ಥೆಗಳಲ್ಲಿನ ಎಲ್ಲಾ ಕಾರ್ಯಕ್ರಮಗಳನ್ನು ನಿಷೇಧಿಸಿದೆ. ಜೊತೆಗೆ ಥಿಯೇಟರ್, ಮಲ್ಟಿಪ್ಲೆಕ್ಸ್, ಶಾಪಿಂಗ್ ಮಾಲ್‌ಗಳಿಗೆ 2 ಡೋಸ್ ಲಸಿಕೆ ಪಡೆದುಕೊಂಡ ನಾಗರಿಕರಿಗೆ ಮಾತ್ರ ಪ್ರವೇಶ ನೀಡಬೇಕು ಎಂದು ಶುಕ್ರವಾರ ಹೇಳಿದೆ.

ರಾಜ್ಯದಲ್ಲಿ ಕೊರೊನಾದ ಹೊಸ ರೂಪಾಂತರದ ಎರಡು ಪ್ರಕರಣಗಳು ಪತ್ತೆಯಾದ ನಂತರ ತಜ್ಞರೊಂದಿಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಒಮೈಕ್ರಾನ್‌ಗೆ ಬೂಸ್ಟರ್ ಡೋಸ್ ಶಿಫಾರಸು; ಕರ್ನಾಟಕದಲ್ಲಿ ದ.ಆಫ್ರಿಕಾದ 10 ಜನರು ನಾಪತ್ತೆ

“ಮುಂದಿನ ಆದೇಶದವರೆಗೆ ಕೇವಲ 500 ಜನರಿಗೆ ಮಾತ್ರ ಮದುವೆ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗುವುದು. ಥಿಯೇಟರ್, ಮಲ್ಟಿಪ್ಲೆಕ್ಸ್, ಶಾಪಿಂಗ್ ಮಾಲ್‌ಗಳಿಗೆ ಎರಡು ಡೋಸ್ ಲಸಿಕೆ ಹಾಕಿದರೆ ಮಾತ್ರ ಪ್ರವೇಶ ನೀಡಲಾಗುವುದು” ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.

ಹೊಸ ವರ್ಷಾಚರಣೆಯನ್ನು ನಿಯಂತ್ರಿಸುವ ಬಗ್ಗೆ ಸರ್ಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದ ಆರ್‌. ಅಶೋಕ್‌, ಮುಂದಿನ ಬೆಳವಣಿಗೆಗಳನ್ನು ಅವಲೋಕಿಸಿದ ನಂತರ ಸರ್ಕಾರ ಸೂಕ್ತ ನಿರ್ಧಾರ ಸರ್ಕಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚು ಹೆಚ್ಚು ಕ್ಲಸ್ಟರ್‌ಗಳು ಬೆಳಕಿಗೆ ಬರುತ್ತಿರುವುದರಿಂದ, ಶಿಕ್ಷಣ ಸಂಸ್ಥೆಗಳಲ್ಲಿನ ಎಲ್ಲಾ ಕಾರ್ಯಕ್ರಮಗಳು ಸರ್ಕಾರ ನಿಷೇಧಿಸಿದೆ. ಎಲ್ಲಾ ಸಾಂಸ್ಕೃತಿಕ ಚಟುವಟಿಕೆಗಳನ್ನು ಜನವರಿ 15, 2022 ರವರೆಗೆ ಮುಂದೂಡಲು ಶಾಲೆಗಳು ಮತ್ತು ಕಾಲೇಜುಗಳಿಗೆ ಆದೇಶ.

ವಿದ್ಯಾರ್ಥಿಗಳ ಪೋಷಕರು ಸಂಪೂರ್ಣವಾಗಿ ಲಸಿಕೆ ಪಡೆಯದ ಹೊರತು ಶಾಲೆಗಳಲ್ಲಿ ಆಫ್‌ಲೈನ್ ತರಗತಿಗಳಿಗೆ ಹಾಜರಾಗಲು ಅನುಮತಿಯಿಲ್ಲ.

ಇದನ್ನೂ ಓದಿ:ನಾಯಕತ್ವ ವ್ಯಕ್ತಿಯೊಬ್ಬರ ‘ದೈವಿಕ ಹಕ್ಕಲ್ಲ’: ರಾಹುಲ್ ಗಾಂಧಿ ವಿರುದ್ದ ಪ್ರಶಾಂತ್‌ ಕಿಶೋರ್‌ ವಾಗ್ದಾಳಿ

ವಿಮಾನ ನಿಲ್ದಾಣಗಳ ಮೂಲಕ ರಾಜ್ಯ ಪ್ರವೇಶಿಸುವ ಪ್ರಯಾಣಿಕರ ಕಡ್ಡಾಯ ಪರೀಕ್ಷೆ. ಅವರ ಪರೀಕ್ಷಾ ವರದಿ ಬಂದ ನಂತರವೇ ಪ್ರಯಾಣಿಕರು ಅಲ್ಲಿಂದ ಹೊರಬರುವುದಕ್ಕೆ ಅವಕಾಶ.

ಈ ನಡುವೆ ಓಮೈಕ್ರಾನ್‌‌ ಪಾಸಿಟಿವ್‌ ಆಗಿದ್ದ 66 ವರ್ಷದ ವಿದೇಶಿ ಪ್ರಜೆಯೊಬ್ಬರು ತಪ್ಪಿಸಿಕೊಂಡಿದ್ದಾರೆ ಪೊಲೀಸರಿಗೆ ದೂರು ನೀಡಲಾಗಿದೆ.

“ವ್ಯಕ್ತಿ ತಂಗಿದ್ದ ಶಾಂಗ್ರಿ-ಲಾ ಹೋಟೆಲ್‌ನಲ್ಲಿ ನಡೆದ ತಪ್ಪುಗಳ ಬಗ್ಗೆ ಎಂದು ಪೊಲೀಸರು ತನಿಖೆ ನಡೆಸುತ್ತಾರೆ” ಎಂದು ಅಶೋಕ್ ಹೇಳಿದರು.

ರಾಜ್ಯಾದ್ಯಂತ ಆಸ್ಪತ್ರೆಗಳಲ್ಲಿ ಕೊರೊನಾ ಹಾಸಿಗೆಗಳನ್ನು ಮತ್ತೊಮ್ಮೆ ತೆರೆಯಲಾಗುತ್ತದೆ. ಆಕ್ಸಿಜನ್ ಪ್ಲಾಂಟ್‌ಗಳನ್ನು ಅಳವಡಿಸಲಾಗಿದ್ದು, ಅವುಗಳನ್ನು ಸರಿಪಡಿಸಿ ಸಿದ್ಧವಾಗಿ ಇಡಲಾಗುವುದು ಎಂದು ಆರ್.ಅಶೋಕ್ ತಿಳಿಸಿದ್ದಾರೆ.

“ಆಮ್ಲಜನಕದ ಲಭ್ಯತೆಯನ್ನು ಈ ಹಿಂದೆ ರಚಿಸಲಾದ ಸಮಿತಿಗಳು ಮೇಲ್ವಿಚಾರಣೆ ಮಾಡುತ್ತವೆ. ಕೋವಿಡ್ ನಿಯಂತ್ರಣ ಕೊಠಡಿಗಳನ್ನು ರಾಜ್ಯಾದ್ಯಂತ ಮತ್ತೆ ಪುನರಾರಂಭಿಸಲಾಗುವುದು. ಕೋವಿಡ್ ಔಷಧಿಗಳ ಕೊರತೆ ಇಲ್ಲ ಎಂದು ಖಚಿತಪಡಿಸಿಕೊಳ್ಳಲು, ಲಸಿಕೆಗಳು ಮತ್ತು ಔಷಧಿಗಳನ್ನು ಮುಂಚಿತವಾಗಿ ಖರೀದಿಸಲಾಗುವುದು” ಎಂದು ಆರ್‌. ಅಶೋಕ್‌ ಹೇಳಿದ್ದಾರೆ.

ಇದನ್ನೂ ಓದಿ:ತಮಿಳುನಾಡು ಸಂಸದನ ಮಾನಹಾನಿ: BJP ನಾಯಕನ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...