Homeಕರೋನಾ ತಲ್ಲಣ2 ಡೋಸ್‌ ಪಡೆದವರಿಗಷ್ಟೇ ಮಾಲ್, ಥಿಯೇಟರ್‌‌ಗೆ ಪ್ರವೇಶ: ರಾಜ್ಯ ಸರ್ಕಾರ ನಿರ್ಧಾರ

2 ಡೋಸ್‌ ಪಡೆದವರಿಗಷ್ಟೇ ಮಾಲ್, ಥಿಯೇಟರ್‌‌ಗೆ ಪ್ರವೇಶ: ರಾಜ್ಯ ಸರ್ಕಾರ ನಿರ್ಧಾರ

ವಿದ್ಯಾರ್ಥಿಗಳ ಪೋಷಕರು ಸಂಪೂರ್ಣವಾಗಿ ಲಸಿಕೆ ಪಡೆಯದ ಹೊರತು ಶಾಲೆಗಳಲ್ಲಿ ಆಫ್‌ಲೈನ್ ತರಗತಿಗಳಿಗೆ ಹಾಜರಾಗಲು ಅನುಮತಿಯಿಲ್ಲ.

- Advertisement -
- Advertisement -

ಕರ್ನಾಟಕದಲ್ಲಿ ಒಮೈಕ್ರಾನ್ ಪ್ರಕರಣಗಳ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ರಾಜ್ಯ ಸರ್ಕಾರವು ಶಿಕ್ಷಣ ಸಂಸ್ಥೆಗಳಲ್ಲಿನ ಎಲ್ಲಾ ಕಾರ್ಯಕ್ರಮಗಳನ್ನು ನಿಷೇಧಿಸಿದೆ. ಜೊತೆಗೆ ಥಿಯೇಟರ್, ಮಲ್ಟಿಪ್ಲೆಕ್ಸ್, ಶಾಪಿಂಗ್ ಮಾಲ್‌ಗಳಿಗೆ 2 ಡೋಸ್ ಲಸಿಕೆ ಪಡೆದುಕೊಂಡ ನಾಗರಿಕರಿಗೆ ಮಾತ್ರ ಪ್ರವೇಶ ನೀಡಬೇಕು ಎಂದು ಶುಕ್ರವಾರ ಹೇಳಿದೆ.

ರಾಜ್ಯದಲ್ಲಿ ಕೊರೊನಾದ ಹೊಸ ರೂಪಾಂತರದ ಎರಡು ಪ್ರಕರಣಗಳು ಪತ್ತೆಯಾದ ನಂತರ ತಜ್ಞರೊಂದಿಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಒಮೈಕ್ರಾನ್‌ಗೆ ಬೂಸ್ಟರ್ ಡೋಸ್ ಶಿಫಾರಸು; ಕರ್ನಾಟಕದಲ್ಲಿ ದ.ಆಫ್ರಿಕಾದ 10 ಜನರು ನಾಪತ್ತೆ

“ಮುಂದಿನ ಆದೇಶದವರೆಗೆ ಕೇವಲ 500 ಜನರಿಗೆ ಮಾತ್ರ ಮದುವೆ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗುವುದು. ಥಿಯೇಟರ್, ಮಲ್ಟಿಪ್ಲೆಕ್ಸ್, ಶಾಪಿಂಗ್ ಮಾಲ್‌ಗಳಿಗೆ ಎರಡು ಡೋಸ್ ಲಸಿಕೆ ಹಾಕಿದರೆ ಮಾತ್ರ ಪ್ರವೇಶ ನೀಡಲಾಗುವುದು” ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.

ಹೊಸ ವರ್ಷಾಚರಣೆಯನ್ನು ನಿಯಂತ್ರಿಸುವ ಬಗ್ಗೆ ಸರ್ಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದ ಆರ್‌. ಅಶೋಕ್‌, ಮುಂದಿನ ಬೆಳವಣಿಗೆಗಳನ್ನು ಅವಲೋಕಿಸಿದ ನಂತರ ಸರ್ಕಾರ ಸೂಕ್ತ ನಿರ್ಧಾರ ಸರ್ಕಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚು ಹೆಚ್ಚು ಕ್ಲಸ್ಟರ್‌ಗಳು ಬೆಳಕಿಗೆ ಬರುತ್ತಿರುವುದರಿಂದ, ಶಿಕ್ಷಣ ಸಂಸ್ಥೆಗಳಲ್ಲಿನ ಎಲ್ಲಾ ಕಾರ್ಯಕ್ರಮಗಳು ಸರ್ಕಾರ ನಿಷೇಧಿಸಿದೆ. ಎಲ್ಲಾ ಸಾಂಸ್ಕೃತಿಕ ಚಟುವಟಿಕೆಗಳನ್ನು ಜನವರಿ 15, 2022 ರವರೆಗೆ ಮುಂದೂಡಲು ಶಾಲೆಗಳು ಮತ್ತು ಕಾಲೇಜುಗಳಿಗೆ ಆದೇಶ.

ವಿದ್ಯಾರ್ಥಿಗಳ ಪೋಷಕರು ಸಂಪೂರ್ಣವಾಗಿ ಲಸಿಕೆ ಪಡೆಯದ ಹೊರತು ಶಾಲೆಗಳಲ್ಲಿ ಆಫ್‌ಲೈನ್ ತರಗತಿಗಳಿಗೆ ಹಾಜರಾಗಲು ಅನುಮತಿಯಿಲ್ಲ.

ಇದನ್ನೂ ಓದಿ:ನಾಯಕತ್ವ ವ್ಯಕ್ತಿಯೊಬ್ಬರ ‘ದೈವಿಕ ಹಕ್ಕಲ್ಲ’: ರಾಹುಲ್ ಗಾಂಧಿ ವಿರುದ್ದ ಪ್ರಶಾಂತ್‌ ಕಿಶೋರ್‌ ವಾಗ್ದಾಳಿ

ವಿಮಾನ ನಿಲ್ದಾಣಗಳ ಮೂಲಕ ರಾಜ್ಯ ಪ್ರವೇಶಿಸುವ ಪ್ರಯಾಣಿಕರ ಕಡ್ಡಾಯ ಪರೀಕ್ಷೆ. ಅವರ ಪರೀಕ್ಷಾ ವರದಿ ಬಂದ ನಂತರವೇ ಪ್ರಯಾಣಿಕರು ಅಲ್ಲಿಂದ ಹೊರಬರುವುದಕ್ಕೆ ಅವಕಾಶ.

ಈ ನಡುವೆ ಓಮೈಕ್ರಾನ್‌‌ ಪಾಸಿಟಿವ್‌ ಆಗಿದ್ದ 66 ವರ್ಷದ ವಿದೇಶಿ ಪ್ರಜೆಯೊಬ್ಬರು ತಪ್ಪಿಸಿಕೊಂಡಿದ್ದಾರೆ ಪೊಲೀಸರಿಗೆ ದೂರು ನೀಡಲಾಗಿದೆ.

“ವ್ಯಕ್ತಿ ತಂಗಿದ್ದ ಶಾಂಗ್ರಿ-ಲಾ ಹೋಟೆಲ್‌ನಲ್ಲಿ ನಡೆದ ತಪ್ಪುಗಳ ಬಗ್ಗೆ ಎಂದು ಪೊಲೀಸರು ತನಿಖೆ ನಡೆಸುತ್ತಾರೆ” ಎಂದು ಅಶೋಕ್ ಹೇಳಿದರು.

ರಾಜ್ಯಾದ್ಯಂತ ಆಸ್ಪತ್ರೆಗಳಲ್ಲಿ ಕೊರೊನಾ ಹಾಸಿಗೆಗಳನ್ನು ಮತ್ತೊಮ್ಮೆ ತೆರೆಯಲಾಗುತ್ತದೆ. ಆಕ್ಸಿಜನ್ ಪ್ಲಾಂಟ್‌ಗಳನ್ನು ಅಳವಡಿಸಲಾಗಿದ್ದು, ಅವುಗಳನ್ನು ಸರಿಪಡಿಸಿ ಸಿದ್ಧವಾಗಿ ಇಡಲಾಗುವುದು ಎಂದು ಆರ್.ಅಶೋಕ್ ತಿಳಿಸಿದ್ದಾರೆ.

“ಆಮ್ಲಜನಕದ ಲಭ್ಯತೆಯನ್ನು ಈ ಹಿಂದೆ ರಚಿಸಲಾದ ಸಮಿತಿಗಳು ಮೇಲ್ವಿಚಾರಣೆ ಮಾಡುತ್ತವೆ. ಕೋವಿಡ್ ನಿಯಂತ್ರಣ ಕೊಠಡಿಗಳನ್ನು ರಾಜ್ಯಾದ್ಯಂತ ಮತ್ತೆ ಪುನರಾರಂಭಿಸಲಾಗುವುದು. ಕೋವಿಡ್ ಔಷಧಿಗಳ ಕೊರತೆ ಇಲ್ಲ ಎಂದು ಖಚಿತಪಡಿಸಿಕೊಳ್ಳಲು, ಲಸಿಕೆಗಳು ಮತ್ತು ಔಷಧಿಗಳನ್ನು ಮುಂಚಿತವಾಗಿ ಖರೀದಿಸಲಾಗುವುದು” ಎಂದು ಆರ್‌. ಅಶೋಕ್‌ ಹೇಳಿದ್ದಾರೆ.

ಇದನ್ನೂ ಓದಿ:ತಮಿಳುನಾಡು ಸಂಸದನ ಮಾನಹಾನಿ: BJP ನಾಯಕನ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...