Homeಅಂತರಾಷ್ಟ್ರೀಯಒಮೈಕ್ರಾನ್ ವಿರುದ್ಧದ ಹೋರಾಟದಲ್ಲಿ ‘ಲಾಕ್‌ಡೌನ್’ ಕೊನೆಯ ಅಸ್ತ್ರವಾಗಿಬೇಕು: WHO

ಒಮೈಕ್ರಾನ್ ವಿರುದ್ಧದ ಹೋರಾಟದಲ್ಲಿ ‘ಲಾಕ್‌ಡೌನ್’ ಕೊನೆಯ ಅಸ್ತ್ರವಾಗಿಬೇಕು: WHO

- Advertisement -
- Advertisement -

ಒಮೈಕ್ರಾನ್ ಪ್ರಸರಣವನ್ನು ತಡೆಯಲು ಲಾಕ್‌ಡೌನ್ ಹೇರುವುದನ್ನು ಕೊನೆಯ ಅಸ್ತ್ರವಾಗಿ ಮಾತ್ರ ಬಳಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಶುಕ್ರವಾರ ಹೇಳಿದೆ. ಲಾಕ್‌ಡೌನ್‌ ತುಂಬಾ ದುಬಾರಿಯಾಗಿದೆ ಎಂದು ಆರೋಗ್ಯ ಸಂಸ್ಥೆಯು ಅಭಿಪ್ರಾಯಪಟ್ಟಿದೆ. ಹೊಸ ಕೊರೊನಾ ರೂಪಾಂತರವಾದ ಒಮೈಕ್ರಾನ್ ಆರಂಭದಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿ ನಂತರ ಭಾರತ, ಶ್ರೀಲಂಕಾ, ಯುಎಸ್, ಆಸ್ಟ್ರೇಲಿಯಾ, ಬೆಲ್ಜಿಯಂ, ನೆದರ್ಲ್ಯಾಂಡ್ಸ್ ಮತ್ತು ಯುಕೆ ಸೇರಿದಂತೆ 24 ದೇಶಗಳಲ್ಲಿ ಹರಡಿದೆ.

ಸಧ್ಯಕ್ಕೆ ದೊರಕಿದ ಪುರಾವೆಗಳ ಪ್ರಕಾರ ಒಮೈಕ್ರಾನ್‌‌ ರೂಪಾಂತರವು ವೇಗವಾಗಿ ಪ್ರಸರಣವಾಗುತ್ತದೆ ಮತ್ತು ಲಸಿಕೆ ಪಡೆದುಕೊಂಡವರ ಮೇಲೆಯು ಹರಡುವ ಸಂಭವವಿರುತ್ತದೆ ಎಂದು ಕಂಡುಬಂದಿದೆ.

ಇದನ್ನೂ ಓದಿ:ಒಮೈಕ್ರಾನ್ ಆತಂಕ; ಲಭ್ಯವಿರುವ ಸಾಕ್ಷ್ಯಗಳಿಂದ ಸಾರ್ವಜನಿಕ ಆರೋಗ್ಯದ ಕಣ್ಣೋಟ

ಒಮೈಕ್ರಾನ್‌ನ ಪ್ರಸರಣ, ತೀವ್ರತೆ, ಮರುಸೋಂಕಿನ ಅಪಾಯ ಮತ್ತು ಪ್ರತಿರಕ್ಷಣೆ ಪಡೆದವರ ಮೇಲೆ ಕೂಡಾ ಹಿಡಿತ ಸಾಧಿಸುವ ವೈರಸ್‌ನ ಸಾಮರ್ಥ್ಯವನ್ನು ಮೌಲ್ಯಮಾಪನ ಮಾಡಲು ಹೆಚ್ಚಿನ ಅಧ್ಯಯನಗಳು ನಡೆಯುತ್ತಿವೆ. ಆದಾಗ್ಯೂ, “ಪ್ರಸ್ತುತ ಲಭ್ಯವಿರುವ ಲಸಿಕೆಗಳು ತೀವ್ರ ರೋಗ ಮತ್ತು ಸಾವಿನ ವಿರುದ್ಧ ರಕ್ಷಣೆ ನೀಡುತ್ತವೆ ಎಂದು ಊಹಿಸುವುದು ಸಮಂಜಸವಾಗಿದೆ” ಎಂದು WHO ಆಗ್ನೇಯ ಏಷ್ಯಾದ ಪ್ರಾದೇಶಿಕ ನಿರ್ದೇಶಕಿ ಡಾ.ಪೂನಮ್ ಖೇತ್ರಪಾಲ್ ಸಿಂಗ್ ಹೇಳಿದ್ದಾರೆ.

“ಯಾವುದೇ ಹೊಸ ರೂಪಾಂತರದ ಆಗಮನ ಮತ್ತು ಅಸ್ತಿತ್ವದಲ್ಲಿರುವ ವೈರಸ್ ಮತ್ತು ಅದರ ರೂಪಾಂತರಗಳ ಪ್ರಸರಣವನ್ನು ತ್ವರಿತವಾಗಿ ಪತ್ತೆಹಚ್ಚಲು ಕಣ್ಗಾವಲು ಹೆಚ್ಚು ಮಾಡಬೇಕು. ಸಾರ್ವಜನಿಕ ಆರೋಗ್ಯ ಮತ್ತು ಸಾಮಾಜಿಕ ಕ್ರಮಗಳನ್ನು ಜಾರಿಗೊಳಿಸುವುದು ಮತ್ತು ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ಹೆಚ್ಚಿಸುವುದರ ಕಡೆಗೆ ನಮ್ಮ ಗಮನವನ್ನು ಮುಂದುವರಿಸಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್: ಖಾಸಗಿ ಮಂಡಿಗಳಲ್ಲಿ ಕಡಿಮೆ ದರಕ್ಕೆ ಹತ್ತಿ ಮಾರಲು ಒತ್ತಾಯ – ರೈತರ ಪ್ರತಿಭಟನೆ

ಅಮೆರಿಕಾ ಮತ್ತು ಯುಕೆ ಸೇರಿದಂತೆ ಹಲವು ದೇಶಗಳು ಹೊಸ ರೂಪಾಂತರದ ಸುದ್ದಿಯ ನಂತರ ಹಲವಾರು ಆಫ್ರಿಕನ್ ದೇಶಗಳ ಪ್ರಯಾಣಿಕರಿಗೆ ಪ್ರಯಾಣ ನಿಷೇಧ ಅಥವಾ ಕ್ವಾರಂಟೈನ್‌ಗಳನ್ನು ವಿಧಿಸಿವೆ. ಆದರೆ ಈ ಪ್ರಯಾಣ ನಿಷೇಧಗಳು ಅಂತರಾಷ್ಟ್ರೀಯ ಹರಡುವಿಕೆಯನ್ನು ತಡೆಯಲು ಸಾಧ್ಯವಿಲ್ಲ ಎಂದು ಡಾ. ಪೂನಮ್‌ ಸಿಂಗ್ ಹೇಳಿದ್ದಾರೆ. ಈ ರೀತಿಯ ನಿಷೇಧಗಳು ಜೀವನ ಮತ್ತು ಜೀವನೋಪಾಯದ ಮೇಲೆ ಹೆಚ್ಚಿನ ಹೊರೆ ಆಗುತ್ತದೆ. ಇಂತಹ ನಿಷೇಧಗಳು ಸಾಂಕ್ರಾಮಿಕ ಸಮಯದಲ್ಲಿ ಜಾಗತಿಕ ಆರೋಗ್ಯ ಪ್ರಯತ್ನಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಹೇಳಿದ್ದಾರೆ.

“ವೈರಸ್ ಪ್ರಸರಣವನ್ನು ತಡೆಗಟ್ಟಲು ಲಾಕ್‌ಡೌನ್ ಹೇರುವ ಆಯ್ಕೆಯು ಪರಿಣಾಮಕಾರಿಯಾಗಿದ್ದರೂ, ಇದು ಅತ್ಯಂತ ದುಬಾರಿ ಅಸ್ತ್ರವಾಗಿ. ಇದನ್ನು ಕೊನೆಯ ಅಸ್ತ್ರವಾಗಿ ಬಳಸಬೇಕು. ನಾವು ವೈರಸ್ ಮತ್ತು ಅದರ ರೂಪಾಂತರಗಳನ್ನು ಹರಡಲು ಹಾಗೂ ಅದು ಮತ್ತಷ್ಟು ರೂಪಾಂತರಗೊಂಡು ನಮಗೆ ಸವಾಲು ಹಾಕಲು ಬಿಡಬಾರದು. ವೈರಸ್ ಹರಡುವಿಕೆಯನ್ನು ಮೊಟಕುಗೊಳಿಸಲು ನಾವು ಎಲ್ಲವನ್ನೂ ಮಾಡಬೇಕಾಗಿದೆ. ಈ ಸಾಂಕ್ರಾಮಿಕ ರೋಗವು ತುಂಬಾ ದೀರ್ಘವಾಗಿದೆ. ಇದು ಅಮೂಲ್ಯವಾದ ಮಾನವ ಮತ್ತು ಇತರ ಸಂಪನ್ಮೂಲಗಳನ್ನು ಬರಿದುಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಹೊಸ ರೂಪಾಂತರವನ್ನು ಎದುರಿಸಲು ಮಾಸ್ಕ್‌ಗಳ ಬಳಕೆ, ದೈಹಿಕ ಅಂತರ ಕಾಪಾಡುವುದು, ಸಭೆಗಳನ್ನು ತಪ್ಪಿಸುವುದು ಮತ್ತು ಕೈಗಳ ನೈರ್ಮಲ್ಯ ಕಾಪಾಡುವುದು ಮಾಡಬೇಕು ಎಂದು ಅವರು ಹೇಳಿದ್ದಾರೆ. ಆರೋಗ್ಯ ಸೇವೆಗಳ ಹೊರೆಯನ್ನು ತಪ್ಪಿಸಲು ದೇಶಗಳು ಸಾರ್ವಜನಿಕ ಆರೋಗ್ಯ ಮತ್ತು ಸಾಮಾಜಿಕ ಕ್ರಮಗಳನ್ನು ಸಮಯೋಚಿತವಾಗಿ ಹೆಚ್ಚಿಸಲು ಸಿದ್ಧರಾಗಿರಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ:ಒಮೈಕ್ರಾನ್‌ಗೆ ಬೂಸ್ಟರ್ ಡೋಸ್ ಶಿಫಾರಸು; ಕರ್ನಾಟಕದಲ್ಲಿ ದ.ಆಫ್ರಿಕಾದ 10 ಜನರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...