Homeಕರ್ನಾಟಕಬಹುರೂಪಿಗೆ ಸೂಲಿಬೆಲೆ, ಮಾಳವಿಕಾಗೆ ಆಹ್ವಾನ ವಿರೋಧಿಸಿ ‘ಪರ್ವ’ ಕಿರಿಯ ಕಲಾವಿದರಿಂದ ರಂಗಾಯಣಕ್ಕೆ ಪತ್ರ

ಬಹುರೂಪಿಗೆ ಸೂಲಿಬೆಲೆ, ಮಾಳವಿಕಾಗೆ ಆಹ್ವಾನ ವಿರೋಧಿಸಿ ‘ಪರ್ವ’ ಕಿರಿಯ ಕಲಾವಿದರಿಂದ ರಂಗಾಯಣಕ್ಕೆ ಪತ್ರ

ಬಹುರೂಪಿ ನಾಟಕೋತ್ಸವ ವಿವಾದದ ಕುರಿತು ಚರ್ಚಿಸಲು ಇಂದು ಸಂಜೆ (ಡಿ.4, 2021) 5 ಗಂಟೆಗೆ ಮೈಸೂರಿನ ಕಲಾಮಂದಿರದ ಕಿಂದರಜೋಗಿ ಬಳಿ ಸಭೆ ಏರ್ಪಡಿಸಲಾಗಿದೆ.

- Advertisement -
- Advertisement -

ಮೈಸೂರು ರಂಗಾಯಣದ ಪ್ರತಿಷ್ಟಿತ ಕಾರ್ಯಕ್ರಮವಾದ ‘ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ’ಕ್ಕೆ ಬಿಜೆಪಿ ಬೆಂಬಲಿತ ವಾಗ್ಮಿಗಳಾದ ಚಕ್ರವರ್ತಿ ಸೂಲಿಬೆಲೆ ಹಾಗೂ ಮಾಳವಿಕ ಅವಿನಾಶ್ ಅವರನ್ನು ಕರೆಸಬಾರದು ಎಂದು ‘ಪರ್ವ’ ನಾಟಕದ ಕಿರಿಯ ಕಲಾವಿದರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರಿಗೆ ಪತ್ರ ಬರೆದಿದ್ದಾರೆ.

“ಬಹುರೂಪಿ ಕಾರ್ಯಕ್ರಮವು ರಂಗಾಯಣಕ್ಕೆ ಗರಿಮೆಯದ್ದಾಗಿದೆ. ಈ ಕಾರ್ಯಕ್ರಮಕ್ಕೆ ಸಮಾಜದ ದೃಷ್ಟಿಯಲ್ಲಿ ಎಲ್ಲಾ ಸಿದ್ಧಾಂತಗಳಿಗೂ ಗೌರವಕೊಡುವ ಸಮಾನ ಮನಸ್ಕರನ್ನು ಕರೆಸಬೇಕು” ಎಂದು ಕಿರಿಯ ಕಲಾವಿದರು ಆಗ್ರಹಿಸಿದ್ದಾರೆ.

ವಿಶ್ವವಿಖ್ಯಾತಿಯನ್ನ ಬಹುರೂಪಿ ಪಡೆದಿದೆ. ಇಂತಹ ಕಾರ್ಯಕ್ರಮಕ್ಕೆ ಸಮಾನ ಮನಸ್ಕರನ್ನು ಕರೆಸಬೇಕು. ಅವರು ಯಾರೇ ಆಗಿದ್ದರೂ ಕರೆಸಬಹುದು. ಆದರೆ ಒಂದು ಪಕ್ಷದ ವಕ್ತಾರರಾಗಿರುವ ಹಾಗೂ ಸುಳ್ಳಿನ ಸರಮಾಲೆ ಹೆಣೆದು ಭಾಷಣ ಬಿಗಿದು ಕೋಮುಗಲಭೆ ಸೃಷ್ಟಿಸಿರುವ ‘ಚಕ್ರವರ್ತಿ ಸೂಲಿಬೆಲೆ’ಯನ್ನು ಕರೆಸುವುದು ಸೂಕ್ತವಲ್ಲ ಎಂದು ಕಿರಿಯ ಕಲಾವಿದರು ಅಭಿಪ್ರಾಯಪಟ್ಟಿದ್ದಾರೆ.

ಮುಂದುವರಿದು, “ಮತ್ತೊಬ್ಬ ಕಲಾವಿದರಾದ ಮಾಳವಿಕ ಅವಿನಾಶ್ ಅವರು ಒಂದು ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಇವರನ್ನೂ ಕರೆಸುವುದು ಸೂಕ್ತವಾದ. ಅನೇಕ ಯಶಸ್ವಿ ಕಾರ್ಯಕ್ರಮಗಳನ್ನು ನೀಡಿದ ತಾವು ತುಸು ಗಂಭೀರವಾಗಿ ಆಲೋಚಿಸಿದರೆ ನಮಗೆ ಖುಷಿ ಮತ್ತು ಹಾಗೂ ಅವರಿಬ್ಬರನ್ನು ಕರೆಸುವುದನ್ನು ನಾವು ವಿರೋಧಿಸುತ್ತೇವೆ” ಎಂದು ತಿಳಿಸಿದ್ದಾರೆ.

“ನಮ್ಮ ಆಸೆ ಒಂದೇ. ನಿಮ್ಮ ಸಾರಥ್ಯದಲ್ಲಿ ಬಹುರೂಪಿಯು ಯಾವುದೇ ವಿವಾದ, ಅಡಚಣೆಗಳಿಗೆ ಕೇಂದ್ರ ಬಿಂದುವಾಗದೆ ಯಶಸ್ವಿಯಾಗಬೇಕಿದೆ” ಎಂದು ಕೋರಿರುವ ಪತ್ರದಲ್ಲಿ ಹಲವರು ಸಹಿ ಮಾಡಿದ್ದಾರೆ. “ನಿಮ್ಮ ಮಕ್ಕಳ ಸ್ಥಾನದಲ್ಲಿರುವ ಪರ್ವದ ಕಿರಿಯ ಕಲಾವಿದರು” ಎಂದು ಉಲ್ಲೇಖಿಸಿ ಅಡ್ಡಂಡ ಕಾರ್ಯಪ್ಪ ಅವರಿಗೆ ಪತ್ರ ತಲುಪಿಸಿದ್ದಾರೆ.

ಸಾಹಿತಿ ಎಸ್‌.ಎಸ್.ಭೈರಪ್ಪ ಅವರ ಕಾದಂಬರಿ ‘ಪರ್ವ’ ರಂಗಪ್ರಯೋಗದಲ್ಲಿ ಭಾಗಿಯಾಗಿದ್ದ ಕಿರಿಯ ಕಲಾವಿದರು ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಹಲವು ವಿವಾದಗಳನ್ನು ಮೈಮೇಲೆ ಎಳೆದುಕೊಂಡು ಸದಾ ಚರ್ಚೆಯ ಮುಖ್ಯಬಿಂದುವಾಗುತ್ತಿರುವ ಅಡ್ಡಂಡ ಸಿ.ಕಾರ್ಯಪ್ಪ ಅವರು ಕಲಾವಿದರ ಮನವಿಯನ್ನು ಸ್ವೀಕರಿಸುತ್ತಾರೋ, ತಿರಸ್ಕರಿಸುತ್ತಾರೋ ನೋಡಬೇಕು. ಡಿ.10ರಿಂದ ಡಿ.19ರವರೆಗೆ ‘ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ’ ನಡೆಯಲಿದೆ. ಡಿ. 13ರಂದು ಬಹುರೂಪಿ ರಾಷ್ಟ್ರೀಯ ವಿಚಾರಸಂಕಿರಣ ಹಾಗೂ ಭಾಷಣ ಸ್ಪರ್ಧೆಯ ಸಮಾರೋಪ ಸಮಾರಂಭಕ್ಕೆ ಚಕ್ರವರ್ತಿ ಸೂಲಿಬೆಲೆಯವರು ಆಗಮಿಸಲಿದ್ದು, ಡಿ.11ರಂದು ನಡೆಯುವ ಬಹುರೂಪಿ ಉದ್ಘಾಟನೆಯಲ್ಲಿ ಮಾಳವಿಕಾ ಅವನಾಶ್ ಆಶಯ ಭಾಷಣ ಮಾಡಲಿದ್ದಾರೆ.

ಸೂಲಿಬೆಲೆಯವರು ಸುಳ್ಳು ಹೇಳುವ ವ್ಯಕ್ತಿಯಲ್ಲ ಎಂದು ನಾನುಗೌರಿ.ಕಾಂ ಜೊತೆ ಮಾತನಾಡಿದ್ದ ಅಡ್ಡಂಡ ಸಿ.ಕಾರ್ಯಪ್ಪ ಅವರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು. “ನಿಮಗೆ ಅವರು ಸುಳ್ಳು ಹೇಳಿದ್ದಾರೆಂದು ಅನಿಸಬಹುದು. ಆದರೆ ನಮಗೆ ಅವರು ಸತ್ಯಗಳನ್ನು ಹೇಳುತ್ತಿದ್ದಾರೆ ಅನಿಸುತ್ತದೆ. ಅವರನ್ನು ಕಂಡರೆ ನಿಮಗೆ ಆಗಲ್ಲ, ನಮಗೆ ಅವರನ್ನು ಕಂಡರೆ ಆಗುತ್ತದೆ” ಎಂದಿದ್ದರು.

‘ಬಹುತ್ವದ ಕುರಿತು ಕಾಳಜಿ ಇರುವ ವ್ಯಕ್ತಿಯನ್ನು ಕರೆಸಬಹುದಲ್ಲ’ ಎಂದು ಕೇಳಿದ್ದಕ್ಕೆ, “ಈ ಸಿದ್ಧಾಂತವನ್ನೆಲ್ಲ ನಿಮಗೆ ಇಟ್ಟುಕೊಳ್ಳಿ. ನಮಗಲ್ಲ. ಇನ್ನೊಬ್ಬರನ್ನು ಓಲೈಸಲು ಆಗಲ್ಲ. ಸೂಲಿಬೆಲೆ ನಿಮಗೆ ಸುಳ್ಳುಗಾರರಾಗಿರಬಹುದು. ನಮಗೆ ಸುಳ್ಳುಗಾರನಲ್ಲ. ಒಂದು ವರ್ಷ ಅಧಿಕಾರದಲ್ಲಿರುತ್ತೇನೆ, ಏನು ಬರೆದುಕೊಳ್ಳುತ್ತೀರೋ ಬರೆದುಕೊಳ್ಳಿ. ಯಾವುದಕ್ಕೂ ಧೃತಿಗೆಡುವುದಿಲ್ಲ” ಎಂದ ಅವರು ಬಹುತ್ವವನ್ನೇ ನಿರಾಕರಿಸಿದ್ದರು.

ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರು ಪ್ರಶ್ನಿಸಿದ್ದಾಗ, “ಚಕ್ರವರ್ತಿ ಸೂಲಿಬೆಲೆಯವರು ಸಮಾರೋಪ ಭಾಷಣಕ್ಕೆ ಸೂಕ್ತವ್ಯಕ್ತಿ ಎನಿಸಿದ್ದರಿಂದ ನಾವು ಕರೆದಿದ್ದೇವೆ. ಚಕ್ರವರ್ತಿ ಸೂಲಿಬೆಲೆಯವರ ವಿಚಾರವನ್ನು ಬಿಟ್ಟುಬಿಡಿ. ಅವರನ್ನು ಕರೆದಿದ್ದೇವೆ. ಬರ್ತಾರೆ, ಸಮಾರೋಪ ಭಾಷಣ ಮಾಡ್ತಾರೆ. ಆ ಭಾಷಣದಲ್ಲಿ ದೋಷಗಳನ್ನು ಕಂಡು ಹಿಡಿದು ಅದನ್ನು ಪ್ರಕಟಿಸಿ, ಅದು ನಿಮ್ಮ ಸ್ವಾತಂತ್ರ್ಯ” ಎಂದು ಪತ್ರತರ್ಕರಿಗೆ ಬೋಧನೆ ಮಾಡಿದ್ದರು.

ಬಹುರೂಪಿಯ ವಿವಾದ: ಇಂದು ಚರ್ಚೆ

ವಿವಾದಗಳಿಂದಲೇ ಸುದ್ದಿಯಾಗುತ್ತಿರುವ ಈ ಬಹುರೂಪಿ ಕಾರ್ಯಕ್ರಮಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. “ಬಹುರೂಪಿ ನಾಟಕೋತ್ಸವದ ಸಂದರ್ಭದಲ್ಲಿ ಸೃಷ್ಟಿಯಾಗಿರುವ ಗೊಂದಲ ಮತ್ತು ಅಪಾಯಗಳನ್ನು ಕುರಿತು ಚರ್ಚಿಸಲು ಮತ್ತು ಮುಂದಿನ ನಡೆಯನ್ನು ನಿರ್ಧರಿಸಲು ಇಂದು ಸಂಜೆ (ಡಿ.4, 2021) 5 ಗಂಟೆಗೆ ಮೈಸೂರಿನ ಕಲಾಮಂದಿರದ ಕಿಂದರಜೋಗಿ ಬಳಿ ಸಭೆ ಏರ್ಪಡಿಸಲಾಗಿದೆ. ಸಮಾನ ಮನಸ್ಕ ಚಿಂತಕರ, ಸಾಂಸ್ಕೃತಿಕ ಮನಸುಗಳ ಸಭೆ ಇದಾಗಿದ್ದು, ದಯವಿಟ್ಟು ಬಂದು ಭಾಗವಹಿಸಿ ತಮ್ಮ ಅಮೂಲ್ಯ ಸಲಹೆಗಳನ್ನು ನೀಡಬೇಕು” ಎಂದು ಚಿಂತಕ ನಾ.ದಿವಾಕರ ಅವರು ಮನವಿ ಮಾಡಿದ್ದಾರೆ.

ಬಹುರೂಪಿಗೆ ಹೋಗದಿರಲಿ ಕೆ.ಪಿ.ಸುರೇಶ್ ಮನವಿ

ಚಕ್ರವರ್ತಿ ಸೂಲಿಬೆಲೆಯಂಥವರನ್ನು ಬಹುರೂಪಿಗೆ ಆಹ್ವಾನಿಸಿರುವುದನ್ನು ಖಂಡಿಸಿರುವ ಚಿಂತಕ ಕೆ.ಪಿ.ಸುರೇಶ್ ಅವರು, ಕಾರ್ಯಕ್ರಮಕ್ಕೆ ಪ್ರಜ್ಞಾವಂತರು ಹೋಗದಿರಲು ಮನವಿ ಮಾಡಿದ್ದಾರೆ.

ಫೇಸ್‌ಬುಕ್‌ನಲ್ಲಿ ಕಿರು ಟಿಪ್ಪಣಿಯನ್ನು ಬರೆದಿರುವ ಅವರು, ” ಇಂಗ್ಲಿಶಲ್ಲಿ ಒಂದು ಮಾತಿದೆ. ಕೋಟ್‌ ಯುವರ್‌ ಪ್ರೈಸ್!‌ ಅಂತ ಅಂದರೆ ಕೊಳ್ಳಲಾಗದವ ಅಂತ ಇಲ್ಲ! ಬೆಲೆ ಎಷ್ಟು ಅಂತ! ನಾವೇನು ಮಾಡಬಹುದು? ನಮ್ಮ ನಾಟಿವೈದ್ಯದಲ್ಲಿ ಕಾಯಿಲೆ ಬಂದರೆ ಪಥ್ಯ ಮಾಡುವ ರೂಢಿ ಇದೆ. ಅಂದರೆ ಏನನ್ನೂ ತಿನ್ನದಿರುವುದು! ಇಲ್ಲೂ ಅಷ್ಟೇ. ಈ ಉತ್ಸವಕ್ಕೆ ರಂಗಾಯಣದ ಗೇಟೊಳಗೆ ಪಾದ ಇಡುವುದಿಲ್ಲ ಎನ್ನುವ ನಿರ್ಧಾರ ಮಾಡಿದರಾಯಿತು. ಈ ನಾಟಕಗಳನ್ನು ನೋಡದಿದ್ದರೆ ಪ್ರಪಂಚ ಮುಳುಗುವುದಿಲ್ಲ. ನಮ್ಮ ಜ್ಞಾನ ಭಂಡಾರ, ಅನುಭವ ಲೋಕ ಕಡಿಮೆಯಾಗಲಾರದು!! ನಿರ್ಲಿಪ್ತವಾಗಿ ಮಾಡುವ ಬದಲು ಸಂಘಟಿತವಾಗಿ ಇದನ್ನು ಮಾಡಬಹುದು. ನಾನು ಬಹುತೇಕ ಇಂಥಾ ಗೌಜಿಗಳಿಗೆ ಹೋಗುವುದಿಲ್ಲ. ದೇಶದ ರೈತರ ದುರಂತ ನಾಟಕ, ಚೌಕಿದಾರನ ಟ್ರಾಜಿಕಾಮಿಡಿ ನೋಡಿದ ಮೇಲೆ ಈ ರಂಗ ಪ್ರಯೋಗಗಳ ಬಗ್ಗೆ ಹೆಚ್ಚು ಆಸಕ್ತಿಇಲ್ಲ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...