Homeಮುಖಪುಟಅದಾನಿ-ಮಮತಾ ಬ್ಯಾನರ್ಜಿ ಭೇಟಿ: ಅದಾನಿ ಕುರಿತ ತಮ್ಮ ಟ್ವೀಟ್‌ಗಳಿಗೆ ಬದ್ದ ಎಂದ ಮಹುವಾ ಮೊಯಿತ್ರಾ

ಅದಾನಿ-ಮಮತಾ ಬ್ಯಾನರ್ಜಿ ಭೇಟಿ: ಅದಾನಿ ಕುರಿತ ತಮ್ಮ ಟ್ವೀಟ್‌ಗಳಿಗೆ ಬದ್ದ ಎಂದ ಮಹುವಾ ಮೊಯಿತ್ರಾ

- Advertisement -
- Advertisement -

ಪಶ್ಚಿಮ ಬಂಗಾಳದ ಆಡಳಿತರೂಢ ಪಕ್ಷ ಟಿಎಂಸಿಯ ಮುಖ್ಯಸ್ಥೆ ಮತ್ತು ಸಿಎಂ ಮಮತಾ ಬ್ಯಾನರ್ಜಿಯರು ಡಿಸೆಂಬರ್ 02ರ ಗುರುವಾರ ಸಂಜೆ ಉದ್ಯಮಿ ಗೌತಮ್ ಅದಾನಿಯವರನ್ನು ಭೇಟಿಯಾಗಿದ್ದಾರೆ. ರಾಜ್ಯದಲ್ಲಿ ಹೂಡಿಕೆ ಮಾಡುವಂತೆ ಮತ್ತು 2022ರ ಏಪ್ರಿಲ್‌ನಲ್ಲಿ ನಡೆಯುವ ಬೆಂಗಾಲ್ ಗ್ಲೋಬಲ್ ಬ್ಯುಸಿನೆಸ್ ಸಮ್ಮಿಟ್‌ಗೆ ಆಹ್ವಾನಿಸಿದ್ದಾರೆ. ಇನ್ನೊಂದೆಡೆ ಕೃಷಿ ಕಾಯ್ದೆಗಳು ಸೇರಿದಂತೆ ಹಲವು ವಿಚಾರವಾಗಿ ಅದಾನಿಯ ವಿರುದ್ಧ ಕಿಡಿಕಾರುತ್ತಿದ್ದ ಅದೇ ಪಕ್ಷದ ಸಂಸದೆ ಮಹುವಾ ಮೊಯಿತ್ರಾರವರು ಈಗ ತಮ್ಮ ಹಳೆಯ ಟ್ವೀಟ್‌ಗಳನ್ನು ಅಳಿಸಿದ್ದಾರೆ ಮತ್ತು ಅಳಿಸಲಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಉತ್ತರಿಸಿರುವ ಮಹುವಾ ತಮ್ಮ ಟ್ವೀಟ್‌ಗಳಿಗೆ ಈಗಲೂ ಬದ್ಧ ಎಂದಿದ್ದಾರೆ.

ಮಹುವಾ ಮೊಯಿತ್ರಾರವರು ಈ ಹಿಂದೆ ಅದಾನಿಯವ ವಿರುದ್ಧ ಮಾಡಿದ್ದ ಹಲವರು ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಟ್ವೀಟ್ ಮಾಡಿರುವ ಸಿಪಿಐ(ಎಂ) ನಾಯಕ ಎಂಡಿ ಸಲೀಂರವರು ಈ ಟ್ವೀಟ್‌ಗಳಲ್ಲಿ ಯಾವಾಗ ಬೇಕಾದರೂ ಡಿಲೀಟ್ ಮಾಡಬಹುದು ಎಂದು ಆರೋಪಿಸಿದ್ದಾರೆ. ಇನ್ನು ಕೆಲವು ನೆಟ್ಟಿಗರು ಒಂದು ಹೆಜ್ಜೆ ಮುಂದೆ ಹೋಗಿ ಮಹುವಾರವರು ಅದಾನಿಯವರನ್ನು ಟೀಕಿಸಿದ್ದ ತಮ್ಮ ಹಳೆಯ ಟ್ವೀಟ್‌ಗಳನ್ನು ಅಳಿಸಿಹಾಕಿದ್ದಾರೆ ಎಂದು ದೂರಿದ್ದಾರೆ. ಇದಕ್ಕೆ ಟ್ವೀಟ್ ಮೂಲಕವೆ ಸ್ಪಷ್ಟೀಕರಣ ನೀಡಿರುವ ಸಂಸದೆ, ಎಲ್ಲಾ ಟ್ವೀಟ್‌ಗಳು ಈಗಲೂ ಇವೆ ಮತ್ತು ಆ ವಿಚಾರಕ್ಕೆ ನಾನು ಬದ್ಧನಾಗಿದ್ದೇನೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಸಂಸ್ಥೆಗಳನ್ನು ಅದಾನಿ ಕಬಳಿಸುತ್ತಿದ್ದಾರೆ. ಇಡೀ ಕೇಂದ್ರ ಸರ್ಕಾರವೇ ಅವರ ಜೇಬಿನಲ್ಲಿದೆ. ಬ್ಯಾಂಕುಗಳಿಗೆ ಅವರು ವಂಚನೆ ಮಾಡಿದ್ದರೂ ಸಮರ್ಪಕ ತನಿಖೆ ನಡೆಯುತ್ತಿಲ್ಲ ಎಂದು ಮಹುವಾ ಮೊಯಿತ್ರಾ ಸರಣಿ ಟ್ವೀಟ್‌ಗಳಲ್ಲಿ ಅದಾನಿ ವಿರುದ್ಧ ತಿರುಗಿಬಿದ್ದಿದ್ದರು. ಈಗ ಸ್ವತಃ ಸಿಎಂ ಅದಾನಿಯವರನ್ನು ಹೂಡಿಕೆಗೆ ಬಂಗಾಳಕ್ಕೆ ಬನ್ನಿ ಎಂದು ಆಹ್ವಾನಿಸುತ್ತಿರುವುದರಿಂದ ಈ ವಿವಾದ ಭುಗಿಲೆದ್ದಿದೆ.

ಮಮತಾ ಬ್ಯಾನರ್ಜಿಯವರು ಬ್ಯುಸಿನೆಸ್ ಸಮ್ಮಿಟ್‌ಗೆ ಮುಖೇಶ್ ಅಂಬಾನಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಸಹ ಆಹ್ವಾನಿಸಿದ್ದಾರೆ. ಅದಾನಿ ಈ ಕುರಿತು ಟ್ವೀಟ್ ಮಾಡಿ “ಮಮತಾ ಬ್ಯಾನರ್ಜಿಯವರನ್ನು ಭೇಟಿ ಮಾಡಿದ್ದು ಸಂತೋಷವಾಗಿದೆ” ಎಂದಿದ್ದಾರೆ. ಜೊತೆಗೆ ಭೇಟಿಯ ಫೋಟೊ ಸಹ ಹಂಚಿಕೊಂಡಿದ್ದಾರೆ.

ಗೌತಮ್ ಅದಾನಿಯವರಿಗೆ ಯಾವುದೇ ಅಡೆ ತಡೆಯಿಲ್ಲದ ವ್ಯವಹಾರ ಸ್ನೇಹಿ ವಾತಾವರಣ ನಿರ್ಮಾಣ ಮಾಡಿಕೊಡಲಾಗುವುದು ಎಂದು ಬಂಗಾಳ ಸಿಎಂ ಭರವಸೆ ನೀಡಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಕೃಷಿ ಸೇರಿದಂತೆ ನೂರಾರು ಕ್ಷೇತ್ರಗಳಲ್ಲಿ ಹರಡಿಕೊಂಡಿರುವ ಅದಾನಿ ಮತ್ತು ಅಂಬಾನಿಗಳು ಬಂಗಾಳದ ಕಡೆಗೆ ತಮ್ಮ ದೃಷ್ಟಿ ನೆಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ದೇಶದ ರೈತರು ಈ ಇಬ್ಬರೂ ಉದ್ಯಮಿಗಳನ್ನು ಬಾಯ್ಕಾಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಟಾಟಾ ಕಂಪನಿಯ ತಮ್ಮ ಕಾರ್ಖಾನೆಗಾಗಿ ಭೂಮಿ ವಶಪಡಿಸಿಕೊಳ್ಳಲು ಮುಂದಾದಾದ ಸಿಂಗೂರು ಮತ್ತು ನಂದಿಗ್ರಾಮಗಳಲ್ಲಿ ಭಾರೀ ಹೋರಾಟ ಭುಗಿಲೆದ್ದಿತು. ಆ ಹೋರಾಟಕ್ಕೆ ನಾಯಕತ್ವ ನೀಡಿದ್ದ ಟಿಎಂಸಿಯ ಸುವೇಂದು ಅಧಿಕಾರಿ ಮತ್ತು ಮಮತಾ ಬ್ಯಾನರ್ಜಿ ದೊಡ್ಡ ನಾಯಕರಾಗಿ ಬೆಳೆದಿದ್ದರು. ಈ ಮೂರನೇ ಬಾರಿ ಅಧಿಕಾರಕ್ಕೆ ಬಂದಿರುವ ಅವರು ಮತ್ತದೆ ಅಂಬಾನಿ ಅದಾನಿಗಳಿಗೆ ಆಹ್ವಾನ ನೀಡುತ್ತಿದ್ದಾರೆ. ಮುಂದೆ ಏನಾಗಲಿದೆ ಎಂಬುದನ್ನು ಕಾಲವೇ ನಿರ್ಧರಿಸಲಿದೆ.

ಇದನ್ನೂ ಓದಿ: ‘ಮೋದಿ ಬೀದಿಬದಿ ಪೋಕರಿ ರೀತಿ ಮಾತನಾಡುತ್ತಾರೆ’- ಮೊಹುವಾ ಮೊಯಿತ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...