Homeಮುಖಪುಟಅದಾನಿ-ಮಮತಾ ಬ್ಯಾನರ್ಜಿ ಭೇಟಿ: ಅದಾನಿ ಕುರಿತ ತಮ್ಮ ಟ್ವೀಟ್‌ಗಳಿಗೆ ಬದ್ದ ಎಂದ ಮಹುವಾ ಮೊಯಿತ್ರಾ

ಅದಾನಿ-ಮಮತಾ ಬ್ಯಾನರ್ಜಿ ಭೇಟಿ: ಅದಾನಿ ಕುರಿತ ತಮ್ಮ ಟ್ವೀಟ್‌ಗಳಿಗೆ ಬದ್ದ ಎಂದ ಮಹುವಾ ಮೊಯಿತ್ರಾ

- Advertisement -
- Advertisement -

ಪಶ್ಚಿಮ ಬಂಗಾಳದ ಆಡಳಿತರೂಢ ಪಕ್ಷ ಟಿಎಂಸಿಯ ಮುಖ್ಯಸ್ಥೆ ಮತ್ತು ಸಿಎಂ ಮಮತಾ ಬ್ಯಾನರ್ಜಿಯರು ಡಿಸೆಂಬರ್ 02ರ ಗುರುವಾರ ಸಂಜೆ ಉದ್ಯಮಿ ಗೌತಮ್ ಅದಾನಿಯವರನ್ನು ಭೇಟಿಯಾಗಿದ್ದಾರೆ. ರಾಜ್ಯದಲ್ಲಿ ಹೂಡಿಕೆ ಮಾಡುವಂತೆ ಮತ್ತು 2022ರ ಏಪ್ರಿಲ್‌ನಲ್ಲಿ ನಡೆಯುವ ಬೆಂಗಾಲ್ ಗ್ಲೋಬಲ್ ಬ್ಯುಸಿನೆಸ್ ಸಮ್ಮಿಟ್‌ಗೆ ಆಹ್ವಾನಿಸಿದ್ದಾರೆ. ಇನ್ನೊಂದೆಡೆ ಕೃಷಿ ಕಾಯ್ದೆಗಳು ಸೇರಿದಂತೆ ಹಲವು ವಿಚಾರವಾಗಿ ಅದಾನಿಯ ವಿರುದ್ಧ ಕಿಡಿಕಾರುತ್ತಿದ್ದ ಅದೇ ಪಕ್ಷದ ಸಂಸದೆ ಮಹುವಾ ಮೊಯಿತ್ರಾರವರು ಈಗ ತಮ್ಮ ಹಳೆಯ ಟ್ವೀಟ್‌ಗಳನ್ನು ಅಳಿಸಿದ್ದಾರೆ ಮತ್ತು ಅಳಿಸಲಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಉತ್ತರಿಸಿರುವ ಮಹುವಾ ತಮ್ಮ ಟ್ವೀಟ್‌ಗಳಿಗೆ ಈಗಲೂ ಬದ್ಧ ಎಂದಿದ್ದಾರೆ.

ಮಹುವಾ ಮೊಯಿತ್ರಾರವರು ಈ ಹಿಂದೆ ಅದಾನಿಯವ ವಿರುದ್ಧ ಮಾಡಿದ್ದ ಹಲವರು ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಟ್ವೀಟ್ ಮಾಡಿರುವ ಸಿಪಿಐ(ಎಂ) ನಾಯಕ ಎಂಡಿ ಸಲೀಂರವರು ಈ ಟ್ವೀಟ್‌ಗಳಲ್ಲಿ ಯಾವಾಗ ಬೇಕಾದರೂ ಡಿಲೀಟ್ ಮಾಡಬಹುದು ಎಂದು ಆರೋಪಿಸಿದ್ದಾರೆ. ಇನ್ನು ಕೆಲವು ನೆಟ್ಟಿಗರು ಒಂದು ಹೆಜ್ಜೆ ಮುಂದೆ ಹೋಗಿ ಮಹುವಾರವರು ಅದಾನಿಯವರನ್ನು ಟೀಕಿಸಿದ್ದ ತಮ್ಮ ಹಳೆಯ ಟ್ವೀಟ್‌ಗಳನ್ನು ಅಳಿಸಿಹಾಕಿದ್ದಾರೆ ಎಂದು ದೂರಿದ್ದಾರೆ. ಇದಕ್ಕೆ ಟ್ವೀಟ್ ಮೂಲಕವೆ ಸ್ಪಷ್ಟೀಕರಣ ನೀಡಿರುವ ಸಂಸದೆ, ಎಲ್ಲಾ ಟ್ವೀಟ್‌ಗಳು ಈಗಲೂ ಇವೆ ಮತ್ತು ಆ ವಿಚಾರಕ್ಕೆ ನಾನು ಬದ್ಧನಾಗಿದ್ದೇನೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಸಂಸ್ಥೆಗಳನ್ನು ಅದಾನಿ ಕಬಳಿಸುತ್ತಿದ್ದಾರೆ. ಇಡೀ ಕೇಂದ್ರ ಸರ್ಕಾರವೇ ಅವರ ಜೇಬಿನಲ್ಲಿದೆ. ಬ್ಯಾಂಕುಗಳಿಗೆ ಅವರು ವಂಚನೆ ಮಾಡಿದ್ದರೂ ಸಮರ್ಪಕ ತನಿಖೆ ನಡೆಯುತ್ತಿಲ್ಲ ಎಂದು ಮಹುವಾ ಮೊಯಿತ್ರಾ ಸರಣಿ ಟ್ವೀಟ್‌ಗಳಲ್ಲಿ ಅದಾನಿ ವಿರುದ್ಧ ತಿರುಗಿಬಿದ್ದಿದ್ದರು. ಈಗ ಸ್ವತಃ ಸಿಎಂ ಅದಾನಿಯವರನ್ನು ಹೂಡಿಕೆಗೆ ಬಂಗಾಳಕ್ಕೆ ಬನ್ನಿ ಎಂದು ಆಹ್ವಾನಿಸುತ್ತಿರುವುದರಿಂದ ಈ ವಿವಾದ ಭುಗಿಲೆದ್ದಿದೆ.

ಮಮತಾ ಬ್ಯಾನರ್ಜಿಯವರು ಬ್ಯುಸಿನೆಸ್ ಸಮ್ಮಿಟ್‌ಗೆ ಮುಖೇಶ್ ಅಂಬಾನಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಸಹ ಆಹ್ವಾನಿಸಿದ್ದಾರೆ. ಅದಾನಿ ಈ ಕುರಿತು ಟ್ವೀಟ್ ಮಾಡಿ “ಮಮತಾ ಬ್ಯಾನರ್ಜಿಯವರನ್ನು ಭೇಟಿ ಮಾಡಿದ್ದು ಸಂತೋಷವಾಗಿದೆ” ಎಂದಿದ್ದಾರೆ. ಜೊತೆಗೆ ಭೇಟಿಯ ಫೋಟೊ ಸಹ ಹಂಚಿಕೊಂಡಿದ್ದಾರೆ.

ಗೌತಮ್ ಅದಾನಿಯವರಿಗೆ ಯಾವುದೇ ಅಡೆ ತಡೆಯಿಲ್ಲದ ವ್ಯವಹಾರ ಸ್ನೇಹಿ ವಾತಾವರಣ ನಿರ್ಮಾಣ ಮಾಡಿಕೊಡಲಾಗುವುದು ಎಂದು ಬಂಗಾಳ ಸಿಎಂ ಭರವಸೆ ನೀಡಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಕೃಷಿ ಸೇರಿದಂತೆ ನೂರಾರು ಕ್ಷೇತ್ರಗಳಲ್ಲಿ ಹರಡಿಕೊಂಡಿರುವ ಅದಾನಿ ಮತ್ತು ಅಂಬಾನಿಗಳು ಬಂಗಾಳದ ಕಡೆಗೆ ತಮ್ಮ ದೃಷ್ಟಿ ನೆಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ದೇಶದ ರೈತರು ಈ ಇಬ್ಬರೂ ಉದ್ಯಮಿಗಳನ್ನು ಬಾಯ್ಕಾಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಟಾಟಾ ಕಂಪನಿಯ ತಮ್ಮ ಕಾರ್ಖಾನೆಗಾಗಿ ಭೂಮಿ ವಶಪಡಿಸಿಕೊಳ್ಳಲು ಮುಂದಾದಾದ ಸಿಂಗೂರು ಮತ್ತು ನಂದಿಗ್ರಾಮಗಳಲ್ಲಿ ಭಾರೀ ಹೋರಾಟ ಭುಗಿಲೆದ್ದಿತು. ಆ ಹೋರಾಟಕ್ಕೆ ನಾಯಕತ್ವ ನೀಡಿದ್ದ ಟಿಎಂಸಿಯ ಸುವೇಂದು ಅಧಿಕಾರಿ ಮತ್ತು ಮಮತಾ ಬ್ಯಾನರ್ಜಿ ದೊಡ್ಡ ನಾಯಕರಾಗಿ ಬೆಳೆದಿದ್ದರು. ಈ ಮೂರನೇ ಬಾರಿ ಅಧಿಕಾರಕ್ಕೆ ಬಂದಿರುವ ಅವರು ಮತ್ತದೆ ಅಂಬಾನಿ ಅದಾನಿಗಳಿಗೆ ಆಹ್ವಾನ ನೀಡುತ್ತಿದ್ದಾರೆ. ಮುಂದೆ ಏನಾಗಲಿದೆ ಎಂಬುದನ್ನು ಕಾಲವೇ ನಿರ್ಧರಿಸಲಿದೆ.

ಇದನ್ನೂ ಓದಿ: ‘ಮೋದಿ ಬೀದಿಬದಿ ಪೋಕರಿ ರೀತಿ ಮಾತನಾಡುತ್ತಾರೆ’- ಮೊಹುವಾ ಮೊಯಿತ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...