Homeಮುಖಪುಟಇಂದು ವರ್ಷದ ಕೊನೆಯ ಸೂರ್ಯಗ್ರಹಣ: ಎಲ್ಲಿಲ್ಲಿ ಗೋಚರ? ನೋಡುವುದು ಹೇಗೆ ಇಲ್ಲಿದೆ ಮಾಹಿತಿ

ಇಂದು ವರ್ಷದ ಕೊನೆಯ ಸೂರ್ಯಗ್ರಹಣ: ಎಲ್ಲಿಲ್ಲಿ ಗೋಚರ? ನೋಡುವುದು ಹೇಗೆ ಇಲ್ಲಿದೆ ಮಾಹಿತಿ

- Advertisement -
- Advertisement -

2021 ರ ಎರಡನೇಯ ಮತ್ತು ಕೊನೆಯ ಸಂಪೂರ್ಣ ಸೂರ್ಯಗ್ರಹಣವು ಇಂದು (ಡಿ.4) ಸಂಭವಿಸುತ್ತಿದೆ. ಸುಮಾರು ನಾಲ್ಕು ಗಂಟೆಗಳ ಕಾಲ ಸೂರ್ಯಗ್ರಹಣ ಇರಲಿದೆ. ಆದರೆ ಈ ಸೂರ್ಯಗ್ರಹಣವು ಭಾರತದಲ್ಲಿ ಗೂಚರಿಸುವುದಿಲ್ಲ.

ಇಂದು ಅಮಾವಾಸ್ಯೆಯ ದಿನ. ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಬಂದಾಗ ಸೂರ್ಯಗ್ರಹಣ ಸಂಭವಿಸುತ್ತದೆ. ಈ ಗ್ರಹಣವನ್ನು ಅಂಟಾರ್ಟಿಕಾ ಮತ್ತು ದಕ್ಷಿಣ ಅಮೆರಿಕಾ, ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನ ದಕ್ಷಿಣ ತುದಿಯಲ್ಲಿರುವವರು ಗ್ರಹಣದ ಭಾಗಶಃ ಹಂತಗಳನ್ನು ನೋಡಬಹುದು.

ಈ ವರ್ಷದ ಕೊನೆಯ ಸೂರ್ಯಗ್ರಹಣದ ಅವಧಿ4 ತಾಸು 8 ನಿಮಿಷ. ಬೆಳಗ್ಗೆ 10:59 ಕ್ಕೆ ಗ್ರಹಣ ಪ್ರಾರಂಭವಾಗುತ್ತದೆ. ಸಂಪೂರ್ಣ ಗ್ರಹಣವು ಮಧ್ಯಾಹ್ನ 12:30 ಕ್ಕೆ ಮತ್ತು ಗರಿಷ್ಠ ಗ್ರಹಣವು ಮಧ್ಯಾಹ್ನ 1:03 ಕ್ಕೆ ಸಂಭವಿಸುತ್ತದೆ. ಮಧ್ಯಾಹ್ನ 3.07ಕ್ಕೆ ಸೂರ್ಯಗ್ರಹಣ ಮುಕ್ತಾಯವಾಗುತ್ತದೆ.

ಇದನ್ನೂ ಓದಿ: ರಾತ್ರಿಯ ಹೊತ್ತಿನಲ್ಲಿ ಸೂರ್ಯಗ್ರಹಣ ಮಾಡಿಸುವ ಮಾಧ್ಯಮಗಳು!

ಎಲ್ಲಿ ನೋಡಬಹುದು…?

ಅಂಟಾರ್ಕ್ಟಿಕಾದಿಂದ ಸಂಪೂರ್ಣ ಸೂರ್ಯಗ್ರಹಣವನ್ನು NASAದ YouTube ಚಾನಲ್ ಮತ್ತು nasa.gov/live ನಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ. ಈ ಚಾನೆಲ್‌ಗಳ ಮೂಲಕ ನೋಡಬಹುದು.

ಇನ್ನು ಸಂಪೂರ್ಣ ಸೂರ್ಯಗ್ರಹಣದ ಸಮಯದಲ್ಲಿ ಕಣ್ಣಿನ ಸುರಕ್ಷತೆ ಬಗ್ಗೆ ನಿಗಾ ವಹಿಸಬೇಕು. ಸೂರ್ಯನನ್ನು ನೇರವಾಗಿ ನೋಡಬೇಡಬಾರದು. ಎಲ್ಲ ಸಮಯದಲ್ಲೂ ವಿಶೇಷ ಗ್ರಹಣ ಕನ್ನಡಕವನ್ನು ಬಳಸಬೇಕು. ಸೂರ್ಯನನ್ನು ನೋಡಲು ಪಿನ್‌ಹೋಲ್ ಬಾಕ್ಸ್ ಮತ್ತು ಪ್ರೊಜೆಕ್ಷನ್ ವಿಧಾನಗಳನ್ನು ಬಳಸಬೇಕು.

“ಭೂಮಿ ಸೂರ್ಯನ ಸುತ್ತ, ಚಂದ್ರ ಭೂಮಿಯ ಸುತ್ತ ಸುತ್ತುತ್ತಿರಬೇಕಾದರೆ, ಭೂಮಿ ಮತ್ತು ಸೂರ್ಯನ ನಡುವೆ ಚಂದ್ರ ಹಾದುಹೋಗುವಾಗ, ಈ ಮೂರೂ ಆಕಾಶಕಾಯಗಳು ಒಂದೇ ಸರಳ ರೇಖೆಯಲ್ಲಿ ಬರುತ್ತವೆ. ಇಂತಹ ಸಂದರ್ಭದಲ್ಲಿ ಚಂದ್ರ ಸೂರ್ಯನನ್ನು ಮರೆಮಾಚುತ್ತದೆ, ಆಗ ಸೂರ್ಯನ ಬೆಳಕು ಭೂಮಿಯ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಬೀಳುವುದಿಲ್ಲ. ಇದು ಸೂರ್ಯಗ್ರಹಣ. ಸೂರ್ಯಗ್ರಹಣ ಅಮಾವಾಸ್ಯೆಯ ದಿನದಂದೇ ನಡೆಯುತ್ತದೆ.

——————–

ಇದನ್ನೂ ಓದಿ: ಮೌಢ್ಯ ವಿರೋಧಿಸಿ ಸೂರ್ಯಗ್ರಹಣ ವೀಕ್ಷಿಸಿದ ಲಕ್ಷಾಂತರ ಮಂದಿ, ಆಹಾರ ಸೇವನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...