Homeಮುಖಪುಟಪಾಕಿಸ್ತಾನ: ಶ್ರೀಲಂಕಾದ ವ್ಯಕ್ತಿ ಗುಂಪು ದಾಳಿಗೆ ಬಲಿ; ಸಾರ್ವಜನಿಕವಾಗಿ ಸುಟ್ಟು ವಿಕೃತಿ

ಪಾಕಿಸ್ತಾನ: ಶ್ರೀಲಂಕಾದ ವ್ಯಕ್ತಿ ಗುಂಪು ದಾಳಿಗೆ ಬಲಿ; ಸಾರ್ವಜನಿಕವಾಗಿ ಸುಟ್ಟು ವಿಕೃತಿ

- Advertisement -
- Advertisement -

ಧರ್ಮನಿಂದನೆಯ ಆರೋಪದ ಮೇಲೆ ಶ್ರೀಲಂಕಾದ ವ್ಯಕ್ತಿಯನ್ನು ಪಾಕಿಸ್ತಾನದಲ್ಲಿ ಗುಂಪು ಹತ್ಯೆ (ಮಾಬ್‌ ಲಿಂಚಿಂಗ್‌) ಮಾಡಲಾಗಿದ್ದು, ಸಾರ್ವಜನಿಕವಾಗಿ ಸುಟ್ಟು ವಿಕೃತಿ ಮೆರೆಯಲಾಗಿದೆ.

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸಿಯಾಲ್‌ಕೋಟ್ ಜಿಲ್ಲೆಯಲ್ಲಿ ಶುಕ್ರವಾರ ಶ್ರೀಲಂಕಾದ ವ್ಯಕ್ತಿಯೊಬ್ಬರನ್ನು ಹತ್ಯೆಗೈದು ಅವರ ದೇಹವನ್ನು ದುಷ್ಕರ್ಮಿಗಳ ಗುಂಪು ಸಾರ್ವಜನಿಕವಾಗಿ ಸುಟ್ಟು ಹಾಕಿದೆ ಎಂದು ಎಪಿ ವರದಿ ಮಾಡಿದೆ. ಕೊಲೆಯಾದ ವ್ಯಕ್ತಿಯು ಪ್ರವಾದಿ ಮುಹಮ್ಮದ್ ಅವರ ಹೆಸರಿನ ಪೋಸ್ಟರ್‌ಗಳನ್ನು ಅಪವಿತ್ರಗೊಳಿಸಿದ್ದರು ಎಂದು ಆರೋಪಿಸಲಾಗಿದೆ. ಕೊಲೆಯಾದ ವ್ಯಕ್ತಿಯನ್ನು ಪ್ರಿಯಾಂತ ಕುಮಾರ ಎಂದು ಗುರುತಿಸಲಾಗಿದೆ.

ಧಾರ್ಮಿಕ ವ್ಯವಹಾರಗಳು ಮತ್ತು ಸರ್ವಧರ್ಮ ಸೌಹಾರ್ದತೆಯ ವಿಶೇಷ ಪ್ರತಿನಿಧಿ ಹಫೀಜ್ ತಾಹಿರ್ ಮೆಹಮೂದ್ ಅಶ್ರಫಿ ಮಾತನಾಡಿ, “ಇದುವರೆಗೆ 50 ಜನರನ್ನು ಬಂಧಿಸಲಾಗಿದೆ, ಹತ್ಯೆಯ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಹೆಚ್ಚಿನ ಮಾಹಿತಿಗಳನ್ನು ಪೊಲೀಸರು ಪತ್ತೆಹಚ್ಚುತ್ತಿದ್ದಾರೆ” ಎಂದು ಹೇಳಿರುವುದಾಗಿ ಪಾಕಿಸ್ತಾನದ ಮಾಧ್ಯಮ ‘ಡಾನ್’ ವರದಿ ಮಾಡಿದೆ.

ದುಷ್ಕರ್ಮಿಗಳ ಗುಂಪು ಶ್ರೀಲಂಕಾದ ವ್ಯಕ್ತಿಯನ್ನು ಕ್ರೀಡಾ ಸಲಕರಣೆಗಳ ಕಾರ್ಖಾನೆಯಿಂದ ಬೀದಿಗೆ ಎಳೆದುಕೊಂಡು ಹೋಗುತ್ತಿರುವ ವಿಡಿಯೋ ವೈರಲ್‌ ಆಗಿದೆ. ಕೊಲೆಯಾದ ವ್ಯಕ್ತಿಯು ಕಾರ್ಖಾನೆಯಲ್ಲಿ ವ್ಯವಸ್ಥಾಪಕನಾಗಿ ಕೆಲಸ ಮಾಡುತ್ತಿದ್ದನು. ಅವರನ್ನು ಕಾರ್ಖಾನೆಯಿಂದ ಹೊರಗೆ ಎಳೆತಂದು ನೂರಾರು ಜನರ ಹರ್ಷೋದ್ಗಾರ ನಡುವೆ ಅವರಿಗೆ ಬೆಂಕಿಹಚ್ಚಲಾಯಿತು ಎಂದು ವರದಿಗಳಾಗಿವೆ.

ಪಾಕಿಸ್ತಾನದಲ್ಲಿ ಕೊಲೆಯಾದ ಶ್ರೀಲಂಕಾದ ವ್ಯಕ್ತಿ ಪ್ರಿಯಾಂತ ಕುಮಾರ (PC: Dawn)

ಇದನ್ನೂ ಓದಿರಿ: ಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ


“ನಾವು ಸತ್ಯಾಂಶಗಳನ್ನು ಪರಿಶೀಲಿಸುತ್ತಿದ್ದೇವೆ. ಪೊಲೀಸರಿಂದ ಯಾವುದೇ ರೀತಿಯ ವಿಳಂಬವಾಗಿದೆಯೇ ಎಂದು ಪ್ರತಿಕ್ರಿಯೆಯನ್ನು ಪಡೆಯುತ್ತಿದ್ದೇವೆ” ಎಂದು ಪಂಜಾಬ್ ಇನ್ಸ್‌ಪೆಕ್ಟರ್ ಜನರಲ್ ರಾವ್ ಸರ್ದಾರ್ ಅಲಿ ಖಾನ್ ಹೇಳಿದ್ದಾರೆ. “ಈ ಘಟನೆಯು ಸೂಕ್ಷ್ಮ ಮತ್ತು ದುರದೃಷ್ಟಕರವಾಗಿದೆ” ಎಂದು ಡಾನ್‌ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಶ್ರೀಲಂಕಾದ ವ್ಯಕ್ತಿಯನ್ನು ಕೊಲ್ಲಲು ಈ ಗುಂಪನ್ನು ಏಕೆ ಪ್ರೇರೇಪಿಸಿತು ಎಂಬುದನ್ನು ನಿರ್ಧರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ ಎಂದು ಅಸೋಸಿಯೇಟೆಡ್‌‌ ಪ್ರೆಸ್‌‌ ವರದಿ ಮಾಡಿದೆ. ಮೃತ ವ್ಯಕ್ತಿಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಘಟನೆಯ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸುವಂತೆ ಇನ್ಸ್ ಪೆಕ್ಟರ್ ಜನರಲ್‌ಗೆ ಸೂಚನೆ ನೀಡಿರುವುದಾಗಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಉಸ್ಮಾನ್ ಬುಜ್ದಾರ್ ತಿಳಿಸಿದ್ದಾರೆ.

ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಯಾರಿಗೂ ಅವಕಾಶವಿಲ್ಲ ಎಂದು ಅವರು ಟ್ವೀಟ್‌ ಮಾಡಿದ್ದಾರೆ. “ಈ ಅಮಾನವೀಯ ಕೃತ್ಯದಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಸುಮ್ಮನೆ ಬಿಡಲಾಗುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ಘಟನೆಯನ್ನು ಪಾಕಿಸ್ತಾನದ ಹಲವಾರು ನಾಯಕರು ಖಂಡಿಸಿದ್ದಾರೆ. ಧಾರ್ಮಿಕ ವ್ಯವಹಾರಗಳು ಮತ್ತು ಸರ್ವಧರ್ಮೀಯ ಸೌಹಾರ್ದತೆಯ ವಿಶೇಷ ಪ್ರತಿನಿಧಿ ಹಫೀಜ್ ತಾಹಿರ್ ಮೆಹಮೂದ್ ಅಶ್ರಫಿ ಅವರು, “ಸಾರ್ವಜನಿಕ ಹತ್ಯೆಯು ಇಸ್ಲಾಂ ಧರ್ಮವನ್ನು ಅಪವಿತ್ರಗೊಳಿಸಿದೆ” ಎಂದು ವಿಷಾದಿಸಿರುವುದಾಗಿ ಡಾನ್ ವರದಿ ಮಾಡಿದೆ.

“ಘಟನೆಯಲ್ಲಿ ಒಳಗೊಂಡಿರುವ ಅಂಶಗಳು ಇಸ್ಲಾಮಿಕ್ ಕಾನೂನುಗಳು ಮತ್ತು ಬೋಧನೆಗಳಿಗೆ ಹಾನಿ ಮಾಡಲು ಪ್ರಯತ್ನಿಸಿವೆ” ಎಂದು ಅಭಿಪ್ರಾಯಪಟ್ಟಿರುವ ಅವರು, “ಅನಾಗರಿಕತೆಗಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ” ಎಂದು ಹೇಳಿದ್ದಾರೆ.

ಪಾಕಿಸ್ತಾನದ ಮಾನವ ಹಕ್ಕುಗಳ ಸಚಿವ ಶಿರೀನ್ ಮಜಾರಿಯವರು ಈ ಹತ್ಯೆಯನ್ನು “ಭಯಾನಕ ಮತ್ತು ಖಂಡನೀಯ” ಎಂದು ಕರೆದಿದ್ದಾರೆ. “ಎಲ್ಲಾ ಅಪರಾಧಗಳಿಗೆ ಕಾನೂನಿನಲ್ಲಿ ಶಿಕ್ಷೆ ಇದೆ. ಯಾವುದೇ ಸಂದರ್ಭದಲ್ಲೂ ಗುಂಪು ಹಿಂಸಾಚಾರವನ್ನು ಒಪ್ಪಿಕೊಳ್ಳಲಾಗುವುದಿಲ್ಲ” ಎಂದು ಅವರು ಟ್ವೀಟ್‌ ಮಾಡಿದ್ದಾರೆ. “ಪಾಕಿಸ್ತಾನದ ಪಂಜಾಬ್ ಸರ್ಕಾರದ ಕ್ರಮವು ದೃಢವಾಗಿರಬೇಕು ಮತ್ತು ನಿಸ್ಸಂದಿಗ್ಧವಾಗಿರಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿರಿ: ಅಂಬೇಡ್ಕರ್ ಝಿಂದಾಬಾದ್ ಘೋಷಣೆಯನ್ನು ಪಾಕಿಸ್ತಾನ ಪರ ಘೋಷಣೆ ಎಂದು ತಿರುಚಿದ ಪ್ರಕರಣ: ಪಿಎಫ್ಐ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...