Homeಮುಖಪುಟಪಾಕಿಸ್ತಾನ: ಶ್ರೀಲಂಕಾದ ವ್ಯಕ್ತಿ ಗುಂಪು ದಾಳಿಗೆ ಬಲಿ; ಸಾರ್ವಜನಿಕವಾಗಿ ಸುಟ್ಟು ವಿಕೃತಿ

ಪಾಕಿಸ್ತಾನ: ಶ್ರೀಲಂಕಾದ ವ್ಯಕ್ತಿ ಗುಂಪು ದಾಳಿಗೆ ಬಲಿ; ಸಾರ್ವಜನಿಕವಾಗಿ ಸುಟ್ಟು ವಿಕೃತಿ

- Advertisement -
- Advertisement -

ಧರ್ಮನಿಂದನೆಯ ಆರೋಪದ ಮೇಲೆ ಶ್ರೀಲಂಕಾದ ವ್ಯಕ್ತಿಯನ್ನು ಪಾಕಿಸ್ತಾನದಲ್ಲಿ ಗುಂಪು ಹತ್ಯೆ (ಮಾಬ್‌ ಲಿಂಚಿಂಗ್‌) ಮಾಡಲಾಗಿದ್ದು, ಸಾರ್ವಜನಿಕವಾಗಿ ಸುಟ್ಟು ವಿಕೃತಿ ಮೆರೆಯಲಾಗಿದೆ.

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸಿಯಾಲ್‌ಕೋಟ್ ಜಿಲ್ಲೆಯಲ್ಲಿ ಶುಕ್ರವಾರ ಶ್ರೀಲಂಕಾದ ವ್ಯಕ್ತಿಯೊಬ್ಬರನ್ನು ಹತ್ಯೆಗೈದು ಅವರ ದೇಹವನ್ನು ದುಷ್ಕರ್ಮಿಗಳ ಗುಂಪು ಸಾರ್ವಜನಿಕವಾಗಿ ಸುಟ್ಟು ಹಾಕಿದೆ ಎಂದು ಎಪಿ ವರದಿ ಮಾಡಿದೆ. ಕೊಲೆಯಾದ ವ್ಯಕ್ತಿಯು ಪ್ರವಾದಿ ಮುಹಮ್ಮದ್ ಅವರ ಹೆಸರಿನ ಪೋಸ್ಟರ್‌ಗಳನ್ನು ಅಪವಿತ್ರಗೊಳಿಸಿದ್ದರು ಎಂದು ಆರೋಪಿಸಲಾಗಿದೆ. ಕೊಲೆಯಾದ ವ್ಯಕ್ತಿಯನ್ನು ಪ್ರಿಯಾಂತ ಕುಮಾರ ಎಂದು ಗುರುತಿಸಲಾಗಿದೆ.

ಧಾರ್ಮಿಕ ವ್ಯವಹಾರಗಳು ಮತ್ತು ಸರ್ವಧರ್ಮ ಸೌಹಾರ್ದತೆಯ ವಿಶೇಷ ಪ್ರತಿನಿಧಿ ಹಫೀಜ್ ತಾಹಿರ್ ಮೆಹಮೂದ್ ಅಶ್ರಫಿ ಮಾತನಾಡಿ, “ಇದುವರೆಗೆ 50 ಜನರನ್ನು ಬಂಧಿಸಲಾಗಿದೆ, ಹತ್ಯೆಯ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಹೆಚ್ಚಿನ ಮಾಹಿತಿಗಳನ್ನು ಪೊಲೀಸರು ಪತ್ತೆಹಚ್ಚುತ್ತಿದ್ದಾರೆ” ಎಂದು ಹೇಳಿರುವುದಾಗಿ ಪಾಕಿಸ್ತಾನದ ಮಾಧ್ಯಮ ‘ಡಾನ್’ ವರದಿ ಮಾಡಿದೆ.

ದುಷ್ಕರ್ಮಿಗಳ ಗುಂಪು ಶ್ರೀಲಂಕಾದ ವ್ಯಕ್ತಿಯನ್ನು ಕ್ರೀಡಾ ಸಲಕರಣೆಗಳ ಕಾರ್ಖಾನೆಯಿಂದ ಬೀದಿಗೆ ಎಳೆದುಕೊಂಡು ಹೋಗುತ್ತಿರುವ ವಿಡಿಯೋ ವೈರಲ್‌ ಆಗಿದೆ. ಕೊಲೆಯಾದ ವ್ಯಕ್ತಿಯು ಕಾರ್ಖಾನೆಯಲ್ಲಿ ವ್ಯವಸ್ಥಾಪಕನಾಗಿ ಕೆಲಸ ಮಾಡುತ್ತಿದ್ದನು. ಅವರನ್ನು ಕಾರ್ಖಾನೆಯಿಂದ ಹೊರಗೆ ಎಳೆತಂದು ನೂರಾರು ಜನರ ಹರ್ಷೋದ್ಗಾರ ನಡುವೆ ಅವರಿಗೆ ಬೆಂಕಿಹಚ್ಚಲಾಯಿತು ಎಂದು ವರದಿಗಳಾಗಿವೆ.

ಪಾಕಿಸ್ತಾನದಲ್ಲಿ ಕೊಲೆಯಾದ ಶ್ರೀಲಂಕಾದ ವ್ಯಕ್ತಿ ಪ್ರಿಯಾಂತ ಕುಮಾರ (PC: Dawn)

ಇದನ್ನೂ ಓದಿರಿ: ಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ


“ನಾವು ಸತ್ಯಾಂಶಗಳನ್ನು ಪರಿಶೀಲಿಸುತ್ತಿದ್ದೇವೆ. ಪೊಲೀಸರಿಂದ ಯಾವುದೇ ರೀತಿಯ ವಿಳಂಬವಾಗಿದೆಯೇ ಎಂದು ಪ್ರತಿಕ್ರಿಯೆಯನ್ನು ಪಡೆಯುತ್ತಿದ್ದೇವೆ” ಎಂದು ಪಂಜಾಬ್ ಇನ್ಸ್‌ಪೆಕ್ಟರ್ ಜನರಲ್ ರಾವ್ ಸರ್ದಾರ್ ಅಲಿ ಖಾನ್ ಹೇಳಿದ್ದಾರೆ. “ಈ ಘಟನೆಯು ಸೂಕ್ಷ್ಮ ಮತ್ತು ದುರದೃಷ್ಟಕರವಾಗಿದೆ” ಎಂದು ಡಾನ್‌ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಶ್ರೀಲಂಕಾದ ವ್ಯಕ್ತಿಯನ್ನು ಕೊಲ್ಲಲು ಈ ಗುಂಪನ್ನು ಏಕೆ ಪ್ರೇರೇಪಿಸಿತು ಎಂಬುದನ್ನು ನಿರ್ಧರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ ಎಂದು ಅಸೋಸಿಯೇಟೆಡ್‌‌ ಪ್ರೆಸ್‌‌ ವರದಿ ಮಾಡಿದೆ. ಮೃತ ವ್ಯಕ್ತಿಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಘಟನೆಯ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸುವಂತೆ ಇನ್ಸ್ ಪೆಕ್ಟರ್ ಜನರಲ್‌ಗೆ ಸೂಚನೆ ನೀಡಿರುವುದಾಗಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಉಸ್ಮಾನ್ ಬುಜ್ದಾರ್ ತಿಳಿಸಿದ್ದಾರೆ.

ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಯಾರಿಗೂ ಅವಕಾಶವಿಲ್ಲ ಎಂದು ಅವರು ಟ್ವೀಟ್‌ ಮಾಡಿದ್ದಾರೆ. “ಈ ಅಮಾನವೀಯ ಕೃತ್ಯದಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಸುಮ್ಮನೆ ಬಿಡಲಾಗುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ಘಟನೆಯನ್ನು ಪಾಕಿಸ್ತಾನದ ಹಲವಾರು ನಾಯಕರು ಖಂಡಿಸಿದ್ದಾರೆ. ಧಾರ್ಮಿಕ ವ್ಯವಹಾರಗಳು ಮತ್ತು ಸರ್ವಧರ್ಮೀಯ ಸೌಹಾರ್ದತೆಯ ವಿಶೇಷ ಪ್ರತಿನಿಧಿ ಹಫೀಜ್ ತಾಹಿರ್ ಮೆಹಮೂದ್ ಅಶ್ರಫಿ ಅವರು, “ಸಾರ್ವಜನಿಕ ಹತ್ಯೆಯು ಇಸ್ಲಾಂ ಧರ್ಮವನ್ನು ಅಪವಿತ್ರಗೊಳಿಸಿದೆ” ಎಂದು ವಿಷಾದಿಸಿರುವುದಾಗಿ ಡಾನ್ ವರದಿ ಮಾಡಿದೆ.

“ಘಟನೆಯಲ್ಲಿ ಒಳಗೊಂಡಿರುವ ಅಂಶಗಳು ಇಸ್ಲಾಮಿಕ್ ಕಾನೂನುಗಳು ಮತ್ತು ಬೋಧನೆಗಳಿಗೆ ಹಾನಿ ಮಾಡಲು ಪ್ರಯತ್ನಿಸಿವೆ” ಎಂದು ಅಭಿಪ್ರಾಯಪಟ್ಟಿರುವ ಅವರು, “ಅನಾಗರಿಕತೆಗಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ” ಎಂದು ಹೇಳಿದ್ದಾರೆ.

ಪಾಕಿಸ್ತಾನದ ಮಾನವ ಹಕ್ಕುಗಳ ಸಚಿವ ಶಿರೀನ್ ಮಜಾರಿಯವರು ಈ ಹತ್ಯೆಯನ್ನು “ಭಯಾನಕ ಮತ್ತು ಖಂಡನೀಯ” ಎಂದು ಕರೆದಿದ್ದಾರೆ. “ಎಲ್ಲಾ ಅಪರಾಧಗಳಿಗೆ ಕಾನೂನಿನಲ್ಲಿ ಶಿಕ್ಷೆ ಇದೆ. ಯಾವುದೇ ಸಂದರ್ಭದಲ್ಲೂ ಗುಂಪು ಹಿಂಸಾಚಾರವನ್ನು ಒಪ್ಪಿಕೊಳ್ಳಲಾಗುವುದಿಲ್ಲ” ಎಂದು ಅವರು ಟ್ವೀಟ್‌ ಮಾಡಿದ್ದಾರೆ. “ಪಾಕಿಸ್ತಾನದ ಪಂಜಾಬ್ ಸರ್ಕಾರದ ಕ್ರಮವು ದೃಢವಾಗಿರಬೇಕು ಮತ್ತು ನಿಸ್ಸಂದಿಗ್ಧವಾಗಿರಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿರಿ: ಅಂಬೇಡ್ಕರ್ ಝಿಂದಾಬಾದ್ ಘೋಷಣೆಯನ್ನು ಪಾಕಿಸ್ತಾನ ಪರ ಘೋಷಣೆ ಎಂದು ತಿರುಚಿದ ಪ್ರಕರಣ: ಪಿಎಫ್ಐ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...