Homeಕರ್ನಾಟಕಬೆಂಗಳೂರು: ಯುವಕನ ಬಲಗೈ ಕಟ್ ಆಗುವಂತೆ ಚಿತ್ರಹಿಂಸೆ ನೀಡಿದ್ದ ಮೂವರು ಪೊಲೀಸರ ಅಮಾನತು

ಬೆಂಗಳೂರು: ಯುವಕನ ಬಲಗೈ ಕಟ್ ಆಗುವಂತೆ ಚಿತ್ರಹಿಂಸೆ ನೀಡಿದ್ದ ಮೂವರು ಪೊಲೀಸರ ಅಮಾನತು

- Advertisement -
- Advertisement -

22 ವರ್ಷದ ಯುವಕರೊಬ್ಬನನ್ನು ಬಂಧನದಲ್ಲಿಟ್ಟು ಸತತ ಚಿತ್ರಹಿಂಸೆ ನೀಡಿ ಆತ ತನ್ನ ಬಲಗೈ ಕಳೆದುಕೊಳ್ಳುವಂತೆ ಮಾಡಿದ್ದಾರೆ ಎಂಬ ಆರೋಪದಲ್ಲಿ ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆಯ ಮೂವರು ಪೊಲೀಸರನ್ನು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಅಮಾನತುಗೊಳಿಸಿದ್ದಾರೆ.

ಕಾರಿನ ಬ್ಯಾಟರಿ ಕಳ್ಳತನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕೋಳಿ ಅಂಗಡಿ ನಡೆಸುತ್ತಿದ್ದ ಸಲ್ಮಾನ್ ಖಾನ್ ಎಂಬ ಯುವಕನನ್ನು ವರ್ತೂರು ಪೊಲೀಸರು ಅಕ್ಟೋಬರ್ 27ರಂದು ಬಂಧಿಸಿದ್ದರು. ಮೂರು ದಿನಗಳವರೆಗೆ ಆತನಿಗೆ ಠಾಣೆಯಲ್ಲಿ ಚಿತ್ರಹಿಂಸೆ ನೀಡಲಾಗಿದೆ. ಇದರಿಂದ ಆತ ತನ್ನ ಬಲಗೈ ಕಳೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಘಟನೆ ಬಗ್ಗೆ ಎಸಿಪಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿತ್ತು. ಸಲ್ಮಾನ್ ಮೇಲೆ ಹಲ್ಲೆ ನಡೆಸಿರುವುದು ಹಿರಿಯ ಅಧಿಕಾರಿಯ ವಿಚಾರಣೆಯ ನಂತರ ಬೆಳಕಿಗೆ ಬಂದಿದ್ದು, ಹೆಡ್ ಕಾನ್‌ಸ್ಟೆಬಲ್‌ಗಳಾದ ನಾಗಭೂಷಣ ಗೌಡ, ನಾಗರಾಜ್ ಬಿ.ಎನ್ ಮತ್ತು ಶಿವಕುಮಾರ್ ಹೆಚ್ ಎಂಬುವವರನ್ನು ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ: ಕನಸಿನ ಭಾರತಕ್ಕೆ ಸಂವಿಧಾನವೇ ರೋಡ್‌ ಮ್ಯಾಪ್‌: ಗಾಯಕಿ ಎಂ.ಡಿ.ಪಲ್ಲವಿ

ಘಟನೆ ಹಿನ್ನೆಲೆ:

ಕಳ್ಳತನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕೋಳಿ ಅಂಗಡಿ ನಡೆಸುತ್ತಿದ್ದ ಸಲ್ಮಾನ್ ಖಾನ್ ಎಂಬ ಯುವಕನನ್ನು ವರ್ತೂರು ಪೊಲೀಸರು ಅಕ್ಟೋಬರ್ 27ರಂದು ಬಂಧಿಸಿದ್ದರು. ಆತನ ಬಗ್ಗೆ ಯಾವುದೇ ಸುಳಿವು ಸಿಗದೇ ಇದ್ದಾಗ ಮನೆಮಂದಿ ನಾಪತ್ತೆ ದೂರು ದಾಖಲಿಸಲು ನಿರಂತರ ಮೂರು ದಿನಗಳ ವರೆಗೆ ಪೊಲೀಸ್ ಠಾಣೆಗೆ ಅಲೆದಾಡಿದ್ದರು. ತಮಗೆ ಆತನ ಬಗ್ಗೆ ಮಾಹಿತಿ ಇಲ್ಲ ಎಂದಿದ್ದ ಪೊಲೀಸರು ದೂರು ದಾಖಲಿಸಿಕೊಳ್ಳಲೂ ನಿರಾಕರಿಸಿದ್ದರು. ನಾಲ್ಕನೇ ದಿನ ತಾಯಿ ಠಾಣೆಗೆ ತೆರಳಿದ್ದ ಸಂದರ್ಭದಲ್ಲಿ ಸಲ್ಮಾನ್ ನನ್ನು ಠಾಣೆಯಲ್ಲಿ ಕೂಡಿ ಹಾಕಿರುವ ವಿಚಾರ ಆಕೆಯ ಗಮನಕ್ಕೆ ಬಂದಿದೆ. ಆ ವೇಳೆ ಆತನನ್ನು ಬಿಡುಗಡೆ ಮಾಡಬೇಕಾದರೆ 50,000 ರೂಪಾಯಿ ನೀಡಬೇಕೆಂದು ಪೊಲೀಸರು ಒತ್ತಡ ಹೇರಿದ್ದರೆಂದು ಸ್ವತಃ ಕುಟುಂಬಸ್ಥರು ಹೇಳಿದ್ದಾರೆ. ಎರಡು-ಮೂರು ದಿನಗಳ ಬಳಿಕ ತಾಯಿ 10,000 ರೂಪಾಯಿ ಹೊಂದಿಸಿ ಆತನನ್ನು ಬಿಡಿಸಿಕೊಂಡು ಬಂದಿದ್ದರು. ಮನೆಗೆ ಬಂದ ಬಳಿಕ, ಪೊಲೀಸರು ಠಾಣೆಯಲ್ಲಿ ಅಮಾನವೀಯವಾಗಿ ಚಿತ್ರಹಿಂಸೆ ನೀಡಿರುವ ವಿಚಾರ ಬೆಳಕಿಗೆ ಬಂದಿದೆ. ಆಸ್ಪತ್ರೆಗೆ ದಾಖಲಿಸಿದಾಗ ಪೊಲೀಸರ ಗಂಭೀರ ಹೊಡೆತದ ಪರಿಣಾಮ ಆತನ ಕೈಯಲ್ಲಿ ಸಂಪೂರ್ಣವಾಗಿ ಕೀವು ತುಂಬಿದ್ದು, ಕೂಡಲೇ ಕೈ ಕತ್ತರಿಸಬೇಕೆಂದು ವೈದ್ಯರು ಸೂಚಿಸಿದ್ದಾರೆ. ನವೆಂಬರ್ 8 ರಂದು ಯುವಕನ ಬಲಗೈ ಕತ್ತರಿಸಲಾಗಿದೆ.

ಈ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆಗೆ ಮಾತನಾಡಿರುವ ಸಂತ್ರಸ್ತ ಸಲ್ಮಾನ್ ಕೇರಳ ನೋಂದಣಿ ಸಂಖ್ಯೆಯ ಖಾಸಗಿ ವಾಹನದಲ್ಲಿ ಪೊಲೀಸರು ಆಗಮಿಸಿದ್ದರು ಎಂದಿದ್ದಾರೆ. “ನನ್ನನ್ನು ವರ್ತೂರು ಪೊಲೀಸ್ ಠಾಣೆಗೆ ಕರೆದೊಯ್ದರು, ಅಲ್ಲಿ ಮೂವರು ಪೊಲೀಸರು ನನ್ನ ಮೇಲೆ ನಿರ್ದಯವಾಗಿ ಹಲ್ಲೆ ನಡೆಸಿದರು. ನಾನು ಮೂರು ಕಾರ್ ಬ್ಯಾಟರಿಗಳನ್ನು ಕದ್ದಿರುವುದಾಗಿ ಒಪ್ಪಿಕೊಂಡೆ. ನಾನು ಬ್ಯಾಟರಿಗಳನ್ನು ಮಾರಾಟ ಮಾಡಿದ ಜನರ ಬಳಿಗೆ ಅವರು ನನ್ನನ್ನು ಕರೆದೊಯ್ದರು. ನನ್ನನ್ನು ಮತ್ತೆ ಪೊಲೀಸ್ ಠಾಣೆಗೆ ಕರೆತಂದು, ನಾನು ಮಾಡದ ಇತರ ಕಳ್ಳತನಗಳನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿದರು. ಅವುಗಳನ್ನು ಒಪ್ಪಿಕೊಳ್ಳಲು ನಿರಾಕರಿಸಿದಾಗ ಪೊಲೀಸರು ಚಿತ್ರಹಿಂಸೆಯನ್ನು ತೀವ್ರಗೊಳಿಸಿದರು” ಎಂದು ಆರೋಪಿಸಿದ್ದಾರೆ.

“ನನ್ನನ್ನು ತಲೆಕೆಳಗಾಗಿ ಕಟ್ಟಿ ಥಳಿಸಲಾಗಿದೆ. ಮೂರು ದಿನಗಳ ಕಾಲ ಮೂವರು ಪೊಲೀಸರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಅವರು ನನ್ನ ಬಲಗೈ ಗುರಿಯಾಗಿಸಿಕೊಂಡು ತೀವ್ರವಾಗಿ ಹೊಡೆದರು. ಅಕ್ಟೋಬರ್ 31 ರಂದು ಪೊಲೀಸ್ ಕಸ್ಟಡಿಯಿಂದ ಬಿಡುಗಡೆ ಮಾಡಲಾಯಿತು.” ಎಂದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಸಲ್ಮಾನ್‌ ತಿಳಿಸಿದ್ದಾರೆ.

ಘಟನೆಯನ್ನು ಶಾಸಕ ರಿಜ್ವಾನ್ ಅರ್ಷದ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸೇರಿದಂತೆ ಹಲವರು ಖಂಡಿಸಿದ್ದರು.

———————

ಇದನ್ನೂ ಓದಿ: ಬೆಂಗಳೂರು ಪೊಲೀಸರ ಚಿತ್ರಹಿಂಸೆಯಿಂದ ಕೈಕಳೆದುಕೊಂಡ ಯುವಕ: ಪಿಎಫ್‌ಐ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...