Homeಮುಖಪುಟಅದಾನಿಯ ವಿವಾದಾತ್ಮಕ ಕಂಪನಿಯ ಕಲ್ಲಿದ್ದಲು ಭಾರತಕ್ಕೆ: ಆಸ್ಟ್ರೇಲಿಯಾದಲ್ಲಿ ತೀವ್ರಗೊಂಡ ಪ್ರತಿಭಟನೆ

ಅದಾನಿಯ ವಿವಾದಾತ್ಮಕ ಕಂಪನಿಯ ಕಲ್ಲಿದ್ದಲು ಭಾರತಕ್ಕೆ: ಆಸ್ಟ್ರೇಲಿಯಾದಲ್ಲಿ ತೀವ್ರಗೊಂಡ ಪ್ರತಿಭಟನೆ

- Advertisement -
- Advertisement -

ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್ ನಲ್ಲಿರುವ ಭಾರತದ ಉದ್ಯಮಿ ಗೌತಮ್ ಆದಾನಿಯವರ ಕಾರ್ಮೈಕಲ್ ಕಲ್ಲಿದ್ದಲು ಗಣಿ ವಿರುದ್ಧ ಅಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಹಲವಾರು ವರ್ಷಗಳಿಂದ ಸಾಕಷ್ಟು ವಿವಾದಗಳಿಗೆ ಕಾರಣವಾದ ಈ ಕಂಪನಿಯಿಂದ ಭಾರತದಲ್ಲಿ ವಿದ್ಯುತ್ ತಯಾರಿಸಲು ಕಲ್ಲಿದ್ದಲು ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆಸ್ಟ್ರೇಲಿಯಾದಲ್ಲಿ ‘ಸ್ಟಾಪ್ ಅದಾನಿ’ ಎಂಬ ಸಂಘಟನೆಗಳ ಸಮೂಹವು ಕಾರ್ಮೈಕಲ್ ಕಲ್ಲಿದ್ದಲು ಗಣಿಗಾರಿಕೆಯಿಂದ ಪರಿಸರದ ಮೇಲೆ ಬೀರಬಹುದಾದ ಋಣಾತ್ಮಕ ಪ್ರಭಾವದಿಂದಾಗಿ ಯೋಜನೆಯನ್ನು ನಿಲ್ಲಿಸುವಂತೆ ಒತ್ತಾಯಿಸಿ ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ. ಅಲ್ಲಿನ ಚುನಾವಣೆಯ ಮೇಲೂ ಈ ಹೋರಾಟ ಪ್ರಭಾವ ಬೀರಿದೆ. ಇಷ್ಟೆಲ್ಲದರ ನಡುವೆಯೂ ಅದಾನಿ ಕಂಪನಿಯು ಈ ಡಿಸೆಂಬರ್‌ ವೇಳೆಗೆ ತನ್ನ ಮೊದಲ ಕಲ್ಲಿದ್ದಲು ರಫ್ತು ಆರಂಭಿಸುವುದಾಗಿ ಘೋಷಿಸಿಕೊಂಡಿದೆ.

ಕಂಪನಿಯು ಮುಂದಿನ 30 ವರ್ಷಗಳವರೆಗೆ ವಾರ್ಷಿಕವಾಗಿ 10 ಮಿಲಿಯನ್ ಟನ್ ಉಷ್ಣ ಕಲ್ಲಿದ್ದಲನ್ನು ಪೂರೈಸುವ ಗುರಿಯನ್ನು ಹೊಂದಿದೆ. ಅದರಿಂದ ಭಾರತ ಮತ್ತು ದಕ್ಷಿಣ ಏಷ್ಯಾದ ದೇಶಗಳಲ್ಲಿ ವಿದ್ಯುತ್ ತಯಾರಿಸಲಾಗುವುದು ಎನ್ನಲಾಗುತ್ತಿದೆ.

ಈ ಕಲ್ಲಿದ್ದಲು ಯೋಜನೆಯು ಕ್ವೀನ್ಸ್‌ಲ್ಯಾಂಡ್ ರಾಜ್ಯದ ಜನರಿಗೆ 1,500 ಕ್ಕೂ ಹೆಚ್ಚು ಉದ್ಯೋಗಗಳನ್ನು ನೀಡುತ್ತದೆ ಎಂದು ಅದಾನಿ ಕಂಪನಿ ಘೋಷಿಸಿದೆ. ಆದರೆ ನಮಗೆ ಉದ್ಯೋಗ ಬೇಡ ಪರಿಸರ ಬೇಕು ಎಂದು ಅಲ್ಲಿನ ಪ್ರಜ್ಞಾವಂತರು ಹಠ ಹಿಡಿದಿದ್ದಾರೆ. SBI ಬ್ಯಾಂಕ್ ಅದಾನಿಗೆ ಒಂದು ಬಿಲಿಯನ್ ಡಾಲರ್ ಸಾಲ ಕೊಡಬಾರದು ಎಂದು ಆಸ್ಟ್ರೇಲಿಯಾದಲ್ಲಿ ನಿರಂತರ ಹೋರಾಟಗಳಾಗುತ್ತಿವೆ. ಕಳೆದ ವರ್ಷ ನವೆಂಬರ್‌ನಲ್ಲಿ ಸಿಡ್ನಿಯಲ್ಲಿ ಏಕದಿನ ಕ್ರಿಕೆಟ್ ಪಂದ್ಯ ನಡೆಯುತ್ತಿರುವಾಗ ಪ್ರತಿಭಟನಾಕಾರನೊಬ್ಬ ಆಟದ ಅಂಗಳಕ್ಕೆ ನುಗ್ಗಿ ಅದಾನಿಗೆ ಸಾಲ ಕೊಡಬೇಡಿ ಎಂದು ಭಿತ್ತಿಫಲಕ ಪ್ರದರ್ಶಿಸಿ ಗಮನ ಸೆಳೆದಿದ್ದರು.

ಒಂದು ಕಡೆ ಜಾಗತಿಕ ನಾಯಕರು ಒಟ್ಟು ಸೇರಿ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆಯ ಸಮ್ಮೇಳನದ 26ನೇ ಕಾನ್ಫರನ್ಸ್ ಆಫ್ ಪಾರ್ಟೀಸ್ (ಸಿಒಪಿ) ನಡೆಸಿದರು. ಅಲ್ಲಿ ಹವಾಮಾನ ಹದಗೆಡಿಸುವ ಇಂಧನವನ್ನು ಬಳಸದಿರುವಂತೆ ಜಾಗತಿಕ ಗಡುವನ್ನು ನಿಗದಿಪಡಿಸುವ ಮಾತುಕತೆಗಳಾದವು. ಆದರೆ ಕಲ್ಲಿದ್ದಲು ಬಳಕೆಗೆ ಇಲ್ಲಿ ಉತ್ತೇಜನ ನೀಡಲಾಗುತ್ತಿದೆ. ಅದರಲ್ಲಿಯೂ ಚೀನಾ ಮತ್ತು ಭಾರತ ಇದರ ಅತಿ ದೊಡ್ಡ ಗ್ರಾಹಕರಾಗಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ.

ಭಾರತದ ಛತ್ತೀಸ್‌ಘಡದಲ್ಲಿಯೂ ಅದಾನಿ ಗಣಿಗಾರಿಕೆ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಗಣಿ ಕಂಪನಿಯಿಂದ ಚತ್ತೀಸ್‌ಘಡದ ಹಸ್ಡಿಯೋ ಅರಂಡ್ ಕಾಡನ್ನು ಉಳಿಸಿ ಎಂಬ ಬೇಡಿಕೆಯೊಂದಿಗೆ ಅಲ್ಲಿನ ಸ್ಥಳೀಯ ಆದಿವಾಸಿಗಳು 300 ಕಿ.ಮೀ ಪಾದಯಾತ್ರೆ ನಡೆಸಿ ಚಳವಳಿ ತೀವ್ರಗೊಳಿಸಿದ್ದಾರೆ.

ಒಂದೆಡೆ ನಾವು ನವೀಕರಿಸಬಹುದಾದ ಇಂಧನಗಳನ್ನು ಕಾರ್ಯಸಾಧ್ಯವಾದ, ಕೈಗೆಟುಕುವ ಪರ್ಯಾಯವಾಗಿ ಮಾಡಲು ಪ್ರಯತ್ನಿಸುತ್ತಿದ್ದೇವೆ ಎನ್ನುವ ಅದಾನಿ ಇನ್ನೊಂದೆಡೆ ಪರಿಸರಕ್ಕೆ ಹಾನಿಕಾರಕವಾದ ಇಂಧನಗಳ ಗಣಿಗಾರಿಕೆಯಲ್ಲಿ ನಿರತರಾಗಿದ್ದಾರೆ. ಅದಕ್ಕೆ SBI ನಂತಹ ಬ್ಯಾಂಕುಗಳ ಹಣಕಾಸಿನ ಸಹಾಯ ಮಾಡುತ್ತಿವೆ. ಇದರ ವಿರುದ್ಧದ ಹೋರಾಟಕ್ಕೆ ಜಯ ಸಿಗುವುದೇ ಕಾದು ನೋಡಬೇಕಿದೆ.


ಇದನ್ನೂ ಓದಿ; ಅದಾನಿಗೆ ಲಾಭ ಮಾಡಲು ವಿದ್ಯುತ್‍ ದರ ಏರಿಕೆ: ದೆಹಲಿಯಲ್ಲಿ ಸಾಧ್ಯವಾಗಿದ್ದು ಇಲ್ಲೇಕೆ ಇಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...