Homeಚಳವಳಿಇಂಜಿನಿಯರಿಂಗ್‌ ವಿದ್ಯಾರ್ಥಿಗಳ ಶುಲ್ಕ ಹೆಚ್ಚಳ: ಎಐಡಿಎಸ್‌ಒ ಪ್ರತಿಭಟನೆ

ಇಂಜಿನಿಯರಿಂಗ್‌ ವಿದ್ಯಾರ್ಥಿಗಳ ಶುಲ್ಕ ಹೆಚ್ಚಳ: ಎಐಡಿಎಸ್‌ಒ ಪ್ರತಿಭಟನೆ

- Advertisement -
- Advertisement -

ಇಂಜಿನಿಯರಿಂಗ್ ಪ್ರವೇಶಾತಿ ಪಡೆಯಲು ವಿದ್ಯಾರ್ಥಿಗಳಿಗೆ ಸರ್ಕಾರಿ ಸೀಟುಗಳ ಮೇಲೆ ಏಕಾಏಕಿ 10 ಸಾವಿರ ರೂ.ವರೆಗೂ ಶುಲ್ಕ ಏರಿಕೆ ಮಾಡಿರುವುದನ್ನು ಈ ತಕ್ಷಣವೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ ಆರ್ಗನೈಸೇಷನ್‌ (ಎಐಡಿಎಸ್‌ಒ) ಮೈಸೂರಿನಲ್ಲಿ ಪ್ರತಿಭಟನೆ ನಡೆಸಿತು.

ಶನಿವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ಸಂಘಟಕರು, “ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಲ್ಕ ರಚನೆ 21-22 (ದಿನಾಂಕ : 14-11-2021)ರ ಸುತ್ತೋಲೆ ಪ್ರಕಾರ, ಈ ವರ್ಷದ ಸರ್ಕಾರಿ ಕೋಟಾದಡಿ ಇಂಜಿನಿಯರಿಂಗ್ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ 10 ಸಾವಿರದವರೆಗೂ ಶುಲ್ಕ ಏರಿಕೆ ಮಾಡಿರುವುದನ್ನು ರಾಜ್ಯದ ವಿದ್ಯಾರ್ಥಿಗಳನ್ನು ಅತ್ಯಂತ ಆತಂಕಕ್ಕೆ ತಳ್ಳಿದೆ. ಈಗಾಗಲೇ ದಾಖಲೆ ಪರಿಶೀಲನೆ ಪ್ರಕ್ರಿಯೆ ಮುಗಿದು, ಮೊದಲ ಸುತ್ತಿನ ಸೀಟು ಹಂಚಿಕೆ ಆಗಿದೆ. ಈಗ ಧಿಡೀರನೆ ಶುಲ್ಕ ಏರಿಕೆ ಮಾಡಿರುವುದು ವಿದ್ಯಾರ್ಥಿ ವಿರೋಧಿ ಮಾತ್ರವಲ್ಲ ಕಾನೂನು ಬಾಹಿರ ನಡೆಯಾಗುತ್ತದೆ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಈಗಾಗಲೇ ರಾಜ್ಯದ ಜನತೆ ಹಾಗೂ ವಿದ್ಯಾರ್ಥಿ ಸಮೂಹವು ಕೋವಿಡ್ ಸಾಂಕ್ರಾಮಿಕ ಹಾಗೂ ನಂತರದ ಲಾಕ್‌ಡೌನ್ ಸಮಯದಲ್ಲಿ ಅತ್ಯಂತ ಸಂಕಷ್ಟವನ್ನು ಎದುರಿಸಿದ್ದಾರೆ. ಸಂಸಾರವನ್ನು ತೂಗಿಸಲು ಹಲವರು ಉದ್ಯೋಗ ಅರಸಿದ್ದರೆ, ಹಲವರು ತಮ್ಮ ಪೋಷಕರು-ಸಂಬಂಧಿಕರನ್ನು ಕಳೆದುಕೊಂಡು ಈಗಲೂ ಆ ಆಘಾತದಿಂದ ಹೊರ ಬರಲು ಸಾಧ್ಯವಾಗಿಲ್ಲ. ಜನಸಾಮಾನ್ಯರ ಆದಾಯ ಕುಂಠಿತವಾಗಿದೆ. ಇದರೊಂದಿಗೆ, ಈ ಬಾರಿ ಅತ್ಯಂತ ಭೀಕರ ಮಳೆಯಿಂದಾಗಿ, ರಾಜ್ಯದಲ್ಲಿ ಕಾಫಿ ತೋಟಗಳು ಸೇರಿದಂತೆ ಹೊಲಗಳಲ್ಲಿ ಶೇ. 70 ರಷ್ಟು ಬೆಳೆ ನಷ್ಟ ಸಂಭವಿಸಿದೆ. ರಾಜ್ಯದಲ್ಲಿ ಬಹು ಸಂಖ್ಯೆಯಲ್ಲಿ ಇರುವ ರೈತ ಸಮುದಾಯದ ವಿದ್ಯಾರ್ಥಿಗಳಿಗೆ ಈ ಹಾನಿಯು ಅತ್ಯಂತ ಭೀಕರ ಪರಿಸ್ಥಿತಿಯನ್ನು ತಂದೊಡ್ಡಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಆರ್ಥಿಕ ಬಿಕ್ಕಟ್ಟಿನ ಜೊತೆಗೆ ಲಕ್ಷಾಂತರ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಹಲವು ಏರುಪೇರುಗಳು ಸಂಭವಿಸಿವೆ. ಒಂದೆಡೆ, ಈ ಎಲ್ಲ ಸವಾಲುಗಳ ನಡುವೆ ಸಿಲುಕಿರುವ ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಕನಸನ್ನು ಸಂಪೂರ್ಣ ಕೈಬಿಡುವಂತಾಗಿದೆ. ಹೀಗಿರುವಾಗ, ಏಕಾಏಕಿ ಶುಲ್ಕ ಏರಿಕೆಯ ನಿರ್ಧಾರವು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಮೇಲೆ ಅತಿ ದೊಡ್ಡ ಪ್ರಹಾರ ಮಾಡಿದಂತೆ ಆಗುತ್ತದೆ ಎಂದು ಅಭಿಪ್ರಾಯಪಟ್ಟರು.


ಇದನ್ನೂ ಓದಿರಿ: ಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ


ಈ ವರ್ಷ ಪದವಿ ಕೋರ್ಸಿಗೆ ಪ್ರತಿ ವರ್ಷಕ್ಕಿಂತ 50 ಸಾವಿರ ಹೆಚ್ಚಿಗೆ ವಿದ್ಯಾರ್ಥಿಗಳು ಸರ್ಕಾರಿ ಪದವಿ ಕಾಲೇಜುಗಳಲ್ಲಿ ದಾಖಲಾತಿ ಪಡೆದಿದ್ದಾರೆ. ಪಿಯುಸಿ ದಾಖಲಾತಿಯೂ ಗಣನೀಯವಾಗಿ ಏರಿಕೆ ಆಗಿದೆ. ಅಂದರೆ, ಈ ಪರಿಸ್ಥಿತಿಯು ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಹೆಚ್ಚಿಗೆ ಮಾಡುವ ತಕ್ಷಣದ ಅವಶ್ಯಕತೆಯನ್ನು ಬಿಂಬಿಸುತ್ತದೆ. ಸರ್ಕಾರವು ಹೆಚ್ಚುವರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಸ್ಥಾಪನೆ ಮಾಡಬೇಕಿತ್ತು, ಹೆಚ್ಚುವರಿ ಬೋಧಕರನ್ನು ನೇಮಕಾತಿ ಮಾಡಬೇಕಿತ್ತು, ಹೆಚ್ಚುವರಿ ಮೂಲಸೌಕರ್ಯಗಳನ್ನು ಒದಗಿಸುವ ಯೋಚನೆ ನಡೆಸಬೇಕಿತ್ತು, ಹೆಚ್ಚುವರಿ ಗ್ರಂಥಾಲಯಗಳು- ಪ್ರಯೋಗಾಲಯಗಳನ್ನು ನಿರ್ಮಿಸಬೇಕಿತ್ತು ಎಂಬುದು ನಮ್ಮೆಲ್ಲರ ಅಪೇಕ್ಷೆ ಎಂದು ತಿಳಿಸಿದರು.

ಸರ್ಕಾರ ಶುಲ್ಕ ಏರಿಕೆಯ ನಿರ್ಧಾರವನ್ನು ವಾಪಸ್ ಪಡೆದು, ಮೊದಲು ಇದ್ದ ಶುಲ್ಕವನ್ನು ಮಾತ್ರ ಪಡೆಯಬೇಕು ಹಾಗೂ ಇತರೆ ವರ್ಷದ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅಭಿವೃದ್ಧಿ ಶುಲ್ಕದ ಹೆಸರಿನಲ್ಲಿ ಹೆಚ್ಚುವರಿ ಶುಲ್ಕ ಪಡೆಯುತ್ತಿರುವುದನ್ನು ಈ ಕೂಡಲೇ ನಿಲ್ಲಿಸಲು ಆದೇಶ ನೀಡಬೇಕು. ಇದರೊಂದಿಗೆ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಹತ್ತು ಘಂಟೆ ಅವಧಿಯಷ್ಟು ಪಾಠ ಮಾಡಬೇಕು ಎಂಬ ನಿರ್ಧಾರ, ಈಗಾಗಲೇ ಸಂಕಷ್ಟದಲ್ಲಿ ಇರುವ ವಿದ್ಯಾರ್ಥಿಗಳನ್ನು ಮತ್ತು ಉಪನ್ಯಾಸಕರನ್ನು ಮತ್ತಷ್ಟು ಒತ್ತಡಕ್ಕೆ ತಳ್ಳುತ್ತದೆ. ಹಾಗಾಗಿ, ಈ ಮನವಿಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು. ಎಐಡಿಎಸ್‌ಒ ಮೈಸೂರು ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ, ಉಪಾಧ್ಯಕ್ಷರಾದ ಆಸಿಯಾ ಬೇಗಂ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಸ್ವಾತಿ, ನಿತಿನ್, ಚೆಲುವನ್ ಹಾಗೂ ಕಾರ್ಯದರ್ಶಿ ಮಂಡಳಿಯ ಸದಸ್ಯರಾದ ಅಮಿತ್, ಚುಕ್ಕಿ, ವಿದ್ಯಾರ್ಥಿಗಳಾದ ಹರ್ಷ, ಚಂದನಾ, ಹೇಮಲತಾ ಹಾಜರಿದ್ದರು.


ಇದನ್ನೂ ಓದಿರಿ: ಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...