Homeಚಳವಳಿಇಂಜಿನಿಯರಿಂಗ್‌ ವಿದ್ಯಾರ್ಥಿಗಳ ಶುಲ್ಕ ಹೆಚ್ಚಳ: ಎಐಡಿಎಸ್‌ಒ ಪ್ರತಿಭಟನೆ

ಇಂಜಿನಿಯರಿಂಗ್‌ ವಿದ್ಯಾರ್ಥಿಗಳ ಶುಲ್ಕ ಹೆಚ್ಚಳ: ಎಐಡಿಎಸ್‌ಒ ಪ್ರತಿಭಟನೆ

- Advertisement -
- Advertisement -

ಇಂಜಿನಿಯರಿಂಗ್ ಪ್ರವೇಶಾತಿ ಪಡೆಯಲು ವಿದ್ಯಾರ್ಥಿಗಳಿಗೆ ಸರ್ಕಾರಿ ಸೀಟುಗಳ ಮೇಲೆ ಏಕಾಏಕಿ 10 ಸಾವಿರ ರೂ.ವರೆಗೂ ಶುಲ್ಕ ಏರಿಕೆ ಮಾಡಿರುವುದನ್ನು ಈ ತಕ್ಷಣವೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ ಆರ್ಗನೈಸೇಷನ್‌ (ಎಐಡಿಎಸ್‌ಒ) ಮೈಸೂರಿನಲ್ಲಿ ಪ್ರತಿಭಟನೆ ನಡೆಸಿತು.

ಶನಿವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ಸಂಘಟಕರು, “ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಲ್ಕ ರಚನೆ 21-22 (ದಿನಾಂಕ : 14-11-2021)ರ ಸುತ್ತೋಲೆ ಪ್ರಕಾರ, ಈ ವರ್ಷದ ಸರ್ಕಾರಿ ಕೋಟಾದಡಿ ಇಂಜಿನಿಯರಿಂಗ್ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ 10 ಸಾವಿರದವರೆಗೂ ಶುಲ್ಕ ಏರಿಕೆ ಮಾಡಿರುವುದನ್ನು ರಾಜ್ಯದ ವಿದ್ಯಾರ್ಥಿಗಳನ್ನು ಅತ್ಯಂತ ಆತಂಕಕ್ಕೆ ತಳ್ಳಿದೆ. ಈಗಾಗಲೇ ದಾಖಲೆ ಪರಿಶೀಲನೆ ಪ್ರಕ್ರಿಯೆ ಮುಗಿದು, ಮೊದಲ ಸುತ್ತಿನ ಸೀಟು ಹಂಚಿಕೆ ಆಗಿದೆ. ಈಗ ಧಿಡೀರನೆ ಶುಲ್ಕ ಏರಿಕೆ ಮಾಡಿರುವುದು ವಿದ್ಯಾರ್ಥಿ ವಿರೋಧಿ ಮಾತ್ರವಲ್ಲ ಕಾನೂನು ಬಾಹಿರ ನಡೆಯಾಗುತ್ತದೆ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಈಗಾಗಲೇ ರಾಜ್ಯದ ಜನತೆ ಹಾಗೂ ವಿದ್ಯಾರ್ಥಿ ಸಮೂಹವು ಕೋವಿಡ್ ಸಾಂಕ್ರಾಮಿಕ ಹಾಗೂ ನಂತರದ ಲಾಕ್‌ಡೌನ್ ಸಮಯದಲ್ಲಿ ಅತ್ಯಂತ ಸಂಕಷ್ಟವನ್ನು ಎದುರಿಸಿದ್ದಾರೆ. ಸಂಸಾರವನ್ನು ತೂಗಿಸಲು ಹಲವರು ಉದ್ಯೋಗ ಅರಸಿದ್ದರೆ, ಹಲವರು ತಮ್ಮ ಪೋಷಕರು-ಸಂಬಂಧಿಕರನ್ನು ಕಳೆದುಕೊಂಡು ಈಗಲೂ ಆ ಆಘಾತದಿಂದ ಹೊರ ಬರಲು ಸಾಧ್ಯವಾಗಿಲ್ಲ. ಜನಸಾಮಾನ್ಯರ ಆದಾಯ ಕುಂಠಿತವಾಗಿದೆ. ಇದರೊಂದಿಗೆ, ಈ ಬಾರಿ ಅತ್ಯಂತ ಭೀಕರ ಮಳೆಯಿಂದಾಗಿ, ರಾಜ್ಯದಲ್ಲಿ ಕಾಫಿ ತೋಟಗಳು ಸೇರಿದಂತೆ ಹೊಲಗಳಲ್ಲಿ ಶೇ. 70 ರಷ್ಟು ಬೆಳೆ ನಷ್ಟ ಸಂಭವಿಸಿದೆ. ರಾಜ್ಯದಲ್ಲಿ ಬಹು ಸಂಖ್ಯೆಯಲ್ಲಿ ಇರುವ ರೈತ ಸಮುದಾಯದ ವಿದ್ಯಾರ್ಥಿಗಳಿಗೆ ಈ ಹಾನಿಯು ಅತ್ಯಂತ ಭೀಕರ ಪರಿಸ್ಥಿತಿಯನ್ನು ತಂದೊಡ್ಡಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಆರ್ಥಿಕ ಬಿಕ್ಕಟ್ಟಿನ ಜೊತೆಗೆ ಲಕ್ಷಾಂತರ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಹಲವು ಏರುಪೇರುಗಳು ಸಂಭವಿಸಿವೆ. ಒಂದೆಡೆ, ಈ ಎಲ್ಲ ಸವಾಲುಗಳ ನಡುವೆ ಸಿಲುಕಿರುವ ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಕನಸನ್ನು ಸಂಪೂರ್ಣ ಕೈಬಿಡುವಂತಾಗಿದೆ. ಹೀಗಿರುವಾಗ, ಏಕಾಏಕಿ ಶುಲ್ಕ ಏರಿಕೆಯ ನಿರ್ಧಾರವು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಮೇಲೆ ಅತಿ ದೊಡ್ಡ ಪ್ರಹಾರ ಮಾಡಿದಂತೆ ಆಗುತ್ತದೆ ಎಂದು ಅಭಿಪ್ರಾಯಪಟ್ಟರು.


ಇದನ್ನೂ ಓದಿರಿ: ಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ


ಈ ವರ್ಷ ಪದವಿ ಕೋರ್ಸಿಗೆ ಪ್ರತಿ ವರ್ಷಕ್ಕಿಂತ 50 ಸಾವಿರ ಹೆಚ್ಚಿಗೆ ವಿದ್ಯಾರ್ಥಿಗಳು ಸರ್ಕಾರಿ ಪದವಿ ಕಾಲೇಜುಗಳಲ್ಲಿ ದಾಖಲಾತಿ ಪಡೆದಿದ್ದಾರೆ. ಪಿಯುಸಿ ದಾಖಲಾತಿಯೂ ಗಣನೀಯವಾಗಿ ಏರಿಕೆ ಆಗಿದೆ. ಅಂದರೆ, ಈ ಪರಿಸ್ಥಿತಿಯು ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಹೆಚ್ಚಿಗೆ ಮಾಡುವ ತಕ್ಷಣದ ಅವಶ್ಯಕತೆಯನ್ನು ಬಿಂಬಿಸುತ್ತದೆ. ಸರ್ಕಾರವು ಹೆಚ್ಚುವರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಸ್ಥಾಪನೆ ಮಾಡಬೇಕಿತ್ತು, ಹೆಚ್ಚುವರಿ ಬೋಧಕರನ್ನು ನೇಮಕಾತಿ ಮಾಡಬೇಕಿತ್ತು, ಹೆಚ್ಚುವರಿ ಮೂಲಸೌಕರ್ಯಗಳನ್ನು ಒದಗಿಸುವ ಯೋಚನೆ ನಡೆಸಬೇಕಿತ್ತು, ಹೆಚ್ಚುವರಿ ಗ್ರಂಥಾಲಯಗಳು- ಪ್ರಯೋಗಾಲಯಗಳನ್ನು ನಿರ್ಮಿಸಬೇಕಿತ್ತು ಎಂಬುದು ನಮ್ಮೆಲ್ಲರ ಅಪೇಕ್ಷೆ ಎಂದು ತಿಳಿಸಿದರು.

ಸರ್ಕಾರ ಶುಲ್ಕ ಏರಿಕೆಯ ನಿರ್ಧಾರವನ್ನು ವಾಪಸ್ ಪಡೆದು, ಮೊದಲು ಇದ್ದ ಶುಲ್ಕವನ್ನು ಮಾತ್ರ ಪಡೆಯಬೇಕು ಹಾಗೂ ಇತರೆ ವರ್ಷದ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅಭಿವೃದ್ಧಿ ಶುಲ್ಕದ ಹೆಸರಿನಲ್ಲಿ ಹೆಚ್ಚುವರಿ ಶುಲ್ಕ ಪಡೆಯುತ್ತಿರುವುದನ್ನು ಈ ಕೂಡಲೇ ನಿಲ್ಲಿಸಲು ಆದೇಶ ನೀಡಬೇಕು. ಇದರೊಂದಿಗೆ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಹತ್ತು ಘಂಟೆ ಅವಧಿಯಷ್ಟು ಪಾಠ ಮಾಡಬೇಕು ಎಂಬ ನಿರ್ಧಾರ, ಈಗಾಗಲೇ ಸಂಕಷ್ಟದಲ್ಲಿ ಇರುವ ವಿದ್ಯಾರ್ಥಿಗಳನ್ನು ಮತ್ತು ಉಪನ್ಯಾಸಕರನ್ನು ಮತ್ತಷ್ಟು ಒತ್ತಡಕ್ಕೆ ತಳ್ಳುತ್ತದೆ. ಹಾಗಾಗಿ, ಈ ಮನವಿಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು. ಎಐಡಿಎಸ್‌ಒ ಮೈಸೂರು ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ, ಉಪಾಧ್ಯಕ್ಷರಾದ ಆಸಿಯಾ ಬೇಗಂ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಸ್ವಾತಿ, ನಿತಿನ್, ಚೆಲುವನ್ ಹಾಗೂ ಕಾರ್ಯದರ್ಶಿ ಮಂಡಳಿಯ ಸದಸ್ಯರಾದ ಅಮಿತ್, ಚುಕ್ಕಿ, ವಿದ್ಯಾರ್ಥಿಗಳಾದ ಹರ್ಷ, ಚಂದನಾ, ಹೇಮಲತಾ ಹಾಜರಿದ್ದರು.


ಇದನ್ನೂ ಓದಿರಿ: ಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...