Homeಮುಖಪುಟಹುತಾತ್ಮ ರೈತರ ಕುರಿತು ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ: ಪಟ್ಟಿ ಬಿಡುಗಡೆ ಮಾಡಿದ ರಾಹುಲ್ ಗಾಂಧಿ

ಹುತಾತ್ಮ ರೈತರ ಕುರಿತು ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ: ಪಟ್ಟಿ ಬಿಡುಗಡೆ ಮಾಡಿದ ರಾಹುಲ್ ಗಾಂಧಿ

- Advertisement -
- Advertisement -

ಒಕ್ಕೂಟ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಒಂದು ವರ್ಷದಿಂದ ನಡೆಯುತ್ತಿರುವ ರೈತ ಹೋರಾಟದಲ್ಲಿ 700ಕ್ಕೂ ಅಧಿಕ ರೈತರು ಹುತಾತ್ಮರಾಗಿದ್ದಾರೆ. ಆದರೆ ಈ ಕುರಿತು ಲೋಕಸಭೆಯ ಅಧಿವೇಶನದಲ್ಲಿ ‘ನಮ್ಮಲ್ಲಿ ಯಾವುದೇ ಡೇಟಾ ಇಲ್ಲ, ಹಾಗಾಗಿ ಅವರಿಗೆ ಪರಿಹಾರ ಕೊಡುವ ಪ್ರಶ್ನೆಯೇ ಉದ್ಭವಿಸವುದಿಲ್ಲ’ ಎಂದು ಕೃಷಿ ಸಚಿವಾಲಯ ಹೇಳಿದೆ. ಇದನ್ನು ಟೀಕಿಸಿರುವ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಕೇಂದ್ರವು ಸುಳ್ಳು ಹೇಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಸಂಜೆ ಪತ್ರಿಕಾಗೋಷ್ಟಿಯಲ್ಲಿ 600ಕ್ಕೂ ಹೆಚ್ಚು ಹುತಾತ್ಮ ರೈತರ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಅವರು, “ಸರ್ಕಾರವು ಪ್ರತಿಭಟನೆಯ ಸಮಯದಲ್ಲಿ ಸಾವನ್ನಪ್ಪಿದ ರೈತರ ಬಗ್ಗೆ ತಮ್ಮ ಬಳಿ ಡೇಟಾ ಇಲ್ಲ ಎಂದಿದೆ. ಸತ್ಯವೆಂದರೆ ಅವರ ಬಳಿ ವಿವರಗಳಿವೆ. ಆದರೆ ಅವರು ಅದನ್ನು ಸ್ವೀಕರಿಸುತ್ತಿಲ್ಲ” ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಆಡಳಿತವಿರುವ ಪಂಜಾಬ್‌ ರಾಜ್ಯದಿಂದ 403 ಮೃತ ರೈತರ ಪಟ್ಟಿಯನ್ನು ನೀಡಲಾಗಿದೆ. ಆ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ನೀಡಲಾಗಿದೆ. ಇತರ ರಾಜ್ಯಗಳಿಂಮದ 200 ಕ್ಕೂ ಹೆಚ್ಚು ಹುತಾತ್ಮ ರೈತರ ಪಟ್ಟಿಯನ್ನು ವಿವರಿಸಿ, ಕನಿಷ್ಠ ಈಗಲಾದರೂ ಮೃತ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಮತ್ತು ರೈತರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರವನ್ನು ಒತ್ತಾಯಿಸಿದ್ದಾರೆ.

ಸರ್ಕಾರ ಎಲ್ಲಾ ವಿಚಾರಕ್ಕೂ ಡೇಟಾ ಇಲ್ಲ ಎಂದು ಹೇಳಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದೆ. ಇಲ್ಲಿ ನೋಡಿ 500 ಕ್ಕೂ ಹೆಚ್ಚು ಅಧಿಕೃತ ಡೇಟಾ ನಮ್ಮ ಬಳಿ ಇದೆ. ಅವರ ಹೆಸರು, ವಿಳಾಸ, ಫೋನ್ ನಂಬರ್ ಎಲ್ಲಾ ಇದೆ. ಅವರಿಗೆ ನೀವು ಬಿಲಿಯನ್ ಡಾಲರ್ ಕೊಡಬೇಕಿಲ್ಲ. ಆದರೆ ಅವರ ತ್ಯಾಗಕ್ಕೆ ಕನಿಷ್ಟ ಪರಿಹಾರವನ್ನಾದರೂ ನೀಡಬೇಕು. ನಾವು ಈ ಪಟ್ಟಿಯನ್ನು ಮುಂದಿನ ಲೋಕಸಭೆ ಅಧಿವೇಶನದಲ್ಲಿ ಮಂಡಿಸುತ್ತೇವೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ಪ್ರಧಾನಿಯವರು ಕರಾಳ ಕಾನೂನುಗಳನ್ನು ತಂದು ತಪ್ಪು ಮಾಡಿದೆವು ಎಂದು ಸಾರ್ವಜನಿಕವಾಗಿ ತಪ್ಪೊಪ್ಪಿಕೊಂಡಿದ್ದಾರೆ. ಈಗ ಹುತಾತ್ಮ ರೈತರಿಗೆ ಪರಿಹಾರ ಕೊಡುವುದಕ್ಕೆ ಏಕೆ ಹಿಂಜರಿಕೆ? ನಿಜವೆಂದರೆ ಪ್ರಧಾನಿ ಮತ್ತು ಸರ್ಕಾರದ ವರ್ತನೆ ಹೇಡಿತನದಿಂದ ಕೂಡಿದೆ. ಒಂದು ಸರ್ಕಾರ ಇಷ್ಟು ಕೆಳಮಟ್ಟದಲ್ಲಿ ವರ್ತಿಸಬಹುದೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ನಾವು ಈ ರೈತರಿಗಾರಿ ಕೆಲವು ಕೆಲಸಗಳನ್ನು ಮಾಡಿದ್ದೇವೆ ಎಂದು ಸರ್ಕಾರಕ್ಕೆ ಹೇಳಲು ಬಯಸುತ್ತೇನೆ. ಪಂಜಾಬ್‌ನಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್‌ ಸರ್ಕಾರವು ಪ್ರತಿಭಟನೆಯಲ್ಲಿ ಮೃತಪಟ್ಟ ಸುಮಾರು 500 ರೈತ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡಿದೆ. 152 ಕುಟುಂಬದ ಸದಸ್ಯರಿಗೆ ಉದ್ಯೋಗವನ್ನು ನೀಡಿದ್ದೇವೆ. ಹಾಗೂ ಉಳಿದವರಿಗೂ ಉದ್ಯೋಗ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ’ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.


ಇದನ್ನೂ ಓದಿ: ಹುತಾತ್ಮ ರೈತರ ಸ್ಮಾರಕ ನಿರ್ಮಿಸಲು ಭೂಮಿ ನೀಡಲು ಮುಂದಾದ ಅನಿವಾಸಿ ಭಾರತೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...