Homeಮುಖಪುಟಭೋಪಾಲ್ ಅನಿಲ ದುರಂತಕ್ಕೆ 37 ವರ್ಷಗಳು; ಸಂತ್ರಸ್ತರ ಹೋರಾಟ ಮುಂದುವರೆದಿದೆ...

ಭೋಪಾಲ್ ಅನಿಲ ದುರಂತಕ್ಕೆ 37 ವರ್ಷಗಳು; ಸಂತ್ರಸ್ತರ ಹೋರಾಟ ಮುಂದುವರೆದಿದೆ…

- Advertisement -
- Advertisement -

ಭೋಪಾಲ್‌‌ ಅನಿಲ ದುರಂತ ನಡೆದು ಇಂದಿಗೆ 37 ವರ್ಷಗಳು ತುಂಬಿದೆ. ಸರ್ಕಾರವೇ ಒಪ್ಪಿಕೊಂಡಿರುವ ಹಾಗೆ ದುರಂತದಲ್ಲಿ ಮರಣ ಹೊಂದಿದವರು 3 ಸಾವಿರ ಜನರು. ಆದರೆ, ಅನಿಲ ದುರಂತ ಸಂತ್ರಸ್ತರ ಪ್ರಕಾರ ಅನಿಲ ಸೋರಿಕೆಯಿಂದ ಮೃತಪಟ್ಟವರು ಬರೋಬ್ಬರಿ 25 ಸಾವಿಕ್ಕೂ ಹೆಚ್ಚು. ಇದರಿಂದಾಗಿ ಗಾಯಗೊಂಡವರು ಮತ್ತು ವಿಕಲಚೇತನರಾದವರು 5.5 ಲಕ್ಷ ಜನರು. ವಿಶ್ವದ ಅತ್ಯಂತ ಭೀಕರ ಕೈಗಾರಿಕಾ ದುರಂತದಿಂದ ಬದುಕುಳಿದ ಜನರು ಈಗಲೂ ತಮ್ಮ ವೈದ್ಯಕೀಯ ಆರೈಕೆ ಮತ್ತು ಪರಿಹಾರವನ್ನು ಪಡೆಯಲು ಹೋರಾಟ ನಡೆಸುತ್ತಲೇ ಇದ್ದಾರೆ.

1984 ರ ಡಿಸೆಂಬರ್ 2-3 ರ ಮಧ್ಯರಾತ್ರಿಯಲ್ಲಿ ಯೂನಿಯನ್ ಕಾರ್ಬೈಡ್ ಇಂಡಿಯಾ ಲಿಮಿಟೆಡ್ (UCIL) ಕೀಟನಾಶಕ ಕಾರ್ಖಾನೆಯಿಂದ ಸೋರಿಕೆಯಾದ ವಿಷಕಾರಿ ಅನಿಲಗಳು ಲಕ್ಷಾಂತರ ಜನರ ಬದುಕನ್ನೇ ನಾಶ ಮಾಡಿದೆ. ಆಶ್ಚರ್ಯ ಮತ್ತು ದುರಂತವೇನೆಂದರೆ ಈ ದುರಂತದ ಪ್ರಧಾನ ಆರೋಪಿ ವಾರೆನ್ ಆಂಡರ್ಸನ್‌ಗೆ ಶಿಕ್ಷೆ ಆಗಲೇ ಇಲ್ಲ. ಆತ ಘಟನೆ ನಡೆದ ನಂತರ ಭಾರತದಿಂದ ಪರಾರಿಯಾಗಿ ಅಮೆರಿಕಾದಲ್ಲಿ ತುಂಬು ಜೀವನ ನಡೆಸಿ ತನ್ನ 92 ನೇ ವರ್ಷದಲ್ಲಿ ಮರಣ ಹೊಂದಿದ. ಇತರ ಅಪರಾಧಿಗಳಿಗೆ ಕೇವಲ 2 ವರ್ಷಗಳ ಸಜೆ ಸಿಕ್ಕಿದೆ. ಉಳಿದಂತೆ ತಮ್ಮ ಬದುಕನ್ನೇ ಕಳೆದುಕೊಂಡ ಸಂತ್ರಸ್ಥರಿಗೆ ಸಿಕ್ಕ ಪರಿಹಾರ ಕೇವಲ 15 ಸಾವಿರ ರೂಪಾಯಿಗಳು ಮಾತ್ರ. ಅದು ಕೂಡಾ ಘಟನೆ ನಡೆದು 26 ವರ್ಷಗಳ ನಂತರ. ಅಂದರೆ ಸಿಕ್ಕ ಪರಿಹಾರದ ಲೆಕ್ಕ ದಿನಕ್ಕೆ ಪ್ರತಿಯೊಬ್ಬರಿಗೆ ಕೇವಲ ಒಂದುವರೆ ರುಪಾಯಿ!

ಇದನ್ನೂ ಓದಿ:ಶ್ರದ್ಧಾಂಜಲಿ: ಭೋಪಾಲ್ ಅನಿಲ ದುರಂತದ ಸಂತ್ರಸ್ತರ ದನಿ ಹಮೀದಾ ಬೀ

ದುರಂತದಲ್ಲಿ ತನ್ನ ಪತಿ ಮತ್ತು ಮಗಳು ಸೇರಿದಂತೆ ತನ್ನ ಕುಟುಂಬದ ಮೂವರು ಸದಸ್ಯರನ್ನು ಕಳೆದುಕೊಂಡ 64 ವರ್ಷದ ಅನಿಲ ಸಂತ್ರಸ್ತ ಮಹಿಳೆ ರಯೀಸಾ ಬಿ ಹೇಳುವಂತೆ, “ಆಹಾರ ಧಾನ್ಯಗಳು ಮತ್ತು ವೈದ್ಯಕೀಯ ಆರೈಕೆ, ಪರಿಹಾರ ಮತ್ತು ವಿಧವಾ ಪಿಂಚಣಿ ಇವೆಲ್ಲವೂ ನಮ್ಮ ಸುದೀರ್ಘ ಪ್ರತಿಭಟನೆಗಳು, ಮನವಿ ಪತ್ರಗಳನ್ನು ಸಲ್ಲಿಸಿದ ನಂತರವೇ ಬಂದಿವೆ. ಸರ್ಕಾರಿ ಇಲಾಖೆಗಳಿಗೆ ಭೇಟಿ ನೀಡುವುದು, ಅಧಿಕಾರಿಗಳು ಮತ್ತು ಮಂತ್ರಿಗಳೊಂದಿಗೆ ಭೇಟಿ ಮತ್ತು ಸ್ಥಳೀಯ ನ್ಯಾಯಾಲಯದಲ್ಲಿ (ಭೋಪಾಲ್‌ನಲ್ಲಿ), ಹೈಕೋರ್ಟ್ (ಜಬಲ್‌ಪುರದಲ್ಲಿ) ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಗಳು. ಒಟ್ಟಿನಲ್ಲಿ ಅನಿಲ ಸಂತ್ರಸ್ತರ ಜೀವನವು ಫುಟ್‌ಬಾಲ್‌ನಂತೆಯೇ ಇರುತ್ತದೆ ಎಂದು ನಾನು ಭಾವಿಸುತ್ತೇನೆ” ಎನ್ನುತ್ತಾರೆ.

“ದುರದೃಷ್ಟವಶಾತ್, ದುರಂತದ ಮೂರೂವರೆ ದಶಕಗಳ ನಂತರವೂ, ರಾಜ್ಯ ಅಥವಾ ಒಕ್ಕೂಟ ಸರ್ಕಾರವು ವಿಪತ್ತಿನ ಪರಿಣಾಮಗಳ ಸಮಗ್ರ ಮೌಲ್ಯಮಾಪನವನ್ನು ಕೈಗೊಳ್ಳಲು ಅಥವಾ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಪ್ರಯತ್ನಿಸಲಿಲ್ಲ” ಎಂದು ರಯೀಸಾ ಬಿ ಹೇಳುತ್ತಾರೆ. ಅವರು ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಉದ್ಯೋಗ್ ಸಂಘಟನೆಯ ಅಧ್ಯಕ್ಷರಾಗಿದ್ದಾರೆ.

ಇದನ್ನೂ ಓದಿ:ಭೋಪಾಲ್ ಅನಿಲ ದುರಂತ: ಇನ್ನೂ ನ್ಯಾಯಕ್ಕಾಗಿ ಕಾಯುತ್ತಿರುವ ಸಂತ್ರಸ್ತರು

ಇಷ್ಟೆಲ್ಲಾ ಆದ ನಂತರವು ನಮ್ಮ ಸರ್ಕಾರ ದುರಂತ ನಡೆದ ಕಾರ್ಖಾನೆಯನ್ನು ಮುಚ್ಚಿಲ್ಲ, ಅದು ಈಗ ಮತ್ತೊಂದು ಬಹುರಾಷ್ಟ್ರೀಯ ಕಂಪೆನಿಯಾದ ‘ಡವ್‌ ಕೆಮಿಕಲ್‌’ನ ಮಾಲಿಕತ್ವದಲ್ಲಿದೆ. ಈ ಕಂಪೆನಿಯು ಇದನ್ನು ಕೊಂಡುಕೊಳ್ಳುವಾಗ UCIL ನ ಯಾವುದೆ ಹೊಣೆಗಾರಿಕೆ ತಾನು ಹೊತ್ತುಕೊಳ್ಳುವುದಿಲ್ಲ ಎಂದು ಹೇಳಿಯೇ ಪಡೆದುಕೊಂಡಿದೆ.

2012 ಆಗಸ್ಟ್ 9 ರಂದು ಸುಪ್ರೀಂ ಕೋರ್ಟ್‌, ಅನಿಲ ಸಂತ್ರಸ್ತರಿಗೆ ಅತ್ಯುತ್ತಮ ವೈದ್ಯಕೀಯ ಸೇವೆಯನ್ನು ಒದಗಿಸಲು ಭಾರತ ಒಕ್ಕೂಟ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಆದರೆ ಇದನ್ನು ಜಾರಿಗೆ ತರಲು ಅನಿಲ ಸಂತ್ರಸ್ತರಿಗಾಗಿ ಕೆಲಸ ಮಾಡುವ ಸಂಘಟನೆಗಳು ಈಗಲೂ ಹೋರಾಟ ನಡೆಸುತ್ತಿವೆ. ಈ ಸಂಘಟನೆಗಳು ಇನ್ನೂ ಇತರ ಕೆಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ. ಎಲ್ಲಾ ನಿರ್ಗತಿಕ ಅನಿಲ ಸಂತ್ರಸ್ತರಿಗೆ, ವಿಶೇಷವಾಗಿ ವಿಧವೆಯರಿಗೆ ಸರಿಯಾದ ಪುನರ್ವಸತಿ ಕಲ್ಪಿಸಿಕೊಡುವುದು; ಸುರಕ್ಷಿತ ಕುಡಿಯುವ ನೀರಿನ ಪೂರೈಕೆ; ಉಚಿತ ವೈದ್ಯಕೀಯ ಆರೈಕೆ; ಕಲುಷಿತ ನೀರು ಮತ್ತು ವಿಷಕಾರಿ ತ್ಯಾಜ್ಯದ ಎಲ್ಲಾ ಸಂತ್ರಸ್ತರಿಗೆ ಪರಿಹಾರ; ಮತ್ತು ಆರೋಪಿಗಳ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವುದು ಈ ಬೇಡಿಕೆಗಳಲ್ಲಿ ಸೇರಿದೆ.

ಇದನ್ನೂ ಓದಿ:ಭೋಪಲ್ ಅನಿಲ ದುರಂತ; ವಿಷಪೂರಿತ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....