Homeಮುಖಪುಟಭೋಪಾಲ್ ಅನಿಲ ದುರಂತಕ್ಕೆ 37 ವರ್ಷಗಳು; ಸಂತ್ರಸ್ತರ ಹೋರಾಟ ಮುಂದುವರೆದಿದೆ...

ಭೋಪಾಲ್ ಅನಿಲ ದುರಂತಕ್ಕೆ 37 ವರ್ಷಗಳು; ಸಂತ್ರಸ್ತರ ಹೋರಾಟ ಮುಂದುವರೆದಿದೆ…

- Advertisement -
- Advertisement -

ಭೋಪಾಲ್‌‌ ಅನಿಲ ದುರಂತ ನಡೆದು ಇಂದಿಗೆ 37 ವರ್ಷಗಳು ತುಂಬಿದೆ. ಸರ್ಕಾರವೇ ಒಪ್ಪಿಕೊಂಡಿರುವ ಹಾಗೆ ದುರಂತದಲ್ಲಿ ಮರಣ ಹೊಂದಿದವರು 3 ಸಾವಿರ ಜನರು. ಆದರೆ, ಅನಿಲ ದುರಂತ ಸಂತ್ರಸ್ತರ ಪ್ರಕಾರ ಅನಿಲ ಸೋರಿಕೆಯಿಂದ ಮೃತಪಟ್ಟವರು ಬರೋಬ್ಬರಿ 25 ಸಾವಿಕ್ಕೂ ಹೆಚ್ಚು. ಇದರಿಂದಾಗಿ ಗಾಯಗೊಂಡವರು ಮತ್ತು ವಿಕಲಚೇತನರಾದವರು 5.5 ಲಕ್ಷ ಜನರು. ವಿಶ್ವದ ಅತ್ಯಂತ ಭೀಕರ ಕೈಗಾರಿಕಾ ದುರಂತದಿಂದ ಬದುಕುಳಿದ ಜನರು ಈಗಲೂ ತಮ್ಮ ವೈದ್ಯಕೀಯ ಆರೈಕೆ ಮತ್ತು ಪರಿಹಾರವನ್ನು ಪಡೆಯಲು ಹೋರಾಟ ನಡೆಸುತ್ತಲೇ ಇದ್ದಾರೆ.

1984 ರ ಡಿಸೆಂಬರ್ 2-3 ರ ಮಧ್ಯರಾತ್ರಿಯಲ್ಲಿ ಯೂನಿಯನ್ ಕಾರ್ಬೈಡ್ ಇಂಡಿಯಾ ಲಿಮಿಟೆಡ್ (UCIL) ಕೀಟನಾಶಕ ಕಾರ್ಖಾನೆಯಿಂದ ಸೋರಿಕೆಯಾದ ವಿಷಕಾರಿ ಅನಿಲಗಳು ಲಕ್ಷಾಂತರ ಜನರ ಬದುಕನ್ನೇ ನಾಶ ಮಾಡಿದೆ. ಆಶ್ಚರ್ಯ ಮತ್ತು ದುರಂತವೇನೆಂದರೆ ಈ ದುರಂತದ ಪ್ರಧಾನ ಆರೋಪಿ ವಾರೆನ್ ಆಂಡರ್ಸನ್‌ಗೆ ಶಿಕ್ಷೆ ಆಗಲೇ ಇಲ್ಲ. ಆತ ಘಟನೆ ನಡೆದ ನಂತರ ಭಾರತದಿಂದ ಪರಾರಿಯಾಗಿ ಅಮೆರಿಕಾದಲ್ಲಿ ತುಂಬು ಜೀವನ ನಡೆಸಿ ತನ್ನ 92 ನೇ ವರ್ಷದಲ್ಲಿ ಮರಣ ಹೊಂದಿದ. ಇತರ ಅಪರಾಧಿಗಳಿಗೆ ಕೇವಲ 2 ವರ್ಷಗಳ ಸಜೆ ಸಿಕ್ಕಿದೆ. ಉಳಿದಂತೆ ತಮ್ಮ ಬದುಕನ್ನೇ ಕಳೆದುಕೊಂಡ ಸಂತ್ರಸ್ಥರಿಗೆ ಸಿಕ್ಕ ಪರಿಹಾರ ಕೇವಲ 15 ಸಾವಿರ ರೂಪಾಯಿಗಳು ಮಾತ್ರ. ಅದು ಕೂಡಾ ಘಟನೆ ನಡೆದು 26 ವರ್ಷಗಳ ನಂತರ. ಅಂದರೆ ಸಿಕ್ಕ ಪರಿಹಾರದ ಲೆಕ್ಕ ದಿನಕ್ಕೆ ಪ್ರತಿಯೊಬ್ಬರಿಗೆ ಕೇವಲ ಒಂದುವರೆ ರುಪಾಯಿ!

ಇದನ್ನೂ ಓದಿ:ಶ್ರದ್ಧಾಂಜಲಿ: ಭೋಪಾಲ್ ಅನಿಲ ದುರಂತದ ಸಂತ್ರಸ್ತರ ದನಿ ಹಮೀದಾ ಬೀ

ದುರಂತದಲ್ಲಿ ತನ್ನ ಪತಿ ಮತ್ತು ಮಗಳು ಸೇರಿದಂತೆ ತನ್ನ ಕುಟುಂಬದ ಮೂವರು ಸದಸ್ಯರನ್ನು ಕಳೆದುಕೊಂಡ 64 ವರ್ಷದ ಅನಿಲ ಸಂತ್ರಸ್ತ ಮಹಿಳೆ ರಯೀಸಾ ಬಿ ಹೇಳುವಂತೆ, “ಆಹಾರ ಧಾನ್ಯಗಳು ಮತ್ತು ವೈದ್ಯಕೀಯ ಆರೈಕೆ, ಪರಿಹಾರ ಮತ್ತು ವಿಧವಾ ಪಿಂಚಣಿ ಇವೆಲ್ಲವೂ ನಮ್ಮ ಸುದೀರ್ಘ ಪ್ರತಿಭಟನೆಗಳು, ಮನವಿ ಪತ್ರಗಳನ್ನು ಸಲ್ಲಿಸಿದ ನಂತರವೇ ಬಂದಿವೆ. ಸರ್ಕಾರಿ ಇಲಾಖೆಗಳಿಗೆ ಭೇಟಿ ನೀಡುವುದು, ಅಧಿಕಾರಿಗಳು ಮತ್ತು ಮಂತ್ರಿಗಳೊಂದಿಗೆ ಭೇಟಿ ಮತ್ತು ಸ್ಥಳೀಯ ನ್ಯಾಯಾಲಯದಲ್ಲಿ (ಭೋಪಾಲ್‌ನಲ್ಲಿ), ಹೈಕೋರ್ಟ್ (ಜಬಲ್‌ಪುರದಲ್ಲಿ) ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಗಳು. ಒಟ್ಟಿನಲ್ಲಿ ಅನಿಲ ಸಂತ್ರಸ್ತರ ಜೀವನವು ಫುಟ್‌ಬಾಲ್‌ನಂತೆಯೇ ಇರುತ್ತದೆ ಎಂದು ನಾನು ಭಾವಿಸುತ್ತೇನೆ” ಎನ್ನುತ್ತಾರೆ.

“ದುರದೃಷ್ಟವಶಾತ್, ದುರಂತದ ಮೂರೂವರೆ ದಶಕಗಳ ನಂತರವೂ, ರಾಜ್ಯ ಅಥವಾ ಒಕ್ಕೂಟ ಸರ್ಕಾರವು ವಿಪತ್ತಿನ ಪರಿಣಾಮಗಳ ಸಮಗ್ರ ಮೌಲ್ಯಮಾಪನವನ್ನು ಕೈಗೊಳ್ಳಲು ಅಥವಾ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಪ್ರಯತ್ನಿಸಲಿಲ್ಲ” ಎಂದು ರಯೀಸಾ ಬಿ ಹೇಳುತ್ತಾರೆ. ಅವರು ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಉದ್ಯೋಗ್ ಸಂಘಟನೆಯ ಅಧ್ಯಕ್ಷರಾಗಿದ್ದಾರೆ.

ಇದನ್ನೂ ಓದಿ:ಭೋಪಾಲ್ ಅನಿಲ ದುರಂತ: ಇನ್ನೂ ನ್ಯಾಯಕ್ಕಾಗಿ ಕಾಯುತ್ತಿರುವ ಸಂತ್ರಸ್ತರು

ಇಷ್ಟೆಲ್ಲಾ ಆದ ನಂತರವು ನಮ್ಮ ಸರ್ಕಾರ ದುರಂತ ನಡೆದ ಕಾರ್ಖಾನೆಯನ್ನು ಮುಚ್ಚಿಲ್ಲ, ಅದು ಈಗ ಮತ್ತೊಂದು ಬಹುರಾಷ್ಟ್ರೀಯ ಕಂಪೆನಿಯಾದ ‘ಡವ್‌ ಕೆಮಿಕಲ್‌’ನ ಮಾಲಿಕತ್ವದಲ್ಲಿದೆ. ಈ ಕಂಪೆನಿಯು ಇದನ್ನು ಕೊಂಡುಕೊಳ್ಳುವಾಗ UCIL ನ ಯಾವುದೆ ಹೊಣೆಗಾರಿಕೆ ತಾನು ಹೊತ್ತುಕೊಳ್ಳುವುದಿಲ್ಲ ಎಂದು ಹೇಳಿಯೇ ಪಡೆದುಕೊಂಡಿದೆ.

2012 ಆಗಸ್ಟ್ 9 ರಂದು ಸುಪ್ರೀಂ ಕೋರ್ಟ್‌, ಅನಿಲ ಸಂತ್ರಸ್ತರಿಗೆ ಅತ್ಯುತ್ತಮ ವೈದ್ಯಕೀಯ ಸೇವೆಯನ್ನು ಒದಗಿಸಲು ಭಾರತ ಒಕ್ಕೂಟ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಆದರೆ ಇದನ್ನು ಜಾರಿಗೆ ತರಲು ಅನಿಲ ಸಂತ್ರಸ್ತರಿಗಾಗಿ ಕೆಲಸ ಮಾಡುವ ಸಂಘಟನೆಗಳು ಈಗಲೂ ಹೋರಾಟ ನಡೆಸುತ್ತಿವೆ. ಈ ಸಂಘಟನೆಗಳು ಇನ್ನೂ ಇತರ ಕೆಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ. ಎಲ್ಲಾ ನಿರ್ಗತಿಕ ಅನಿಲ ಸಂತ್ರಸ್ತರಿಗೆ, ವಿಶೇಷವಾಗಿ ವಿಧವೆಯರಿಗೆ ಸರಿಯಾದ ಪುನರ್ವಸತಿ ಕಲ್ಪಿಸಿಕೊಡುವುದು; ಸುರಕ್ಷಿತ ಕುಡಿಯುವ ನೀರಿನ ಪೂರೈಕೆ; ಉಚಿತ ವೈದ್ಯಕೀಯ ಆರೈಕೆ; ಕಲುಷಿತ ನೀರು ಮತ್ತು ವಿಷಕಾರಿ ತ್ಯಾಜ್ಯದ ಎಲ್ಲಾ ಸಂತ್ರಸ್ತರಿಗೆ ಪರಿಹಾರ; ಮತ್ತು ಆರೋಪಿಗಳ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವುದು ಈ ಬೇಡಿಕೆಗಳಲ್ಲಿ ಸೇರಿದೆ.

ಇದನ್ನೂ ಓದಿ:ಭೋಪಲ್ ಅನಿಲ ದುರಂತ; ವಿಷಪೂರಿತ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...