Homeಕರ್ನಾಟಕಮೈಸೂರು: ಅಂಬೇಡ್ಕರ್‌ ಪ್ರತಿಮೆ ತೆರವು; ಕತ್ತುಕೊಯ್ದುಕೊಂಡ ಯುವಕ; ಏನಿದು ವಿವಾದ?

ಮೈಸೂರು: ಅಂಬೇಡ್ಕರ್‌ ಪ್ರತಿಮೆ ತೆರವು; ಕತ್ತುಕೊಯ್ದುಕೊಂಡ ಯುವಕ; ಏನಿದು ವಿವಾದ?

- Advertisement -
- Advertisement -

ಮೈಸೂರು ನಗರದ ಮಾತೃ ಮಂಡಲಿ ವೃತ್ತದಲ್ಲಿ ಅಂಬೇಡ್ಕರ್‌ ಪ್ರತಿಮೆ ಇರಿಸಲು ಅವಕಾಶ ನೀಡಲಿಲ್ಲ ಎಂದು ಯುವಕನೊಬ್ಬ ಕತ್ತುಕೊಯ್ದುಕೊಂಡಿರುವ ಘಟನೆ ನಡೆದಿದೆ.

ಶನಿವಾರ ಮುಂಜಾನೆ 3 ಗಂಟೆಯ ವೇಳೆಯಲ್ಲಿ ಪ್ರತಿಮೆಯನ್ನು ಇರಿಸಲು ಯತ್ನಿಸಲಾಗಿದೆ. ಯಾವುದೇ ಅನುಮತಿ ಪಡೆದಿಲ್ಲವೆಂದು ಪಾಲಿಕೆ ಸಿಬ್ಬಂದಿ ಹಾಗೂ ವಿ.ವಿ.ಪುರಂ ಠಾಣೆ ಪೊಲೀಸರು ಪ್ರತಿಮೆಯನ್ನು ತೆರವು ಮಾಡಿಸಿದ್ದಾರೆ. ಈ ವೇಳೆ ಸತೀಶ್‌ (29) ಎಂಬ ಯುವಕ ಕತ್ತುಕೊಯ್ದುಕೊಂಡಿದ್ದಾನೆ. ತಕ್ಷಣ ಎಚ್ಚೆತ್ತುಕೊಂಡು ಪೊಲೀಸರು ಹಾಗೂ ಪಾಲಿಕೆ ಸಿಬ್ಬಂದಿ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಘಟನೆ ಸಂಬಂಧ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ವಿ.ವಿ.ಪುರಂ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ವೆಂಕಟೇಶ್‌, “ವಿವಾದಿತ ವೃತ್ತದಲ್ಲಿ ಪ್ರತಿಮೆ ಇರಿಸಲಾಗಿತ್ತು. ಯಾವುದೇ ಅನುಮತಿ ಪಡೆದಿರಲಿಲ್ಲ. ಹೀಗಾಗಿ ಪಾಲಿಕೆಯವರು ಹಾಗೂ ಪೊಲೀಸರು ಜೊತೆಗೂಡಿ ಪ್ರತಿಮೆಯನ್ನು ತೆರವುಗೊಳಿಸಿ ಅಂಬೇಡ್ಕರ್‌ ಭವನದೊಳಗೆ ಇರಿಸಿದೆವು. ಈ ವೇಳೆ ಯುವಕನೊಬ್ಬ ಕತ್ತುಕೊಯ್ದುಕೊಂಡಿದ್ದು, ಈಗ ಚೇತರಿಸಿಕೊಳ್ಳುತ್ತಿದ್ದಾನೆ” ಎಂದು ತಿಳಿಸಿದರು.


ಇದನ್ನೂ ಓದಿರಿ: ‘ದಲಿತನನ್ನು ಮದುವೆಗೆ ಕರೆದರು, ಸಹಪಂಕ್ತಿ ಭೋಜನ ಮಾಡಿದ್ದಕ್ಕೆ ಕೊಲೆ ಮಾಡಿದರು’


‘ಬೇರೆ ಸ್ಥಳಗಳಲ್ಲಿ ಅನಧಿಕೃತವಾಗಿ ಬೇರೆಯವರ ಪ್ರತಿಮೆಗಳನ್ನು ಇರಿಸಿದ್ದರೂ ಪಾಲಿಕೆ ಹಾಗೂ ಪೊಲೀಸರು ಕ್ರಮ ವಹಿಸುವುದಿಲ್ಲ. ದಲಿತರು ಅಂಬೇಡ್ಕರ್‌ ಪ್ರತಿಮೆ ಇರಿಸಿದರೆ ಮಾತ್ರ ತೆರವು ಮಾಡಿಸುತ್ತಾರೆ’ ಎಂಬ ಆರೋಪಗಳಿವೆ ಎಂದು ಕೇಳಿದಾಗ, “ನಮ್ಮ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಅನಧಿಕೃತ ಪ್ರತಿಮೆಗಳಿಲ್ಲ. ಮತ್ತೊಂದು ವಿಷಯವೇನೆಂದರೆ ಸಾರ್ವಜನಿಕ ಸ್ಥಳಗಳಲ್ಲಿ ವಿಗ್ರಹಗಳನ್ನು ಇರಿಸಿದರೆ, ಪೊಲೀಸರಿಗೆ ಎಂದಿಗೂ ಸಮಸ್ಯೆಯೇ. ಯಾಕೆಂದರೆ ಆ ಪ್ರತಿಮೆಗಳನ್ನು ಕಾಯ್ದುಕೊಳ್ಳಬೇಕು, ಅಲ್ಲಿ ಸಿಸಿ ಟಿವಿ ಅಳವಡಿಸಬೇಕು. ಯಾರಾದರೂ ಅವಿವೇಕಿ ಬಂದು ಮದ್ಯದ ಅಮಲಿನಲ್ಲಿ ಪ್ರತಿಮೆಗಳನ್ನು ವಿರೂಪಗೊಳಿಸಿದರೆ ಪೊಲೀಸರೇ ಹೊಣೆಗಾರರಾಗಬೇಕಾಗುತ್ತದೆ” ಎಂದು ತಮ್ಮ ಅನುಭವಗಳನ್ನು ಹಂಚಿಕೊಂಡರು.

“ಶನಿವಾರ ಬೆಳಿಗ್ಗೆ ಅಂಬೇಡ್ಕರ್‌ ಭವನದಲ್ಲಿ ಸಭೆ ನಡೆಯಿತು. ಅನುಮತಿ ಪಡೆಯದೇ ಅಂಬೇಡ್ಕರ್‌ ಪ್ರತಿಮೆ ಇರಿಸಿದ್ದು ತಪ್ಪಾಗಿದೆ. ಅನುಮತಿ ಪಡೆದೇ ಪ್ರತಿಮೆಯನ್ನು ಸ್ಥಾಪಿಸುತ್ತೇವೆ ಎಂದು ದಲಿತ ಮುಖಂಡರು ತಿಳಿಸಿದ್ದಾರೆ” ಎಂದು ಇನ್‌ಸ್ಪೆಕ್ಟರ್‌ ತಿಳಿಸಿದರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ಮಾಜಿ ಮೇಯರ್‌‌ ಹಾಗೂ ದಲಿತ ಮುಖಂಡ ಪುರುಷೋತ್ತಮ್‌ ಅವರು, “ಅನಧಿಕೃತವಾಗಿ ಪ್ರತಿಮೆಗಳನ್ನು ಸ್ಥಾಪಿಸುವುದು ತಪ್ಪು. ನಗರದ ಅನೇಕ ಕಡೆ ವಿವಿಧ ದಾರ್ಶನಿಕರ ಪ್ರತಿಮೆಗಳನ್ನು ಇಡಲಾಗಿದೆ. ಅವುಗಳನ್ನು ಯಾರೂ ತೆರವು ಮಾಡಿಸಿಲ್ಲ. ಅಂಬೇಡ್ಕರ್‌ ಪ್ರತಿಮೆ ಇರಿಸಿದರೆ ಕ್ರಮ ಜರುಗಿಸುತ್ತಾರೆ. ನಾವು ಯಾವ ದಾರ್ಶನಿಕರ ವಿರೋಧಿಗಳಲ್ಲ. ಆದರೆ ಬಾಬಾ ಸಾಹೇಬರ ಪ್ರತಿಮೆಯನ್ನು ವಿರೋಧಿಸುವುದು ಸಲ್ಲದು. ಮಾತೃಮಂಡಲಿ ಜಾಗದಲ್ಲಿ ಅಂಬೇಡ್ಕರ್‌‌ ಪ್ರತಿಮೆ ಇರಿಸಬೇಕೆಂಬುದು ಹಲವು ವರ್ಷಗಳ ಬೇಡಿಕೆ. ಪಾಲಿಕೆಗೆ ಮತ್ತೊಮ್ಮೆ ಮನವಿ ಮಾಡಲಾಗುವುದು. ಈ ಸಂಬಂಧ ಮತ್ತೊಂದು ಸಭೆ ನಡೆಸಿ, ಪಾಲಿಕೆಯ ಮೇಲೆ ಒತ್ತಡ ತರಲಾಗುವುದು” ಎಂದು ತಿಳಿಸಿದರು.

ದಾರ್ಶನಿಕರ ಹೆಸರಲ್ಲಿ ಜಗಳ ಸಲ್ಲದು

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌, ರಾಷ್ಟ್ರಕವಿ ಕುವೆಂಪು ಅವರು ದೇಶಕಂಡ ಮಹಾನ್‌ ಮಾನವತಾವಾದಿಗಳು ಹಾಗೂ ದಾರ್ಶಕನಿಕರು. ಆದರೆ ಜಾತಿವಾದಿ ಸಮಾಜ ಈ ದಾರ್ಶನಿಕರನ್ನು ಜಾತಿಯ ಗೂಟಕ್ಕೆ ಕಟ್ಟಿರುವುದು ವಿಷಾದನೀಯ. ಈ ಇಬ್ಬರು ಮಹಾನೀಯರು ಸಮಾಜದಲ್ಲಿನ ಅಸಮಾನತೆ, ಶ್ರೇಣಿಕೃತ ವ್ಯವಸ್ಥೆಯನ್ನು ಪ್ರಶ್ನಿಸಿದವರು. ದುರಾದೃಷ್ಟವಶಾತ್‌ ಅಂಬೇಡ್ಕರ್‌ ಎಂದರೆ ದಲಿತರಿಗೆ, ಕುವೆಂಪು ಎಂದರೆ ಒಕ್ಕಲಿಗರಿಗೆ ಎಂಬ ವಿಂಗಡಣೆ ಆಗಿರುವುದು ಮಾತ್ರ ವಿಷಾದನೀಯ. ಕುವೆಂಪು ಹಾಗೂ ಅಂಬೇಡ್ಕರ್‌ ಅವರನ್ನು ಸಮಾನ ದೂರದಲ್ಲಿಟ್ಟು ಅಣಕ ಮಾಡುವ ರಾಜಕೀಯ ವ್ಯವಸ್ಥೆ ಒಂದು ಕಡೆ ಇದ್ದರೆ, ಈ ಇಬ್ಬರ ಹೆಸರಲ್ಲಿ ಜಗಳ ಆಡುತ್ತಿರುವ ಜನವರ್ಗ ಒಂದು ಕಡೆ ಇದೆ. ನಿನ್ನೆ ಆಗಿರುವ ಘಟನೆಗೂ ಇಂಥದ್ದೇ ಕಾರಣವಿದೆ ಎನ್ನುತ್ತವೆ ಮೂಲಗಳು.

ಮೈಸೂರು ನಗರದ ಪಡುವಾರಹಳ್ಳಿ, ಒಂಟಿಕೊಪ್ಪಲು ಭಾಗದಲ್ಲಿ ಇರುವ ಮಾತೃಮಂಡಳಿ ವೃತ್ತದಲ್ಲಿ ಅಂಬೇಡ್ಕರ್‌ ಪ್ರತಿಮೆ ಇಡಬೇಕೆಂದು ದಲಿತರು ಆಗ್ರಹಿಸುತ್ತಿದ್ದರೆ, ಕುವೆಂಪು ಪ್ರತಿಮೆ ಇಡಬೇಕೆಂದು ಒಕ್ಕಲಿಗರು ಬಯಸುತ್ತಿದ್ದಾರೆ. ಈ ಭಾಗದಲ್ಲಿ ದಲಿತರು, ನಾಯಕರು ಹಾಗೂ ಒಕ್ಕಲಿಗರು- ವಾಸವಿದ್ದಾರೆ. ಆದರೆ ಪ್ರತಿಮೆ ವಿಚಾರವಾಗಿ ಒಡೆದುಹೋಗುತ್ತಿದ್ದಾರೆ ಎನ್ನುತ್ತವೆ ಮೂಲಗಳು. ಅಂಬೇಡ್ಕರ್‌‌ ಮತ್ತು ಕುವೆಂಪು ಮಹಾನ್‌ ಮಾನವತಾವಾದಿಗಳು. ಆದರೆ ಈ ಮಹಾನೀಯರ ಹೆಸರಲ್ಲಿ ಜಗಳ ಆಡುವುದನ್ನು ಬಿಟ್ಟು- ಚರ್ಚೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು ಎಂಬುದು ಶಾಂತಿಪ್ರಿಯ, ಸಂವಿಧಾನಪ್ರಿಯ ಸಮಾಜದ ಆಗ್ರಹ.


ಇದನ್ನೂ ಓದಿರಿ: ಬೆಂಗಳೂರು: ಯುವಕನ ಬಲಗೈ ಕಟ್ ಆಗುವಂತೆ ಚಿತ್ರಹಿಂಸೆ ನೀಡಿದ್ದ ಮೂವರು ಪೊಲೀಸರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...