Homeಕರ್ನಾಟಕಮೈಸೂರು: ಅಂಬೇಡ್ಕರ್‌ ಪ್ರತಿಮೆ ತೆರವು; ಕತ್ತುಕೊಯ್ದುಕೊಂಡ ಯುವಕ; ಏನಿದು ವಿವಾದ?

ಮೈಸೂರು: ಅಂಬೇಡ್ಕರ್‌ ಪ್ರತಿಮೆ ತೆರವು; ಕತ್ತುಕೊಯ್ದುಕೊಂಡ ಯುವಕ; ಏನಿದು ವಿವಾದ?

- Advertisement -
- Advertisement -

ಮೈಸೂರು ನಗರದ ಮಾತೃ ಮಂಡಲಿ ವೃತ್ತದಲ್ಲಿ ಅಂಬೇಡ್ಕರ್‌ ಪ್ರತಿಮೆ ಇರಿಸಲು ಅವಕಾಶ ನೀಡಲಿಲ್ಲ ಎಂದು ಯುವಕನೊಬ್ಬ ಕತ್ತುಕೊಯ್ದುಕೊಂಡಿರುವ ಘಟನೆ ನಡೆದಿದೆ.

ಶನಿವಾರ ಮುಂಜಾನೆ 3 ಗಂಟೆಯ ವೇಳೆಯಲ್ಲಿ ಪ್ರತಿಮೆಯನ್ನು ಇರಿಸಲು ಯತ್ನಿಸಲಾಗಿದೆ. ಯಾವುದೇ ಅನುಮತಿ ಪಡೆದಿಲ್ಲವೆಂದು ಪಾಲಿಕೆ ಸಿಬ್ಬಂದಿ ಹಾಗೂ ವಿ.ವಿ.ಪುರಂ ಠಾಣೆ ಪೊಲೀಸರು ಪ್ರತಿಮೆಯನ್ನು ತೆರವು ಮಾಡಿಸಿದ್ದಾರೆ. ಈ ವೇಳೆ ಸತೀಶ್‌ (29) ಎಂಬ ಯುವಕ ಕತ್ತುಕೊಯ್ದುಕೊಂಡಿದ್ದಾನೆ. ತಕ್ಷಣ ಎಚ್ಚೆತ್ತುಕೊಂಡು ಪೊಲೀಸರು ಹಾಗೂ ಪಾಲಿಕೆ ಸಿಬ್ಬಂದಿ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಘಟನೆ ಸಂಬಂಧ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ವಿ.ವಿ.ಪುರಂ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ವೆಂಕಟೇಶ್‌, “ವಿವಾದಿತ ವೃತ್ತದಲ್ಲಿ ಪ್ರತಿಮೆ ಇರಿಸಲಾಗಿತ್ತು. ಯಾವುದೇ ಅನುಮತಿ ಪಡೆದಿರಲಿಲ್ಲ. ಹೀಗಾಗಿ ಪಾಲಿಕೆಯವರು ಹಾಗೂ ಪೊಲೀಸರು ಜೊತೆಗೂಡಿ ಪ್ರತಿಮೆಯನ್ನು ತೆರವುಗೊಳಿಸಿ ಅಂಬೇಡ್ಕರ್‌ ಭವನದೊಳಗೆ ಇರಿಸಿದೆವು. ಈ ವೇಳೆ ಯುವಕನೊಬ್ಬ ಕತ್ತುಕೊಯ್ದುಕೊಂಡಿದ್ದು, ಈಗ ಚೇತರಿಸಿಕೊಳ್ಳುತ್ತಿದ್ದಾನೆ” ಎಂದು ತಿಳಿಸಿದರು.


ಇದನ್ನೂ ಓದಿರಿ: ‘ದಲಿತನನ್ನು ಮದುವೆಗೆ ಕರೆದರು, ಸಹಪಂಕ್ತಿ ಭೋಜನ ಮಾಡಿದ್ದಕ್ಕೆ ಕೊಲೆ ಮಾಡಿದರು’


‘ಬೇರೆ ಸ್ಥಳಗಳಲ್ಲಿ ಅನಧಿಕೃತವಾಗಿ ಬೇರೆಯವರ ಪ್ರತಿಮೆಗಳನ್ನು ಇರಿಸಿದ್ದರೂ ಪಾಲಿಕೆ ಹಾಗೂ ಪೊಲೀಸರು ಕ್ರಮ ವಹಿಸುವುದಿಲ್ಲ. ದಲಿತರು ಅಂಬೇಡ್ಕರ್‌ ಪ್ರತಿಮೆ ಇರಿಸಿದರೆ ಮಾತ್ರ ತೆರವು ಮಾಡಿಸುತ್ತಾರೆ’ ಎಂಬ ಆರೋಪಗಳಿವೆ ಎಂದು ಕೇಳಿದಾಗ, “ನಮ್ಮ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಅನಧಿಕೃತ ಪ್ರತಿಮೆಗಳಿಲ್ಲ. ಮತ್ತೊಂದು ವಿಷಯವೇನೆಂದರೆ ಸಾರ್ವಜನಿಕ ಸ್ಥಳಗಳಲ್ಲಿ ವಿಗ್ರಹಗಳನ್ನು ಇರಿಸಿದರೆ, ಪೊಲೀಸರಿಗೆ ಎಂದಿಗೂ ಸಮಸ್ಯೆಯೇ. ಯಾಕೆಂದರೆ ಆ ಪ್ರತಿಮೆಗಳನ್ನು ಕಾಯ್ದುಕೊಳ್ಳಬೇಕು, ಅಲ್ಲಿ ಸಿಸಿ ಟಿವಿ ಅಳವಡಿಸಬೇಕು. ಯಾರಾದರೂ ಅವಿವೇಕಿ ಬಂದು ಮದ್ಯದ ಅಮಲಿನಲ್ಲಿ ಪ್ರತಿಮೆಗಳನ್ನು ವಿರೂಪಗೊಳಿಸಿದರೆ ಪೊಲೀಸರೇ ಹೊಣೆಗಾರರಾಗಬೇಕಾಗುತ್ತದೆ” ಎಂದು ತಮ್ಮ ಅನುಭವಗಳನ್ನು ಹಂಚಿಕೊಂಡರು.

“ಶನಿವಾರ ಬೆಳಿಗ್ಗೆ ಅಂಬೇಡ್ಕರ್‌ ಭವನದಲ್ಲಿ ಸಭೆ ನಡೆಯಿತು. ಅನುಮತಿ ಪಡೆಯದೇ ಅಂಬೇಡ್ಕರ್‌ ಪ್ರತಿಮೆ ಇರಿಸಿದ್ದು ತಪ್ಪಾಗಿದೆ. ಅನುಮತಿ ಪಡೆದೇ ಪ್ರತಿಮೆಯನ್ನು ಸ್ಥಾಪಿಸುತ್ತೇವೆ ಎಂದು ದಲಿತ ಮುಖಂಡರು ತಿಳಿಸಿದ್ದಾರೆ” ಎಂದು ಇನ್‌ಸ್ಪೆಕ್ಟರ್‌ ತಿಳಿಸಿದರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ಮಾಜಿ ಮೇಯರ್‌‌ ಹಾಗೂ ದಲಿತ ಮುಖಂಡ ಪುರುಷೋತ್ತಮ್‌ ಅವರು, “ಅನಧಿಕೃತವಾಗಿ ಪ್ರತಿಮೆಗಳನ್ನು ಸ್ಥಾಪಿಸುವುದು ತಪ್ಪು. ನಗರದ ಅನೇಕ ಕಡೆ ವಿವಿಧ ದಾರ್ಶನಿಕರ ಪ್ರತಿಮೆಗಳನ್ನು ಇಡಲಾಗಿದೆ. ಅವುಗಳನ್ನು ಯಾರೂ ತೆರವು ಮಾಡಿಸಿಲ್ಲ. ಅಂಬೇಡ್ಕರ್‌ ಪ್ರತಿಮೆ ಇರಿಸಿದರೆ ಕ್ರಮ ಜರುಗಿಸುತ್ತಾರೆ. ನಾವು ಯಾವ ದಾರ್ಶನಿಕರ ವಿರೋಧಿಗಳಲ್ಲ. ಆದರೆ ಬಾಬಾ ಸಾಹೇಬರ ಪ್ರತಿಮೆಯನ್ನು ವಿರೋಧಿಸುವುದು ಸಲ್ಲದು. ಮಾತೃಮಂಡಲಿ ಜಾಗದಲ್ಲಿ ಅಂಬೇಡ್ಕರ್‌‌ ಪ್ರತಿಮೆ ಇರಿಸಬೇಕೆಂಬುದು ಹಲವು ವರ್ಷಗಳ ಬೇಡಿಕೆ. ಪಾಲಿಕೆಗೆ ಮತ್ತೊಮ್ಮೆ ಮನವಿ ಮಾಡಲಾಗುವುದು. ಈ ಸಂಬಂಧ ಮತ್ತೊಂದು ಸಭೆ ನಡೆಸಿ, ಪಾಲಿಕೆಯ ಮೇಲೆ ಒತ್ತಡ ತರಲಾಗುವುದು” ಎಂದು ತಿಳಿಸಿದರು.

ದಾರ್ಶನಿಕರ ಹೆಸರಲ್ಲಿ ಜಗಳ ಸಲ್ಲದು

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌, ರಾಷ್ಟ್ರಕವಿ ಕುವೆಂಪು ಅವರು ದೇಶಕಂಡ ಮಹಾನ್‌ ಮಾನವತಾವಾದಿಗಳು ಹಾಗೂ ದಾರ್ಶಕನಿಕರು. ಆದರೆ ಜಾತಿವಾದಿ ಸಮಾಜ ಈ ದಾರ್ಶನಿಕರನ್ನು ಜಾತಿಯ ಗೂಟಕ್ಕೆ ಕಟ್ಟಿರುವುದು ವಿಷಾದನೀಯ. ಈ ಇಬ್ಬರು ಮಹಾನೀಯರು ಸಮಾಜದಲ್ಲಿನ ಅಸಮಾನತೆ, ಶ್ರೇಣಿಕೃತ ವ್ಯವಸ್ಥೆಯನ್ನು ಪ್ರಶ್ನಿಸಿದವರು. ದುರಾದೃಷ್ಟವಶಾತ್‌ ಅಂಬೇಡ್ಕರ್‌ ಎಂದರೆ ದಲಿತರಿಗೆ, ಕುವೆಂಪು ಎಂದರೆ ಒಕ್ಕಲಿಗರಿಗೆ ಎಂಬ ವಿಂಗಡಣೆ ಆಗಿರುವುದು ಮಾತ್ರ ವಿಷಾದನೀಯ. ಕುವೆಂಪು ಹಾಗೂ ಅಂಬೇಡ್ಕರ್‌ ಅವರನ್ನು ಸಮಾನ ದೂರದಲ್ಲಿಟ್ಟು ಅಣಕ ಮಾಡುವ ರಾಜಕೀಯ ವ್ಯವಸ್ಥೆ ಒಂದು ಕಡೆ ಇದ್ದರೆ, ಈ ಇಬ್ಬರ ಹೆಸರಲ್ಲಿ ಜಗಳ ಆಡುತ್ತಿರುವ ಜನವರ್ಗ ಒಂದು ಕಡೆ ಇದೆ. ನಿನ್ನೆ ಆಗಿರುವ ಘಟನೆಗೂ ಇಂಥದ್ದೇ ಕಾರಣವಿದೆ ಎನ್ನುತ್ತವೆ ಮೂಲಗಳು.

ಮೈಸೂರು ನಗರದ ಪಡುವಾರಹಳ್ಳಿ, ಒಂಟಿಕೊಪ್ಪಲು ಭಾಗದಲ್ಲಿ ಇರುವ ಮಾತೃಮಂಡಳಿ ವೃತ್ತದಲ್ಲಿ ಅಂಬೇಡ್ಕರ್‌ ಪ್ರತಿಮೆ ಇಡಬೇಕೆಂದು ದಲಿತರು ಆಗ್ರಹಿಸುತ್ತಿದ್ದರೆ, ಕುವೆಂಪು ಪ್ರತಿಮೆ ಇಡಬೇಕೆಂದು ಒಕ್ಕಲಿಗರು ಬಯಸುತ್ತಿದ್ದಾರೆ. ಈ ಭಾಗದಲ್ಲಿ ದಲಿತರು, ನಾಯಕರು ಹಾಗೂ ಒಕ್ಕಲಿಗರು- ವಾಸವಿದ್ದಾರೆ. ಆದರೆ ಪ್ರತಿಮೆ ವಿಚಾರವಾಗಿ ಒಡೆದುಹೋಗುತ್ತಿದ್ದಾರೆ ಎನ್ನುತ್ತವೆ ಮೂಲಗಳು. ಅಂಬೇಡ್ಕರ್‌‌ ಮತ್ತು ಕುವೆಂಪು ಮಹಾನ್‌ ಮಾನವತಾವಾದಿಗಳು. ಆದರೆ ಈ ಮಹಾನೀಯರ ಹೆಸರಲ್ಲಿ ಜಗಳ ಆಡುವುದನ್ನು ಬಿಟ್ಟು- ಚರ್ಚೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು ಎಂಬುದು ಶಾಂತಿಪ್ರಿಯ, ಸಂವಿಧಾನಪ್ರಿಯ ಸಮಾಜದ ಆಗ್ರಹ.


ಇದನ್ನೂ ಓದಿರಿ: ಬೆಂಗಳೂರು: ಯುವಕನ ಬಲಗೈ ಕಟ್ ಆಗುವಂತೆ ಚಿತ್ರಹಿಂಸೆ ನೀಡಿದ್ದ ಮೂವರು ಪೊಲೀಸರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...