Homeಮುಖಪುಟಪೆಪ್ಸಿ ಕಂಪೆನಿಯ ವಿರುದ್ದ ರೈತರಿಗೆ ಜಯ: ‘ಲೇಸ್‌ ಆಲೂಗಡ್ಡೆ’ಗಳ ಪೇಟೆಂಟ್ ರದ್ದು!

ಪೆಪ್ಸಿ ಕಂಪೆನಿಯ ವಿರುದ್ದ ರೈತರಿಗೆ ಜಯ: ‘ಲೇಸ್‌ ಆಲೂಗಡ್ಡೆ’ಗಳ ಪೇಟೆಂಟ್ ರದ್ದು!

- Advertisement -
- Advertisement -

ಪೆಪ್ಸಿ ಕಂಪೆನಿಯ ಜನಪ್ರಿಯ ಖಾದ್ಯ ‘ಲೇಸ್‌’‌ ಚಿಪ್ಸ್‌ಗೆ ಬಳಸುವ ವಿಶೇಷ ತಳಿಯ ಆಲೂಗೆಡ್ಡೆಯ ಪೇಟೆಂಟ್ ಅನ್ನು ಭಾರತ ರದ್ದುಗೊಳಿಸಿದೆ. ಸಸ್ಯ ಪ್ರಭೇದಗಳು ಮತ್ತು ರೈತರ ಹಕ್ಕುಗಳ ರಕ್ಷಣೆ (ಪಿಪಿವಿಎಫ್‌ಆರ್) ಪ್ರಾಧಿಕಾರವು ಶುಕ್ರವಾರ ಈ ಆದೇಶವನ್ನು ಹೊರಡಿಸಿದೆ.

2019 ರಲ್ಲಿ, ಪೆಪ್ಸಿ ಕಂಪೆನಿಯು ಗುಜರಾತ್ ಮೂಲದ ಕೆಲವು ಭಾರತೀಯ ರೈತರು ‘FC5’ ಆಲೂಗೆಡ್ಡೆ ತಳಿಯನ್ನು ಬೆಳೆಸಿದ್ದನ್ನು ವಿರೋಧಿಸಿ ಮೊಕದ್ದಮೆ ಹೂಡಿತ್ತು. ಆಲೂಗಡ್ಡೆ ತಳಿಯು ತಮ್ಮದಾಗಿದ್ದು, ಅದಕ್ಕೆ ಪೇಟೆಂಟ್‌ ಹೊಂದಿದ್ದೇವೆ ಎಂದು ಕಂಪೆನಿಯು ವಾದಿಸಿತ್ತು. FC5 ತಳಿಯ ಆಲೂಗಡ್ಡೆಯು ಕಡಿಮೆ ತೇವಾಂಶವನ್ನು ಹೊಂದಿದ್ದು ಚಿಪ್ಸ್‌ನಂತಹ ತಿಂಡಿಗಳನ್ನು ತಯಾರಿಸಲು ಉತ್ತಮವಾದ ಆಯ್ಕೆಯಾಗಿದೆ.

ಇದನ್ನೂ ಓದಿ:MSP ಕುರಿತ ಆರು ಸುಳ್ಳು ಪ್ರಚಾರಗಳು ಮತ್ತು ಅಸಲೀ ವಾಸ್ತವಗಳು: ಯೋಗೇಂದ್ರ ಯಾದವ್

ಕಂಪೆನಿಯು ನ್ಯಾಯಾಲಯದಲ್ಲಿ ದಾವೆ ಹೂಡಿದ ನಂತರ ರೈತರು ಅದರ ವಿರುದ್ದ ಸಿಡಿದೆದ್ದು, ಪೆಪ್ಸಿ ಕಂಪೆನಿಯನ್ನು ಬಹಿಷ್ಕಾರ ಮಾಡಿದ್ದರು. ಇದರಿಂದಾಗಿ ಕಂಪೆನಿಗೆ ನಷ್ಟವಾಗುತ್ತಿದ್ದಂತೆ ಎಚ್ಚೆತ್ತು, ಅದೇ ವರ್ಷ ಮೊಕದ್ದಮೆಗಳನ್ನು ಹಿಂತೆಗೆದುಕೊಂಡು, ಸಮಸ್ಯೆಯನ್ನು ಸೌಹಾರ್ದಯುತವಾಗಿ ಇತ್ಯರ್ಥಗೊಳಿಸುವುದಾಗಿ ಹೇಳಿತ್ತು.

ಆದರೆ, ಪೆಪ್ಸಿ ಪಂಪೆನಿಯ ‘ಎಫ್‌ಸಿ 5’ ಆಲೂಗೆಡ್ಡೆ ಪ್ರಭೇದಕ್ಕೆ ನೀಡಲಾದ ಪೇಟೆಂಟ್‌ ಅನ್ನು ಹಿಂಪಡೆಯಲು ಪಿಪಿವಿಎಫ್ಆರ್ ಪ್ರಾಧಿಕಾರಕ್ಕೆ ರೈತ ಹಕ್ಕುಗಳ ಹೋರಾಟಗಾರ್ತಿ ಕವಿತಾ ಕುರುಗಂಟಿ ಅರ್ಜಿ ಸಲ್ಲಿಸಿದ್ದರು. ಅವರು ಅರ್ಜಿಯಲ್ಲಿ, ಭಾರತದ ನಿಯಮಗಳು ಬೀಜ ಪ್ರಭೇದಗಳ ಮೇಲೆ ಪೇಟೆಂಟ್ ಅನ್ನು ಅನುಮತಿಸುವುದಿಲ್ಲ ಎಂದು ಉಲ್ಲೇಖಿಸಿದ್ದರು.

ಇದೀಗ, ಬೀಜ ವೈವಿಧ್ಯದ ಮೇಲೆ ಪೆಪ್ಸಿ ಕಂಪೆನಿಯು ಪೇಟೆಂಟ್ ಪಡೆಯಲು ಸಾಧ್ಯವಿಲ್ಲ ಎಂಬ ಕವಿತಾ ಕುರುಗಂಟಿಯವರ ವಾದವನ್ನು PPVFR ಪ್ರಾಧಿಕಾರವು ಒಪ್ಪಿಕೊಂಡಿದೆ.

“ಪೆಪ್ಸಿ ಕಂಪೆನಿಗೆ ನೀಡಲಾದ ನೋಂದಣಿ ಪ್ರಮಾಣಪತ್ರವನ್ನು…ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ” ಎಂದು ಪಿಪಿವಿಎಫ್ಆರ್ ಪ್ರಾಧಿಕಾರದ ಅಧ್ಯಕ್ಷ ಕೆ.ವಿ. ಪ್ರಭು ಆದೇಶದಲ್ಲಿ ತಿಳಿಸಿದ್ದಾರೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕವಿತಾ ಕುರುಗಂಟಿ, “ರೈತರಿಗೆ ಎರೆಡೆರೆಡು ವಿಜಯ ಸಿಕ್ಕಿದೆ. ಮೊದಲನೆಯದು ಈ ಹಿಂದೆ ರೈತರ ಮೇಲೆ ದಾವೆ ಹೂಡಿ ವಾಪಾಸು ಪಡೆದುಕೊಂಡಿರುವುದು. ಇನ್ನೊಂದು ಬೀಜದ ಮೇಲಿನ ಪೇಟೆಂಟ್ ವಾಪಾಸು ಪಡೆದಿರುವುದು. ಈ ದೇಶದಲ್ಲಿ ರೈತನೊಬ್ಬ ತಾನು ತನ್ನ ಗದ್ದೆಯಲ್ಲಿ ಯಾವ ಬೆಳೆ ಬೆಳೆಯ ಬೇಕು ಎಂಬ ನಿರ್ಧಾರ ಹಕ್ಕು ರೈತನ ಬಳಿಯಲ್ಲೇ ಉಳಿಯಬೇಕು. ಯಾವುದೇ ಬೆಳೆಯನ್ನು ಬೆಳೆಯಲು ರೈತ ಸ್ವತಂತ್ರ ಆಗಿರಬೇಕು. ಅದಕ್ಕಾಗಿ ನಾವು ಎಲ್ಲಿಯವರೆಗೆ ಕೂಡಾ ಹೋರಾಟ ನಡೆಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಇದು ಫ್ಯಾಸಿಸ್ಟರು, ಬಂಡವಾಳಿಗರು V/S ದಮನಿತರ ಸ್ವಾಭಿಮಾನದ ನಡುವಿನ ಹೋರಾಟ…!

ಪಿಪಿವಿಎಫ್ಆರ್ ಆದೇಶಕ್ಕೆ ಪ್ರತಿಕ್ರಿಯಿಸಿದ ಪೆಪ್ಸಿ ಕಂಪೆನಿಯ ಇಂಡಿಯಾ ವಕ್ತಾರರು, “PPVFR ಪ್ರಾಧಿಕಾರವು ಜಾರಿಗೊಳಿಸಿದ ಆದೇಶವನ್ನು ನಾವು ನೋಡಿದ್ದೇವೆ. ಈ ಬಗ್ಗೆ ಅದನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ತಿಳಿಸಿದ್ದಾರೆ.

FC5 ಪ್ರಭೇದದ ಆಲೂಗಡ್ಡೆಯನ್ನು ತಾನು ಅಭಿವೃದ್ಧಿಪಡಿಸಿದ್ದಾಗಿ ಪೆಪ್ಸಿ ಕಂಪೆನಿಯು ವಾದಿಸಿದೆ. ಜೊತೆಗೆ 2016 ರಲ್ಲಿ ಅದರ ಗುಣಲಕ್ಷಣವನ್ನು ನೋಂದಾಯಿಸಿದ್ದೇವೆ ಎಂದು ಅದು ಸಮರ್ಥಿಸಿಕೊಂಡಿದೆ.

ಪೆಪ್ಸಿ ಕಂಪೆನಿಯು 1989 ರಲ್ಲಿ ಭಾರತದಲ್ಲಿ ತನ್ನ ಮೊದಲ ಆಲೂಗೆಡ್ಡೆ ಚಿಪ್ಸ್ ಸ್ಥಾವರವನ್ನು ಸ್ಥಾಪಿಸಿತ್ತು. ಕಂಪನಿಯು FC5 ಬೀಜದ ಪ್ರಭೇದವನ್ನು ರೈತರಿಗೆ ಪೂರೈಸುತ್ತದೆ ಮತ್ತು ನಂತರ ಅವರಿಂದ ಉತ್ಪನ್ನಗಳನ್ನು ನಿಗದಿತ ಬೆಲೆಗೆ ಖರೀದಿ ಮಾಡುತ್ತದೆ.

PPVFR ಪ್ರಾಧಿಕಾರದ ತೀರ್ಪನ್ನು ಶ್ಲಾಘಿಸಿದ ಗುಜರಾತ್‌ನ ಆಲೂಗಡ್ಡೆ ರೈತರು ಇದು ರೈತರ ​​ವಿಜಯ ಎಂದು ಕರೆದಿದ್ದಾರೆ.

“ಇದು ಭಾರತದ ರೈತರಿಗೆ ದೊಡ್ಡ ವಿಜಯವಾಗಿದೆ. ದೇಶದಲ್ಲಿ ಯಾವುದೇ ಬೆಳೆಗಳನ್ನು ಬೆಳೆಯುವ ಅವರ ಹಕ್ಕನ್ನು ಈ ಆದೇಶವು ಪುನರುಚ್ಚರಿಸುತ್ತದೆ” ಎಂದು 2019 ರಲ್ಲಿ ಪೆಪ್ಸಿ ಕಂಪೆನಿಯು ಮೊಕದ್ದಮೆ ಹೂಡಿದ್ದ ಗುಜರಾತ್ ಮೂಲದ ರೈತರಲ್ಲಿ ಒಬ್ಬರಾದ ಬಿಪಿನ್ ಪಟೇಲ್ ಹೇಳಿದ್ದಾರೆ ಎಂದು ದಿ ವೈರ್‌ ವರದಿ ಮಾಡಿದೆ.

ಇದನ್ನೂ ಓದಿ:ಎಂಎಸ್‌ಪಿ ಕಾನೂನು ಜಾರಿಗೆ ಸಮಿತಿ ರಚಿಸಲು ಕೇಂದ್ರ ನಿರ್ಧಾರ: 5 ಜನ ರೈತ ಪ್ರತಿನಿಧಿಗಳಿರಲು ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...