Homeಮುಖಪುಟಪೆಪ್ಸಿ ಕಂಪೆನಿಯ ವಿರುದ್ದ ರೈತರಿಗೆ ಜಯ: ‘ಲೇಸ್‌ ಆಲೂಗಡ್ಡೆ’ಗಳ ಪೇಟೆಂಟ್ ರದ್ದು!

ಪೆಪ್ಸಿ ಕಂಪೆನಿಯ ವಿರುದ್ದ ರೈತರಿಗೆ ಜಯ: ‘ಲೇಸ್‌ ಆಲೂಗಡ್ಡೆ’ಗಳ ಪೇಟೆಂಟ್ ರದ್ದು!

- Advertisement -
- Advertisement -

ಪೆಪ್ಸಿ ಕಂಪೆನಿಯ ಜನಪ್ರಿಯ ಖಾದ್ಯ ‘ಲೇಸ್‌’‌ ಚಿಪ್ಸ್‌ಗೆ ಬಳಸುವ ವಿಶೇಷ ತಳಿಯ ಆಲೂಗೆಡ್ಡೆಯ ಪೇಟೆಂಟ್ ಅನ್ನು ಭಾರತ ರದ್ದುಗೊಳಿಸಿದೆ. ಸಸ್ಯ ಪ್ರಭೇದಗಳು ಮತ್ತು ರೈತರ ಹಕ್ಕುಗಳ ರಕ್ಷಣೆ (ಪಿಪಿವಿಎಫ್‌ಆರ್) ಪ್ರಾಧಿಕಾರವು ಶುಕ್ರವಾರ ಈ ಆದೇಶವನ್ನು ಹೊರಡಿಸಿದೆ.

2019 ರಲ್ಲಿ, ಪೆಪ್ಸಿ ಕಂಪೆನಿಯು ಗುಜರಾತ್ ಮೂಲದ ಕೆಲವು ಭಾರತೀಯ ರೈತರು ‘FC5’ ಆಲೂಗೆಡ್ಡೆ ತಳಿಯನ್ನು ಬೆಳೆಸಿದ್ದನ್ನು ವಿರೋಧಿಸಿ ಮೊಕದ್ದಮೆ ಹೂಡಿತ್ತು. ಆಲೂಗಡ್ಡೆ ತಳಿಯು ತಮ್ಮದಾಗಿದ್ದು, ಅದಕ್ಕೆ ಪೇಟೆಂಟ್‌ ಹೊಂದಿದ್ದೇವೆ ಎಂದು ಕಂಪೆನಿಯು ವಾದಿಸಿತ್ತು. FC5 ತಳಿಯ ಆಲೂಗಡ್ಡೆಯು ಕಡಿಮೆ ತೇವಾಂಶವನ್ನು ಹೊಂದಿದ್ದು ಚಿಪ್ಸ್‌ನಂತಹ ತಿಂಡಿಗಳನ್ನು ತಯಾರಿಸಲು ಉತ್ತಮವಾದ ಆಯ್ಕೆಯಾಗಿದೆ.

ಇದನ್ನೂ ಓದಿ:MSP ಕುರಿತ ಆರು ಸುಳ್ಳು ಪ್ರಚಾರಗಳು ಮತ್ತು ಅಸಲೀ ವಾಸ್ತವಗಳು: ಯೋಗೇಂದ್ರ ಯಾದವ್

ಕಂಪೆನಿಯು ನ್ಯಾಯಾಲಯದಲ್ಲಿ ದಾವೆ ಹೂಡಿದ ನಂತರ ರೈತರು ಅದರ ವಿರುದ್ದ ಸಿಡಿದೆದ್ದು, ಪೆಪ್ಸಿ ಕಂಪೆನಿಯನ್ನು ಬಹಿಷ್ಕಾರ ಮಾಡಿದ್ದರು. ಇದರಿಂದಾಗಿ ಕಂಪೆನಿಗೆ ನಷ್ಟವಾಗುತ್ತಿದ್ದಂತೆ ಎಚ್ಚೆತ್ತು, ಅದೇ ವರ್ಷ ಮೊಕದ್ದಮೆಗಳನ್ನು ಹಿಂತೆಗೆದುಕೊಂಡು, ಸಮಸ್ಯೆಯನ್ನು ಸೌಹಾರ್ದಯುತವಾಗಿ ಇತ್ಯರ್ಥಗೊಳಿಸುವುದಾಗಿ ಹೇಳಿತ್ತು.

ಆದರೆ, ಪೆಪ್ಸಿ ಪಂಪೆನಿಯ ‘ಎಫ್‌ಸಿ 5’ ಆಲೂಗೆಡ್ಡೆ ಪ್ರಭೇದಕ್ಕೆ ನೀಡಲಾದ ಪೇಟೆಂಟ್‌ ಅನ್ನು ಹಿಂಪಡೆಯಲು ಪಿಪಿವಿಎಫ್ಆರ್ ಪ್ರಾಧಿಕಾರಕ್ಕೆ ರೈತ ಹಕ್ಕುಗಳ ಹೋರಾಟಗಾರ್ತಿ ಕವಿತಾ ಕುರುಗಂಟಿ ಅರ್ಜಿ ಸಲ್ಲಿಸಿದ್ದರು. ಅವರು ಅರ್ಜಿಯಲ್ಲಿ, ಭಾರತದ ನಿಯಮಗಳು ಬೀಜ ಪ್ರಭೇದಗಳ ಮೇಲೆ ಪೇಟೆಂಟ್ ಅನ್ನು ಅನುಮತಿಸುವುದಿಲ್ಲ ಎಂದು ಉಲ್ಲೇಖಿಸಿದ್ದರು.

ಇದೀಗ, ಬೀಜ ವೈವಿಧ್ಯದ ಮೇಲೆ ಪೆಪ್ಸಿ ಕಂಪೆನಿಯು ಪೇಟೆಂಟ್ ಪಡೆಯಲು ಸಾಧ್ಯವಿಲ್ಲ ಎಂಬ ಕವಿತಾ ಕುರುಗಂಟಿಯವರ ವಾದವನ್ನು PPVFR ಪ್ರಾಧಿಕಾರವು ಒಪ್ಪಿಕೊಂಡಿದೆ.

“ಪೆಪ್ಸಿ ಕಂಪೆನಿಗೆ ನೀಡಲಾದ ನೋಂದಣಿ ಪ್ರಮಾಣಪತ್ರವನ್ನು…ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ” ಎಂದು ಪಿಪಿವಿಎಫ್ಆರ್ ಪ್ರಾಧಿಕಾರದ ಅಧ್ಯಕ್ಷ ಕೆ.ವಿ. ಪ್ರಭು ಆದೇಶದಲ್ಲಿ ತಿಳಿಸಿದ್ದಾರೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕವಿತಾ ಕುರುಗಂಟಿ, “ರೈತರಿಗೆ ಎರೆಡೆರೆಡು ವಿಜಯ ಸಿಕ್ಕಿದೆ. ಮೊದಲನೆಯದು ಈ ಹಿಂದೆ ರೈತರ ಮೇಲೆ ದಾವೆ ಹೂಡಿ ವಾಪಾಸು ಪಡೆದುಕೊಂಡಿರುವುದು. ಇನ್ನೊಂದು ಬೀಜದ ಮೇಲಿನ ಪೇಟೆಂಟ್ ವಾಪಾಸು ಪಡೆದಿರುವುದು. ಈ ದೇಶದಲ್ಲಿ ರೈತನೊಬ್ಬ ತಾನು ತನ್ನ ಗದ್ದೆಯಲ್ಲಿ ಯಾವ ಬೆಳೆ ಬೆಳೆಯ ಬೇಕು ಎಂಬ ನಿರ್ಧಾರ ಹಕ್ಕು ರೈತನ ಬಳಿಯಲ್ಲೇ ಉಳಿಯಬೇಕು. ಯಾವುದೇ ಬೆಳೆಯನ್ನು ಬೆಳೆಯಲು ರೈತ ಸ್ವತಂತ್ರ ಆಗಿರಬೇಕು. ಅದಕ್ಕಾಗಿ ನಾವು ಎಲ್ಲಿಯವರೆಗೆ ಕೂಡಾ ಹೋರಾಟ ನಡೆಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಇದು ಫ್ಯಾಸಿಸ್ಟರು, ಬಂಡವಾಳಿಗರು V/S ದಮನಿತರ ಸ್ವಾಭಿಮಾನದ ನಡುವಿನ ಹೋರಾಟ…!

ಪಿಪಿವಿಎಫ್ಆರ್ ಆದೇಶಕ್ಕೆ ಪ್ರತಿಕ್ರಿಯಿಸಿದ ಪೆಪ್ಸಿ ಕಂಪೆನಿಯ ಇಂಡಿಯಾ ವಕ್ತಾರರು, “PPVFR ಪ್ರಾಧಿಕಾರವು ಜಾರಿಗೊಳಿಸಿದ ಆದೇಶವನ್ನು ನಾವು ನೋಡಿದ್ದೇವೆ. ಈ ಬಗ್ಗೆ ಅದನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ತಿಳಿಸಿದ್ದಾರೆ.

FC5 ಪ್ರಭೇದದ ಆಲೂಗಡ್ಡೆಯನ್ನು ತಾನು ಅಭಿವೃದ್ಧಿಪಡಿಸಿದ್ದಾಗಿ ಪೆಪ್ಸಿ ಕಂಪೆನಿಯು ವಾದಿಸಿದೆ. ಜೊತೆಗೆ 2016 ರಲ್ಲಿ ಅದರ ಗುಣಲಕ್ಷಣವನ್ನು ನೋಂದಾಯಿಸಿದ್ದೇವೆ ಎಂದು ಅದು ಸಮರ್ಥಿಸಿಕೊಂಡಿದೆ.

ಪೆಪ್ಸಿ ಕಂಪೆನಿಯು 1989 ರಲ್ಲಿ ಭಾರತದಲ್ಲಿ ತನ್ನ ಮೊದಲ ಆಲೂಗೆಡ್ಡೆ ಚಿಪ್ಸ್ ಸ್ಥಾವರವನ್ನು ಸ್ಥಾಪಿಸಿತ್ತು. ಕಂಪನಿಯು FC5 ಬೀಜದ ಪ್ರಭೇದವನ್ನು ರೈತರಿಗೆ ಪೂರೈಸುತ್ತದೆ ಮತ್ತು ನಂತರ ಅವರಿಂದ ಉತ್ಪನ್ನಗಳನ್ನು ನಿಗದಿತ ಬೆಲೆಗೆ ಖರೀದಿ ಮಾಡುತ್ತದೆ.

PPVFR ಪ್ರಾಧಿಕಾರದ ತೀರ್ಪನ್ನು ಶ್ಲಾಘಿಸಿದ ಗುಜರಾತ್‌ನ ಆಲೂಗಡ್ಡೆ ರೈತರು ಇದು ರೈತರ ​​ವಿಜಯ ಎಂದು ಕರೆದಿದ್ದಾರೆ.

“ಇದು ಭಾರತದ ರೈತರಿಗೆ ದೊಡ್ಡ ವಿಜಯವಾಗಿದೆ. ದೇಶದಲ್ಲಿ ಯಾವುದೇ ಬೆಳೆಗಳನ್ನು ಬೆಳೆಯುವ ಅವರ ಹಕ್ಕನ್ನು ಈ ಆದೇಶವು ಪುನರುಚ್ಚರಿಸುತ್ತದೆ” ಎಂದು 2019 ರಲ್ಲಿ ಪೆಪ್ಸಿ ಕಂಪೆನಿಯು ಮೊಕದ್ದಮೆ ಹೂಡಿದ್ದ ಗುಜರಾತ್ ಮೂಲದ ರೈತರಲ್ಲಿ ಒಬ್ಬರಾದ ಬಿಪಿನ್ ಪಟೇಲ್ ಹೇಳಿದ್ದಾರೆ ಎಂದು ದಿ ವೈರ್‌ ವರದಿ ಮಾಡಿದೆ.

ಇದನ್ನೂ ಓದಿ:ಎಂಎಸ್‌ಪಿ ಕಾನೂನು ಜಾರಿಗೆ ಸಮಿತಿ ರಚಿಸಲು ಕೇಂದ್ರ ನಿರ್ಧಾರ: 5 ಜನ ರೈತ ಪ್ರತಿನಿಧಿಗಳಿರಲು ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...