Homeಚಳವಳಿಬಾಬರಿ ಮಸೀದಿ ಧ್ವಂಸದ ಕತೆ ಹೇಳುವ ‘ರಾಮ್‌ ಕೆ ನಾಮ್’ ಸಾಕ್ಷ್ಯ ಚಿತ್ರ ಪ್ರದರ್ಶನ ಮಾಡಲಿರುವ...

ಬಾಬರಿ ಮಸೀದಿ ಧ್ವಂಸದ ಕತೆ ಹೇಳುವ ‘ರಾಮ್‌ ಕೆ ನಾಮ್’ ಸಾಕ್ಷ್ಯ ಚಿತ್ರ ಪ್ರದರ್ಶನ ಮಾಡಲಿರುವ ಜೆಎನ್‌ಯು ವಿದ್ಯಾರ್ಥಿ ಒಕ್ಕೂಟ

‘ಸೌಹಾರ್ದ ಹಾಳಾಗುತ್ತದೆ’ ಎಂಬ ಆಡಳಿತ ಮಂಡಳಿಯ ಆಕ್ಷೇಪಣೆಗೆ ಆರೆಸ್ಸಸ್ಸೆಸ್‌ ಮತ್ತು ಗೂಂಡಾಗಳು ಸೌಹಾರ್ದತೆಯ ಬಗ್ಗೆ ಮಾತನಾಡಬಾರದು, ನಾವು ಪ್ರದರ್ಶನ ಮಾಡಿಯೇ ತೀರುತ್ತೇವೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ

- Advertisement -
- Advertisement -

ಆಡಳಿತ ಮಂಡಳಿಯ ಆಕ್ಷೇಪಣೆಯ ಹೊರತಾಗಿಯು ಜವಾಹರಲಾಲ್‌ ನೆಹರೂ ವಿಶ್ವವಿದ್ಯಾನಿಯಯದ ವಿದ್ಯಾರ್ಥಿ ಒಕ್ಕೂಟ (ಜೆಎನ್‌ಯುಎಸ್‌ಯು)ವು ಬಾಬರಿ ಮಸೀದಿ ಧ್ವಂಸ ಘಟನೆಯ ಬಗ್ಗೆ ನಿರ್ಮಿಸಲಾಗಿರುವ ‘ರಾಮ್‌‌ ಕೆ ನಾಮ್‌’ ಸಾಕ್ಷ್ಯ ಚಿತ್ರವನ್ನು ಪ್ರದರ್ಶನ ಮಾಡಿಯೇ ತೀರುತ್ತೇವೆ ಎಂದು ಹೇಳಿದೆ. ಡಿಸೆಂಬರ್‌ 4 ರ ಶನಿವಾರ (ಇಂದು)ದಂದು ರಾತ್ರಿ 9:30 ಕ್ಕೆ ಸಾಕ್ಷ್ಯ ಚಿತ್ರವು ಜೆಎನ್‌ಯುವಿನಲ್ಲಿ ವಿದ್ಯಾರ್ಥಿ ಒಕ್ಕೂಟವು ಪ್ರದರ್ಶನ ಮಾಡಲಿದೆ.

ಆದರೆ, ಪ್ರದರ್ಶನಕ್ಕಾಗಿ ಕರಪತ್ರವನ್ನು ಬಿಡುಗಡೆ ಮಾಡಿದ ವಿದ್ಯಾರ್ಥಿ ಒಕ್ಕೂಟದ ಹೆಸರಿನಲ್ಲಿ, ವಿದ್ಯಾರ್ಥಿಗಳ ಗುಂಪು ಪೂರ್ವಾನುಮತಿ ಪಡೆದಿಲ್ಲ ಎಂದು ಜೆಎನ್‌ಯು ಆಡಳಿತವು ಹೇಳಿದೆ. ಈ ಬಗ್ಗೆ ಎಚ್ಚರಿಕೆ ನೀಡಿ ಸುತ್ತೋಲೆಯನ್ನು ಬಿಡುಗಡೆ ಮಾಡಿದೆ.

ಇದನ್ನೂ ಓದಿ:ಅಯೋಧ್ಯೆ: ಬಾಬರಿಗಿಂತ 4 ಪಟ್ಟು ದೊಡ್ಡ ಮಸೀದಿ – ಮಸೀದಿಗಿಂತ 6 ಪಟ್ಟು ದೊಡ್ಡ ಆಸ್ಪತ್ರೆ!

ವಿಶ್ವವಿದ್ಯಾಲಯ ತನ್ನ ಸುತ್ತೋಲೆಯಲ್ಲಿ, “ಇಂತಹ ಅನಧಿಕೃತ ಚಟುವಟಿಕೆಯು ಕೋಮು ಸೌಹಾರ್ದತೆ ಮತ್ತು ಕ್ಯಾಂಪಸ್‌ನ ಶಾಂತಿಯುತ ವಾತಾವರಣವನ್ನು ಕದಡಬಹುದು. ಘಟನೆಗೆ ಕಾರಣರಾದವರ ವಿರುದ್ಧ ಶಿಸ್ತು ಕ್ರಮವನ್ನು ಪ್ರಾರಂಭಿಸಲಾಗುವುದು. ವಿದ್ಯಾರ್ಥಿಗಳು ಪ್ರಚೋದನೆಗೆ ಒಳಗಾಗಬಾರದು. ಕರಪತ್ರವು ಅನಧಿಕೃತವಾಗಿದೆ” ಎಂದು ಹೇಳಿದೆ.

ಉದ್ದೇಶಿತ ಕಾರ್ಯಕ್ರಮವನ್ನು ತಕ್ಷಣವೇ ರದ್ದುಗೊಳಿಸುವಂತೆ ಸಂಬಂಧಪಟ್ಟ ವಿದ್ಯಾರ್ಥಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದು ಜೆಎನ್‌ಯು ತಿಳಿಸಿದೆ.

ವಿಶ್ವವಿದ್ಯಾಲಯದ ಸುತ್ತೋಲೆಗೆ ಪ್ರತಿಕ್ರಿಯಿಸಿರುವ ಜೆಎನ್‌ಯುಎಸ್‌ಯು ಅಧ್ಯಕ್ಷೆ ಐಶೆ ಘೋಷ್‌‌, ಚಿತ್ರ ಪ್ರದರ್ಶನವನ್ನು ಮಾಡಿಯೇ ತೀರುತ್ತೇವೆ, ಆರೆಸ್ಸೆಸ್‌ ಮತ್ತು ಅದರ ಗೂಂಡಾಗಳು ಕೋಮು ಸೌಹಾರ್ದದ ಬಗ್ಗೆ ಮಾತನಾಡಬಾರದು ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ಈ ಬಗ್ಗೆ ಟ್ವೀಟ್ ಮಾಡಿರುವ ಐಶೆ ಘೋಷ್‌, “ಆರ್‌ಎಸ್‌ಎಸ್ ಮತ್ತು ಅದರ ಗೂಂಡಾಗಳು ಕೋಮು ಸೌಹಾರ್ದದ ಬಗ್ಗೆ ಮಾತನಾಡಬಾರದು. ಜೆಎನ್‌ಯುಎಸ್‌ಯು ‘ರಾಮ್ ಕೇ ನಾಮ್’ ಪ್ರದರ್ಶನ ಮಾಡೇ ಮಾಡುತ್ತದೆ. ಈ ದೇಶದಲ್ಲಿ ಕೋಮು ಸೌಹಾರ್ದತೆ ಕದಡುತ್ತಿರುವುದು ಬಲಪಂಥೀಯ ಮೂಲಭೂತವಾದಿಗಳು. ಅವರು ನಮ್ಮನ್ನು ಬೆದರಿಸಿದಾಗೆಲ್ಲಾ ಹೀಗೆ ಬೆತ್ತಲಾಗುತ್ತಾ ಹೋಗುತ್ತಾರೆ” ಎಂದು ಬರೆದಿದ್ದಾರೆ.

‘ರಾಮ್ ಕೆ ನಾಮ್’ 1992 ರ ಚಲನಚಿತ್ರ ನಿರ್ಮಾಪಕ ಆನಂದ್ ಪಟವರ್ಧನ್ ಅವರ ನಿರ್ಮಿಸಿದ ಸಾಕ್ಷ್ಯಚಿತ್ರವಾಗಿದೆ. ಅಯೋಧ್ಯೆಯಲ್ಲಿ ಬಾಬರಿ ಮಸೀದಿಯ ಸ್ಥಳದಲ್ಲಿ ರಾಮ ಮಂದಿರವನ್ನು ನಿರ್ಮಿಸಲು ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆ ವಿಎಚ್‌ಪಿ ನಡೆಸಿದ ಅಭಿಯಾನವನ್ನು ಈ ಚಿತ್ರವು ಪರಿಶೋಧಿಸುತ್ತದೆ. ಚಲನಚಿತ್ರವು ಅತ್ಯುತ್ತಮ ಸಾಕ್ಷ್ಯಚಿತ್ರಕ್ಕಾಗಿ ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ:ರಾಮ ಮಂದಿರದ ’ಭೂಮಿ ಪೂಜೆ’ಗೆ ಬಾಬರಿ ಮಸೀದಿ ಧ್ವಂಸಗೊಳಿಸಿದವರನ್ನು ಆಹ್ವಾನಿಸಿ: ದುಬೆ

ಬಾಬರಿ ಮಸೀದಿ ಧ್ವಂಸದ ಕತೆ ಹೇಳುವ ‘ರಾಮ್‌ ಕೆ ನಾಮ್’ ಸಾಕ್ಷ್ಯ ಚಿತ್ರವನ್ನು ಇಲ್ಲಿಯು ನೋಡಬಹುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...