Homeಕರ್ನಾಟಕಬೇಲೂರು: ಚರ್ಚ್‌ ಮೇಲೆ ದಾಳಿ ಮಾಡಿದವರ ಬಂಧನ ಇನ್ನೂ ಆಗಿಲ್ಲ!

ಬೇಲೂರು: ಚರ್ಚ್‌ ಮೇಲೆ ದಾಳಿ ಮಾಡಿದವರ ಬಂಧನ ಇನ್ನೂ ಆಗಿಲ್ಲ!

- Advertisement -
- Advertisement -

ಬಲವಂತವಾಗಿ ಮತಾಂತರದ ಮಾಡಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಬೆಂಬಲಿತ ಬಜರಂಗದಳದ ಗುಂಪು ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಕ್ರಿಶ್ಚಿಯನ್‌ ಪ್ರಾರ್ಥನಾ ಮಂದಿರಕ್ಕೆ ನುಗ್ಗಿ ಗಲಭೆ ಸೃಷ್ಟಿಸಲು ಯತ್ನಿಸಿ ಒಂದು ವಾರವಾಯಿತು. ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡಲು ಯತ್ನಿಸಿದ ಐವರು ಬಜರಂಗದಳ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ ಇಲ್ಲಿಯವರೆಗೆ ಒಬ್ಬರನ್ನೂ ಬಂಧಿಸಲಾಗಿಲ್ಲ.

ನವೆಂಬರ್ 28ರಂದು ಪ್ರಾರ್ಥನಾ ಸಭೆ ನಡೆಯುತ್ತಿದ್ದಾಗ ಬಜರಂಗದಳದ ಸುಮಾರು 25 ಕಾರ್ಯಕರ್ತರು ಪ್ರಾರ್ಥನಾ ಮಂದಿರಕ್ಕೆ ನುಗ್ಗಿದ್ದರು. ಪರಿಸ್ಥಿತಿ ಅವಲೋಕಿಸಲು ಕರೆಸಿಕೊಂಡಿದ್ದ ಪೊಲೀಸರು ದಾಳಿಕೋರರನ್ನು ಹತ್ತಿಕ್ಕುವ ಬದಲು ಬಜರಂಗದಳದ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸುತ್ತಿರುವುದು ಕಂಡುಬಂದಿತ್ತು.

ಚರ್ಚ್ ಸದಸ್ಯರ ದೂರಿನ ಮೇರೆಗೆ ಬೇಲೂರು ಪೊಲೀಸರು ಶಾಂತಿ ಭಂಗದ ಆರೋಪದ ಮೇಲೆ ಭಜರಂಗದಳದ ಐವರ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಕಾನೂನು ಕ್ರಮ ಕೈಗೊಳ್ಳುವ ಬದಲು ಶಾಂತಿ ಸಭೆ ನಡೆಸಿದ್ದಾರೆ. ಘಟನೆ ನಡೆದ ದಿನದಂದು ಬಜರಂಗದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿರುವುದನ್ನು ವೀಡಿಯೋಗಳು ಸ್ಪಷ್ಟವಾಗಿ ತೋರಿಸುತ್ತಿದ್ದರೂ ಭವಿಷ್ಯದಲ್ಲಿ ಯಾವುದೇ ತೊಂದರೆಯಾಗುವುದಿಲ್ಲ ಎಂದು ಔಪಚಾರಿಕ ಭರವಸೆ ಪಡೆದರು.

“ನಾವು ಎರಡೂ ಸಮುದಾಯಗಳನ್ನು ಠಾಣೆಗೆ ಕರೆಸಿ ಶಾಂತಿ ಸಮಿತಿ ಸಭೆ ನಡೆಸಿದ್ದೇವೆ. ಎರಡೂ ಸಮುದಾಯಗಳು ಸಮಸ್ಯೆಗಳನ್ನು ಉಲ್ಬಣಗೊಳಿಸದಂತೆ ನೋಡಿಕೊಳ್ಳುತ್ತೇವೆ ಮತ್ತು ಸೌಹಾರ್ದಯುತವಾಗಿ ಬಗೆಹರಿಸಿದ್ದೇವೆ” ಎಂದು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಹೇಳಿದ್ದಾರೆ.


ಇದನ್ನೂ ಓದಿರಿ: ಬೇಲೂರು: ಕ್ರಿಶ್ಚಿಯನ್ನರ ಪ್ರಾರ್ಥನೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ, ಮಹಿಳೆಯರಿಂದ ಛೀಮಾರಿ!


ಪ್ರಾರ್ಥನಾ ಮಂದಿರದಲ್ಲಿದ್ದ ಸದಸ್ಯರು ಬಲವಂತದ ಮತಾಂತರದ ಆರೋಪಗಳನ್ನು ನಿರಾಕರಿಸಿದ್ದಾರೆ. “ಬಲವಂತದ ಮತಾಂತರವನ್ನು ಏಕೆ ಮಾಡಬೇಕು? ನಾವು ದೇವರನ್ನು ಪೂಜಿಸುತ್ತಿದ್ದೇವೆ, ಬಲವಂತದ ಮತಾಂತರದಿಂದ ಏನು ಪ್ರಯೋಜನ? ಅವರ ಕೃತ್ಯಗಳಿಂದ ನಮಗೆ ನೋವಾಗಿದೆ, ನಾನು ಧರ್ಮದಲ್ಲಿ ನಂಬಿಕೆ ಹೊಂದಿದ್ದೇನೆ ಮತ್ತು ಕ್ರಿಶ್ಚಿಯನ್ ಆಗಲು ಬಯಸುತ್ತೇನೆ, ಇದು ನನ್ನ ವೈಯಕ್ತಿಕ ನಿರ್ಧಾರ ಮತ್ತು ಅದು ನನ್ನ ಹಕ್ಕು. ಕಳೆದ ಐದು ವರ್ಷಗಳಿಂದ ನಾನು ಪ್ರಾರ್ಥನಾ ಸಭೆಯ ಭಾಗವಾಗಿದ್ದೇನೆ. ಯಾರೂ ನನ್ನನ್ನು ಬಲವಂತ ಮಾಡಿಲ್ಲ. ಚರ್ಚ್‌ಗೆ ಬರುವುದು ನನ್ನ ಸ್ವಯಂಪ್ರೇರಿತ ನಿರ್ಧಾರ” ಎಂದು ಘಟನೆ ನಡೆದ ದಿನದಂದು ಹಾಜರಿದ್ದ ಸುನಿತಾ ಎಂಬವರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಚರ್ಚ್‌ನ ಪಾದ್ರಿ ಸುರೇಶ್ ಪೌಲ್ ಅವರೂ ಆರೋಪವನ್ನು ನಿರಾಕರಿಸಿದ್ದಾರೆ. ಮೂರು ವರ್ಷಗಳಿಂದ ಚರ್ಚ್ ಸಕ್ರಿಯವಾಗಿದೆ ಎಂದು ಅವರು ಹೇಳಿದ್ದಾರೆ. “ಯಾವುದೇ ಮತಾಂತರ ನಡೆಯುತ್ತಿಲ್ಲ. ಇದು ಮತಾಂತರದ ಸ್ಥಳವಲ್ಲ. ಕಾರ್ಯಕರ್ತರು ಇಲ್ಲಿಗೆ ಬಂದು ನಮಗೆ ಬೆದರಿಕೆ ಹಾಕಿದರು ಮತ್ತು ಕೆಲವರನ್ನು ಥಳಿಸಲು ಪ್ರಯತ್ನಿಸಿದರು” ಎಂದು ಸುರೇಶ್ ಪೌಲ್‌ ಆರೋಪಿಸಿದ್ದಾರೆ.

ಚರ್ಚ್‌ಗೆ ನುಗ್ಗಿದ ಗುಂಪಿನ ಭಾಗವಾಗಿದ್ದ ಬಜರಂಗದಳ ಕಾರ್ಯಕರ್ತರು ಕ್ಷಮೆಯಾಚಿಸಿಲ್ಲ. “ಹಿಂದೂಗಳು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುತ್ತಿದ್ದಾರೆ. ಒಮ್ಮೆ ಹಿಂದೂವಾಗಿ ಜನಿಸಿದರೆ, ನೀವು ಹಿಂದೂವಾಗಿ ಸಾಯುತ್ತೀರಿ, ಬೇಲೂರಿನಲ್ಲಿ ಬಲವಂತದ ಮತಾಂತರ ನಡೆಯುತ್ತಿದೆ” ಎಂದು ನಾಗೇನಹಳ್ಳಿಯ ಬಜರಂಗದಳದ ಸದಸ್ಯರೊಬ್ಬರು ತಿಳಿಸಿದ್ದಾರೆ. “ಬಹಳಷ್ಟು ಜನರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಅದು ಮುಂದುವರಿಯುತ್ತಿದೆ” ಎಂದು ಹಾಸನ ಜಿಲ್ಲೆಯ ಬಜರಂಗದಳದ ಸಂಚಾಲಕ ಮಂಜುನಾಥ್ ಹೇಳಿಕೆ ನೀಡಿದ್ದಾರೆ.

ರಕ್ಷಣೆ ನೀಡಲು ಪ್ರಾರ್ಥನಾ ಮಂದಿರದ ಹೊರಗೆ ಪೊಲೀಸರನ್ನು ನಿಯೋಜಿಸಲಾಗಿದ್ದರೂ, ಪಾದ್ರಿ ಪೌಲ್‌ ಅವರು ಆತಂಕದಿಂದ ಇನ್ನೂ ಹೊರಬಂದಿಲ್ಲ ಎಂದು ಮೂಲಗಳು ಹೇಳಿವೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರ ಮತಾಂತರ ವಿರೋಧಿ ಮಸೂದೆಯನ್ನು ತರುವುದಾಗಿ ಭರವಸೆ ನೀಡಿದ ಬೆನ್ನಲ್ಲೇ ಕ್ರಿಶ್ಚಿಯನ್ ಪ್ರಾರ್ಥನಾ ಮಂದಿರದ ಮೇಲೆ ದಾಳಿ ನಡೆದಿದೆ.


ಇದನ್ನೂ ಓದಿರಿ: ಅಡಿ ಇಡದಿರಿ ಗುಡಿಯೊಳಗೆ…! ದೇವಸ್ಥಾನ ಪ್ರವೇಶ ನಿಷೇಧ ಮತ್ತು ವಿರೋಧ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...