Homeಕರ್ನಾಟಕರಂಗಾಯಣ ನಿರ್ದೇಶಕರ ವಜಾಕ್ಕೆ ಪ್ರಗತಿಪರ ಚಿಂತಕರ ಆಗ್ರಹ; ಬಹುರೂಪಿ ಬಹಿಷ್ಕರಿಸಲು ನಿರ್ಧಾರ

ರಂಗಾಯಣ ನಿರ್ದೇಶಕರ ವಜಾಕ್ಕೆ ಪ್ರಗತಿಪರ ಚಿಂತಕರ ಆಗ್ರಹ; ಬಹುರೂಪಿ ಬಹಿಷ್ಕರಿಸಲು ನಿರ್ಧಾರ

ರಂಗಾಯಣ ಮತ್ತು ಬಹುರೂಪಿ ತನ್ನ ಸಾಂಸ್ಕೃತಿಕ ಚಹರೆಗಳನ್ನು ಕಳೆದುಕೊಳ್ಳುತ್ತಿವೆ ಎಂದು ಆತಂಕ ವ್ಯಕ್ತಪಡಿಸಿ ಚಿಂತಕರು ಸಭೆ ನಡೆಸಿದ್ದು, ಬಳಿಕ ಬಹಿರಂಗ ಪತ್ರವನ್ನೂ ಬರೆದಿದ್ದಾರೆ.

- Advertisement -
- Advertisement -

ವಿವಾದಗಳಿಂದಲೇ ಸದಾ ಸುದ್ದಿಯಲ್ಲಿರುವ ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರನ್ನು ವಜಾ ಮಾಡಬೇಕು ಹಾಗೂ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಸಾಂಸ್ಕೃತಿಕ ಮಹತ್ವವನ್ನು ಕಾಪಾಡಿಕೊಳ್ಳಬೇಕು ಎಂದು ಪ್ರಗತಿಪರ ಚಿಂತಕರು ಆಗ್ರಹಿಸಿದ್ದಾರೆ.

ಕಲಾಮಂದಿರ ಆವರಣದಲ್ಲಿರುವ ರಂಗಾಯಣ ಸಮೀಪದ ಕಿಂದರಿಜೋಗಿ ಬಳಿ ಶನಿವಾರ ಸಂಜೆ ಸಭೆ ನಡೆಸಿದ ಪ್ರಗತಿಪರ ಚಿಂತಕರು, ಸಮಾನ ಮನಸ್ಕರು, “ಬಹುತ್ವವನ್ನು ಪ್ರತಿಪಾದಿಸುವ ನಿಟ್ಟಿನಲ್ಲಿ ಮೈಸೂರು ರಂಗಾಯಣ ಈವರೆಗೆ ನಡೆಸಿಕೊಂಡು ಬಂದಿರುವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವು ಈ ಬಾರಿ ವ್ಯಕ್ತಗತ, ಏಕಮುಖ ನಿರ್ಣಯ ಹಾಗೂ ಸೈದ್ಧಾಂತಿಕ ಹಿನ್ನೆಲೆಯಿಂದ ಕೂಡಿದೆ. ಹೀಗಾಗಿ ಈ ಬಾರಿಯ ಬಹುರೂಪಿಯನ್ನು ಬಹಿಷ್ಕರಿಸುತ್ತೇವೆ” ಎಂದು ತಿಳಿಸಿದರು.

ಯಾವುದೇ ಪಕ್ಷ ಹಾಗೂ ಸಿದ್ಧಾಂತ ಹಿನ್ನೆಲೆವುಳ್ಳವರನ್ನು ಹಾಗೂ ರಂಗಭೂಮಿಗೆ ಯಾವುದೇ ಕೊಡುಗೆಯನ್ನು ನೀಡದ ಚಕ್ರವರ್ತಿ ಸೂಲಿಬೆಲೆ ಹಾಗೂ ಮಾಳವಿಕಾ ಅವಿನಾಶ್ ಅವರನ್ನು ಬಹುರೂಪಿಗೆ ಆಹ್ವಾನಿಸಿರುವುದನ್ನು ಖಂಡಿಸಬೇಕು. ಬಹುರೂಪಿಯ ಅತಿಥಿಗಳ ಪಟ್ಟಿಯಲ್ಲಿ ಜಾವೇದ್ ಅಖ್ತರ್, ನಾಸೀರ್ ವುದ್ದೀನ್ ಶಾ ಸೇರಿದಂತೆ ಬಹುದೊಡ್ಡ ಕಲಾವಿದರು ಇದ್ದಾರೆ. ರಂಗಾಯಣ ಇತಿಹಾಸವನ್ನು ಅಲ್ಲಿನ ನಿರ್ದೇಶಕರು ಗೌರವಿಸಬೇಕು ಎಂದು ಆಗ್ರಹಿಸಿದ್ದಾರೆ.

ಆಯ್ಕೆ ನಮ್ಮದು ಎಂದು ಉದ್ದಟತನದಿಂದ ಮಾತನಾಡಬಾರದು. ರಂಗ ಸಮಾಜದ ನಿರ್ದೇಶನದಂತೆ ನಿರ್ಧಾರ ಕೈ ಗೊಳ್ಳಬೇಕು. ಇದರ ವಿರುದ್ಧವಾಗಿ ಪ್ರತಿಭಟಿಸಿದ ಕಿರಿಯ ಕಲಾವಿದರಿಗೆ ಉದ್ದಟತನದಿಂದ ಮಾತನಾಡಿದ ರಂಗಾಯಣ ನಿರ್ದೇಶಕ ರಂಗಾಯಣ ಕಾರ್ಯಪ್ಪ ಅವರ ಕಡೆ ಖಂಡನೀಯ. ಈ ಎಲ್ಲಾ ವಿಚಾರಗಳನ್ನು ಇಟ್ಟುಕೊಂಡು ಬಹುರೂಪಿಯನ್ನು ಸಾರ್ವಜನಿಕವಾಗಿ ಬಹಿಷ್ಕಾರಿಸಬೇಕು ಎಂದು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.


ಇದನ್ನೂ ಓದಿರಿ: ಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಮುಂದೂಡಿಕೆ


ಈ ಕುರಿತಂತೆ ಪತ್ರವನ್ನು ಬರೆದಿರುವ ಚಿಂತಕರು, “ಒಂದು ಸ್ವಾಯತ್ತ ಸಾಂಸ್ಕೃತಿಕ ಸಂಸ್ಥೆಯಾಗಿ ರಂಗಾಯಣ ಕನ್ನಡಿಗರ, ಕನ್ನಡದ ಸೃಜನಶೀಲ ಕಲಾವಿದರ ಸ್ವತ್ತಾಗಿದ್ದು ಈ ಸಂಸ್ಥೆಯನ್ನು ದಾರಿತಪ್ಪಿಸುವಂತಹ ನೀತಿಗಳನ್ನು ಅನುಸರಿಸುತ್ತಿರುವ ಅಡ್ಡಂಡ ಕಾರ್ಯಪ್ಪ ಅವರನ್ನು ಕೂಡಲೇ ನಿರ್ದೇಶಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸುತ್ತೇವೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆಯನ್ನು ನಡೆಸುತ್ತೇವೆ. ರಂಗಾಯಣ ಕನ್ನಡಿಗರ ಆಸ್ತಿ ಇದರ ಸ್ವಾಯತ್ತತೆಯ ರಕ್ಷಣೆಗಾಗಿ ನಮ್ಮ ಹೋರಾಟವನ್ನು ತೀವ್ರಗೊಳಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಪತ್ರದಲ್ಲಿ ಏನಿದೆ?

ಕನ್ನಡ ರಂಗಭೂಮಿಯ ಪ್ರತಿಷ್ಠಿತ ಸಂಸ್ಥೆಯಾಗಿರುವ ಮೈಸೂರಿನ ರಂಗಾಯಣ ಪ್ರತಿವರ್ಷ ನಡೆಸುತ್ತಾ ಬಂದಿರುವ ಬಹುರೂಪಿ ನಾಟಕೋತ್ಸವ ಅನೇಕ ಕಾರಣಗಳಿಗಾಗಿ ಬಹಳ ಮುಖ್ಯವಾದ ಉತ್ಸವ. ವಿಭಿನ್ನ ರಾಜ್ಯಗಳ, ಭಾಷೆಗಳ, ಸಂಸ್ಕøತಿಗಳ ಸಂಗಮವಾಗಿಯೂ ಇದಕ್ಕೆ ಮಹತ್ವ ಇದೆ. ಇಲ್ಲಿ ನಡೆಯುವ ವಿಚಾರ ಸಂಕಿರಣ, ಸಂವಾದ, ಚರ್ಚೆಗಳು ನಮ್ಮ ಚಿಂತನೆಯನ್ನು ಹರಿತಗೊಳಿಸುವ ಹೊಸ ಹೊಸ ಎತ್ತರಗಳಿಗೆ ಕೊಂಡೊಯ್ಯುವ ಆಶಯಕ್ಕೆ ಇಂಬಾಗಲು ನೆರವು ನೀಡುತ್ತವೆ. ಹೀಗಾಗಿ ಇಡೀ ಕರ್ನಾಟಕದ ಜನ ಈ ಹಬ್ಬವನ್ನು ಬಹಳ ಕುತೂಹಲದಿಂದ ಗಮನಿಸುತ್ತಾರೆ ಮತ್ತು ಸಕ್ರಿಯವಾಗಿ ಈ ಹಬ್ಬದಲ್ಲಿ ಭಾಗವಹಿಸುತ್ತಾರೆ.

ಆಡಳಿತ ಪಕ್ಷ ಯಾವುದೇ ಇರಲಿ, ಇಲ್ಲಿಯ ಚಿಂತನೆಗೆ, ಜನತಂತ್ರದ ಆಶಯಕ್ಕೆ, ಸ್ವಾಯತ್ತತೆಗೆ ಧಕ್ಕೆ ಬಾರದ ರೀತಿಯಲ್ಲಿ ಈ ಹಬ್ಬಗಳು ಈವರೆಗೆ ನಡೆದುಕೊಂಡುಬಂದಿವೆ. ಆದರೆ ಈ ಬಾರಿಯ ಬಹುರೂಪಿ ಉತ್ಸವ ಇಂಥ ಆಶಯವನ್ನು ದಿಕ್ಕುತಪ್ಪಿಸುವಂತೆ ಕಾಣುತ್ತಿದೆ. ಬಹುರೂಪಿಯ ಉದ್ಘಾಟನೆ ಮತ್ತು ಸಮಾರೋಪದ ಅತಿಥಿಗಳನ್ನು ಆಯ್ಕೆ ಮಾಡುವ ಸಂದರ್ಭಗಳಲ್ಲಿ ಯಾವುದೇ ನಿರ್ದಿಷ್ಟ ಮಾನದಂಡಗಳು ಇಲ್ಲವಾದರೂ, ಸಾಮಾನ್ಯವಾಗಿ ನಾಟಕ, ರಂಗಭೂಮಿ, ಕಲೆ, ಸಾಹಿತ್ಯ ಮತ್ತಿತರ ಸೃಜನಶೀಲ ಪ್ರಕಾರಗಳಲ್ಲಿ ಕೊಡುಗೆ ನೀಡಿದವರನ್ನು ಆಯ್ಕೆ ಮಾಡುವುದು ವಾಡಿಕೆ. ಎಲ್ಲ ರೀತಿಯ ಚಿಂತನಾ ವಾಹಿನಿಗಳನ್ನು ಪ್ರತಿನಿಧಿಸುವ ದೇಶದ, ರಾಜ್ಯದ ಮಹಾನ್ ಚಿಂತಕರು ಈ ವೇದಿಕೆಗಳನ್ನಲಂಕರಿಸಿ ನಾಟಕೋತ್ಸವದ ಆಶಯಗಳನ್ನು ಬೆಂಬಲಿಸಿದ್ದಾರೆ.

ಈ ಬಾರಿಯ ನಾಟಕೋತ್ಸವಕ್ಕೆ ಆಶಯ ಭಾಷಣ ಮಾಡಲು ಚಿತ್ರನಟಿ ಮತ್ತು ಬಿಜೆಪಿ ನಾಯಕಿ ಮಾಳವಿಕಾ ಅವಿನಾಶ್ ಅವರನ್ನೂ, ಸಮಾರೋಪ ಭಾಷಣ ಮಾಡಲು ಸಂಘಪರಿವಾರದ ಪರಿಚಾರಕ ಮತ್ತು ಬಲಪಂಥೀಯ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಆಯ್ಕೆ ಮಾಡಿರುವುದು ಸೋಜಿಗ ಹುಟ್ಟಿಸುವಂತಿದೆ. ಈ ಆಯ್ಕೆ ರಂಗಾಯಣದ ಮೂಲ ಆಶಯಗಳಿಗೆ ಮತ್ತು ಕನ್ನಡ ಸಾಂಸ್ಕೃತಿಕ ಲೋಕದ ಆದರ್ಶಗಳಿಗೆ ವ್ಯತಿರಿಕ್ತವಾಗಿದೆ. ಮಾಳವಿಕಾ ಅವಿನಾಶ್ ನೇರವಾಗಿ ಆಡಳಿತಾರೂಢ ರಾಜಕೀಯ ಪಕ್ಷದೊಡನೆ ಮತ್ತು ಅದರ ಮೂಲ ಸಿದ್ಧಾಂತಗಳೊಡನೆ ಗುರುತಿಸಿಕೊಂಡವರಾಗಿದ್ದಾರೆ. ಹಾಗೆಯೇ ಚಕ್ರವರ್ತಿ ಸೂಲಿಬೆಲೆ ತಮ್ಮ ಪ್ರಖರ ಎನ್ನಲಾಗುವ ಭಾಷಣಗಳ ಮೂಲಕ ಕೋಮು ದ್ವೇಷವನ್ನು ಹರಡುವ, ಸುಳ್ಳು ಇತಿಹಾಸವನ್ನು ಪ್ರಚಾರ ಮಾಡುವ ಸಂಘಪರಿವಾರದ ಪರಿಚಾರಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಇಬ್ಬರಿಂದ ರಂಗಭೂಮಿ ಕ್ಷೇತ್ರಕ್ಕೆ ಯಾವುದೇ ವಿಧವಾದ ಕೊಡುಗೆ ಇಲ್ಲ. ತಮ್ಮ ಕೋಮುವಾದಿ ಚಿಂತನೆಗಳ ಮೂಲಕ ಸಮಾಜದಲ್ಲಿ ದ್ವೇಷದ ವಿಷಬೀಜಗಳನ್ನು ಬಿತ್ತುವುದರಲ್ಲಿ ಸಂಘಪರಿವಾರದ ಪರಿಚಾರಕರಾಗಿ ಅವಿರತ ಶ್ರಮಿಸುತ್ತಿರುವ ಶ್ರೀಯುತ ಚಕ್ರವರ್ತಿ ಸೂಲಿಬೆಲೆ ಅವರನ್ನು “ಬಹುರೂಪಿ ನಾಟಕೋತ್ಸವ ”ದಂತಹ ಒಂದು ಸೃಜನಶೀಲ ವೇದಿಕೆಯಲ್ಲಿ ಸಮಾರೋಪ ಅತಿಥಿಯಾಗಿ ಆಹ್ವಾನಿಸಿರುವುದು ಖಂಡಿತಾ ಒಪ್ಪುವ ಮಾತಲ್ಲ. ಈ ನಡೆಯನ್ನು ನಾವು ಖಂಡಿಸುತ್ತೇವೆ.


ಇದನ್ನೂ ಓದಿರಿ: ಬಹುರೂಪಿಗೆ ಸೂಲಿಬೆಲೆ, ಮಾಳವಿಕಾಗೆ ಆಹ್ವಾನ ವಿರೋಧಿಸಿ ‘ಪರ್ವ’ ಕಿರಿಯ ಕಲಾವಿದರಿಂದ ರಂಗಾಯಣಕ್ಕೆ ಪತ್ರ


ರಂಗಾಯಣ ಕನ್ನಡಿಗರ ಸಾಂಸ್ಕೃತಿಕ ಸಂಸ್ಥೆ ಮಾತ್ರವಲ್ಲ, ಅದೊಂದು ಸ್ವಾಯತ್ತ ಸಂಸ್ಥೆ. ಆಳುವ ಪಕ್ಷ ಯಾವುದೇ ಇರಲಿ, ರಂಗಾಯಣ ನಿದೇರ್ಶಕರ ಒಲವು-ನಿಲುವು ಏನೇ ಇರಲಿ, ರಂಗಾಯಣದ ಮೂಲ ಆಶಯಕ್ಕೆ ಧಕ್ಕೆಯಾಗದ ರೀತಿಯಲ್ಲಿ ರಂಗಾಯಣದ ಚಟುವಟಿಕೆಗಳು ನಡೆಯಬೇಕು. ಇದನ್ನು ಕೋಮುವಾದಿಗಳ ವೇದಿಕೆಯಾಗಿ ಪರಿವರ್ತಿಸುವುದು ಜಾತ್ಯತೀತ ತತ್ವದಲ್ಲಿ ನಂಬಿಕೆ ಇಟ್ಟಿರುವ ನಮ್ಮ ಜನತಂತ್ರ ವ್ಯವಸ್ಥೆಯ ಮುನ್ನಡೆಗೆ ತಡೆಯೊಡ್ಡುತ್ತದೆ. ಇತ್ತೀಚಿನ ದಿನಗಳಲ್ಲಿ ರಂಗಾಯಣ ನಿರ್ದೇಶಕರಾದ ಅಡ್ಡಂಡ ಕಾರ್ಯಪ್ಪ ಅವರು ರಂಗಾಯಣದ ಮೂಲ ಆದರ್ಶಗಳಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುತ್ತಿದ್ದಾರೆ. ರಂಗಾಯಣ ರಾಜಕೀಯದಿಂದ ಮುಕ್ತವಾದ ಒಂದು ಸ್ವಾಯತ್ತ ಸಾಂಸ್ಕೃತಿಕ ಸಂಸ್ಥೆಯಾಗಿದ್ದು, ಯಾವುದೇ ರೀತಿಯ ರಾಜಕೀಯ ಹಸ್ತಕ್ಷೇಪ ರಂಗಾಯಣದ ಆಡಳಿತ ನಿರ್ವಹಣೆಯಲ್ಲಿ ಸಲ್ಲದು. ಅಡ್ಡಂಡ ಕಾರ್ಯಪ್ಪ ಅವರು ನೇರವಾಗಿಯೇ ತಾವು ರಾಜಕೀಯ ಪಕ್ಷದ ಪ್ರತಿನಿಧಿಯಂತೆ ವರ್ತಿಸುತ್ತಿದ್ದು, ರಂಗಾಯಣದ ನಿರ್ದೇಶಕರಾಗಿ ತಮ್ಮ ಜವಾಬ್ದಾರಿಯನ್ನು ಮರೆತಂತೆ ನಡೆದುಕೊಳ್ಳುತ್ತಿರುವುದನ್ನು ನಾವು ಖಂಡಿಸುತ್ತೇವೆ. ರಂಗಾಯಣದ ಕಿರಿಯ ಕಲಾವಿದರನ್ನು ಬೆದರಿಸುವ ಮೂಲಕ ಅಡ್ಡಂಡ ಕಾರ್ಯಪ್ಪ ಅವರು ಸರ್ವಾಧಿಕಾರಿ ಧೋರಣೆಯನ್ನು ತೋರುತ್ತಿರುವುದನ್ನು ನಾವು ಖಂಡಿಸುತ್ತೇವೆ.

ತನ್ನ ಮೂರು ದಶಕಗಳ ಇತಿಹಾಸದಲ್ಲಿ ರಂಗಾಯಣವನ್ನು ಕಟ್ಟಲು ರಾಜ್ಯದ ಹಲವಾರು ರಂಗಕರ್ಮಿಗಳು, ಸಾಹಿತಿಗಳು, ಚಿಂತಕರು ಶ್ರಮಿಸಿದ್ದು, ಯಾವುದೇ ರೀತಿಯ ರಾಜಕೀಯ ಸೋಂಕು ಇಲ್ಲದೆಯೇ ನಡೆದುಬಂದಿದೆ. ಬಹುರೂಪಿ ನಾಟಕೋತ್ಸವದ ಉದ್ಘಾಟನೆ ಮತ್ತು ಸಮಾರೋಪದ ಅತಿಥಿಗಳಾಗಿ ಈವರೆಗೂ ಯಾವುದೇ ರಾಜಕೀಯ ವ್ಯಕ್ತಿಯನ್ನು ಆಹ್ವಾನಿಸಿದ ಉದಾಹರಣೆಗಳಿರುವುದಿಲ್ಲ. ಆದರೆ ಅಡ್ಡಂಡ ಕಾರ್ಯಪ್ಪ ತಮ್ಮ ವೈಯಕ್ತಿಕ ರಾಜಕೀಯ ನಿಲುವು ಮತ್ತು ಒಲವುಗಳನ್ನ ರಂಗಾಯಣಕ್ಕೂ ಎಳೆದುತಂದಿರುವುದು ಅಕ್ಷಮ್ಯ. ತಮ್ಮ ವ್ಯಕ್ತಿಗತ ರಾಜಕೀಯ-ಸೈದ್ದಾಂತಿಕ ನಿಲುಮೆಗಳನ್ನು ರಂಗಾಯಣದ ಚಟುವಟಿಕೆಗಳ ಮೇಲೆ ಹೇರುವುದನ್ನು ನಾವು ಖಂಡಿಸುತ್ತೇವೆ.

ಒಂದು ಸ್ವಾಯತ್ತ ಸಾಂಸ್ಕೃತಿಕ ಸಂಸ್ಥೆಯಾಗಿ ರಂಗಾಯಣ ಕನ್ನಡಿಗರ,, ಕನ್ನಡದ ಸೃಜನಶೀಲ ಕಲಾವಿದರ ಸ್ವತ್ತಾಗಿದ್ದು ಈ ಸಂಸ್ಥೆಯನ್ನು ದಾರಿತಪ್ಪಿಸುವಂತಹ ನೀತಿಗಳನ್ನು ಅನುಸರಿಸುತ್ತಿರುವ ಅಡ್ಡಂಡ ಕಾರ್ಯಪ್ಪ ಅವರನ್ನು ಕೂಡಲೇ ನಿರ್ದೇಶಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಈ ಮೂಲಕ ಒತ್ತಾಯಿಸುತ್ತೇವೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆಯನ್ನು ನಡೆಸುತ್ತೇವೆ. ರಂಗಾಯಣ ಕನ್ನಡಿಗರ ಆಸ್ತಿ ಇದರ ಸ್ವಾಯತ್ತತೆಯ ರಕ್ಷಣೆಗಾಗಿ ನಮ್ಮ ಹೋರಾಟವನ್ನು ತೀವ್ರಗೊಳಿಸುತ್ತೇವೆ.

ಇದಿಷ್ಟು ಪತ್ರದ ಪೂರ್ಣಾಂಶ

ಚಿಂತಕರಾದ ಪ.ಮಲ್ಲೇಶ್, ಕಾಳೇಗೌಡ ನಾಗವಾರ, ನಾ. ದಿವಾಕರ, ಕೆ.ಪಿ.ಸುರೇಶ್‌, ಎನ್.ಎಸ್.ಗೋಪಿನಾಥ್, ಮೈಮ್ ರಮೇಶ್, ಮಾಧವ ಖರೆ, ಕೆ.ಎಸ್.ಶಿವರಾಮು, ಭೋ.ಗ.ನಂದೀಶ್, ವಿ.ಪುರುಷೋತ್ತಮ, ರಾಜೇಶ್, ಡಾ.ವಿ.ಲಕ್ಷ್ಮೀನಾರಾಯಣ್, ರತಿರಾವ್, ಪ್ರೊ.ಪಂಡಿತಾರಾಧ್ಯ, ಜಿ.ಪಿ.ಬಸವರಾಜು, ಪ್ರೊ.ವಿ.ಎನ್.ಲಕ್ಷ್ಮೀನಾರಾಯಣ, ಆನಂದ, ಎಂ.ಎಫ್.ಖಲೀಂ, ಖಾದರ್ ಅಹಮದ್, ಜಗದೀಶ್ ಸೂರ್ಯ, ಲ.ಜಗನ್ನಾಥ್, ನ.ಶಿವಮೂರ್ತಿ, ಜನಾರ್ದನ (ಜನ್ನಿ), ಮಂಜು ಮಂಗಲ, ಕಾತ್ಯಾಯಿನಿ, ಕೆ.ಗೋಪಾಲ ಕೃಷ್ಣ, ಸ.ರ.ಸುದರ್ಶನ್‌‌ ಮತ್ತಿತ್ತರು ಶನಿವಾರ ಸಂಜೆ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದು, ಈ ಮೇಲಿನ ಪತ್ರವನ್ನು ಬರೆದಿದ್ದಾರೆ.


ಇದನ್ನೂ ಓದಿರಿ: ಸೂಲಿಬೆಲೆ ಹೇಳುವುದು ನಿಮಗೆ ಸುಳ್ಳಾಗಿರಬಹುದು, ನಮಗಲ್ಲ: ರಂಗಾಯಣ ನಿರ್ದೇಶಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...