Homeಮುಖಪುಟವಿಶ್ವ ಮಣ್ಣು ದಿನ-2021: ’ಮಣ್ಣನ್ನು ಲವಣಯುಕ್ತಗೊಳಿಸುವುದನ್ನು ನಿಲ್ಲಿಸಿ, ಮಣ್ಣಿನ ಉತ್ಪಾದಕತೆಯನ್ನು ಹೆಚ್ಚಿಸಿ’

ವಿಶ್ವ ಮಣ್ಣು ದಿನ-2021: ’ಮಣ್ಣನ್ನು ಲವಣಯುಕ್ತಗೊಳಿಸುವುದನ್ನು ನಿಲ್ಲಿಸಿ, ಮಣ್ಣಿನ ಉತ್ಪಾದಕತೆಯನ್ನು ಹೆಚ್ಚಿಸಿ’

- Advertisement -
- Advertisement -

ಇಂದು (ಡಿ.5) ವಿಶ್ವ ಮಣ್ಣು ದಿನ. ಮನುಷ್ಯದಿಯಾಗಿ ಪ್ರಾಣಿ, ಸಸ್ಯ ಸೇರಿ ಎಲ್ಲಾ ಜೀವಿಗಳ ಆಧಾರ ಮಣ್ಣು. ಈ ದಿನ ಮಣ್ಣಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಗುರಿ ಹೊಂದಲಾಗಿದೆ. ಮಣ್ಣಿನ ಸವಕಳಿಯನ್ನು ತಪ್ಪಿಸುವ, ಮಣ್ಣನ್ನು ಲವಣಯುಕ್ತಗೊಳಿಸುವುದನ್ನು ಬಿಡುವುದು ಸೇರಿದಂತೆ ಮಣ್ಣು ಸಂರಕ್ಷಣೆಯ ಮಹತ್ವವನ್ನು ತಿಳಿಸುವ ದಿನ ಇದಾಗಿದೆ.

ಈ ಮಣ್ಣು ದಿನವನ್ನು ಔಪಚಾರಿಕವಾಗಿ ಅನುಮೋದಿಸಿದ ಥಾಯ್ಲೆಂಡ್‌ನ ರಾಜ, ಕಿಂಗ್ ಭೂಮಿಬೋಲ್ ಅದುಲ್ಯಾ ದೇಜ್ ಅವರ ಜನ್ಮ ದಿನದಿಂದು ವಿಶ್ವ ಮಣ್ಣು ದಿನ ಆಚರಿಸಲಾಗುತ್ತದೆ. 2002 ರಲ್ಲಿ, ಅಂತರರಾಷ್ಟ್ರೀಯ ಮಣ್ಣು ವಿಜ್ಞಾನಗಳ ಒಕ್ಕೂಟ (IUSS) ಜಾಗತಿಕವಾಗಿ ಈ ದಿನವನ್ನು ಆಚರಿಸುವಂತೆ ಪ್ರಸ್ತಾಪಿಸಿತು. ಮಣ್ಣಿನ ಸವಕಳಿ, ಅದರ ಪರಿಣಾಮಗಳು ಮತ್ತು ಅದನ್ನು ತಡೆಯುವುದು ಹೇಗೆ ಎಂಬುದರ ಕುರಿತು ಅರಿವು ಮೂಡಿಸುವುದು ಇದರ ಉದ್ದೇಶವಾಗಿತ್ತು.

2013 ರಲ್ಲಿ, ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿ ಡಿಸೆಂಬರ್ 5, 2014ರಂದು ಮೊದಲ ಅಧಿಕೃತವಾಗಿ ಅಂತರರಾಷ್ಟ್ರೀಯ ವಿಶ್ವ ಮಣ್ಣಿನ ದಿನ ಆಚರಿಸುವುದಾಗಿ ಘೋಷಿಸಿತು. ಪ್ರತಿ ವರ್ಷ ಒಂದೊಂದು ಥೀಮ್‌ನೊಂದಿಗೆ ಈ ದಿನ ಆಚರಿಸಲಾಗುತ್ತದೆ.

ಇದನ್ನೂ ಓದಿ: ರೈತರ ಹೋರಾಟದ ಗೆಲುವು ಮುಂದಿನ ಸಂಘಟನೆಗೆ ಚಿಮ್ಮು ಹಲಗೆಯಾಗಲಿದೆ: ಶ್ರೀಪಾದ್ ಭಟ್

2021 ರ ವಿಶ್ವ ಮಣ್ಣಿನ ದಿನದ ಥೀಮ್ “ಮಣ್ಣನ್ನು ಲವಣಯುಕ್ತಗೊಳಿಸುವುದನ್ನು ನಿಲ್ಲಿಸಿ, ಮಣ್ಣಿನ ಉತ್ಪಾದಕತೆಯನ್ನು ಹೆಚ್ಚಿಸಿ” ಎಂಬುದು. ಮಣ್ಣಿನ ನಿರ್ವಹಣೆ ಮತ್ತು ಮಣ್ಣಿನ ಲವಣಾಂಶಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿಭಾಯಿಸುವ ಮೂಲಕ ಆರೋಗ್ಯಕರ ಪರಿಸರ ವ್ಯವಸ್ಥೆಗಳ ಪ್ರಾಮುಖ್ಯತೆಯ ಅರಿವನ್ನು ಉತ್ತೇಜಿಸುವುದು ಇದರ ಗುರಿಯಾಗಿದೆ. ಮಣ್ಣು ಲವಣಯುಕ್ತಗೊಳ್ಳುವುದರಿಂದ ಕೃಷಿ ಇಳುವರಿ ಕಡಿಮೆಯಾಗುತ್ತದೆ. ಮಣ್ಣು ಜವಳುಗೊಂಡು ಆಮ್ಲ ಮತ್ತು ಕ್ಷಾರಮಯವಾಗಿ  ಬೆಳೆಗಳ ಉತ್ಪಾದನೆ ಕುಂಠಿತವಾಗುತ್ತಿದೆ.

ವಿಶ್ವ ಮಣ್ಣಿನ ದಿನದ ಪ್ರಾಮುಖ್ಯತೆಯನ್ನು ವಿವರಿಸಲು, ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಮಣ್ಣಿನ ಮಹತ್ವ ತಿಳಿಸುವ ಹಲವು ವಿಡಿಯೋಗಳನ್ನು ಹಂಚಿಕೊಂಡಿದೆ. ಜಗತ್ತಿನ ಶೇ. 95 ರಷ್ಟು ಆಹಾರ ಮಣ್ಣಿನಿಂದಲೇ ದೊರಕುವುದು ಎಂಬುದನ್ನು ಒತ್ತಿ ತಿಳಿಸಿದೆ.

ಆರೋಗ್ಯಕರ ಮಣ್ಣಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಮಣ್ಣಿನ ಸಂಪನ್ಮೂಲಗಳ ದೀರ್ಘಕಾಲ ನಿರ್ವಹಣೆ ಮಾಡುವುದರ ಬಗ್ಗೆ ತಿಳಿಸಲು ವಿಶ್ವ ಮಣ್ಣಿನ ದಿನವನ್ನು ಆಚರಿಸಲಾಗುತ್ತದೆ. ಜೊತೆಗೆ ಮಣ್ಣಿನ ಸವಕಳಿ, ರಾಸಾಯನಿಕಗಳ ಬಳಕೆ, ಲವಣಯುಕ್ತಗೊಳ್ಳುವುದು, ಮಣ್ಣಿಗೆ ಪ್ಲಾಸ್ಟಿಕ್ ಸೇರುವುದು ಸೇರಿದಂತೆ ಹಲವು ಸಮಸ್ಯೆಗಳತ್ತ ಎಲ್ಲರ ಗಮನ ಸೆಳೆಯುವ ಗುರಿಯನ್ನು ಈ ದಿನ ಹೊಂದಿದೆ.

Image


ಇದನ್ನೂ ಓದಿ: ನಮ್ಮ ಕೃಷಿಯಿಂದಾಗಿ ಕೋಟಿಗಟ್ಟಲೆ ಟನ್ ಮಣ್ಣು ಅರಬ್ಬೀ ಸಮುದ್ರ ಸೇರ್ತಾ ಇದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...