Homeಮುಖಪುಟಜವಾದ್ ಚಂಡಮಾರುತ: ಪಶ್ಚಿಮ ಬಂಗಾಳದ ಹಲವು ಭಾಗಗಳಲ್ಲಿ ಭಾರಿ ಮಳೆ, NDRF ತಂಡಗಳ ನಿಯೋಜನೆ

ಜವಾದ್ ಚಂಡಮಾರುತ: ಪಶ್ಚಿಮ ಬಂಗಾಳದ ಹಲವು ಭಾಗಗಳಲ್ಲಿ ಭಾರಿ ಮಳೆ, NDRF ತಂಡಗಳ ನಿಯೋಜನೆ

- Advertisement -
- Advertisement -

ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಜವಾದ್ ಚಂಡಮಾರುತ ಪೂರ್ವ ಕರಾವಳಿಗೆ ಅಪ್ಪಳಿಸಿದ್ದು, ಪಶ್ಚಿಮ ಬಂಗಾಳದ ದಕ್ಷಿಣ ಭಾಗಗಳು ಮತ್ತು ಕೋಲ್ಕತ್ತಾದಲ್ಲಿ ಭಾರಿ ಮಳೆಗೆ ಕಾರಣವಾಗಿದೆ. ಪಶ್ವಿಮ ಬಂಗಾಳ ಸರ್ಕಾರ ಹೂಗ್ಲಿ ನದಿಯಲ್ಲಿ ದೋಣಿ ಸೇವೆಗಳನ್ನು ನಿಲ್ಲಿಸಿದೆ. ಜೊತೆಗೆ ಸಮುದ್ರತೀರದ ರೆಸಾರ್ಟ್‌ಗಳಿಗೆ ಭೇಟಿ ನೀಡದಂತೆ ಪ್ರವಾಸಿಗರಿಗೆ ಮನವಿ ಮಾಡಿದೆ.

” ಚಂಡಮಾರುತ ಉತ್ತರ-ಈಶಾನ್ಯಕ್ಕೆ ಒಡಿಶಾ ಕರಾವಳಿಯುದ್ದಕ್ಕೂ ಪಶ್ಚಿಮ ಬಂಗಾಳದ ಕಡೆಗೆ ಚಲಿಸುವ ಸಾಧ್ಯತೆಯಿದೆ. ಕೋಲ್ಕತ್ತಾ, ಹೌರಾ, ಉತ್ತರ ಮತ್ತು ದಕ್ಷಿಣ 24 ಪರಗಣಗಳು, ಪುರ್ಬಾ ಮತ್ತು ಪಶ್ಚಿಮ ಮೇದಿನಿಪುರ್‌ನಲ್ಲಿ ಮಳೆಯಾಗಿದೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ದಕ್ಷಿಣ 24 ಪರಗಣಗಳು ಮತ್ತು ಪುರ್ಬಾ ಮೇದಿನಿಪುರ ಜಿಲ್ಲೆಗಳ ಕರಾವಳಿ ಪ್ರದೇಶಗಳು ಮತ್ತು ಪುರ್ಬಾ ಬರ್ಧಮಾನ್‌ನ ಕೆಲವು ಭಾಗಗಳು ಸೇರಿದಂತೆ ದಕ್ಷಿಣ ಬಂಗಾಳದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ವಾರಾಂತ್ಯದಲ್ಲಿ ಸಮುದ್ರ ತೀರದ ರೆಸಾರ್ಟ್‌ಗಳಾದ ದಿಘಾ, ಮಂದರ್‌ಮಣಿ, ಬಕ್ಖಾಲಿ, ಫ್ರೇಜರ್‌ಗಂಜ್ ಮತ್ತು ಇತರ ಕರಾವಳಿ ಪ್ರದೇಶಗಳಿಗೆ ಭೇಟಿ ನೀಡದಂತೆ ರಾಜ್ಯ ಸರ್ಕಾರ ಪ್ರವಾಸಿಗರಲ್ಲಿ ಮನವಿ ಮಾಡಿದೆ. ಬಹುತೇಕ ಎಲ್ಲಾ ಮೀನುಗಾರರು ಕಾಕದ್ವೀಪ್, ದಿಘಾ ಮತ್ತು ಇತರ ಕರಾವಳಿ ಪ್ರದೇಶಗಳಿಗೆ ವಾಪಸ್ ಮರಳಿದ್ದಾರೆ.

ಇದನ್ನೂ ಓದಿ: ಜವಾದ್ ಚಂಡಮಾರುತ: ಒಡಿಶಾ, ಆಂಧ್ರದ ಕರಾವಳಿಯಲ್ಲಿ ಸ್ಥಳಾಂತರ ಪ್ರಕ್ರಿಯೆ ಆರಂಭ

ಪಶ್ಚಿಮ ಬಂಗಾಳ ಸರ್ಕಾರವು ದಕ್ಷಿಣ 24 ಪರಗಣಗಳು ಮತ್ತು ಪುರ್ಬಾ ಮೇದಿನಿಪುರದ ಕರಾವಳಿ ಪ್ರದೇಶಗಳಿಂದ ಸುಮಾರು 17,900 ಜನರನ್ನು ಬೇರೆಡೆಗೆ ಸ್ಥಳಾಂತರಿಸಿದ್ದು, ಎರಡು ಜಿಲ್ಲೆಗಳಲ್ಲಿ 48 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ತುರ್ತು ಪರಿಸ್ಥಿತಿಯನ್ನು ಎದುರಿಸಲು ಆಡಳಿತವು 115 ವಿವಿಧೋದ್ದೇಶ ಸೈಕ್ಲೋನ್ ಶೆಲ್ಟರ್‌ಗಳನ್ನು ಮತ್ತು 135 ಹೆಚ್ಚುವರಿ ತಾತ್ಕಾಲಿಕ ಪರಿಹಾರ ಆಶ್ರಯಗಳನ್ನು ತೆರೆದಿದೆ” ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಇನ್ನೆರಡು ದಿನಗಳಲ್ಲಿ ಭಾರೀ ಮಳೆಯಾಗಲಿದ್ದು, ಯಾವುದೇ ಸಮಸ್ಯೆ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಲ್ಲಾ ಸಿಬ್ಬಂದಿಯ ವಾರದ ರಜೆ ಹಾಗೂ ಇತರೆ ರಜೆಗಳನ್ನು ರದ್ದುಗೊಳಿಸಲಾಗಿದೆ ಎಂದಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಹತ್ತೊಂಬತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ನಿಯೋಜಿಸಲಾಗಿದೆ. ರಾಜ್ಯ ವಿದ್ಯುತ್ ಮತ್ತು ಲೋಕೋಪಯೋಗಿ ಇಲಾಖೆಗಳು ಮತ್ತು ರಾಜ್ಯ ವಿದ್ಯುತ್ ವಿತರಣಾ ಕಂಪನಿಯ (WBSEDCL) ತಂಡಗಳನ್ನು ನಿರ್ಣಾಯಕ ಹಂತಗಳಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದ್ದು, ಮಾಹಿತಿ ಪಡೆಯುತ್ತಿದ್ದಾರೆ. ಮುನ್ಸಿಪಲ್ ಸಂಸ್ಥೆಗಳ ಅಧಿಕಾರಿಗಳು ಎಲ್ಲ ಎಚ್ಚರಿಕೆ ತೆಗೆದುಕೊಳ್ಳುತ್ತಿದ್ದಾರೆ ಎಂದು ರಾಜ್ಯ ಸಚಿವ ಫಿರ್ಹಾದ್ ಹಕೀಮ್ ಹೇಳಿದ್ದಾರೆ.


ಇದನ್ನೂ ಓದಿ: ಗುಲಾಬ್ ಚಂಡಮಾರುತ: ಆಂಧ್ರ, ಒಡಿಶಾದಲ್ಲಿ ಭಾರಿ ಕಟ್ಟೆಚ್ಚರ, ರಾಜ್ಯದಲ್ಲಿ 2 ದಿನ ಮಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...