Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಬ್ರಿಟನ್ ರಾಣಿಗಿಂತ ಸೋನಿಯಾ ಶ್ರೀಮಂತೆ ಎಂಬುದು ಸುಳ್ಳು ಸುದ್ದಿ

ಫ್ಯಾಕ್ಟ್‌ಚೆಕ್: ಬ್ರಿಟನ್ ರಾಣಿಗಿಂತ ಸೋನಿಯಾ ಶ್ರೀಮಂತೆ ಎಂಬುದು ಸುಳ್ಳು ಸುದ್ದಿ

- Advertisement -
- Advertisement -

ಬ್ರಿಟನ್ ರಾಣಿಗಿಂತ ಸೋನಿಯಾ ಗಾಂಧಿ ಶ್ರೀಮಂತೆ ಎನ್ನುವ 2013ರ ಹಳೆಯ ಸುಳ್ಳು ಸುದ್ದಿಯೊಂದು ಇಂದಿಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇದೆ. ಟೈಮ್ಸ್ ಆಫ್ ಇಂಡಿಯಾ, ಉದಯವಾಣಿ, ವಿಜಯವಾಣಿ, ಹಫಿಂಗ್ಟನ್‌ ಪೋಸ್ಟ್‌ ಪತ್ರಿಕೆಗಳು ಪರಿಶೀಲಿಸದೆ ಸುಳ್ಳು ಸುದ್ದಿ ಪ್ರಕಟಿಸಿದ್ದರಿಂದ ಅದು ಇಂದಿಗೂ ಸೋನಿಯಾ ಗಾಂಧಿ ವಿರೋಧಿಗಳಿಂದಾಗಿ ಷೇರ್ ಆಗುತ್ತಲೇ ಇದೆ.

ತೀರಾ ಇತ್ತೀಚಿನವರೆಗೆ ಫೇಸ್‌ಬುಕ್‌ ನಲ್ಲಿ ನಿಲುಮೆ ಎಂಬ ಬಲಪಂಥೀಯರ ಗುಂಪಿನಲ್ಲಿ ಬಸವ ರತ್ಕಲ್ ಎಂಬುವವರು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ಆ ಸುಳ್ಳು ವರದಿಯ ಪತ್ರಿಕಾ ತುಣುಕನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಸೋನಿಯಾ ಗಾಂಧಿ ಆಸ್ತಿ 12,000 ಕೋಟಿ ಎಂದು ವರದಿಯಾಗಿದೆ. 50ಕ್ಕೂ ಹೆಚ್ಚು ಜನರು ಆ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಇದೇ ಸುಳ್ಳು ಸುದ್ದಿಯನ್ನು ಈ ಹಿಂದೆ ಬಿಜೆಪಿ ಮುಖಂಡರಾದ ಅಶ್ವಿನಿ ಉಪಾಧ್ಯಾಯ, ರೈಲ್ವೆ ಮಂತ್ರಿ ಪಿಯೂಶ್ ಗೊಯಲ್ ಕಚೇರಿ, ನರೇಂದ್ರ ಮೋದಿ ಬೆಂಬಲಿಗರು ಕರ್ನಾಟಕ ಪೇಜ್‌ಗಳಲ್ಲಿ ಹಂಚಿಕೊಳ್ಳಲಾಗಿತ್ತು.

ಕರ್ನಾಟಕ ಫೇಕ್ ನ್ಯೂಸ್ ವೆಬ್‌ಸೈಟ್ ಪೋಸ್ಟ್ ಕಾರ್ಡ್ ಕನ್ನಡ ಸೋನಿಯಾಗಾಂಧಿ ವಿಶ್ವದ ನಾಲ್ಕನೆ ಶ್ರೀಮಂತ ವ್ಯಕ್ತಿ/ರಾಜಕಾರಣಿ ಎಂದು ಸುಳ್ಳು ಹರಡಿದ್ದರು.

ವಾಸ್ತವವೇನು?

2021 ರ ʼಪೋರ್ಬ್ಸ್‌ʼ ಸಂಸ್ಥೆ ಬಿಡುಗಡೆ ಮಾಡಿದ ಪ್ರಪಂಚದ ಬಿಲಿಯನೇರ್‌ಗಳ ಪಟ್ಟಿಯಲ್ಲಿ ಸೋನಿಯಾಗಾಂಧಿ  ಹೆಸರು ಇದೆಯೆ ಎಂದು ಹುಡುಕಿದಾಗ, ಆ ಪಟ್ಟಿಯಲ್ಲಿ ಅವರು ಇಲ್ಲವೆಂದು ತಿಳಿದುಬಂದಿದೆ. ಇಂಡಿಯಾಗೆ ಸಂಬಂಧಿಸಿದಂತೆ ಮುಖೇಶ್ ಅಂಬಾನಿ 10ನೇ ಸ್ಥಾನದಲ್ಲಿ ಇದ್ದಾರೆ. ಬಿಲಿಯನರ್‌ಗಳಿಗೆ ಸಂಬಂಧಿಸಿದ ರಿಯಲ್‌ –ಟೈಮ್‌ ಪಟ್ಟಿಯನ್ನು ಇಲ್ಲಿ ನೋಡಬಹುದು.

2019 ರ ಲೋಕಸಭಾ ಚುನಾವಣೆಯ ಅಫಿಡವಿಡಟ್‌ನಲ್ಲಿ ತನ್ನ ಆಸ್ತಿಗಳ ಬೆಲೆ ಸುಮಾರು 11.82 ಕೋಟಿ ರೂಪಾಯಿಗಳೆಂದು ಸೋನಿಯಾಗಾಂಧಿಯವರು ಘೋಷಿಸಿಕೊಂಡಿದ್ದಾರೆ.

ತಪ್ಪೊಪ್ಪಿಕೊಂಡ ವೆಬ್‌ಸೈಟ್‌ಗಳು

ಟೈಮ್ಸ್ ಆಫ್ ಇಂಡಿಯಾ ಮತ್ತು ಹಫಿಂಗ್ಟನ್‌ ಪೋಸ್ಟ್‌ ಪತ್ರಿಕೆಗಳು ಪರಿಶೀಲಿಸದೆ ಸುಳ್ಳು ಸುದ್ದಿ ಪ್ರಕಟಿಸಿದ್ದವು. ಆದರೆ ಜಗತ್ತಿನಲ್ಲಿನ ಸಿರಿವಂತರಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಒಬ್ಬರು ಎಂದು ಹೇಳುತ್ತಾ, ʼಬಿಜೆನೆಸ್‌ ಇನ್ಸೈಡರ್‌ʼ ( ಸೋನಿಯಾ -4ನೇ ಸ್ಥಾನ) ಮತ್ತು ʼಹಾಫಿಂಗ್ಟನ್‌ ಪೋಸ್ಟ್‌ʼನವರು  ಈ ಹಿಂದೆ ಲೇಖನ ಪ್ರಕಟಿಸಿದ್ದರು. ಆದರೆ, ʼಬಿಜೆನೆಸ್‌ ಇನ್ಸೈಡರ್‌ʼನವರು ಸೋನಿಯಾಗೆ  ಸಂಬಂಧಿಸಿದಂತೆ ಡೇಟಾವನ್ನು ನಂಬಲಾರ್ಹ ವೆಬ್ಸೈಟ್‌ನಿಂದ ತೆಗೆದುಕೊಂಡಿಲ್ಲವೆಂದು ವರದಿಯನ್ನು ಡಿಲೀಟ್ ಮಾಡಿ ಕ್ಷಮೆ ಕೇಳಿದರು. ʼಹಾಫಿಂಗ್ಟನ್‌ ಪೋಸ್ಟ್‌ ನವರು ಸೋನಿಯಾ ಗಾಂಧಿ ಹೆಸರನ್ನು ಪಟ್ಟಿಯಿಂದ ತೆದೆದುಹಾಕಿ, ತಾವು ಸೋನಿಯಾ ಗಾಂಧಿಯವರ ಆಸ್ತಿಗಳ ಬೆಲೆಯನ್ನು ಪರಿಶೀಲಿಸಲು ಆಗುವುದಿಲ್ಲವೆಂದು ವಿವರಣೆ ನೀಡಿದ್ದಾರೆ.

ತದನಂತರ ಟೈಮ್ಸ್ ಆಫ್ ಇಂಡಿಯಾ ಸೇರಿ ಎಲ್ಲರೂ ತಮ್ಮ ಸ್ಟೋರಿಗಳನ್ನು ಡಿಲೀಟ್ ಮಾಡಿದರು. ಆದರೆ ಕನ್ನಡದ ಪತ್ರಿಕೆಗಳು ಪ್ರಿಂಟ್ ಮಾಡಿದ್ದರಿಂದ ಇಂದಿಗೂ ಆ ಪತ್ರಿಕಾ ತುಣುಕುಗಳು ಹರಿದಾಡುತ್ತಲೇ ಇವೆ. ಸೋನಿಯಾ ಗಾಂಧಿಯವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲು ಅವರ ರಾಜಕೀಯ ವಿರೋಧಿಗಳು ಈ ರೀತಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂಬುದು ಮಾತ್ರ ಸತ್ಯವಾಗಿದೆ.


ಇದನ್ನೂ ಓದಿ; Fact Check: ಸೋನಿಯಾ ಗಾಂಧಿ 4ನೇ ಶ್ರೀಮಂತ ಮಹಿಳಾ ರಾಜಕಾರಣಿ ಅಲ್ಲ. ಆದರೂ ಸುಳ್ಳು ಹರಡಿದ ಪೋಸ್ಟ್‌ ಕಾರ್ಡ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...