Homeಕರ್ನಾಟಕದಕ್ಷಿಣ ಕನ್ನಡ: ಯುವಕರ ಮೇಲೆ ತಲವಾರ್‌‌ ದಾಳಿ; ಐವರಿಗೆ ಗಾಯ

ದಕ್ಷಿಣ ಕನ್ನಡ: ಯುವಕರ ಮೇಲೆ ತಲವಾರ್‌‌ ದಾಳಿ; ಐವರಿಗೆ ಗಾಯ

- Advertisement -
- Advertisement -

ಮಂಗಳೂರು ಸಮೀಪದ ಇಳಂತಿಲದಲ್ಲಿ ಮುಸ್ಲಿಂ ಯುವಕರ ಮೇಲೆ ತಲವಾರ್‌ ಹಾಗೂ ತ್ರಿಶೂಲದಿಂದ ದಾಳಿ ಮಾಡಲಾಗಿದೆ. ಗಾಯಗೊಂಡ ಐವರು ಯುವಕರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಝಕಾರಿಯ ಇಳಂತಿಲ, ಸಿದ್ಧೀಕ್‌, ಅಯೂಬ್‌, ಫಯಾಝ್‌‌, ಹಫೀಜ್‌ ಎಂಬವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ದಾಳಿಗೆ ಕಾರಣವೇನೆಂದು ತಿಳಿದು ಬಂದಿಲ್ಲ. “ಸಂಘ ಪರಿವಾರದಲ್ಲಿ ಗುರುತಿಸಿಕೊಂಡಿರುವ ಜಯರಾಮ್‌ ಮತ್ತು ಸಂಗಡಿಗರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ” ಎಂದು ಪ್ರಸ್ತುತ.ಕಾಂ ವರದಿ ಮಾಡಿದೆ.

ಇಳಂತಿಲ ಪ್ರದೇಶದಲ್ಲಿ ಇದ್ದ ಹಫೀಜ್ ಮತ್ತು ಫಯಾಝ್‌ ಮೇಲೆ ಮೊದಲು ದಾಳಿ ನಡೆಸಲಾಗಿದೆ. ಇವರಿಬ್ಬರು ತಪ್ಪಿಸಿಕೊಂಡ ಬಳಿಕ ಝಕಾರಿಯಾ, ಸಿದ್ದೀಕ್ ಮತ್ತು ಅಯೂಬ್‌ ಮೇಲೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಅಯೂಬ್‌ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

“ಇಲ್ಲಿನ ಅಂಗಡಿಯೊಂದರ ಬದಿಯಲ್ಲಿ ಭಾನುವಾರ 7 ಗಂಟೆಯ ಸುಮಾರಿಗೆ ಫಯಾಜ್‌ ಮತ್ತು ಅಫೀಝ್‌ ಕುಳಿತುಕೊಂಡಿದ್ದರು. ಈ ವೇಳೆ ಅಲ್ಲಿಗೆ ಬಂದ 4-5 ಮಂದಿಯ ತಂಡ ಏಕಾಏಕಿ ತಲವಾರು ದಾಳಿ ನಡೆಸಿದ್ದಾರೆ. ನಂತರದ ಬೆಳವಣಿಗೆಯಲ್ಲಿ ರಾತ್ರಿ 8.30ರ ವೇಳೆಗೆ 30-40 ಮಂದಿ ಬೈಕ್‌ಗಳಲ್ಲಿ ಬಂದಿದ್ದು ಅಂಡತಡ್ಕದ ಅಂಗಡಿಯಲ್ಲಿ ಕುಳಿತುಕೊಂಡಿದ್ದ ಸಿದ್ಧೀಕ್‌, ಅಯೂಬ್‌, ಝಕಾರಿಯ ಎಂಬುವವರ ಮೇಲೆ ತಲವಾರು ದಾಳಿ ನಡೆಸಿದ್ದಾರೆ” ಎಂದು ವಾರ್ತಾಭಾರತಿ ವರದಿ ಮಾಡಿದೆ.

ದಕ್ಷಿಣ ಕನ್ನಡದ ಹೆಚ್ಚುತ್ತಿದೆ ಕೋಮುದ್ವೇಷ

ಪೀಪಲ್ಸ್‌ ಯೂನಿಯನ್ ಫಾರ್‌ ಲಿಬರ್ಟೀಸ್‌ ಕರ್ನಾಟಕ (ಪಿಯುಸಿಎಲ್‌-ಕ) ಆಲ್‌ ಇಂಡಿಯಾ ಲಾಯರ್ಸ್ ಅಸೋಸಿಯೇಷನ್‌ ಫಾರ್‌ ಜಸ್ಟಿಸ್‌ (ಎಐಎಲ್‌ಎಜೆ), ಆಲ್‌ ಇಂಡಿಯಾ ಪೀಪಲ್ಸ್ ಫೋರಮ್‌‌ (ಎಐಪಿಎಫ್‌) ಮತ್ತು ಗೌರಿ ಲಂಕೇಶ್‌ ನ್ಯೂಸ್‌.ಕಾಂ (gaurilankeshnews.com) ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಕೋಮುದ್ವೇಷ ಅಪರಾಧ’ಗಳ ಕುರಿತು ಆತಂಕ ವ್ಯಕ್ತಪಡಿಸಿದೆ.

ಕರಾವಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯರವರು ಮತೀಯ ಗೂಂಡಾಗಿರಿಯನ್ನು ಬಹಿರಂಗವಾಗಿ ಸಮರ್ಥಿಸಿ ಹೇಳಿಕೆ ನೀಡಿದ್ದನ್ನು, ಸಾಮಾಜಿಕ ಸಂಘಟನೆಗಳು, ನಾಗರಿಕರು, ವಿದ್ಯಾರ್ಥಿಗಳು, ವಕೀಲರು ಮತ್ತು ವಿರೋಧ ಪಕ್ಷದ ನಾಯಕರುಗಳು ತೀವ್ರವಾಗಿ ವಿರೋಧಿಸಿದ್ದರು. ಈ ಹಿನ್ನೆಲೆಯಲ್ಲಿ ಎಂತಹ ಗಂಭೀರ ಪರಿಸ್ಥಿತಿಯಲ್ಲಿ ನಾವು ಇದ್ದೇವೆ ಎನ್ನುವುದನ್ನು ಈ ವರದಿಯು ಉಲ್ಲೇಖಿಸುತ್ತದೆ.


ಇದನ್ನೂ ಓದಿರಿ: ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ


ಈ ವರದಿಯು ದಕ್ಷಿಣ ಕನ್ನಡದಲ್ಲಿ ಜನವರಿ 2021ರಿಂದ ಸೆಪ್ಟೆಂಬರ್‌ 2021ರವರೆಗೆ ನಡೆದ ಮತೀಯ ಗೂಂಡಾಗಿರಿ ಮತ್ತು ದ್ವೇಷದ ಅಪರಾಧಿಕ ಘಟನೆಗಳನ್ನು ವಿಶ್ಲೇಷಿಸಿದೆ. ಜೊತೆಗೆ ಆರು ವಿಭಿನ್ನ ಮಾದರಿಯ ಘಟನೆಗಳನ್ನು ಗುರುತಿಸುತ್ತದೆ. ಅವುಗಳೆಂದರೆ, 1. ಸಾಮಾಜಿಕ ಪ್ರತ್ಯೇಕತೆಯನ್ನು ಜಾರಿಗೊಳಿಸುವುದು 2. ಆತ್ಮೀಯ ಸಂಬಂಧಗಳನ್ನು ನಿಯಂತ್ರಿಸುವುದು. 3. ಆರ್ಥಿಕ ಸಾಮಾಜಿಕ ಬಹಿಷ್ಕಾರ. 4. ಗೋವಿನ ಹೆಸರಲ್ಲಿ ದಾಳಿಗಳು. 5. ಧಾರ್ಮಿಕ ಸ್ವಾತಂತ್ರ್ಯವನ್ನು ನಿಗ್ರಹಿಸುವುದು. 6. ದ್ವೇಷ ಹರಡುವ ಭಾಷಣಗಳನ್ನು ಮಾಡುವುದು.

ಕೋಮುದ್ವೇಷವನ್ನು ತಡೆಯುವಲ್ಲಿ ಪೊಲೀಸರ ಪಾತ್ರವನ್ನು ಈ ವರದಿ ಉಲ್ಲೇಖಿಸಿದೆ. ಜೊತೆಗೆ ಪೊಲೀಸರ ತಪ್ಪುಗಳನ್ನು ವರದಿ ಉಲ್ಲೇಖಿಸಿದೆ. ಅಂತರ ಧರ್ಮೀಯ ಸಂಬಂಧಗಳಿಗೆ ತೊಂದರೆಯುಂಟುಮಾಡಿದ ಹೆಚ್ಚಿನ ಸಂಖ್ಯೆಯ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿಲ್ಲ. ಬದಲಾಗಿ ಅಂತರ ಧರ್ಮೀಯ ಸ್ನೇಹಿತರು ಅಥವಾ ದಂಪತಿಗಳನ್ನೇ ಪೊಲೀಸ್ ಠಾಣೆಗೆ ಕರೆಸಲಾಗುತ್ತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಒಂದೆಡೆ ಹಿಂಸಾಚಾರ ಎಸಗಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದರೂ ಪೊಲೀಸರು ಒಂದು ಹೆಜ್ಜೆ ಮುಂದೆ ಹೋಗಿ ಸಂತ್ರಸ್ತರನ್ನು ಠಾಣೆಗೆ ಕರೆದೊಯ್ದು ಪ್ರಶ್ನಿಸುವ ಮೂಲಕ ತಪ್ಪಿತಸ್ಥರೆಂದು ಪರಿಗಣಿಸುತ್ತಾರೆ. ಈ ಹಿನ್ನೆಲೆಯಲ್ಲಿ ಅಂತರ ಧರ್ಮೀಯ ಸಂಬಂಧಗಳನ್ನು ಬಲವಂತವಾಗಿ ಪ್ರತ್ಯೇಕಿಸುವ ಪ್ರಕ್ರಿಯೆಯಲ್ಲಿ ಪೊಲೀಸರು ಆರೋಪಿಗಳ ಮಿತ್ರರಾಗಿದ್ದಾರೆ ಎಂದು ವರದಿಯು ಆತಂಕ ವ್ಯಕ್ತಪಡಿಸಿದೆ.


ಇದನ್ನೂ ಓದಿರಿ: ಕೋಮುದ್ವೇಷ ಬಿತ್ತುವ ವರದಿಗಳಿಂದ ದೇಶಕ್ಕೆ ಕೆಟ್ಟ ಹೆಸರು: ಸುಪ್ರೀಂ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...