Homeಮುಖಪುಟನಾಗಾಲ್ಯಾಂಡ್ ಹತ್ಯಾಕಾಂಡ: ಈಶಾನ್ಯ ಭಾರತದಲ್ಲಿ AFSPA ರದ್ದತಿ ಹೋರಾಟಕ್ಕೆ ಮತ್ತಷ್ಟು ಧ್ವನಿ

ನಾಗಾಲ್ಯಾಂಡ್ ಹತ್ಯಾಕಾಂಡ: ಈಶಾನ್ಯ ಭಾರತದಲ್ಲಿ AFSPA ರದ್ದತಿ ಹೋರಾಟಕ್ಕೆ ಮತ್ತಷ್ಟು ಧ್ವನಿ

- Advertisement -
- Advertisement -

ನಾಗಾಲ್ಯಾಂಡ್‌ನಲ್ಲಿ ಭಾನುವಾರ ಭದ್ರತಾ ಪಡೆಗಳು 13 ನಾಗರಿಕರನ್ನು ಗುಂಡಿಕ್ಕಿ ಕೊಂದ ಘಟನೆಯ ನಂತರ, ಈಶಾನ್ಯ ಭಾರತದಿಂದ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ-1958(AFSPA) ಅನ್ನು ಹಿಂತೆಗೆದುಕೊಳ್ಳಬೇಕು ಎಂಬ ಹೋರಾಟದ ಧ್ವನಿಗೆ ಮತ್ತಷ್ಟು ಕಾವು ಹೆಚ್ಚಾಗಿದೆ. ನಾಗರಿಕ ಹಕ್ಕುಗಳ ಹೋರಾಟಗಾರರು ಮತ್ತು ಪ್ರದೇಶದ ರಾಜಕೀಯ ಮುಖಂಡರು “ಕಠಿಣ” ಕಾನೂನನ್ನು ಹಿಂತೆಗೆದುಕೊಳ್ಳಬೇಕೆಂದು ಹಲವಾರು ವರ್ಷಗಳಿಂದ ಒತ್ತಾಯಿಸುತ್ತಿದ್ದಾರೆ. ಈ ಕಾಯ್ದೆಯ ಅಡಿಯಲ್ಲಿ ಭದ್ರತಾ ಪಡೆಗಳು ಮಿತಿ ಮೀರಿ ನಡೆಯುತ್ತಿವೆ ಎಂದು ಅವರು ಆರೋಪ ಮಾಡುತ್ತಲೇ ಇದ್ದಾರೆ.

ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ (ಇಂಫಾಲ್ ಮುನ್ಸಿಪಲ್ ಕೌನ್ಸಿಲ್ ಪ್ರದೇಶವನ್ನು ಹೊರತುಪಡಿಸಿ), ಅರುಣಾಚಲ ಪ್ರದೇಶದ ಚಾಂಗ್ಲಾಂಗ್, ಲಾಂಗ್ಡಿಂಗ್ ಮತ್ತು ತಿರಾಪ್ ಜಿಲ್ಲೆಗಳು ಮತ್ತು ಅಸ್ಸಾಂ ಗಡಿಯಲ್ಲಿರುವ ಅರುಣಾಚಲ ಪ್ರದೇಶದ ಎಂಟು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ AFSPA ಜಾರಿಯಲ್ಲಿದೆ.

ಇದನ್ನೂ ಓದಿ:ನಾಗಾಲ್ಯಾಂಡ್: ದಂಗೆಕೋರರ ವಿರುದ್ಧದ ಕಾರ್ಯಚರಣೆಯಲ್ಲಿ 13 ಮಂದಿ ಗ್ರಾಮಸ್ಥರನ್ನು ಹತ್ಯೆಗೈದ ಸೇನೆ

ಈಶಾನ್ಯ ಜನರ ಕಲ್ಯಾಣ ಮತ್ತು ಯೋಗಕ್ಷೇಮದ ಬಗ್ಗೆ ಕಾಳಜಿ ಇದ್ದರೆ ಒಕ್ಕೂಟ ಸರ್ಕಾರವು ಈ ಕರಾಳ ಕಾನೂನನ್ನು ಹಿಂಪಡೆಯಬೇಕು ಎಂದು ಪ್ರದೇಶದ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ ಸಂಸ್ಥೆಯಾದ ಈಶಾನ್ಯ ವಿದ್ಯಾರ್ಥಿಗಳ ಸಂಘಟನೆ (ಎನ್‌ಇಎಸ್‌ಒ) ಹೇಳಿದೆ. “…ಇಲ್ಲದಿದ್ದರೆ ಈ ಕಾನೂನು ಪ್ರದೇಶದ ಜನರನ್ನು ಮತ್ತಷ್ಟು ದೂರವಿಡುತ್ತದೆ” ಎಂದು NESO ಅಧ್ಯಕ್ಷ ಸ್ಯಾಮ್ಯುಯೆಲ್ ಬಿ ಜಿರ್ವಾ ಹೇಳಿದ್ದಾರೆ.

“ನಾಗಾಲ್ಯಾಂಡ್‌ನ ಸೋಮದಲ್ಲಿ ನಡೆದ ಘಟನೆಯು, ಹಿಂಸಾಚಾರದ ವಿರುದ್ದದ ಹೋರಾಟದ ಹೆಸರಿನಲ್ಲಿ ಭದ್ರತಾ ಪಡೆಗಳು ಹಲವಾರು ಸಂದರ್ಭಗಳಲ್ಲಿ ಹತ್ಯಾಕಾಂಡ, ಅಮಾಯಕ ಗ್ರಾಮಸ್ಥರನ್ನು ಹಿಂಸಿಸಿ ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ ಈ ಹಿಂದಿನ ಭಯಾನಕ ನೆನಪುಗಳನ್ನು ಮರಳಿ ತರುತ್ತದೆ” ಎಂದು ಅವರು ಹೇಳಿದ್ದಾರೆ.

TIPRA ಪಕ್ಷದ ಅಧ್ಯಕ್ಷ ಪ್ರದ್ಯೋತ್ ದೇಬ್ ಬರ್ಮಾ, “ಘಟನೆಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಬೇಕು. ಜೊತೆಗೆ AFSPA ನಂತಹ ಕಾನೂನುಗಳನ್ನು ರದ್ದುಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಅಸ್ಸಾಂನ ರಾಜ್ಯಸಭಾ ಸದಸ್ಯ ಮತ್ತು ಹಿರಿಯ ಪತ್ರಕರ್ತ ಅಜಿತ್ ಕುಮಾರ್ ಭುಯಾನ್ ಮಾತನಾಡಿ, ಗ್ರಾಮಸ್ಥರ ಹತ್ಯೆಯು ಎಲ್ಲರ ಕಣ್ಣು ತೆರೆಸುವಂತಿರಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ:ತಮಿಳುನಾಡು ಸಂಸದನ ಮಾನಹಾನಿ: BJP ನಾಯಕನ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ

“ಇಂತಹ ಘಟನೆಗಳು ನಡೆಯಬಾರದು ಎಂದು ಕಠೋರವಾದ AFSPA ವಿರುದ್ಧ ನಾವು ನಿರಂತರವಾಗಿ ಪ್ರತಿಭಟಿಸುತ್ತಿದ್ದೇವೆ. ಇದು ಮೊದಲ ಘಟನೆಯಲ್ಲ, ಆದರೆ ಇದು ಕೊನೆಯದು ಎಂದು ನಾನು ಭಾವಿಸುತ್ತೇನೆ” ಎಂದು ಆಲ್ ಅಸ್ಸಾಂ ವಿದ್ಯಾರ್ಥಿಗಳ ಒಕ್ಕೂಟದ (ಎಎಎಸ್‌ಯು) ಮುಖ್ಯ ಸಲಹೆಗಾರ ಸಮುಜ್ಜಲ್ ಕುಮಾರ್ ಭಟ್ಟಾಚಾರ್ಯ ಹೇಳಿದ್ದಾರೆ. ಭದ್ರತಾ ಪಡೆಗಳ ನಡೆಯು ಕ್ಷಮಿಸಲಾಗದ ಮತ್ತು ಘೋರ ಅಪರಾಧವಾಗಿದೆ. ಈ ಘಟನೆಯು ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಸರ್ಕಾರಕ್ಕೆ ಇಷ್ಟವಿಲ್ಲದಿರುವುದನ್ನು ಬಹಿರಂಗಪಡಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ. ನಾಗರಿಕರ ರಕ್ಷಣೆಗಾಗಿ “ಕಠಿಣ ಮತ್ತು ಪ್ರಜಾಪ್ರಭುತ್ವ ವಿರೋಧಿ” AFSPA ಅನ್ನು ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ನಾಗಾಲ್ಯಾಂಡ್‌ನ ಮೋನ್ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳಿಂದ ಕನಿಷ್ಠ 13 ನಾಗರಿಕರನ್ನು ಹೊಡೆದುರುಳಿಸಲಾಗಿದೆ. ಇದರ ನಂತರ ನಡೆದ ಗಲಭೆಯಲ್ಲಿ ಒಬ್ಬ ಯೋಧ ಸಾವನ್ನಪ್ಪಿದ್ದಾರೆ. ಶನಿವಾರ ಸಂಜೆ ಕಲ್ಲಿದ್ದಲು ಗಣಿಯಿಂದ ಕೆಲವು ದಿನಗೂಲಿ ಕಾರ್ಮಿಕರು ಪಿಕಪ್ ವ್ಯಾನ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಓಟಿಂಗ್ ಮತ್ತು ತಿರು ಗ್ರಾಮಗಳ ನಡುವೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೇನೆಯು ನಾಗರಿಕರ ಹತ್ಯೆಯ ಕುರಿತು ನ್ಯಾಯಾಲಯದ ವಿಚಾರಣೆಗೆ ಭಾನುವಾರ ಆದೇಶಿಸಿದ್ದು, ಘಟನೆಯ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದೆ.

ಮ್ಯಾನ್ಮಾರ್‌ನ ಗಡಿಯಲ್ಲಿರುವ ಮೋನ್ ಜಿಲ್ಲೆಯ ಈ ಪ್ರದೇಶದಲ್ಲಿ ದಂಗೆಕೋರರ ಚಲನವಲನದ ಬಗ್ಗೆ “ವಿಶ್ವಾಸಾರ್ಹ” ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳಿಗೆ ತೀವ್ರ ಗಾಯಗಳಾಗಿವೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಲು ಸಾಧ್ಯವಿಲ್ಲ: ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...