Homeಮುಖಪುಟಬಾಬರಿ ಮಸೀದಿ ಧ್ವಂಸ ದಿನ: ರಾಮ್‌ ಕೆ ನಾಮ್ | ರಾಮನ ಹೆಸರಿನಲ್ಲಿ | In...

ಬಾಬರಿ ಮಸೀದಿ ಧ್ವಂಸ ದಿನ: ರಾಮ್‌ ಕೆ ನಾಮ್ | ರಾಮನ ಹೆಸರಿನಲ್ಲಿ | In the name of God | ಸಾಕ್ಷ್ಯಚಿತ್ರ ನೋಡಿ

ದೇಶದ ಕೋಮು ಸೌಹಾರ್ದವನ್ನು ಒಡೆಯಲು ಬಿಜೆಪಿ ಬೆಂಬಲಿತ ಸಂಘಟನೆಗಳು ಏನೆಲ್ಲಾ ಮಾಡಿತ್ತು ಎಂಬುವುದನ್ನು ಈ ಸಾಕ್ಷ್ಯಚಿತ್ರ ಶೋಧಿಸುತ್ತದೆ ಮತ್ತು ಅದನ್ನು ಹಿಂದಿ, ಬಂಗಾಳಿ ಮತ್ತು ಮಲಯಾಳಂ ಭಾಷೆಯಲ್ಲಿ ನೀವು ವೀಕ್ಷಿಸಬಹುದಾಗಿದೆ.

- Advertisement -
- Advertisement -

ಬಾಬರಿ ಮಸೀದಿ ಒಡೆದು ಇಂದಿಗೆ 29 ವರ್ಷಗಳಾಯಿತು. ಐತಿಹಾಸಿಕ ಮಸೀದಿ ಒಡೆಯುವುದರೊಂದಿಗೆ ದೇಶದ ಕೋಮು ಸೌಹಾರ್ದತೆಯನ್ನು ಕೂಡಾ ಒಡೆಯಲಾಯಿತು. ಮಸೀದಿ ಒಡೆದ ನಂತರ ದೇಶದಾದ್ಯಂತ ನಡೆದ ಕೋಮು ಗಲಭೆಯಲ್ಲಿ ಸುಮಾರು 2000 ಜನರು ಮೃತರಾದರು. ಇದೀಗ ಮಸೀದಿ ಒಡೆದ ಸ್ಥಳದಲ್ಲಿ ಬೇರೆಯೆ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ.

ಬಾಬರಿ ಮಸೀದಿ ಒಡೆಯಲು ಬೇಕಾಗಿ ಬಿಜೆಪಿ ಬೆಂಬಲಿತ ದುಷ್ಕರ್ಮಿಗಳ ಗುಂಪು ಏನೆಲ್ಲಾ ನಡೆಸಿತು ಎಂದು ಹಿರಿಯ ಚಲನಚಿತ್ರ ನಿರ್ಮಾಪಕ ಆನಂದ್ ಪಟವರ್ಧನ್‌ 1992 ರಲ್ಲಿ ‘ರಾಮ್‌ ಕೆ ನಾಮ್’(ರಾಮನ ಹೆಸರಿನಲ್ಲಿ) ಎಂಬ ಸಾಕ್ಷ್ಯಚಿತ್ರವನ್ನು ನಿರ್ಮಿಸಿದ್ದಾರೆ.

ಅಯೋಧ್ಯೆಯ ಬಾಬರಿ ಮಸೀದಿಯ ಸ್ಥಳದಲ್ಲಿ ರಾಮ ಮಂದಿರವನ್ನು ನಿರ್ಮಿಸಲು ಬಲಪಂಥೀಯ ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಎಚ್‌ಪಿ ನಡೆಸಿದ ಅಭಿಯಾನ ಮತ್ತು ಅದು ಪ್ರಚೋದಿಸಿದ ಕೋಮು ಹಿಂಸಾಚಾರವನ್ನು ಈ ಚಲನಚಿತ್ರವು ಪರಿಶೋಧಿಸುತ್ತದೆ. ರಾಮ್ ಕೆ ನಾಮ್ (ಇಂಗ್ಲಿಷ್: ಇನ್ ದಿ ನೇಮ್ ಆಫ್ ಗಾಡ್) ಭಾರತೀಯ ಚಲನಚಿತ್ರದಲ್ಲಿ ಒಂದು ಪ್ರಮುಖ ಮೈಲಿಗಲ್ಲಿನ ಚಿತ್ರವಾಗಿದೆ. ರಾಮ್ ಕೆ ನಾಮ್ ಬಿಡುಗಡೆಯಾದ ಒಂದೆರಡು ತಿಂಗಳ ನಂತರ, ವಿಎಚ್‌ಪಿ ಮತ್ತು ಇತರ ಆರೆಸ್ಸೆಸ್‌ ಮತ್ತು ಬಿಜೆಪಿ ಬೆಂಬಲಿತ ಗುಂಪುಗಳ ಕಾರ್ಯಕರ್ತರು 1992 ರಲ್ಲಿ ಬಾಬರಿ ಮಸೀದಿಯನ್ನು ಕೆಡವಿದರು.

ಈ ಚಿತ್ರವು ಆನಂದ್‌ ಪಟವರ್ಧನ್‌ಗೆ ವ್ಯಾಪಕ ಮನ್ನಣೆಯನ್ನು ತಂದುಕೊಟ್ಟಿತು ಮತ್ತು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆಯಿತು. ಈ ಪ್ರಸಿದ್ದ ಸಾಕ್ಷ್ಯಚಿತ್ರವನ್ನು ನಾನುಗೌರಿ.ಕಾಂ ಓದುಗರಿಗಾಗಿ ಇಲ್ಲಿ ನೀಡುತ್ತಿದ್ದೇವೆ. ಹಿಂದಿ, ಬಂಗಾಳಿ ಮತ್ತು ಮಲಯಾಳಂ ಭಾಷೆಯಲ್ಲಿ ನೀವು ಅದನ್ನು ವೀಕ್ಷಿಸಬಹುದಾಗಿದೆ.

ಹಿಂದಿ ಭಾಷೆಯಲ್ಲಿ ‘ರಾಮ್‌ ಕೆ ನಾಮ್‌’ ಚಿತ್ರ, ಇಂಗ್ಲಿಷ್‌ ಸಬ್‌ಟೈಟಲ್‌ನೊಂದಿಗೆ.

ಮಲಯಾಳಂ ಭಾಷೆಯಲ್ಲಿ ‘ರಾಮ್‌ ಕೆ ನಾಮ್‌’ ಚಿತ್ರ, ಮಳಯಾಳಂ ಸಬ್‌ಟೈಟಲ್‌ನೊಂದಿಗೆ. (ಈ ಮಲಯಾಳಂ ಆವೃತ್ತಿಯನ್ನು 2010 ರಲ್ಲಿ ದುರಂತ ಅಪಘಾತದಲ್ಲಿ ನಿಧನರಾದ ಖ್ಯಾತ ಚಲನಚಿತ್ರ ನಿರ್ಮಾಪಕ ಮತ್ತು ಹೋರಾಟಗಾರ ಸಿ.ಶರತ್ಚಂದ್ರನ್ ಅವರು ಮಾಡಿದ್ದಾರೆ)

ಬಂಗಾಳಿ ಭಾಷೆಯಲ್ಲಿ ‘ರಾಮ್‌ ಕೆ ನಾಮ್‌’ ಚಿತ್ರ, ಬಂಗಾಳಿ ಸಬ್‌ಟೈಟಲ್‌ನೊಂದಿಗೆ. (ಈ ಆವೃತ್ತಿಯನ್ನು ಕೊಂಕಣ್‌ ಸೇನ್‌ ಅವರು ಮಾಡಿದ್ದಾರೆ. ಸಬ್‌ಟೈಟಲ್‌ಗಳು ಕೆಲವು ದೋಷಗಳನ್ನು ಹೊಂದಿವೆ.)

ಹಿಂದಿ ಭಾಷೆಯಲ್ಲಿ ಇಂಗ್ಲಿಷ್‌ ಸಬ್‌ಟೈಟಲ್‌ನೊಂದಿಗೆ(ಸ್ಟಾಂಡ್‌ ಅಪ್‌ ಹಾಸ್ಯನಟ ಕುನಾಲ್‌ ಕಮ್ರಾ ಅವರ ಯೂಟ್ಯೂಬ್ ಚಾನೆಲ್‌ನಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...