Homeಮುಖಪುಟಬಾಬರಿ ಮಸೀದಿ ಧ್ವಂಸ ದಿನ: ರಾಮ್‌ ಕೆ ನಾಮ್ | ರಾಮನ ಹೆಸರಿನಲ್ಲಿ | In...

ಬಾಬರಿ ಮಸೀದಿ ಧ್ವಂಸ ದಿನ: ರಾಮ್‌ ಕೆ ನಾಮ್ | ರಾಮನ ಹೆಸರಿನಲ್ಲಿ | In the name of God | ಸಾಕ್ಷ್ಯಚಿತ್ರ ನೋಡಿ

ದೇಶದ ಕೋಮು ಸೌಹಾರ್ದವನ್ನು ಒಡೆಯಲು ಬಿಜೆಪಿ ಬೆಂಬಲಿತ ಸಂಘಟನೆಗಳು ಏನೆಲ್ಲಾ ಮಾಡಿತ್ತು ಎಂಬುವುದನ್ನು ಈ ಸಾಕ್ಷ್ಯಚಿತ್ರ ಶೋಧಿಸುತ್ತದೆ ಮತ್ತು ಅದನ್ನು ಹಿಂದಿ, ಬಂಗಾಳಿ ಮತ್ತು ಮಲಯಾಳಂ ಭಾಷೆಯಲ್ಲಿ ನೀವು ವೀಕ್ಷಿಸಬಹುದಾಗಿದೆ.

- Advertisement -
- Advertisement -

ಬಾಬರಿ ಮಸೀದಿ ಒಡೆದು ಇಂದಿಗೆ 29 ವರ್ಷಗಳಾಯಿತು. ಐತಿಹಾಸಿಕ ಮಸೀದಿ ಒಡೆಯುವುದರೊಂದಿಗೆ ದೇಶದ ಕೋಮು ಸೌಹಾರ್ದತೆಯನ್ನು ಕೂಡಾ ಒಡೆಯಲಾಯಿತು. ಮಸೀದಿ ಒಡೆದ ನಂತರ ದೇಶದಾದ್ಯಂತ ನಡೆದ ಕೋಮು ಗಲಭೆಯಲ್ಲಿ ಸುಮಾರು 2000 ಜನರು ಮೃತರಾದರು. ಇದೀಗ ಮಸೀದಿ ಒಡೆದ ಸ್ಥಳದಲ್ಲಿ ಬೇರೆಯೆ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ.

ಬಾಬರಿ ಮಸೀದಿ ಒಡೆಯಲು ಬೇಕಾಗಿ ಬಿಜೆಪಿ ಬೆಂಬಲಿತ ದುಷ್ಕರ್ಮಿಗಳ ಗುಂಪು ಏನೆಲ್ಲಾ ನಡೆಸಿತು ಎಂದು ಹಿರಿಯ ಚಲನಚಿತ್ರ ನಿರ್ಮಾಪಕ ಆನಂದ್ ಪಟವರ್ಧನ್‌ 1992 ರಲ್ಲಿ ‘ರಾಮ್‌ ಕೆ ನಾಮ್’(ರಾಮನ ಹೆಸರಿನಲ್ಲಿ) ಎಂಬ ಸಾಕ್ಷ್ಯಚಿತ್ರವನ್ನು ನಿರ್ಮಿಸಿದ್ದಾರೆ.

ಅಯೋಧ್ಯೆಯ ಬಾಬರಿ ಮಸೀದಿಯ ಸ್ಥಳದಲ್ಲಿ ರಾಮ ಮಂದಿರವನ್ನು ನಿರ್ಮಿಸಲು ಬಲಪಂಥೀಯ ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಎಚ್‌ಪಿ ನಡೆಸಿದ ಅಭಿಯಾನ ಮತ್ತು ಅದು ಪ್ರಚೋದಿಸಿದ ಕೋಮು ಹಿಂಸಾಚಾರವನ್ನು ಈ ಚಲನಚಿತ್ರವು ಪರಿಶೋಧಿಸುತ್ತದೆ. ರಾಮ್ ಕೆ ನಾಮ್ (ಇಂಗ್ಲಿಷ್: ಇನ್ ದಿ ನೇಮ್ ಆಫ್ ಗಾಡ್) ಭಾರತೀಯ ಚಲನಚಿತ್ರದಲ್ಲಿ ಒಂದು ಪ್ರಮುಖ ಮೈಲಿಗಲ್ಲಿನ ಚಿತ್ರವಾಗಿದೆ. ರಾಮ್ ಕೆ ನಾಮ್ ಬಿಡುಗಡೆಯಾದ ಒಂದೆರಡು ತಿಂಗಳ ನಂತರ, ವಿಎಚ್‌ಪಿ ಮತ್ತು ಇತರ ಆರೆಸ್ಸೆಸ್‌ ಮತ್ತು ಬಿಜೆಪಿ ಬೆಂಬಲಿತ ಗುಂಪುಗಳ ಕಾರ್ಯಕರ್ತರು 1992 ರಲ್ಲಿ ಬಾಬರಿ ಮಸೀದಿಯನ್ನು ಕೆಡವಿದರು.

ಈ ಚಿತ್ರವು ಆನಂದ್‌ ಪಟವರ್ಧನ್‌ಗೆ ವ್ಯಾಪಕ ಮನ್ನಣೆಯನ್ನು ತಂದುಕೊಟ್ಟಿತು ಮತ್ತು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆಯಿತು. ಈ ಪ್ರಸಿದ್ದ ಸಾಕ್ಷ್ಯಚಿತ್ರವನ್ನು ನಾನುಗೌರಿ.ಕಾಂ ಓದುಗರಿಗಾಗಿ ಇಲ್ಲಿ ನೀಡುತ್ತಿದ್ದೇವೆ. ಹಿಂದಿ, ಬಂಗಾಳಿ ಮತ್ತು ಮಲಯಾಳಂ ಭಾಷೆಯಲ್ಲಿ ನೀವು ಅದನ್ನು ವೀಕ್ಷಿಸಬಹುದಾಗಿದೆ.

ಹಿಂದಿ ಭಾಷೆಯಲ್ಲಿ ‘ರಾಮ್‌ ಕೆ ನಾಮ್‌’ ಚಿತ್ರ, ಇಂಗ್ಲಿಷ್‌ ಸಬ್‌ಟೈಟಲ್‌ನೊಂದಿಗೆ.

ಮಲಯಾಳಂ ಭಾಷೆಯಲ್ಲಿ ‘ರಾಮ್‌ ಕೆ ನಾಮ್‌’ ಚಿತ್ರ, ಮಳಯಾಳಂ ಸಬ್‌ಟೈಟಲ್‌ನೊಂದಿಗೆ. (ಈ ಮಲಯಾಳಂ ಆವೃತ್ತಿಯನ್ನು 2010 ರಲ್ಲಿ ದುರಂತ ಅಪಘಾತದಲ್ಲಿ ನಿಧನರಾದ ಖ್ಯಾತ ಚಲನಚಿತ್ರ ನಿರ್ಮಾಪಕ ಮತ್ತು ಹೋರಾಟಗಾರ ಸಿ.ಶರತ್ಚಂದ್ರನ್ ಅವರು ಮಾಡಿದ್ದಾರೆ)

ಬಂಗಾಳಿ ಭಾಷೆಯಲ್ಲಿ ‘ರಾಮ್‌ ಕೆ ನಾಮ್‌’ ಚಿತ್ರ, ಬಂಗಾಳಿ ಸಬ್‌ಟೈಟಲ್‌ನೊಂದಿಗೆ. (ಈ ಆವೃತ್ತಿಯನ್ನು ಕೊಂಕಣ್‌ ಸೇನ್‌ ಅವರು ಮಾಡಿದ್ದಾರೆ. ಸಬ್‌ಟೈಟಲ್‌ಗಳು ಕೆಲವು ದೋಷಗಳನ್ನು ಹೊಂದಿವೆ.)

ಹಿಂದಿ ಭಾಷೆಯಲ್ಲಿ ಇಂಗ್ಲಿಷ್‌ ಸಬ್‌ಟೈಟಲ್‌ನೊಂದಿಗೆ(ಸ್ಟಾಂಡ್‌ ಅಪ್‌ ಹಾಸ್ಯನಟ ಕುನಾಲ್‌ ಕಮ್ರಾ ಅವರ ಯೂಟ್ಯೂಬ್ ಚಾನೆಲ್‌ನಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...