Homeಕರ್ನಾಟಕಪೊಲೀಸರು ಎಂಜಲು ಕಾಸು ತಿನ್ನುತ್ತಾರೆ ಹೇಳಿಕೆ: ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ದೂರು

ಪೊಲೀಸರು ಎಂಜಲು ಕಾಸು ತಿನ್ನುತ್ತಾರೆ ಹೇಳಿಕೆ: ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ದೂರು

"ಪೊಲೀಸರಿಂದಲೂ ಎಂಜಲು ಪಡೆಯುವ ಮಂತ್ರಿಗಳ ಬಗ್ಗೆಯೂ ಗೃಹ ಸಚಿವರು ಮಾತನಾಡಲಿ" ಎಂದು ಬಿಜೆಪಿ ಮುಖಂಡ ಗಿರೀಶ್ ಮಟ್ಟೆಣ್ಣನವರ್ ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

ಪೊಲೀಸರು ಎಂಜಲು ಕಾಸು ತಿನ್ನುತ್ತಾರೆ ಎಂಬ ಅವಹೇಳನಕಾರಿ ಹೇಳಿಕೆ ನೀಡಿದ್ದ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಡೆಕ್ಕಾನ್ ಹೆರಾಲ್ಡ್ ವರದಿ ಮಾಡಿದೆ.

ಪೊಲೀಸರು ಹಣಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಅವರು ಕೆಟ್ಟು ಹೋಗಿದ್ದಾರೆ. ಲಂಚ ಪಡೆದು ನಾಯಿಯ ಹಾಗೆ ಬಿದ್ದಿರುತ್ತಾರೆ ಎಂದು ಪಕ್ಷದ ಕಾರ್ಯಕರ್ತರ ಎದುರು ಪೋನ್‌ನಲ್ಲಿ ಮಾತನಾಡುತ್ತ ಗೃಹ ಸಚಿವರು ಮಾತನಾಡಿದ್ದ ವಿಡಿಯೋ ವೈರಲ್ ಆಗಿತ್ತು. ಇದರ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ದೂರು ದಾಖಲಿಸಿದೆ. ಇದು ಪೊಲೀಸರ ಮೇಲಿನ ಸಾರ್ವಜನಿಕ ಗೌರವವನ್ನು ಕಡಿಮೆ ಮಾಡುತ್ತದೆ ಮತ್ತು ಪೊಲೀಸರಲ್ಲಿ ಅಸುರಕ್ಷತೆಯ ಭಾವನೆ ಮೂಡಿಸುತ್ತದೆ. ಹಾಗಾಗಿ ಗೃಹ ಸಚಿವರ ಹೇಳಿಕೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

ಇನ್ನೊಂದೆಡೆ ಸಾಮಾಜಿಕ ಕಾರ್ಯಕರ್ತ ಎಲ್.ಹನುಮೇಗೌಡ ಎಂಬುವವರು ಗೃಹ ಸಚಿವರ ವಿರುದ್ಧ ರಾಜ್ಯಪಾಲರಿಗೆ ಇಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ. ಪೊಲೀಸರು ಹಗಲು ರಾತ್ರಿ ದುಡಿಯುತ್ತಿದ್ದರೂ ಅವರ ವಿರುದ್ದ ಗೌರವಕ್ಕೆ ಚ್ಯುತಿ ತರುವ ರೀತಿ ಹೇಳಿಕೆ ನೀಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಹಸುಗಳ ಕಳ್ಳ ಸಾಗಣಿಕೆಯ ವಿರುದ್ಧ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ಗೃಹ ಸಚಿವರು ಕೆಂಡಮಂಡಲವಾಗಿದ್ದರು. “ಇಡಿ ಚಿಕ್ಕಮಗಳೂರು ಜಿಲ್ಲೆಯ ಪೊಲೀಸರು ಕೆಟ್ಟು ಹೋಗಿದ್ದಾರೆ. ನಾವು ಕೈತುಂಬಾ ಸಂಬಳ ನೀಡುತ್ತೇವೆ. ಅದರಲ್ಲಿ ಬದುಕಲಾಗದೆ ಎಂಜಲು ಕಾಸು ತಿನ್ನುತ್ತಿದ್ದಾರೆ. ಯೋಗ್ಯತೆಯಿಲ್ಲದಿದ್ದರೆ ಯೂನಿಫಾರ್ಮ್ ಬಿಚ್ಚಿಟ್ಟು ಹೋಗಿ ಸಾಯ್ರಿ. ಗೋಸಾಗಣಿಕೆದಾರರಿಂದ ಲಂಚ ಪಡೆದು ನಾಯಿಗಳ ಥರ ನಿದ್ರಿಸುತ್ತೀರಿ. ಅವರು ಯಾವುದೇ ಭಯವಿಲ್ಲದೆ ದಂಧೆಯಲ್ಲಿ ತೊಡಗಿದ್ದಾರೆ” ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದರು.

ಇದಕ್ಕೆ ಪ್ರತಿಯಾಗಿ ಮಾಜಿ ಪೊಲೀಸ್ ಅಧಿಕಾರಿ, ಬಿಜೆಪಿ ಮುಖಂಡ ಗಿರೀಶ್ ಮಟ್ಟೆಣ್ಣನವರ್ ಸಹ “ಹಣ ಪಡೆಯದೆ ಯಾವ ಗೃಹ ಸಚಿವರು ವರ್ಗಾವಣೆ ಮಾಡಿದ್ದಾರೆ. ಪೊಲೀಸರಿಂದಲೂ ಎಂಜಲು ಪಡೆಯುವ ಮಂತ್ರಿಗಳ ಬಗ್ಗೆಯೂ ಗೃಹ ಸಚಿವರು ಮಾತನಾಡಲಿ” ಎಂದು ತಿರುಗೇಟು ನೀಡಿದ್ದರು.

ಉಪ್ಪಾರಪೇಟೆ, ಕಬ್ಬನ್ ಪಾರ್ಕ್, ಚಿಕ್ಕಪೇಟೆ, ದೇವನಹಳ್ಳಿ, ವೈಟ್‌ಫೀಲ್ಡ್, ವರ್ತೂರು ಠಾಣೆಗೆ ವರ್ಗವಾಗಲು 50 ಲಕ್ಷ ರೂ ಕೊಡಬೇಕು. ಕೆಲವು ಜಾಗಗಳನ್ನು ಹೊರತುಪಡಿಸಿ ಉಳಿದ ಠಾಣೆಗಳಿಗೆ ವರ್ಗವಾಗಲು 25 ಲಕ್ಷ ರೂ ಎಂಜಲು ಕೊಡಬೇಕು. ವರ್ಗಾವಣೆಯ ಪ್ರತಿ ಹಂತದಲ್ಲಿಯೂ ಲಂಚ ಕೊಡುವುದು ಸಾಮಾನ್ಯವಾಗಿದೆ. ಇದು ಗೃಹ ಸಚಿವರಿಗೆ ತಿಳಿದಿಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಶಾಸಕರು, ಇಲ್ಲದಿದ್ದರೆ ಸಚಿವರು ಇಲ್ಲದಿದ್ದರೆ ಕೇಂದ್ರ ಕಚೇರಿಗೆ ಲಂಚ ಕೊಡಬೇಕು. ಹಣವಿಲ್ಲದ ವರ್ಗಾವಣೆ ಎಂದರೆ ಅದು ಶಿಕ್ಷೆಯಾಗಿರುತ್ತದೆ. ಈ ಬಗ್ಗೆ ಗೃಹ ಸಚಿವರು ಮಾತನಾಡಲಿ ಎಂದು ಸವಾಲು ಹಾಕಿದ್ದರು.

ತನ್ನ ಹೇಳಿಕೆ ವಿವಾದಾತ್ಮಕ ರೂಪ ಪಡೆದುಕೊಳ್ಳುತ್ತಲೇ ಗೃಹ ಸಚಿವ ಆರಗ ಜ್ಞಾನೇಂದ್ರರವರು ಸ್ಪಷ್ಟನೆ ನೀಡಿದ್ದಾರೆ. “ನಮ್ಮ ಜಿಲ್ಲೆಯಲ್ಲಿ ಇಬ್ಬರು ಗೋ ರಕ್ಷಕ ಬಜರಂಗದಳ ಕಾರ್ಯಕರ್ತರು ಅಕ್ರಮ ಗೋ ಸಾಗಾಣಿಕೆದಾರರನ್ನು ಹಿಂಬಾಲಿಸುವಾಗ ಹಲ್ಲೆಗೊಳಗಾಗಿದ್ದಾರೆ. ಟ್ರಕ್ ಡ್ರೈವರ್ ಅವರ ಮೇಲೆ ವಾಹನ ಹರಿಸಿ ಕೊಲ್ಲಲು ಯತ್ನಿಸಿದ್ದಾನೆ, ಅವರ ಪರಿಸ್ಥಿತಿ ಗಂಭೀರವಾಗಿದೆ. ಹಾಗಾಗಿ ಹೇಳಿಕೆ ನೀಡಿದೆ” ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.


ಇದನ್ನೂ ಓದಿ: ನಾಗಾಲ್ಯಾಂಡ್ ಹತ್ಯಾಕಾಂಡ: ಈಶಾನ್ಯ ಭಾರತದಲ್ಲಿ AFSPA ರದ್ದತಿ ಹೋರಾಟಕ್ಕೆ ಮತ್ತಷ್ಟು ಧ್ವನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮಂಥಹ ರಾಜಕಾರಿಣಿಗಳು ಮೊದಲು‌ ಅಧಿಕಾರಿಗಳಿಂದ ಎಂಜಲು‌ ಕಾಸು ತಿಂದು‌ ಹಂದಿ ತರಹ ಮಲಗೋದನ್ನ ಬಿಡಿ….ಪ್ರತಿಯೊಂದು ಕೆಲಸಕ್ಕೂ ರಾಜಕಾರಿಣಿಗಳು ರೊಕ್ಕಾ ಕೇಳ್ತೊಇರಲ್ಲಾ. ನಾಚಿಕ್ವ್ಯಾಗಬೇಕು.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...