Homeಮುಖಪುಟಮರ್ಯಾದೆಗೇಡು ಹತ್ಯೆ: ಸಹೋದರಿಯ ಶಿರಚ್ಛೇದ ಮಾಡಿ ಸೆಲ್ಫಿ ತೆಗೆದುಕೊಂಡ ಬಾಲಕ!

ಮರ್ಯಾದೆಗೇಡು ಹತ್ಯೆ: ಸಹೋದರಿಯ ಶಿರಚ್ಛೇದ ಮಾಡಿ ಸೆಲ್ಫಿ ತೆಗೆದುಕೊಂಡ ಬಾಲಕ!

- Advertisement -
- Advertisement -

ಮಹಾರಾಷ್ಟ್ರದ ಔರಂಗಾಬಾದ್‌ ಜಿಲ್ಲೆಯಲ್ಲಿ ಭಾನುವಾರ ಭೀಕರ ಮರ್ಯಾದೆಗೇಡು ಹತ್ಯೆಯ ಘಟನೆ ನಡೆದಿದೆ. ಪ್ರಕರಣದಲ್ಲಿ ಹದಿಹರೆಯದ ಬಾಲಕನೊಬ್ಬ ತನ್ನ 19 ವರ್ಷದ ಸಹೋದರಿಯನ್ನು ತಾಯಿಯ ಸಹಾಯದಿಂದ ಶಿರಚ್ಛೇದನ ಮಾಡಿದ್ದಾನೆ. ಶಿರಚ್ಛೇದನ ಮಾಡಿದ್ದಲ್ಲದೆ, ನೆರೆಹೊರೆಯವರ ಮುಂದೆ ಆಕೆಯ ತಲೆಯನ್ನು ಪ್ರದರ್ಶಿಸಿ, ತುಂಡರಿಸಿದ ತಲೆಯೊಂದಿಗೆ ಬಾಲಕ ಮತ್ತು ಆತನ ತಾಯಿ ಸೆಲ್ಫಿ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಯುವತಿಯ ಪತಿ ಮನೆಯಲ್ಲಿದ್ದ ವೇಳೆ ಆಕೆಯ ತಾಯಿ ಮತ್ತು ಸಹೋದರ ಸೇರಿಕೊಂಡು ಈ ಕೊಲೆಯನ್ನು ಮಾಡಿದ್ದಾರೆ ಎಂದು ಎನ್‌‌ಡಿಟಿವಿ ವರದಿ ಮಾಡಿದೆ. ಬಾಲಕನೂ ತನ್ನ ಭಾವನ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದನಾದರೂ, ಅವರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಬರಗೂರು ಮರ್ಯಾದೆಗೇಡು ಹತ್ಯೆ ಪ್ರಕರಣ; ದುಡಿಮೆ ಬಡತನ ಕೊಟ್ಟಿತು, ಜಾತಿ ಕೊಲೆ ಮಾಡಿಸಿತು

ಮೃತ ಯುವತಿಯು ಗರ್ಭಿಣಿ ಎಂದು ವರದಿಯಾಗಿದ್ದು, ತನ್ನ ಸಹೋದರಿಯನ್ನು ಕೊಂದ ನಂತರ ಬಾಲಕನು ತುಂಡರಿಸಿದ ತಲೆಯನ್ನು ವರಾಂಡಾಕ್ಕೆ ತೆಗೆದುಕೊಂಡು ಶರಣಾಗುವ ಮೊದಲು ಎಲ್ಲರಿಗೂ ಕಾಣುವಂತೆ ಗಾಳಿಯಲ್ಲಿ ಬೀಸಿದನು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಹತ್ಯೆಗೀಡಾದ ಯುವತಿಯನ್ನು ಕೀರ್ತಿ ಥೋರ್ ಎಂದು ಗುರುತಿಸಲಾಗಿದೆ. ಅವರು ಜೂನ್‌ನಲ್ಲಿ ಮನೆಬಿಟ್ಟು ತನ್ನ ಪತಿಯೊಂದಿಗೆ ವಾಸಿಸುತ್ತಿದ್ದಳು. ಆಕೆಯ ತಾಯಿ ಕಳೆದ ವಾರ ಆಕೆಯನ್ನು ಸಂಪರ್ಕಿಸಿ ಭೇಟಿಯಾಗುವುದಾಗಿ ಕೇಳಿಕೊಂಡಿದ್ದರು. ಹೀಗಾಗಿ ಭಾನುವಾರ ತನ್ನ ಮಗನೊಂದಿಗೆ ಮಗಳ ಮನೆಗೆ ತೆರಳಿದ್ದರು.

ಭಾನುವಾರದಂದು ಅವರು ಮಗಳ ಮನೆಗೆ ಬಂದಿದ್ದಾಗ ಪತಿ ಬೇರೆ ಕೋಣೆಯಲ್ಲಿದ್ದರು. ಅಂದು ಅವರು ಅನಾರೋಗ್ಯದಿಂದಾಗಿ ಅಸ್ವಸ್ಥರಾಗಿದ್ದರು. ತಾಯಿ ಮತ್ತು ಸಹೋದರನಿಗೆ ಟೀ ಮಾಡುತ್ತಿದ್ದಾಗ ಹಿಂಬದಿಯಿಂದ ಕೀರ್ತಿ ಮೇಲೆ ಹಲ್ಲೆ ನಡೆಸಲಾಗಿದೆ. ಆಕೆಯ ತಾಯಿ ಯುವತಿಯ ಕಾಲನ್ನು ಹಿಡಿದುಕೊಂಡಿದ್ದು, ಸಹೋದರನೂ ತನ್ನೊಂದಿಗೆ ತಂದಿದ್ದ ಕುಡುಗೋಲಿನಿಂದ ತಲೆಯನ್ನು ಕತ್ತರಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಷ್ಟೇ ಅಲ್ಲದೆ ಅಕ್ಕಪಕ್ಕದ ಮನೆಯವರು ನೋಡಲೆಂದು ತಲೆಯನ್ನು ಹೊರಕ್ಕೆ ಕೊಂಡೊಯ್ದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ’ಮರ್ಯಾದೆ’ ಮತ್ತು ಮನುಷ್ಯತ್ವದ ಕಂದರವನ್ನು ಶೋಧಿಸುವ ’ಪಾವ ಕದೈಗಳ್’

ಆರೋಪಿಗಳು ವಿರ್ಗೋನ್ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದು, ಇದೀಗ ಬಂಧನಕ್ಕೆ ಒಳಗಾಗಿದ್ದಾರೆ.

ರಾಜ್ಯದಲ್ಲೂ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಇಂತಹ ಹತ್ತೆನ್ನರಡು ಘಟನೆಗಳು ನಡೆದಿದ್ದು, ಜೂನ್‌ ತಿಂಗಳೊಂದರಲ್ಲಿಯೇ ನಾಲ್ಕು ಘಟನೆಗಳು ನಡೆದಿರುವುದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇಂತಹ ಘಟನೆಗಳು ಹೆಚ್ಚುತ್ತಿದ್ದರೂ ಸರ್ಕಾರಗಳು ಇಂತಹ ಕ್ರೌರ್ಯಗಳನ್ನು ತಡೆಗಟ್ಟುವತ್ತ ಗಮನ ಹರಿಸದೇ ಇರುವುದು ಬೇಸರದ ಸಂಗತಿ.

ಈ ದೇಶದ ಕ್ರೂರ, ಕರಾಳ ಜಾತಿವ್ಯವಸ್ಥೆಯ ಬಲೆಯಲ್ಲಿ ಸಿಕ್ಕಿಕೊಂಡ ಸಾವಿರಾರು ತಂದೆ ತಾಯಿಯರು ತಮ್ಮ ಮಗಳು ಅನ್ಯಜಾತೀಯ ಯುವಕನನ್ನು ಪ್ರೀತಿಸಿದರೆಂಬ ಏಕೈಕ ಕಾರಣಕ್ಕೆ ಮಗಳನ್ನೇ ಅಮಾನವೀಯವಾಗಿ ಕೊಂದುಹಾಕಿ ಜೈಲು ಸೇರಿದ್ದಾರೆ. ಮರ್ಯಾದೆ ಉಳಿಸಿಕೊಳ್ಳಲು ಕೊಲೆ ಎಂಬ ಅಹಂಕಾರ, ಗರ್ವಕ್ಕೆ ತಮ್ಮ ಮಗಳ ಜೀವನದೊಂದಿಗೆ ತಮ್ಮ ಜೀವನವನ್ನು ನರಕ ಮಾಡಿಕೊಂಡಿದ್ದಾರೆ. ಇದುವರೆಗೂ ತನ್ನ ಮಗಳನ್ನು ಕೊಂದ ಒಬ್ಬ ಅಪ್ಪ-ಅಮ್ಮನು ನೆಮ್ಮದಿಯಾಗಿಲ್ಲ ಎಂಬುದು ಸತ್ಯ. ಹಾಗಾಗಿ ಇದರ ವಿರುದ್ಧ ಜಾಗೃತಿ ಅತಿ ಹೆಚ್ಚು ಅಗತ್ಯವಾಗಿದೆ.

ಇದನ್ನೂ ಓದಿ:ಕೊಲೆಗಡುಕ ಜಾತಿ ಪ್ರತಿಷ್ಠೆಗೆ ತಂದೆಯ ಜೊತೆಗೆ ಸಮಾಜವೂ ಕಾರಣವಾಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...