Homeಮುಖಪುಟಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಡಿ ವಶಕ್ಕೆ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಡಿ ವಶಕ್ಕೆ

- Advertisement -
- Advertisement -

ದುಬೈಗೆ ತೆರಳುತ್ತಿದ್ದ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರೆ. ಜೊತೆಗೆ ನಟಿಗೆ ದೇಶ ಬಿಟ್ಟು ಹೊರ ಹೋಗದಂತೆ ಸೂಚನೆ ನೀಡಲಾಗಿದೆ.

ಸುಕೇಶ್‌ ಚಂದ್ರಶೇಖರ್‌ ಮತ್ತು ಶ್ರೀಲಂಕಾ ಮೂಲದ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರ ನಡುವೆ ಅಕ್ರಮ ಹಣ ವರ್ಗಾವಣೆ ಆಗಿದೆ. ಫರ್ನಾಂಡಿಸ್‌ ಅವರು ಸುಕೇಶ್‌ ಅವರಿಂದ 52 ಲಕ್ಷ ರೂ. ಮೌಲ್ಯದ ಕುದುರೆ, 9 ಲಕ್ಷ ರೂ. ಮೌಲ್ಯದ ಪರ್ಷಿಯಾ ದೇಶದ ಬೆಕ್ಕು ಸೇರಿದಂತೆ 10 ಕೋಟಿ ರೂ. ಮೌಲ್ಯದ ಉಡುಗೊರೆಗಳನ್ನು ಪಡೆದಿದ್ದಾರೆ ಎಂಬುದರ ಬಗ್ಗೆ ಇಡಿ ಸಾಕ್ಷ್ಯಾಧಾರಗಳನ್ನು ಕಲೆಹಾಕಿದೆ. ಆ ಹಿನ್ನೆಲೆಯಲ್ಲಿ ಜ್ಯಾಕ್ವೆಲಿನ್‌ರ ವಿರುದ್ಧ “ಲುಕ್‌ ಔಟ್‌ ಸರ್ಕ್ಯುಲರ್ ‘ ಜಾರಿಗೊಳಿಸಲಾಗಿದ್ದು, ಅವರನ್ನು ಈ ವಿಚಾರಕ್ಕಾಗಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಅಕ್ರಮ ಹಣ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಇಡಿ ಹಲವು ಬಾರಿ ವಿಚಾರಣೆಗೆ ಒಳಪಡಿಸಿತ್ತು.

ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ಜಾಕ್ವೆಲಿನ್ ಫರ್ನಾಂಡಿಸ್ ಹಿನ್ನೆಲೆ

ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಮೂಲತಃ ಶ್ರೀಲಂಕಾದವರು. ಸುದ್ದಿ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು, ಅಲಾದಿನ್ (2009) ಚಿತ್ರದ ಮೂಲಕ ಹಿಂದಿ ಸಿನಿಮಾ ರಂಗಕ್ಕೆ ಕಾಲಿಟ್ಟರು. ಜಾಕ್ವೆಲಿನ್ 2006 ರಲ್ಲಿ ಮಿಸ್ ಯೂನಿವರ್ಸ್ ಶ್ರೀಲಂಕಾ ಕಿರೀಟ ಧರಿಸಿದ್ದು, ಅದೇ ವರ್ಷ ವಿಶ್ವ ಸುಂದರಿ ಸ್ಪರ್ಧೆಯಲ್ಲಿಯೂ ಶ್ರೀಲಂಕಾವನ್ನು ಪ್ರತಿನಿಧಿಸಿದ್ದರು. ಒಂದು ದಶಕಕ್ಕೂ ಹೆಚ್ಚು ಕಾಲ ಹಿಂದಿ ಚಿತ್ರೋದ್ಯಮದಲ್ಲಿ ಸಕ್ರಿಯವಾಗಿರುವ ಅವರು ಮರ್ಡರ್‌ 2, ಕಿಕ್, ರಾಯ್, ಡ್ರೈವ್, ಜುಡ್ವಾ 2, ಹೌಸ್‌ಫುಲ್ 2, ಮತ್ತು ಮಿಸಸ್ ಸೀರಿಯಲ್ ಕಿಲ್ಲರ್‌ ಸೇರಿದಂತೆ ಹಲವು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಬ್ರಿಟಿಷ್ ಚಲನಚಿತ್ರ ಡೆಫಿನಿಷನ್ ಆಫ್ ಫಿಯರ್, ಶ್ರೀಲಂಕಾದ ಸಿನಿಮಾ ಇಂಡಸ್ಟ್ರಿಯಲ್ಲೂ ಅವರು ಕೆಲಸ ಮಾಡಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್ ಪ್ರಸ್ತುತ ಬಚ್ಚನ್ ಪಾಂಡೆ, ಅಟ್ಯಾಕ್, ಸರ್ಕಸ್, ರಾಮ್ ಸೇತು, ಪವನ್ ಕಲ್ಯಾಣ್ ಅಭಿನಯದ ತೆಲುಗು ಚಿತ್ರ ಹರಿ ಹರ ವೀರ ಮಲ್ಲು ಸಿನಿಮಾಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ, ಕನ್ನಡ ಸಿನಿಮಾ ಸುದೀಪ್ ಅಭಿನಯದ ವಿಕ್ರಾಂತ್ ರೋಣಾದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಏಕೆ ವಶಕ್ಕೆ ಪಡೆಯಲಾಗಿದೆ…?

ಜಾಕ್ವೆಲಿನ್ ಫೆರ್ನಾಂಡಿಸ್ ವಿರುದ್ಧ ಜಾರಿ ನಿರ್ದೇಶನಾಲಯವು ಲುಕ್ ಔಟ್ ಸುತ್ತೋಲೆ (ಎಲ್‌ಒಸಿ) ಹೊರಡಿಸಿದೆ. ಹೀಗಾಗಿ, ಅವರನ್ನು ಭಾನುವಾರ ಮುಂಬೈನಲ್ಲಿ ವಶಕ್ಕೆ ಪಡೆಯಲಾಗಿದೆ. ಸುಕೇಶ್ ಚಂದ್ರಶೇಖರ್ ಸುಲಿಗೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಫರ್ನಾಂಡಿಸ್‌ ಅವರ ಹೆಸರು ಕೇಳಿಬಂದಿದ್ದು, ಅದಕ್ಕೆ ಕೆಲವು ಸಾಕ್ಷಿಗಳು ದೊರೆತಿವೆ. ಜಾಕ್ವೆಲಿನ್ ಅವರನ್ನು ದೆಹಲಿಗೆ ಕರೆದೊಯ್ದು ವಿಚಾರಣೆ ನಡೆಸಲಿದ್ದು, ತನಿಖೆ ಮುಗಿಯುವವರೆಗೂ ಜಾಕ್ವೆಲಿನ್ ಅವರು ದೇಶವನ್ನು ತೊರೆಯುವಂತಿಲ್ಲ.

ಪ್ರಕರಣವೇನು?

ಚುನಾವಣಾ ಆಯೋಗವನ್ನು ಒಳಗೊಂಡಿರುವ ಲಂಚದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸುಕೇಶ್ ಚಂದ್ರಶೇಖರ್ ವಿರುದ್ಧ 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣವಿದೆ. ಸುಕೇಶ್ ಚಂದ್ರಶೇಖರ್ ಮತ್ತು ಇತರರ ವಿರುದ್ಧ ಇಡಿ ಇತ್ತೀಚೆಗೆ ಆರೋಪಪಟ್ಟಿ ಸಲ್ಲಿಸಿತ್ತು. ಆರೋಪದ ಪ್ರಕಾರ, ತಿಹಾರ್ ಜೈಲಿನಲ್ಲಿ ಸುಕೇಶ್ ಶಿಕ್ಷೆ ಅನುಭವಿಸುತ್ತಿದ್ದಾಗ, ಉದ್ಯಮಿಯೊಬ್ಬರ ಪತ್ನಿಯಿಂದ ಹಣ ಸುಲಿಗೆ ಮಾಡಿದ್ದ. ಅಲ್ಲದೆ, ಈ ವೇಳೆ ನಟಿ ಜಾಕ್ವೆಲಿನ್ ಅವರು ಸುಕೇಶ್ ಜೊತೆ ಹಣದ ವಹಿವಾಟು ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಜಾಕ್ವೆಲಿನ್‌ಗೆ ಸುಕೇಶ್ ಉಡುಗೊರೆಗಳನ್ನು ನೀಡಿದ್ದಾರೆ ಎಂದು ಇಡಿ ಹೇಳಿದೆ. ಜಾಕ್ವೆಲಿನ್‌ ಜೊತೆಗೆ ನಟಿ ನೋರಾ ಫತೇಹಿ ಅವರನ್ನೂ ಇಡಿ ವಿಚಾರಣೆ ಕರೆದಿತ್ತು.


ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...