Homeಕರ್ನಾಟಕವಿದ್ಯಾರ್ಥಿನಿಯನ್ನು ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದ ಬಿಎಂಟಿಸಿ ಕಂಡಕ್ಟರ್‌‌: ದೂರು, ಪ್ರತಿದೂರು ದಾಖಲು

ವಿದ್ಯಾರ್ಥಿನಿಯನ್ನು ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದ ಬಿಎಂಟಿಸಿ ಕಂಡಕ್ಟರ್‌‌: ದೂರು, ಪ್ರತಿದೂರು ದಾಖಲು

ಈ ಇಡೀ ಘಟನೆಯನ್ನು ಫೇಸ್‌ಬುಕ್‌ನಲ್ಲಿ ಲೈವ್ ಮಾಡಿದ್ದು ವೈರಲ್ ಆಗಿದೆ. ಜೊತೆಗೆ ದೂರು, ಪ್ರತಿದೂರಿನ ಅನ್ವಯ ಎರಡು ಪ್ರಕರಣಗಳು ದಾಖಲಾಗಿವೆ.

- Advertisement -
- Advertisement -

ಪಾಸ್ ಇದ್ದರೂ ಸಹ ಶುಲ್ಕ ಪಾವತಿ ರಸೀದಿ ಜೆರಾಕ್ಸ್‌ ಪ್ರತಿ ಇಲ್ಲವೆಂಬ ಕಾರಣವೊಡ್ಡಿ ವಿದ್ಯಾರ್ಥಿನಿಯನ್ನು ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದ ಬಿಎಂಟಿಸಿ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ನಂತರ ಕಂಡಕ್ಟರ್‌ ನೀಡಿದ ದೂರಿನ ಆಧಾರದಲ್ಲಿ ವಿದ್ಯಾರ್ಥಿನಿ ಮೇಲೂ ಸಹ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವಿದ್ಯಾರ್ಥಿನಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಜನನಿ ವತ್ಸಲ ಅವರು ಡಿ.3ರಂದು ರಾತ್ರಿ ಸುಮಾರು 9.30 ವೇಳೆಯಲ್ಲಿ ಬೆಂಗಳೂರಿನ ಕಾರ್ಪೋರೇಷನ್‌ ಸರ್ಕಲ್‌ನಿಂದ ಬಿಎಂಟಿಸಿ ಬಸ್‌‌ನಲ್ಲಿ (ಕೆಎ-57-ಎಫ್‌‌-3447) ಬೊಮ್ಮಸಂದ್ರಕ್ಕೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ.

“ಶಾಂತಿನಗರದ ಬಸ್ ನಿಲ್ದಾಣದ ಬಳಿ ನಿರ್ವಾಹಕರಾದ ಮನೋಜ್‌ ಅವರು ವಿದ್ಯಾರ್ಥಿನಿಯ ಬಸ್ ಪಾಸ್‌ ಕಿತ್ತುಕೊಂಡು, ಶುಲ್ಕ ರಸೀದಿ ಇಲ್ಲದ ಕಾರಣಕ್ಕೆ ಕೆಳಗೆ ಇಳಿಸಿ ಜಗಳ ಮಾಡಿದ್ದಾರೆ. ಬಳಿಕ ಅಲ್ಲಿದ್ದ ಕೆಲ ಯುವಕರು ಜನನಿಯವರನ್ನು ಎಳೆದಾಡಿ ಮೊಬೈಲ್‌ ಫೋನ್‌ ಕಸಿದುಕೊಳ್ಳಲು ಯತ್ನಿಸಿದ್ದಾರೆ” ಎಂದು ಎಫ್‌ಐಆರ್‌ ಕಾಪಿಯಲ್ಲಿ ಉಲ್ಲೇಖಿಸಲಾಗಿದೆ.

“ಅವ್ಯಾಚ್ಯ ಶಬ್ದಗಳಿಂದ ನಿಂದನೆ ಮಾಡುವುದಲ್ಲದೆ ನನ್ನ ಮೇಲೆ ಯುವಕರು ಹಲ್ಲೆ ನಡೆಸುತ್ತಿದ್ದವರಿಗೆ ಕಂಡಕ್ಟರ್ ಕುಮ್ಮಕ್ಕು ನೀಡಿದ್ದಾರೆ” ಎಂದು ವತ್ಸಲ ದೂರಿದ್ದು, ಅವರು ನೀಡಿದ ದೂರಿನ ಅನ್ವಯ ಐಪಿಸಿ ಸೆಕ್ಷನ್‌‌ 109, 34, 504, 393, 354 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನನ್ನ ಮೊಬೈಲ್‌ನಲ್ಲಿ ಶುಲ್ಕ ಪಾವತಿ ರಸೀದಿಯ ಪ್ರತಿ ಇದೆ. ಆದರೂ ಕಂಡಕ್ಟರ್‌‌ ಪಾಸ್‌ ಕಿತ್ತುಕೊಂಡಿದ್ದಾರೆಂದು ಫೇಸ್‌ಬುಕ್‌ನಲ್ಲಿ ಜನನಿಯವರು ಲೈವ್‌ ಮಾಡಿರುವುದು ವೈರಲ್ ಆಗಿದೆ. ಅದರಲ್ಲಿ “ನನ್ನ ಪಾಸ್ ಯಾಕೆ ಕಿತ್ತುಕೊಂಡಿರಿ” ಎಂದು ವತ್ಸಲ ಪ್ರಶ್ನಿಸಿದ್ದಾರೆ. ಆಗ ಕಂಡಕ್ಟರ್ “ಮೊಬೈಲ್‌ ಫೋಟೋ ಪ್ರತಿಯನ್ನು ಸ್ವೀಕರಿಸಲಾಗುವುದಿಲ್ಲ” ಎಂದು ಹೇಳುತ್ತಾರೆ.


ಇದನ್ನೂ ಓದಿರಿ: ಸುಳ್ಳುಗಳಿಗೆ ಕುಖ್ಯಾತವಾಗಿರುವ ‘ಮೇಘ್ ಅಪ್ಡೇಟ್ಸ್’ ಚಕ್ರವರ್ತಿ ಸೂಲಿಬೆಲೆಯವರ ನೆಚ್ಚಿನ ಟ್ವಿಟ್ಟರ್‌ ಅಕೌಂಟ್‌!


“ಕಲರ್‌ ಜೆರಾಕ್ಸ್‌ ಕಾಪಿಯನ್ನು ಮೊಬೈಲ್‌‌ನಲ್ಲಿ ತೆಗೆದುಕೊಂಡು ಬಂದರೆ ಸಾಕು ಎನ್ನುತ್ತಾರೆ” ಎಂದು ಜನನಿ ತಿಳಿಸುತ್ತಾರೆ. ಬಸ್‌ ಸಿಬ್ಬಂದಿ ನಿರಾಕರಿಸುತ್ತಾರೆ. “ಇಷ್ಟು ಹೊತ್ತಲ್ಲಿ ಕೆಳಗೆ ಇಳಿಸುತ್ತೀರಲ್ಲ ಇದು ಸರಿಯೇ? ಏನಾದರೂ ಅನಾಹುತವಾದರೆ ಯಾರು ಹೊಣೆ?” ಎಂದು ಜನನಿ ಕೇಳುತ್ತಾರೆ. “ನೀನು ಯಾವ ಟೈಮ್‌ಗಾದರೂ ಬಾ ನನಗೇನು?” ಎಂದು ಕಂಡಕ್ಟರ್ ದಬಾಯಿಸುತ್ತಾರೆ.

ವತ್ಸಲ ಅವರ ಪ್ರಶ್ನೆಗಳಿಗೆ ಉತ್ತರ ನೀಡದ ಸಿಬ್ಬಂದಿ ಬಸ್‌ನಿಂದ ಇಳಿಸುವ ಯತ್ನ ಮಾಡಿದ್ದಾರೆ. ಆಗ ಬಸ್‌ ಮುಂದಕ್ಕೆ ಹೋಗಲು ಬಿಡದೆ ಜನನಿಯವರು ಪ್ರತಿಭಟಿಸಿದ್ದಾರೆ. ಕೆಲವು ಯುವಕರು ಕಂಡಕ್ಟರ್‌ ಪರ ವಾದಿಸುತ್ತಾ, ಜನನಿಯವರ ಮೇಲೆ ಜಗಳವಾಡಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಒಂದು ರಸೀದಿ ಕಾರಣಕ್ಕೆ ರಸ್ತೆ ಮಧ್ಯೆಯಲ್ಲಿ ಕೆಳಗಿಳಿಸಲು ಯತ್ನಿಸಿದ ಬಿಎಂಟಿಸಿ ಸಿಬ್ಬಂದಿಯ ನಡೆಯನ್ನು ಖಂಡಿಸಿ, ವಿಲ್ಸನ್‌ ಗಾರ್ಡನ್ ಪೊಲೀಸ್‌ ಠಾಣೆಯಲ್ಲಿ ಜನನಿ ವತ್ಸಲ ಅವರು ಪ್ರಕರಣ ದಾಖಲಿಸಿದ್ದಾರೆ. ಜನನಿಯವರ ಲೈವ್‌ ನೋಡಿ, ಜನನಿಯವರ ಸ್ನೇಹಿತರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಾಗುವವರೆಗೂ ಸಹಾಯ ಮಾಡಿದ್ದಾರೆ ಎಂದು ಅವರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.


ಇದನ್ನೂ ಓದಿರಿ: ದಕ್ಷಿಣ ಕನ್ನಡ: ಯುವಕರ ಮೇಲೆ ತಲವಾರ್‌‌ ದಾಳಿ; ಐವರಿಗೆ ಗಾಯ


ಪ್ರತಿ ದೂರು ದಾಖಲು

ನಂತರ ಕಂಡಕ್ಟರ್ ಮನೋಜ್‌ರವರು ನನ್ನ ಮೇಲೆ ಹಲ್ಲೆಯಾಗಿದೆ ಎಂದು ಪ್ರತಿದೂರು ದಾಖಲಿಸಿದ್ದಾರೆ. ಅದರ ಆಧಾರದಲ್ಲಿ ಜನನಿಯವರ ಮೇಲೆ ಎಫ್‌ಐಆರ್ ದಾಖಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ವಿಲ್ಸನ್‌ ಗಾರ್ಡನ್‌ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಮಠಪತಿ ಅವರನ್ನು ನಾನುಗೌರಿ.ಕಾಂ ಸಂಪರ್ಕಿಸಿದಾಗ, “ಕೌಂಟರ್‌ ಕೇಸ್‌ ದಾಖಲಾಗಿರುವುದು” ಖಚಿತವಾಗಿದೆ ಎಂದರು. “ಕೌಂಟರ್‌ ಕೇಸ್‌ಗೆ ಆಧಾರವೇನು?” ಎಂದು ಕೇಳಿದ್ದಕ್ಕೆ ಉತ್ತರಿಸಲು ನಿರಾಕರಿಸಿದರು.

ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಆರೋಪದ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಜನನಿಯವರು, “ವಿಜಯ ಕರ್ನಾಟಕ ಪತ್ರಿಕಾ ವರದಿ ಸುಳ್ಳುಗಳಿಂದ ಕೂಡಿದೆ. ನಾನು ಜೋರು ದನಿಯಲ್ಲಿ ಪ್ರಶ್ನಿಸಿದ್ದು ನಿಜ. ಇಡೀ ಘಟನೆ ಫೇಸ್‌ಬುಕ್‌ನಲ್ಲಿ ಲೈವ್ ಆಗಿದೆ. ನಾನು ಕರೆ ಮಾಡಿ ನನ್ನ ಸ್ನೇಹಿತರನ್ನು ಕರೆಸಿಕೊಂಡಿರುವುದಾಗಿ ಪತ್ರಿಕೆಯಲ್ಲಿ ಆರೋಪಿಸಲಾಗಿದೆ. ನನ್ನ ಸ್ನೇಹಿತರು ನನ್ನ ಲೈವ್ ನೋಡಿ ಸ್ಥಳಕ್ಕೆ ಧಾವಿಸಿದರೆ ಹೊರತು ನಾನು ಯಾರಿಗೂ ಫೋನ್ ಮಾಡಿಲ್ಲ. ಇಡೀ ಘಟನೆ ಅರ್ಧ ಗಂಟೆಗೂ ಹೆಚ್ಚು ಸಮಯ ಲೈವ್ ಆಗುತ್ತಿದ್ದಾಗ ನಾನು ಹೇಗೆ ಫೋನ್ ಮಾಡಲು ಸಾಧ್ಯ? ಇನ್ನು ನಾನು ಯಾರಿಗೂ ಹಲ್ಲೆ ನಡೆಸಿಲ್ಲ. ಬೇಕಾದರೆ ಲೈವ್ ಪೂರ್ತಿ ನೋಡಿ. ಆದರೆ ಸುಳ್ಳು ವರದಿ ಮಾಡಲಾಗಿದೆ” ಎಂದರು.

ಒಂದು ಬಟ್ಟೆ ಅಭಿಯಾನದ ಕರ್ತೃ ಜನನಿ

ಜನನಿ ವತ್ಸಲ ಅವರು ಮೊದಲಿನಿಂದಲೂ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡವರು. ಕೆಆರ್‌ಎಸ್‌ ಪಕ್ಷದ ಕಾರ್ಯಕರ್ತರೂ ಹೌದು. ಈ ಹಿಂದೆಯೂ ಹಲವು ದೌರ್ಜನ್ಯಗಳನ್ನು ಪ್ರಶ್ನಿಸಿ ವಿಡಿಯೊಗಳನ್ನು ಮಾಡಿದ್ದಾರೆ. ಮುಖ್ಯವಾಗಿ ಜನನಿಯವರು ಕಳೆದ ಎರಡು ವರ್ಷಗಳಿಂದ ಮಾಡುತ್ತಿರುವ ಸಾಮಾಜಿಕ ಸೇವೆಯು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಪ್ರಶಂಸೆಗೆ ಪಾತ್ರವಾಗಿದೆ. ಬಡವರಿಗಾಗಿ “ಒಂದು ಬಟ್ಟೆ ಅಭಿಯಾನ, ಮತ್ತು ಒಂದು ಜೊತೆ ಚಪ್ಪಲಿ ಅಭಿಯಾನ”ವನ್ನು ನಿರಂತವಾಗಿ ಜನನಿ ನಡೆಸುತ್ತಿದ್ದಾರೆ. ಈಗ ಮನೆ ಇಲ್ಲದೆ ರಸ್ತೆ ಬದಿ ವಾಸಿಸುವವರಿಗೆ `ಒಂದು ಹೊದಿಗೆ ನೀಡುವ ಅಭಿಯಾನ’ ಸಹ ಮಾಡುತ್ತಿದ್ದಾರೆ.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ

“ಹೆಣ್ಣು ಮಕ್ಕಳನ್ನು ಈ ಸಣ್ಣಪುಟ್ಟ ಕಾರಣ ನೀಡಿ ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದರೆ ಏನಾದರೂ ಅನಾಹುತವಾದರೆ ಯಾರು ಹೊಣೆಯಾಗುತ್ತಾರೆ?” ಎಂಬ ಪ್ರಶ್ನೆಯಲ್ಲಿ ಅರ್ಥವಿದೆ. ಈ ನಿಟ್ಟಿನಲ್ಲಿ ದೆಹಲಿ, ತಮಿಳುನಾಡು, ತೆಲಂಗಾಣ ರಾಜ್ಯ ಸರ್ಕಾರ ಜಾರಿಗೊಳಿಸಿರುವ ನಿರ್ಧಾರವನ್ನು ನಮ್ಮ ರಾಜ್ಯ ಸರ್ಕಾರವೂ ತೆಗೆದುಕೊಳ್ಳುವುದು ಸೂಕ್ತ. ದೆಹಲಿ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇವೆ ಇದೆ. ಇನ್ನು ತೆಲಂಗಾಣ ಸರ್ಕಾರ, “ಸಂಜೆ ಏಳು ಗಂಟೆಯ ಬಳಿಕ ಮಹಿಳೆಯರು ಕೇಳಿದ ಕಡೆ ಹತ್ತಿಸಿಕೊಳ್ಳಬೇಕು ಮತ್ತು ಇಳಿಸಬೇಕು” ಎಂದು ತಿಳಿಸಿದೆ. ಇಂತಹ ನಿರ್ಧಾರಗಳನ್ನು ನಮ್ಮ ರಾಜ್ಯ ಸರ್ಕಾರ ತೆಗೆದುಕೊಂಡರೆ ಮಹಿಳೆಯರಿಗೆ ಬಹಳ ಅನುಕೂಲವಾಗುತ್ತದೆ.


ಇದನ್ನೂ ಓದಿರಿ: ರಂಗಾಯಣ ನಿರ್ದೇಶಕರ ವಜಾಕ್ಕೆ ಪ್ರಗತಿಪರ ಚಿಂತಕರ ಆಗ್ರಹ; ಬಹುರೂಪಿ ಬಹಿಷ್ಕರಿಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...