Homeಮುಖಪುಟ’ನಿರಂತರ ಸುಳ್ಳು ಹೇಳುವ ಮೂಲಕ ಬಿಜೆಪಿ ಮೂಲ ತತ್ವ ಎತ್ತಿ ಹಿಡಿದ ಬಸವರಾಜ ಬೊಮ್ಮಾಯಿ’: ಸಿದ್ದರಾಮಯ್ಯ

’ನಿರಂತರ ಸುಳ್ಳು ಹೇಳುವ ಮೂಲಕ ಬಿಜೆಪಿ ಮೂಲ ತತ್ವ ಎತ್ತಿ ಹಿಡಿದ ಬಸವರಾಜ ಬೊಮ್ಮಾಯಿ’: ಸಿದ್ದರಾಮಯ್ಯ

- Advertisement -
- Advertisement -

“ಚುನಾವಣಾ ಪ್ರಚಾರ ಸಭೆಗಳಲ್ಲಿ ನಿರಂತರ ಸುಳ್ಳು ಹೇಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ಪಕ್ಷದ ಮೂಲ ತತ್ವವನ್ನು ಎತ್ತಿಹಿಡಿದಿದ್ದಾರೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನೂರು ಬಾರಿ ಸುಳ್ಳು ಹೇಳಿ ಅದನ್ನೆ ಸತ್ಯವೆಂದು ನಂಬಿಸುವುದು ಬಿಜೆಪಿಯವರ ಹುಟ್ಟುಗುಣವಲ್ಲವೇ..? ಎಂದು ಪ್ರಶ್ನಿಸಿದ್ದಾರೆ.


’ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮುಂದಕ್ಕೆ ಕೊಂಡೊಯ್ಯುವ ಕಾಳಜಿಯನ್ನು ಬೊಮ್ಮಾಯಿಯವರು ತೋರಿಸುತ್ತಾರೆ ಎನ್ನುವ ನಿರೀಕ್ಷೆ ನನ್ನಲ್ಲಿ ಇತ್ತು. ಆ ನಿರೀಕ್ಷೆಗಳೆಲ್ಲ ಹುಸಿಯಾಗಿದೆ.ನಮ್ಮ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಮನೆಗಳ ಬಗ್ಗೆ ಆಗಾಗ್ಗೆ ಪ್ರಶ್ನೆ ಕೇಳುವ, ಸುಳ್ಳು ಹೇಳುವ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿಯಾಗಿದ್ದೂ ಮಾಹಿತಿ ತರಿಸಿಕೊಳ್ಳಲು ಕಷ್ಟವಾಗುತ್ತಿದೆಯೇ ಅಥವಾ ಮುಖ್ಯಮಂತ್ರಿಗಳು ಕೇಳಿದರೂ ಇಲಾಖೆಗಳೇ ಮಾಹಿತಿ ನೀಡುತ್ತಿಲ್ಲವೇ..?” ಎಂದು ವ್ಯಂಗ್ಯವಾಡಿದ್ದಾರೆ.

’2013 ರಿಂದ 2018 ರ ಮಾರ್ಚ್‌ವರೆಗೆ ನಮ್ಮ ಸರ್ಕಾರದ ಅವಧಿಯಲ್ಲಿ 15 ಲಕ್ಷ ಮನೆಗಳನ್ನು 16,775 ಕೋಟಿ ರೂ.ಗಳ ವೆಚ್ಚದಲ್ಲಿ ವಸತಿ ರಹಿತರಿಗಾಗಿ ನಿರ್ಮಾಣ ಮಾಡಿಕೊಟ್ಟಿದ್ದೆವು. ಈ ಮಾಹಿತಿಯನ್ನು ವಸತಿ ಸಚಿವ ಸೋಮಣ್ಣನವರ ಕಛೇರಿಯಿಂದಲೆ ನನಗೆ ಲಿಖಿತವಾಗಿ ಕಳಿಸಿದ್ದಾರೆ. ನಿಮಗೊಂದು ಪ್ರತಿ ತರಿಸಿ ಕೊಡಲೇ ಬೊಮ್ಮಾಯಿ ಅವರೇ..?’ ಎಂದು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: ಮಹಾತ್ಮ ಗಾಂಧಿಯನ್ನು ಕೊಂದ ಗೋಡ್ಸೆಯ ಪಳೆಯುಳಿಕೆ ಬಿಜೆಪಿ- ಸಿದ್ದರಾಮಯ್ಯ ಆಕ್ರೋಶ


‘ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳನ್ನು ಒಳಗೊಂಡಂತೆ 32 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ.ನಿಮ್ಮ ಸರ್ಕಾರದ ಸಾಧನೆ ಇನ್ನೂ ಸೊನ್ನೆಯಲ್ಲೇ ಭದ್ರವಾಗಿ ಕೂತಿದೆ ಅಲ್ಲವೇ..? ನಾನು ಮುಖ್ಯ ಮಂತ್ರಿಯಾಗಿದ್ದಾಗ ಗ್ರಾಮ ವಿಕಾಸ ಮತ್ತು ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಜಾರಿಗೆ ತಂದಿದ್ದೆ. ಈ ಯೋಜನೆಯಡಿ 1750 ಕೋಟಿ ರೂಪಾಯಿಗಳನ್ನು ನೀಡಿ 2000 ಗ್ರಾಮಗಳನ್ನು ಅಭಿವೃದ್ಧಿ ಪಡಿಸಿದ್ದೆ. ಇಂತಹ ಜನಪರ ಯೋಜನೆ ನಿಲ್ಲಿಸಿದ್ದು ನಿಮ್ಮದೇ ಸರ್ಕಾರ ಅಲ್ಲವೇ..?’ ಎಂದು ಪ್ರಶ್ನಿಸಿದ್ದಾರೆ.


’ಅಮೃತ ಯೋಜನೆಯಡಿ ಆಯ್ದ ಗ್ರಾಮಗಳಿಗೆ ಕೇವಲ 25 ಲಕ್ಷ ರೂಪಾಯಿ ನೀಡುತ್ತೇವೆಂದು ಬೊಮ್ಮಾಯಿವರು ಹೇಳುತ್ತಾರೆ. 25 ಲಕ್ಷ ರೂಪಾಯಿಗಳಲ್ಲಿ 40% ನಿಮ್ಮ ಸರ್ಕಾರದ ಸಚಿವರು, ಅಧಿಕಾರಿಗಳಿಗೆ ಕಮಿಷನ್ ಹೋದರೆ ಉಳಿಯುವ ಹಣ ಎಷ್ಟು..? ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ಗ್ರಾಮೀಣ ರಸ್ತೆಗಳಿಗೆಂದು 1350 ಕೋಟಿ ನೀಡುವುದಾಗಿ ಆದೇಶ ಹೊರಡಿಸಿದ್ದರು. ಆದರೆ ಇದುವರೆಗೆ ಒಂದು ರೂಪಾಯಿಯನ್ನು ಬಿಡುಗಡೆ ಮಾಡಿಲ್ಲ. ಬರಿ ಘೋಷಣೆಗಳಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯವೇ..?’ ಎಂದು ಟೀಕಿಸಿದ್ದಾರೆ.

’ನಮ್ಮ ಸರ್ಕಾರದ ಅವಧಿಯಲ್ಲಿ ಗ್ರಾಮ ಪಂಚಾಯತಿ ನೌಕರರಿಗೆ ಸಂಬಳ ನೀಡಲೆಂದು ಪ್ರತಿ ವರ್ಷ 912 ಕೋಟಿ ರೂಗಳನ್ನು ತೆಗೆದಿಡುತ್ತಿದ್ದೆವು. ಅದರಿಂದ ಸಾವಿರಾರು ನೌಕರರಿಗೆ ಅನುಕೂಲವಾಗಿತ್ತು. ನಮ್ಮದು ಬಿಜೆಪಿ ಸರ್ಕಾರದಂತೆ ಹಾಳೆಗಳ ಮೇಲಿನ ಘೋಷಣೆಗಳಾಗಿ ಉಳಿದಿಲ್ಲ, ಸಾಧನೆಗಳಾಗಿವೆ’ ಎಂದು ತಿಳಿಸಿದ್ದಾರೆ.


’ಗ್ರಾಮ ಪಂಚಾಯತಿಗಳಿಗೆ ಅನುದಾನ ಬರಲು ಆರಂಭವಾಗಿದ್ದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ರವರು ನರೇಗಾ ಯೋಜನೆ ಪ್ರಾರಂಭಿಸಿದ ಮೇಲೆ. ನರೇಗಾ ಯೋಜನೆಯನ್ನು ಗುಜರಾತಿನ ಅಂದಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರು ವಿರೋಧಿಸಿದ್ದರು ಎಂಬ ಸತ್ಯವನ್ನು ಬಿಜೆಪಿ ಯವರು ಮರೆಯಬಾರದು. ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 3 ಕೋಟಿಗೂ ಹೆಚ್ಚು ಜನ ಬಿಪಿಎಲ್ ಕಾರ್ಡುದಾರರಿದ್ದಾರೆ. ಅದರಲ್ಲಿ ಒಂದು ಕೋಟಿ ಜನರಿಗೆ 100 ಮಾನವ ದಿನಗಳಷ್ಟು ಕೆಲಸ ಕೊಟ್ಟರೆ 100 ಕೋಟಿ ಮಾನವ ದಿನಗಳ ಗುರಿ ನೀಡಬೇಕಾಗುತ್ತದೆ. ಆದರೆ ರಾಜ್ಯಕ್ಕೆ 13 ಕೋಟಿ ಮಾನವ ದಿನಗಳ ಗುರಿಯನ್ನು ನೀಡಲಾಗುತ್ತಿದೆ. ಈಗಿರುವ ಗುರಿ ಕೇವಲ 13 ಲಕ್ಷ ಜನರಿಗೆ ಮಾತ್ರ ಸಾಕಾಗುತ್ತಿದೆ. ರಾಜ್ಯದಲ್ಲಿ ಆರ್ಥಿಕ ವರ್ಷ ಮುಗಿಯಲು ಇನ್ನೂ ಆರು ತಿಂಗಳಿದ್ದಾಗಲೆ ಟಾರ್ಗೆಟ್ ಮುಗಿದು ಹೋಗಿದೆ. ಬೊಮ್ಮಾಯಿಯವರು ಸುಳ್ಳು ಹೇಳಿಕೊಂಡು ಓಡಾಡುವ ಬದಲು ದೆಹಲಿಗೆ ಹೋಗಿ ನರೇಗಾ ಯೋಜನೆಗೆ ಬೇಡಿಕೆ ಆಧಾರಿತವಾಗಿ ಹೊಸ ಗುರಿ ನಿಗದಿ ಮಾಡಿಸಿಕೊಂಡು ಬರಲಿ’ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಹಂಪಿ ವಿವಿ ಹಗರಣ: ಕ್ರಮಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....