Homeಚಳವಳಿಇರೋಮ್ ಶರ್ಮಿಳಾರ ಉಪವಾಸ, Indian Army Rape us ಎಂಬ ಮಹಿಳೆಯರ ಬೆತ್ತಲೆ ಪ್ರತಿಭಟನೆ ಮತ್ತು...

ಇರೋಮ್ ಶರ್ಮಿಳಾರ ಉಪವಾಸ, Indian Army Rape us ಎಂಬ ಮಹಿಳೆಯರ ಬೆತ್ತಲೆ ಪ್ರತಿಭಟನೆ ಮತ್ತು ಕರಾಳ AFSPA ಕಾಯ್ದೆ

AFSPA ಕಾನೂನಿನಂತೆ ಅಲ್ಲಿನ ಸೇನಾಪಡೆಗಳಿಗೆ ಅನುಮತಿಯಿಲ್ಲದೇ ಯಾರನ್ನಾದರೂ ವಿಚಾರಣೆ ಮಾಡುವ, ಬಂಧಿಸುವ ಅಧಿಕಾರವಿದೆ. ಸೇನಾಪಡೆಗಳ ವಿರುದ್ಧ ದೂರು ನೀಡುವ ಹಕ್ಕು ನಾಗರಿಕರಿಗಿಲ್ಲ!

- Advertisement -
- Advertisement -

ನವೆಂಬರ್ 02, 2000ನೇ ಇಸವಿ. ಅಸ್ಸಾಂ ರಾಜ್ಯದ ಇಂಫಾಲ ಬಳಿ ಇರುವ ಮಾಲೋಮ್ ನಗರದಲ್ಲಿ 10 ಜನ ಬಸ್ ನಿಲ್ದಾಣದಲ್ಲಿ ಬಸ್‍ಗಾಗಿ ಕಾಯುತ್ತಿರುತ್ತಾರೆ. ಅಲ್ಲಿಗೆ ಏಕಾಏಕಿ ನುಗ್ಗಿದ ಅಸ್ಸಾಂ ರೈಫಲ್ಸ್ ನ ಸೈನಿಕರು ಗುಂಡಿನ ದಾಳಿ ನಡೆಸಿ 10 ಜನರನ್ನು ಕೊಂದು ಹಾಕುತ್ತಾರೆ. ಈ ಘೋರ ದುರಂತದ ವಿರುದ್ಧ ಅಸ್ಸಾಂ ಜನತೆ ಕಂಬನಿ ಮಿಡಿಯುತ್ತದೆ. ಆದರೆ 28 ವರ್ಷದ ಒಬ್ಬ ಯುವತಿಯೊಬ್ಬರು ದಿಟ್ಟ ತೀರ್ಮಾನ ತೆಗೆದುಕೊಳ್ಳುತ್ತಾರೆ. ಅದೆಂದರೆ ಆ ದಾಳಿಯಲ್ಲಿ ಮೃತಪಟ್ಟವರಿಗೆ ನ್ಯಾಯಕ್ಕಾಗಿ ಅಮರಣಾಂತ ಉಪವಾಸ ಸತ್ಯಾಗ್ರಹ. ಅಲ್ಲಿಂದ ಆರಂಭವಾದ ಇರೋಮ್ ಶರ್ಮಿಳಾರವರ ಉಪವಾಸ ಸತ್ಯಾಗ್ರಹ ಹೋರಾಟ 2016ರವರೆಗೆ ಅಂದರೆ ಸತತ 16 ವರ್ಷ ಮುಂದುವರೆಯುತ್ತದೆ…

ಈಗ 21 ವರ್ಷಗಳ ನಂತರ ಅದೇ ಅಮಾನವೀಯ ದಾಳಿ ಪಕ್ಕದ ನ್ಯಾಗಲ್ಯಾಂಡ್‌ ರಾಜ್ಯದಲ್ಲಿ ಸಂಭವಿಸಿದೆ. ನಾಗಾಲ್ಯಾಂಡ್‌ನ ಮಯನ್ಮಾರ್‌ ಗಡಿಯ ಬಳಿ ದಂಗೆಕೋರರ ವಿರುದ್ಧದ ಕಾರ್ಯಾಚರಣೆಯ ವೇಳೆ ಸೇನೆಯು ಗುಂಡಿನ ದಾಳಿ ನಡೆಸಿ 14 ಅಮಾಯಕ ನಾಗರೀಕರನ್ನು ಹತ್ಯೆಗೈದಿದೆ. ಘಟನೆಯಲ್ಲಿ ಓರ್ವ ಯೋಧನು ಪ್ರಾಣ ಕಳೆದುಕೊಳ್ಳಬೇಕಾಗಿದೆ. ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ನಡೆದ ನಾಗರಿಕರ ಹತ್ಯೆಗಳ ಹೊಣೆಗಾರಿಕೆಯನ್ನು ಸೇನೆ ಹೊರುತ್ತಿದೆ ಎಂದು ದಿಮಾಪುರ್ ಮೂಲದ 3 ಕಾರ್ಪ್ಸ್ ಹೇಳಿದೆ. ಈಘಟನೆಯ ವಿರುದ್ಧ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಾಗಲ್ಯಾಂಡ್‌ನಲ್ಲಿ ಪ್ರತಿಭಟನೆ ತಾರಕಕ್ಕೇರಿದೆ.

ಈ 21 ವರ್ಷಗಳ ನಡುವೆ ಇಂತಹ ನೂರಾರು ಹತ್ಯಾಕಾಂಡಗಳು ನಡೆದಿವೆ. ಕೆಲವು ವರದಿಯಾದರೆ ಹಲವು ವರದಿಯಾಗದೆ ಹೂತುಹೋಗಿವೆ. ಮುಖ್ಯವಾಗಿ ಹುಳುಗಳ ರೀತಿಯಲ್ಲಿ ಮನುಷ್ಯರನ್ನು ಕೊಂದು ಹಾಕಲು ಸೇನೆಗೆ ಹೇಗೆ ಮನಸ್ಸು ಬರುತ್ತದೆ? ಅವರಿಗೆ ಶಿಕ್ಷೆಯ ಭಯವಿಲ್ಲವೇ? ಖಂಡಿತ ಇಲ್ಲ. ಏಕೆಂದರೆ ಅವರಿಗೆ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ ಅಥವಾ AFSPA’ದ ಬಲವಿದೆ. ಇಲ್ಲಿ ಸೇನಾಪಡೆಗಳಿಗೆ ಅನುಮತಿಯಿಲ್ಲದೇ ಯಾರನ್ನಾದರೂ ವಿಚಾರಣೆ ಮಾಡುವ, ಬಂಧಿಸುವ ಅಧಿಕಾರವಿರುತ್ತದೆ. ಈ ವಿಚಾರವಾಗಿ ಸೇನಾಪಡೆಗಳ ವಿರುದ್ಧ ದೂರು ನೀಡುವ ಹಕ್ಕು ನಾಗರಿಕರಿಗಿರುವುದಿಲ್ಲ!

ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ ಅಥವಾ AFSPA ಹಲವಾರು ದಶಕಗಳಿಂದ ನಾಗಾಲ್ಯಾಂಡ್ ಮತ್ತು ಈಶಾನ್ಯದ ಭಾಗಗಳಲ್ಲಿ ಜಾರಿಯಲ್ಲಿದೆ. ವಿವಾದಿತ ಕಾನೂನಿನ ಅಡಿಯಲ್ಲಿ ಭದ್ರತಾ ಪಡೆಗಳು ರಾಜ್ಯದಲ್ಲಿ ಎಲ್ಲಿಯಾದರೂ ಕಾರ್ಯಾಚರಣೆಯನ್ನು ನಡೆಸಲು ಮತ್ತು ಯಾವುದೇ ಪೂರ್ವ ವಾರಂಟ್ ಇಲ್ಲದೆ ಯಾರನ್ನಾದರೂ ಬಂಧಿಸಬಹುದಾಗಿದೆ. ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ (ಇಂಫಾಲ್ ಮುನ್ಸಿಪಲ್ ಕೌನ್ಸಿಲ್ ಪ್ರದೇಶವನ್ನು ಹೊರತುಪಡಿಸಿ), ಅರುಣಾಚಲ ಪ್ರದೇಶದ ಚಾಂಗ್ಲಾಂಗ್, ಲಾಂಗ್ಡಿಂಗ್ ಮತ್ತು ತಿರಾಪ್ ಜಿಲ್ಲೆಗಳು ಮತ್ತು ಅಸ್ಸಾಂ ಗಡಿಯಲ್ಲಿರುವ ಅರುಣಾಚಲ ಪ್ರದೇಶದ ಎಂಟು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ AFSPA ಜಾರಿಯಲ್ಲಿದೆ.

ಈ AFSPA ಕಾಯ್ದೆಯಿಂದಾಗಿ ಸೇನೆಯು ಪ್ರತಿನಿತ್ಯ ಅಮಾಯಕರನ್ನು ಹಿಂಸಿಸುತ್ತಿದೆ, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದೆ. ಪ್ರಭುತ್ವದ ವಿರುದ್ಧ ಪ್ರತಿಭಟಿಸುವವರನ್ನು ಹತ್ಯೆಗೈಯ್ಯುತ್ತಿದೆ. ಸಾವಿರಾರು ನಿರಪರಾಧಿಗಳ ಮೇಲೆ ಪ್ರಕರಣಗಳು ದಾಖಲಾಗಿವೆ. ಸೇನೆಗೆ ಅಪರಿಮಿತ ಅಧಿಕಾರ ಸಿಕ್ಕಿರುವುದು ಅವರನ್ನು ಕುರುಡಾಗಿ ಮಾಡಿದೆ ಎಂದು ನೂರಾರು ಹೋರಾಟಗಳು ನಡೆದವು. 2004ರಲ್ಲಿ ಮಣಿಪುರದಲ್ಲಿ ತಂಗ್ಜಮ್ ಮನೋರಮಾ ಎಂಬ ಯುವತಿಯ ಮೇಲೆ ಅಸ್ಸಾಂ ರೈಫಲ್ಸ್ ಸೈನಿಕರು ಅತ್ಯಾಚಾರವೆಸಗಿ ಹತ್ಯೆ ಮಾಡಿದರು ಎಂಬ ಆರೋಪ ಕೇಳಿಬಂತು. ಆಗ ಆಕ್ರೋಶಗೊಂಡ 12 ಮಹಿಳೆಯರು ಸೇನೆಯ ಕಚೇರಿ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದರು. ಸೈನಿಕರೆ ಬನ್ನಿ ನಮ್ಮನ್ನು ಅತ್ಯಾಚಾರ ಮಾಡಿ, ನಮ್ಮನ್ನು ಕೊಲ್ಲಿ ಎಂದು ಕೂಗಿದರು. ಈ ಚಿತ್ರ ಇಡೀ ಪ್ರಪಂಚಾದಾದ್ಯಂತ ವ್ಯಾಪಕವಾಗಿ ಹರಡಿತ್ತಲ್ಲದೆ AFSPA ಕಾಯ್ದೆ ಭಾರತ ಈಶಾನ್ಯ ರಾಜ್ಯಗಳ ಜನರ ಮೇಲೆ ಮಾಡುತ್ತಿರುವ ಕ್ರೂರ ಗಾಯವನ್ನು ಪ್ರಪಂಚಕ್ಕೆ ಪರಿಚಯಿಸಿತು.

AFSPA ವಿರುದ್ಧ ನಡೆದ ನೂರಾರು ಹೋರಾಟಗಳನ್ನು ಪ್ರಭುತ್ವ ಕ್ರೂರವಾಗಿ ಹತ್ತಿಕ್ಕಲು ಪ್ರಯತ್ನಿಸಿತು. ಉಪವಾಸ ಆರಂಭಿಸಿದ್ದ ಇರೋಮ್ ಶರ್ಮಿಳಾರವರ ಮೇಲೆ ಮೂರೇ ದಿವಸಕ್ಕೆ ಇವರ ಮೇಲೆ ಆತ್ಮಹತ್ಯೆಗೆ ಪ್ರಯತ್ನ ಎಂಬ ಕೇಸ್ ಜಡಿಯಿತು. ಶರ್ಮಿಳಾ ಜಗ್ಗಲಿಲ್ಲ. ನಂತರ ನ್ಯಾಯಾಂಗ ಬಂಧನ, ಜೈಲಿನಲ್ಲಿದ್ದಾಗಲೂ ಉಪವಾಸ ಮುಂದುವರೆಸಿದರು. ಕೊನೆಗೆ ಆಸ್ಪತ್ರೆಯಲ್ಲಿಟ್ಟು ಮೂಗಿನ ನಳಿಕೆ ಮೂಳಕ ಬಲವಂತವಾಗಿ ಆಹಾರ ನೀಡುವ ಪದ್ದತಿಯನ್ನು ಪೊಲೀಸರು ಅನುಸರಿಸಿದರು.

ಜಗತ್ತಿನಾದ್ಯಂತ ಇರೋಮ್ ಶರ್ಮಿಳಾರವರ ಹೋರಾಟಕ್ಕೆ ಬೆಂಬಲದ ಮಹಾಪೂರವೇ ಹರಿದುಬಂತು. ಇವರ ಹೋರಾಟಕ್ಕೆ ಸಹಮತ ಸೂಚಿಸಿ ದೇಶಾದ್ಯಂತ ಹೋರಾಟಗಳು ನಡೆದವು. ಆದರೆ ಕಿವುಡು, ಕುರುಡು ಸರ್ಕಾರ ಬಗ್ಗಲಿಲ್ಲ. ದಾಖಲೆಯ 16 ವರ್ಷಗಳ ಉಪವಾಸದ ನಂತರ ತಮ್ಮ ಹೋರಾಟದ ಮಾರ್ಗ ಬದಲಿಸಲು ಶರ್ಮಿಳಾ ನಿರ್ಧರಿಸಿದರು. ಅದರಂತೆ 2016ರ ಆಗಸ್ಟ್ 09 ರಂದು ಉಪವಾಸ ಸತ್ಯಾಗ್ರಹ ಕೊನೆಗೊಳಿಸಿ ಚುನಾವಣಾ ರಾಜಕೀಯದ ಮೂಲಕ ಹೋರಾಟ ಮುಂದುವರೆಸಲು ನಿರ್ಧರಿಸಿದರು.

ಇಂದು ಅದೇ AFSPA ಕಾಯ್ದೆಗೆ 15 ಜನರು ಬಲಿಯಾಗಿದ್ದಾರೆ. ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿವೆ. ಈಶಾನ್ಯ ರಾಜ್ಯ ಸರ್ಕಾರಗಳಿಗೆ ಆ ಕಾಯ್ದೆಯ ಅಪಾಯಗಳು ಈಗ ಗೋಚರಿಸುತ್ತಿವೆ. ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರು AFSPA ವಿಸ್ತರಣೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಕೂಡ AFSPA ರದ್ದಾಗಬೇಕೆಂದು ಒತ್ತಾಯಿಸಿದ್ದಾರೆ. ವಿಶೇ‍ಷವೆಂದರೆ ಈ ಇಬ್ಬರೂ ಸಹ ಬಿಜೆಪಿ ಮೈತ್ರಿ ಸರ್ಕಾರದವರಾಗಿದ್ದಾರೆ.

ಈಗಲಾದರೂ ಈ ವಿವಾದಾತ್ಮಕ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ ತೆಗೆದುಕೊಂಡು ಈಶಾನ್ಯ ರಾಜ್ಯಗಳಲ್ಲಿ ಜನರು ನೆಮ್ಮದಿ ಶಾಂತಿಯಿಂದ ಬದುಕುವಂತೆ ಮಾಡಬೇಕಿದೆ. ಇಲ್ಲದಿದ್ದರೆ ಪ್ರಭುತ್ವ ಮತ್ತು ನಾಗರೀಕರ ನಡುವಿನ ಸಂಘರ್ಷ ಮತ್ತಷ್ಟು ಹೆಚ್ಚಾಗುವುದರಲ್ಲಿ ಸಂಶಯವಿಲ್ಲ.


ಇದನ್ನೂ ಓದಿ; ನಾಗಾಲ್ಯಾಂಡ್ ಹತ್ಯಾಕಾಂಡ: ವಿಷಾದ ವ್ಯಕ್ತಪಡಿಸಿದ ಅಮಿತ್‌ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...