Homeಮುಖಪುಟನಾಗಾಲ್ಯಾಂಡ್ ಹತ್ಯಾಕಾಂಡ: AFSPA ರದ್ದತಿಗೆ ಮೇಘಾಲಯ ಮತ್ತು ನಾಗಾಲ್ಯಾಂಡ್ ಸಿಎಂಗಳ ಒತ್ತಾಯ

ನಾಗಾಲ್ಯಾಂಡ್ ಹತ್ಯಾಕಾಂಡ: AFSPA ರದ್ದತಿಗೆ ಮೇಘಾಲಯ ಮತ್ತು ನಾಗಾಲ್ಯಾಂಡ್ ಸಿಎಂಗಳ ಒತ್ತಾಯ

ವಿಶೇಷವೇನೆಂದರೆ ಎರಡು ರಾಜ್ಯಗಳಲ್ಲೂ ಬಿಜೆಪಿ ಮೈತ್ರಿ ಸರ್ಕಾರವಿದೆ.

- Advertisement -
- Advertisement -

ಭಾನುವಾರ ನಾಗಾಲ್ಯಾಂಡ್‌ನಲ್ಲಿ ನಡೆದ ನಾಗರಿಕ ಹತ್ಯೆಗಳ ನಡುವೆ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’(AFSPA) ಯನ್ನು ವಾಪಾಸು ಪಡೆಯಬೇಕು ಎಂದು ನಾಗಾಲ್ಯಾಂಡ್‌ ಮತ್ತು ಮೇಘಾಲಯ ಮುಖ್ಯಮಂತ್ರಿಗಳಿಬ್ಬರೂ ಒತ್ತಾಯಿಸಿದ್ದಾರೆ. ವಿಶೇಷವಾಗಿ ಎರಡು ರಾಜ್ಯಗಳಲ್ಲೂ ಬಿಜೆಪಿ ಮೈತ್ರಿ ಸರ್ಕಾರವಿದೆ. ನಾಗರಿಕ ಹಕ್ಕುಗಳ ಹೋರಾಟಗಾರರು “ಕಠಿಣ” ಕಾನೂನನ್ನು ಹಿಂತೆಗೆದುಕೊಳ್ಳಬೇಕೆಂದು ಹಲವಾರು ವರ್ಷಗಳಿಂದ ಒತ್ತಾಯಿಸುತ್ತಿದ್ದಾರೆ. ಈ ಕಾಯ್ದೆಯ ಅಡಿಯಲ್ಲಿ ಭದ್ರತಾ ಪಡೆಗಳು ಮಿತಿ ಮೀರಿ ನಡೆಯುತ್ತಿವೆ ಎಂದು ಅವರು ಆರೋಪ ಮಾಡುತ್ತಲೇ ಇದ್ದಾರೆ.

ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ ಅಥವಾ AFSPA ಹಲವಾರು ದಶಕಗಳಿಂದ ನಾಗಾಲ್ಯಾಂಡ್ ಮತ್ತು ಈಶಾನ್ಯದ ಭಾಗಗಳಲ್ಲಿ ಜಾರಿಯಲ್ಲಿದೆ. ವಿವಾದಿತ ಕಾನೂನಿನ ಅಡಿಯಲ್ಲಿ ಭದ್ರತಾ ಪಡೆಗಳು ರಾಜ್ಯದಲ್ಲಿ ಎಲ್ಲಿಯಾದರೂ ಕಾರ್ಯಾಚರಣೆಯನ್ನು ನಡೆಸಲು ಮತ್ತು ಯಾವುದೇ ಪೂರ್ವ ವಾರಂಟ್ ಇಲ್ಲದೆ ಯಾರನ್ನಾದರೂ ಬಂಧಿಸಬಹುದಾಗಿದೆ. ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ (ಇಂಫಾಲ್ ಮುನ್ಸಿಪಲ್ ಕೌನ್ಸಿಲ್ ಪ್ರದೇಶವನ್ನು ಹೊರತುಪಡಿಸಿ), ಅರುಣಾಚಲ ಪ್ರದೇಶದ ಚಾಂಗ್ಲಾಂಗ್, ಲಾಂಗ್ಡಿಂಗ್ ಮತ್ತು ತಿರಾಪ್ ಜಿಲ್ಲೆಗಳು ಮತ್ತು ಅಸ್ಸಾಂ ಗಡಿಯಲ್ಲಿರುವ ಅರುಣಾಚಲ ಪ್ರದೇಶದ ಎಂಟು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ AFSPA ಜಾರಿಯಲ್ಲಿದೆ.

ಇದನ್ನೂ ಓದಿ: ನಾಗಾಲ್ಯಾಂಡ್ ಹತ್ಯಾಕಾಂಡ: ವಿಷಾದ ವ್ಯಕ್ತಪಡಿಸಿದ ಅಮಿತ್‌ ಶಾ

“ AFSPA ರದ್ದುಗೊಳಿಸಬೇಕು” ಎಂದು ಕಾನ್ರಾಡ್ ಕೆ ಸಂಗ್ಮಾ ಟ್ವೀಟ್‌ ಮಾಡಿದ್ದಾರೆ, ಅವರ ಪಕ್ಷವು ಬಿಜೆಪಿಯ ಮಿತ್ರ ಪಕ್ಷವಾಗಿದೆ. ಮುಖ್ಯಮಂತ್ರಿಯ ಬೇಡಿಕೆಗೆ ರಾಜ್ಯ ಕಾಂಗ್ರೆಸ್ ಕೂಡ ಬೆಂಬಲಿಸಿದ್ದು, ಈ ಕುರಿತು ಸಮಾಲೋಚನೆಗಾಗಿ ಸಭೆ ಕರೆಯುವಂತೆ ಒತ್ತಾಯಿಸಿದೆ.

ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರು AFSPA ವಿಸ್ತರಣೆಗಾಗಿ ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಇದು ಗೊಂದಲದ ಪ್ರದೇಶ ಎಂದು ಪ್ರತಿಪಾದಿಸಿ ಪ್ರತಿ ವರ್ಷ ಒಕ್ಕೂಟ ಸರ್ಕಾರ ನಾಗಾಲ್ಯಾಂಡ್‌ನಲ್ಲಿ ಎಎಫ್‌ಎಸ್‌ಪಿಎ ಅನ್ನು ವಿಸ್ತರಿಸುತ್ತದೆ. ಆದರೆ ಎಲ್ಲಾ ಸಶಸ್ತ್ರ ಗುಂಪುಗಳು ಕದನ ವಿರಾಮ ಮತ್ತು ಶಾಂತಿ ಮಾತುಕತೆಯ ಭಾಗವಾಗಿದೆ. ಹಾಗಾದರೆ ಅದನ್ನು ವಿಸ್ತರಿಸುವುದು ಯಾಕೆ?” ಎಂದು ಕೇಳಿದ್ದಾರೆ.

“ಎಎಫ್‌ಎಸ್‌ಪಿಎ ಸಶಸ್ತ್ರ ಪಡೆಗಳಿಗೆ ವಿನಾಯಿತಿ ನೀಡುತ್ತದೆ…ಈ ಕಾನೂನು ಅಂತರರಾಷ್ಟ್ರೀಯ ವೇದಿಕೆಗಳಲ್ಲಿಯೂ ಚರ್ಚೆಯಾಗುತ್ತಿದೆ. ನಾವು ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾಗಿದ್ದು, ಬಹಳಷ್ಟು ಜನರು ಎಎಫ್‌ಎಸ್‌ಪಿಎ ತೆಗೆದುಹಾಕಬೇಕೆಂದು ಒತ್ತಾಯಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ನಾಗಾಲ್ಯಾಂಡ್ ಹತ್ಯಾಕಾಂಡ: ಈಶಾನ್ಯ ಭಾರತದಲ್ಲಿ AFSPA ರದ್ದತಿ ಹೋರಾಟಕ್ಕೆ ಮತ್ತಷ್ಟು ಧ್ವನಿ

ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ಭಾನುವಾರ ನಡೆದ ಸೇನೆಯ ಕಾರ್ಯಾಚರಣೆಯಲ್ಲಿ ಭೀಕರವಾಗಿ ಹತ್ಯಾಕಾಂಡ ನಡೆದಿದೆ. ಇದರಲ್ಲಿ 14 ಗ್ರಾಮಸ್ಥರು ಮತ್ತು ಒಬ್ಬ ಯೋಧ ಸಾವನ್ನಪ್ಪಿದ್ದಾರೆ. ಸೇನೆಯ 21 ಪ್ಯಾರಾ ವಿಶೇಷ ಪಡೆಗಳು ಏಕಾಏಕಿಯಾಗಿ ಗುಂಡು ಹಾರಿಸಿದವು ಎಂದು ಪೊಲೀಸ್ ಎಫ್‌ಐಆರ್ ಹೇಳಿದೆ. ಘಟನೆಯ ಬಗ್ಗೆ ಸೇನೆಯು ತೀವ್ರ ವಿಷಾದವನ್ನು ವ್ಯಕ್ತಪಡಿಸಿದ್ದು, ಉನ್ನತ ಮಟ್ಟದಲ್ಲಿ ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದೆ.

ಇದನ್ನೂ ಓದಿ:ನಾಗಾಲ್ಯಾಂಡ್: ದಂಗೆಕೋರರ ವಿರುದ್ಧದ ಕಾರ್ಯಚರಣೆಯಲ್ಲಿ 13 ಮಂದಿ ಗ್ರಾಮಸ್ಥರನ್ನು ಹತ್ಯೆಗೈದ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...