Homeಚಳವಳಿವರದಕ್ಷಿಣೆ ಅನಿಷ್ಟ ಕೊನೆಗೊಳಿಸಲು ಕಾನೂನುಗಳಿದ್ದರೂ ಕೂಡ, ಜನರು ತಮ್ಮೊಳಗೆ ಬದಲಾಗಬೇಕು: ಸುಪ್ರೀಂಕೋರ್ಟ್

ವರದಕ್ಷಿಣೆ ಅನಿಷ್ಟ ಕೊನೆಗೊಳಿಸಲು ಕಾನೂನುಗಳಿದ್ದರೂ ಕೂಡ, ಜನರು ತಮ್ಮೊಳಗೆ ಬದಲಾಗಬೇಕು: ಸುಪ್ರೀಂಕೋರ್ಟ್

- Advertisement -
- Advertisement -

ವರದಕ್ಷಿಣೆ ಎಂಬ ಸಾಮಾಜಿಕ ಅನಿಷ್ಟ ಕೊನೆಗೊಳಿಸಲು ಕಾನೂನುಗಳು ಮುಖ್ಯವಾಗಿದ್ದರೂ, ಜನರು ಸಹ ಒಳಗಿನಿಂದ ಬದಲಾಗಬೇಕು ಮತ್ತು ಮಹಿಳೆಯರನ್ನು ಗೌರವದಿಂದ ನಡೆಸಿಕೊಳ್ಳುವುದನ್ನು ಕಲಿಯಬೇಕು ಎಂದು ಸುಪ್ರೀಂಕೋರ್ಟ್ ಡಿಸೆಂಬರ್ 6 ರಂದು ಹೇಳಿದೆ.

ಭಾರತೀಯ ದಂಡ ಸಂಹಿತೆಯಲ್ಲಿ ಹಲವಾರು ಕ್ರಿಮಿನಲ್ ಕಾನೂನು ನಿಬಂಧನೆಗಳ ಹೊರತಾಗಿಯೂ ವರದಕ್ಷಿಣೆ ಬೆದರಿಕೆಗಳು ಮುಂದುವರೆದಿದೆ. ಹೀಗಾಗಿ ಮಾಹಿತಿ ಹಕ್ಕು (ಆರ್‌ಟಿಐ) ಅಧಿಕಾರಿಗೆ ಸಮಾನವಾದ ವರದಕ್ಷಿಣೆ ನಿಷೇಧ ಅಧಿಕಾರಿಯನ್ನು ನೇಮಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠ ನಡೆಸಿದೆ.

“ಕೇರಳದ ಪರಿಸ್ಥಿತಿಯಿಂದ ನಾನು ವಿಚಲಿತನಾಗಿದ್ದೇನೆ. ಆಯುರ್ವೇದ ವಿದ್ಯಾರ್ಥಿನಿ ವರದಕ್ಷಿಣೆ ಪ್ರಕರಣದಲ್ಲಿ ಕ್ರಮ ಕೈಗೊಳ್ಳದ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಕೇರಳದಲ್ಲಿ ಇದೊಂದು ಅನಿಷ್ಟ ಪದ್ಧತಿಯಾಗಿದೆ. ಅತಿಯಾದ ಚಿನ್ನ ಮತ್ತು ಇತರ ವಸ್ತುಗಳಿಗೆ ಬೇಡಿಕೆ ಇಡಲಾಗುತ್ತಿದೆ” ಎಂದು ಕೇರಳದ ಅರ್ಜಿದಾರರ ಪರ ಹಾಜರಾಗಿದ್ದ ವಕೀಲ ವಿ.ಕೆ.ಬಿಜು ಸುಪ್ರೀಂಕೋರ್ಟ್‌ ಪೀಠಕ್ಕೆ ಹೇಳಿದ್ದಾರೆ.

ಇದನ್ನೂ ಓದಿ: 1930 ಕ್ಕೆ ಹೋಲಿಸಿದರೆ ಈಗ ವರದಕ್ಷಿಣೆ 90% ಹೆಚ್ಚಳವಾಗಿದೆ: ಕಾರಣವೇನು?

ಆಯುರ್ವೇದ ಅಧ್ಯಯನ ಮಾಡುತ್ತಿದ್ದ 24 ವರ್ಷದ ವಿಸ್ಮಯಾ ಎಂಬ ವೈದ್ಯಕೀಯ ವಿದ್ಯಾರ್ಥಿನಿ ಕೇರಳದ ಸಾಸ್ತಮಕೋಟ್ಟಾದಲ್ಲಿನ ತನ್ನ ಗಂಡನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಆಕೆಯ ಸಾವನ್ನಪ್ಪಿದ ಒಂದು ದಿನದ ಬಳಿಕ, ವರದಕ್ಷಿಣೆ ಕಿರುಕುಳ ಆರೋಪದಲ್ಲಿ ಪೊಲೀಸರು ಆಕೆಯ ಪತಿಯನ್ನು ಬಂಧಿಸಿದ್ದರು.

ದಂಪತಿಗಳಿಗೆ ವರದಕ್ಷಿಣೆಯ ವಿರುದ್ಧ ಎಚ್ಚರಿಕೆ ನೀಡಲು ಮತ್ತು ಜಾಗೃತಿ ಮೂಡಿಸಲು ಕಡ್ಡಾಯ “ವಿವಾಹಪೂರ್ವ” ಕೋರ್ಸ್‌ಗಳನ್ನು ನಡೆಸಬೇಖು. ಮದುವೆಗೆ ಈ ಕೋರ್ಸ್‌ಗಳನ್ನು ಕಡ್ಡಾಯ ಪೂರ್ವ-ಷರತ್ತಾಗಿ ಮಾಡಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿದಾರರು ಮನವಿ ಮಾಡಿದ್ದಾರೆ.

ಕಟ್ಟುನಿಟ್ಟಿನ ಕಾನೂನುಗಳ ಹೊರತಾಗಿಯೂ, ವರದಕ್ಷಿಣೆ ಸಮಾಜವನ್ನು ಹಾಳುಮಾಡುತ್ತದೆ. ಇದರಿಂದ ಅಮಾಯಕ ಯುವತಿಯರ ಜೀವ ಹೋಗುತ್ತಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದ್ದಾರೆ.

“ಕಾನೂನುಗಳು ಮುಖ್ಯ, ಆದರೆ ಬದಲಾವಣೆಯು ಜನರ ಒಳಗಿನಿಂದ ಬರಬೇಕು. ಮದುವೆಯ ಮೂಲಭೂತ ಸಾಮಾಜಿಕ ಮೌಲ್ಯದ ಬಗ್ಗೆ ತಿಳುವಳಿಕೆ ಇರಬೇಕು. ಒಂದು ಕುಟುಂಬಕ್ಕೆ ಬರುವ ಮಹಿಳೆಯನ್ನು ನಾವು ಹೇಗೆ ನಡೆಸಿಕೊಳ್ಳುತ್ತೇವೆ ಮತ್ತು ಮಹಿಳೆಯ ಸಾಮಾಜಿಕ ಪ್ರಾಮುಖ್ಯತೆಯನ್ನು ಹೇಗೆ ಪರಿಗಣಿಸುತ್ತೇವೆ ಎಂಬುದು ಕೂಡ ಮುಖ್ಯ” ಎಂದು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ.

ವರದಕ್ಷಿಣೆ ವಿರುದ್ಧದ ಕಾನೂನಿಗೆ “ಹೊಸ ನೋಟ” ತಂದು ಕಾನೂನು ಬಲಪಡಿಸಲು ಭಾರತದ ಕಾನೂನು ಆಯೋಗಕ್ಕೆ ಸುಪ್ರೀಂಕೋರ್ಟ್ ಆದೇಶಿಸಿದೆ.


ಇದನ್ನೂ ಓದಿ: ವರದಕ್ಷಿಣೆ ಕಿರುಕುಳ ಪರಿಶೀಲನೆಗೆ ಕರಡು ಮಸೂದೆ ಸಲ್ಲಿಸಿದ ಕೇರಳ ಮಹಿಳಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....