Homeಚಳವಳಿರೈತ ಹೋರಾಟ: ದೇಶಾದ್ಯಂತ ರೈತರಿಂದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮಹಾಪರಿನಿರ್ವಾಣ ದಿವಸ ಆಚರಣೆ

ರೈತ ಹೋರಾಟ: ದೇಶಾದ್ಯಂತ ರೈತರಿಂದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮಹಾಪರಿನಿರ್ವಾಣ ದಿವಸ ಆಚರಣೆ

ರೈತ ಚಳವಳಿಯನ್ನು ನಿರಂತರವಾಗಿ ಬೆಂಬಲಿಸುತ್ತಿರುವ ದೆಹಲಿಯ ಗಡಿಯ ಸಮೀಪದ ನಾಗರಿಕರಿಗೆ ಎಸ್‌ಕೆಎಂ ಧನ್ಯವಾದ ಅರ್ಪಿಸಿದೆ

- Advertisement -
- Advertisement -

ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾದ ಕರೆಯ ಮೇರೆಗೆ ದೇಶಾದ್ಯಂತ ರೈತ ಸಂಘಟನೆಗಳು ಭಾರತದ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವನ್ನು ಆಚರಿಸಿದ್ದಾರೆ. ದೆಹಲಿಯ ಹೋರಾಟದ ಗಡಿಗಳಲ್ಲಿ ಪ್ರತಿಭಟನಾ ನಿರತ ರೈತರು ಅಂಬೇಡ್ಕರ್‌ ಅವರ ಭಾವಚಿತ್ರಗಳನ್ನು ಹಿಡಿದು ಜಾಥಾ ನಡೆಸಿದ್ದಾರೆ.

“ಮಹಾ ಪರಿನಿರ್ವಾಣ ದಿವಸ ಆಚರಣೆ ಮಾಡಿ, ಭಾರತ ಸಂವಿಧಾನವನ್ನು ರಕ್ಷಿಸುವ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದೆವು. ಬಾಬಾ ಸಾಹೇಬರ ನೇತೃತ್ವದಲ್ಲಿ ರಚಿತವಾದ ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಘನತೆಯಿಂದ ಬದುಕುವ ಹಕ್ಕನ್ನು ನೀಡಿದೆ, ಅದಕ್ಕಾಗಿಯೇ ಸಂಯುಕ್ತ ಕಿಸಾನ್ ಮೋರ್ಚಾ ಹೋರಾಡುತ್ತಿದೆ” ಎಂದು ಎಸ್‌ಕೆಎಂ ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಬಾಬಾಸಾಹೇಬರ ಪುಸ್ತಕಗಳ ಪ್ರಕಟಣೆಗೂ ಅವರ ಜೀವನದಷ್ಟೇ ಕಲ್ಲು ಮುಳ್ಳಿನ ಹಾದಿ!

26 ನವೆಂಬರ್ 2020 ರಿಂದ ರೈತ ಚಳವಳಿಯನ್ನು ನಿರಂತರವಾಗಿ ಬೆಂಬಲಿಸುತ್ತಿರುವ ದೆಹಲಿಯ ಗಡಿಯ ಸಮೀಪದ ನಾಗರಿಕರಿಗೆ ಎಸ್‌ಕೆಎಂ ಧನ್ಯವಾದ ಅರ್ಪಿಸಿದೆ. ಪ್ರತಿಭಟನಾ ಸ್ಥಳಗಳ ಬಳಿ ವಾಸಿಸುವ ನಾಗರಿಕರನ್ನು ರೈತರ ವಿರುದ್ಧ ಆಡಳಿತ ಪಕ್ಷ ಮತ್ತು ಮಾಧ್ಯಮಗಳು ನಿರಂತರವಾಗಿ ಪ್ರಚೋದಿಸುತ್ತಿದ್ದವು. ಆದರೆ, ಅವರು ನಮ್ಮ ಪರವಾಗಿಯೇ ಇದ್ದು, ರೈತ ಚಳವಳಿಗೆ ಸಹಾಯ ಮಾಡಿದ್ದಾರೆ. ಇದು ರೈತರಿಲ್ಲಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ ಎಂದು ಎಸ್‌ಕೆಎಂ ತಿಳಿಸಿದೆ.

ಇನ್ನು, ವಿವಾದಿತ ಮೂರು ಕಾನೂನುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರದ ನಂತರ ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ರೈತ ಚಳವಳಿ ಪ್ರಭಾವ ಬೀರುವುದಿಲ್ಲ ಎಂದು ಹಲವಾರು ಬಿಜೆಪಿ ನಾಯಕರು ಹೇಳಿಕೆಗಳನ್ನು ನೀಡಿದ್ದಾರೆ. ಇದು ಸಂಪೂರ್ಣವಾಗಿ ಆಧಾರರಹಿತವಾಗಿದೆ ಎಂದು ರೈತ ಸಂಘಟನೆ ತಿಳಿಸಿದೆ.

’ಎಂಎಸ್‌ಪಿಯ ಕಾನೂನು, ವಿದ್ಯುತ್ ತಿದ್ದುಪಡಿ ಮಸೂದೆ ಹಿಂಪಡೆಯುವಿಕೆ, ವಾಯುಮಾಲಿನ್ಯ ಮಸೂದೆಯಿಂದ ರೈತರಿಗೆ ದಂಡ ವಿಧಿಸುವ ಷರತ್ತನ್ನು ತೆಗೆದುಹಾಕುವುದು, ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಅವರ ಬಂಧನ ಮತ್ತು ವಜಾ, ರೈತರ ಮೇಲೆ ಹೇರಲಾಗಿರುವ ನಕಲಿ ಪ್ರಕರಣಗಳನ್ನು ಹಿಂಪಡೆಯುವುದು. ಹುತಾತ್ಮ ರೈತರ ಕುಟುಂಬಗಳ ಪುನರ್ವಸತಿ ಮತ್ತು ಹುತಾತ್ಮರ ಸ್ಮಾರಕ ಇತ್ಯಾದಿ ಸಮಸ್ಯೆಗಳು ಬಗೆಹರಿಯದೆ ಉಳಿದಿವೆ. ಹೀಗಾಗಿ ಈ ಸಮಸ್ಯೆಗಳು ಮಿಷನ್ ಯುಪಿ ಮತ್ತು ಉತ್ತರಾಖಂಡದ ಮೇಲೆ ಪ್ರಭಾವ ಬೀರುತ್ತವೆ ಎಂದು ಎಸ್‌ಕೆಎಂ ತಿಳಿಸಿದೆ.


ಇದನ್ನೂ ಓದಿ: MSP ಕಾನೂನಿಗೆ ಆಗ್ರಹಿಸಿ ಸಿಂಘು ಗಡಿಯಲ್ಲಿ ರೈತರ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...