Homeಮುಖಪುಟಮೂರು ನಿಮಿಷಗಳ Zoom ಸಬೆಯಲ್ಲಿ 900 ಉದ್ಯೋಗಿಗಳ ವಜಾ!

ಮೂರು ನಿಮಿಷಗಳ Zoom ಸಬೆಯಲ್ಲಿ 900 ಉದ್ಯೋಗಿಗಳ ವಜಾ!

- Advertisement -
- Advertisement -

ಕಂಪೆನಿಯೊಂದರ ಮೂರು ನಿಮಿಷದ ಝೂಮ್‌ ಸಭೆಯಲ್ಲಿ ಸುಮಾರು 900 ಉದ್ಯೋಗಿಗಳನ್ನು ಒಂದೇ ಬಾರಿಗೆ ವಜಾ ಗೊಳಿಸಿರುವ ವಿಲಕ್ಷಣ ಘಟನೆ ನಡೆದಿದೆ. ಅಮೆರಿಕ ಮೂಲದ ಸಂಸ್ಥೆಯಾದ Better.com ನ ಸಿಇಒ ವಿಶಾಲ್ ಗಾರ್ಗ್ ಅವರು ಈ ನಿರ್ಧಾರವನ್ನು ಝೂಮ್ ಸಭೆಯಲ್ಲಿ ಪ್ರಕಟಿಸಿದ್ದಾರೆ. ಮುಂಬರುವ ಕ್ರಿಸ್‌ಮಸ್‌ ಹಬ್ಬದ ಸೀಸನ್‌ಗೆ ಮುಂಚಿತವಾಗಿ ಘಟನೆ ನಡೆದಿದ್ದು ಕಂಪನಿಯ ಸಿಬ್ಬಂದಿಗೆ ತೀವ್ರ ಆಘಾತವನ್ನುಂಟುಮಾಡಿದೆ.

“ನಾನು ಉತ್ತಮ ಸುದ್ದಿಯೊಂದಿಗೆ ನಿಮ್ಮ ಬಳಿಗೆ ಬರುತ್ತೇನೆ. ಮಾರುಕಟ್ಟೆ ಬದಲಾಗಿದೆ ಮತ್ತು ಬದುಕಬೇಕಾದರೆ ನಾವು ಅದರೊಂದಿಗೆ ಚಲಿಸಬೇಕಾಗಿದೆ. ಹೀಗಾದರೆ ಆಶಾದಾಯಕವಾಗಿ, ನಾವು ಅಭಿವೃದ್ಧಿ ಹೊಂದಬಹುದು ಮತ್ತು ನಮ್ಮ ಧ್ಯೇಯವನ್ನು ತಲುಪಿಸಬಹುದು” ಎಂದು ಹೇಳುತ್ತಾ ತಮ್ಮ ಕಠೋರವಾದ ಪ್ರಕಟಣೆಯನ್ನು ಹೇಳಿದ್ದಾರೆ.

ಇದನ್ನೂ ಓದಿ:ಸಹೋದ್ಯೋಗಿಗೆ ಲೈಂಗಿಕ ದೌರ್ಜನ್ಯ: ಯುಪಿ ಸರ್ಕಾರಿ ಉದ್ಯೋಗಿ ಬಂಧನ

“ನೀವು ಈ ಝೂಮ್‌ ಸಭೆಯಲ್ಲಿದ್ದರೆ, ವಜಾಗೊಳ್ಳುತ್ತಿರುವ ದುರದೃಷ್ಟಕರ ಗುಂಪಿನ ಭಾಗವಾಗಿದ್ದೀರಿ ಎಂದರ್ಥ…ನಿಮ್ಮ ಉದ್ಯೋಗವನ್ನು ತಕ್ಷಣವೇ ಕೊನೆಗೊಳಿಸಲಾಗುತ್ತದೆ” ಎಂದು ಅವರು ಸಭೆಯಲ್ಲಿ ಹೇಳಿದ್ದಾರೆ. ವಜಾಗೊಂಡಿರುವ ಉದ್ಯೋಗಿಗಳು ದಿನಕ್ಕೆ ಎರಡು ಗಂಟೆ ಮಾತ್ರ ಕೆಲಸ ಮಾಡುವುದರಿಂದ ಹೆಚ್ಚು ಕೆಲಸ ಮಾಡುವ ಉದ್ಯೋಗಿಗಳು ಮತ್ತು ಕಂಪನಿಯ ಗ್ರಾಹಕರಿಂದ ಅವರು ‘ಕದಿಯುತ್ತಿದ್ದಾರೆ’ ಎಂದು ವಿಶಾಲ್‌ ಗಾರ್ಗ್ ಆರೋಪಿಸಿದ್ದಾರೆ.

ರಜಾ ಅವಧಿಗೆ ಮುನ್ನವೇ ನೌಕರರನ್ನು ವಜಾಗೊಳಿಸಿರುವುದು ಬೇಸರ ತಂದಿದೆಯಾದರೂ ಅವರಿಗೆ ಸೂಕ್ತ ಸೌಲಭ್ಯ ಮತ್ತು ಪ್ಯಾಕೇಜ್ ನೀಡಲಾಗುವುದು ಎಂದು ಕಂಪನಿಯ CFO ಕೆವಿನ್ ರಯಾನ್ CNN ಬ್ಯುಸಿನೆಸ್‌ಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೆಲಸ ಕಳೆದು ಕೊಂಡಿರುವವರಲ್ಲಿ ಅಮರಿಕಾ ಹಾಗೂ ಭಾರತದ ಉದ್ಯೋಗಿಗಳು ಸೇರಿದ್ದಾರೆ ಎಂದು ವರದಿಗಳು ಹೇಳಿವೆ.

“ಮೋಸ ಹೋದ ಅನುಭವವಾಗುತ್ತಿದೆ” ಎಂದು ಸಭೆಯಲ್ಲಿ ವಜಾಗೊಂಡ ಕಂಪನಿಯ ಮಾಜಿ ಉದ್ಯೋಗಿಯೊಬ್ಬರು ತಿಳಿಸಿದ್ದಾರೆಂದು TNIE ವರದಿ ಮಾಡಿದೆ. “ಆಂತರಿಕವಾಗಿ ತಂಡದ ಒಡನಾಟ ತುಂಬಾ ಚೆನ್ನಾಗಿತ್ತು ಆದರೆ ಆಡಳಿತವು ನಮ್ಮನ್ನು ಕೈಬಿಟ್ಟಿದೆ” ಎಂದು ಹೆಸರು ಹೇಳಲು ಇಚ್ಛಿಸದ ಮಾಜಿ ಉದ್ಯೋಗಿಯೊಬ್ಬರು ಹೇಳಿದ್ದಾರೆ. “ವಿಶಾಲ್‌ ಗಾರ್ಗ್‌ ತುಂಬಾ ಕೆಟ್ಟ ಕಾರ್ಯನಿರ್ವಾಹಕನಾಗಿದ್ದು, ಒಮ್ಮೆ ತನ್ನ ಉದ್ಯೋಗಿಗಳನ್ನು ‘ಕಿವುಡ ಡಾಲ್ಫಿನ್‌ಗಳ ಗುಂಪು’ ಎಂದು ಕರೆದಿದ್ದರು” ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:ಖಾಸಗಿ ಉದ್ಯೋಗಗಳನ್ನಾದರೂ ಸೃಷ್ಟಿಸಬೇಕಲ್ಲವೇ: ಡಿ.ಕೆ.ಶಿವಕುಮಾರ್‌ ‘ಒಂದು ಪ್ರಶ್ನೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...