Homeಮುಖಪುಟಸಂವಿಧಾನದ ಆಶಯಕ್ಕೆ ವಿರುದ್ಧವಾದ ಮತಾಂತರದ ಚರ್ಚೆಗಳು: ಡಾ.ಹೆಚ್.ಸಿ ಮಹದೇವಪ್ಪ

ಸಂವಿಧಾನದ ಆಶಯಕ್ಕೆ ವಿರುದ್ಧವಾದ ಮತಾಂತರದ ಚರ್ಚೆಗಳು: ಡಾ.ಹೆಚ್.ಸಿ ಮಹದೇವಪ್ಪ

“ಧಾರ್ಮಿಕ ಮತ್ತು ಸಾಮಾಜಿಕ ಘನತೆಯನ್ನು ಬಯಸಿ ಆಗುವ ಮತಾಂತರವನ್ನು ಯಾರಾದರೂ ಕೂಡಾ ಅಣಕಿಸಿದರೆ ಅಂತಹ ಮೂರ್ಖರ ಬಗ್ಗೆ ತಲೆ ಕೆಡಿಸಿಕೊಳ್ಳದೇ ಮುನ್ನಡೆಯಿರಿ” ಎಂದು ಬಾಬಾ ಸಾಹೇಬರು ಹೇಳುತ್ತಾರೆ.

- Advertisement -
- Advertisement -

ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಂಡಿಸುವ ಕುರಿತಂತೆ ರಾಜ್ಯ ಸರ್ಕಾರದ ಸಚಿವರು ಮಾತನಾಡಲು ಆರಂಭಿಸಿರುವ ಬೆನ್ನಲ್ಲೇ ಮತಾಂತರದ ಕುರಿತಂತೆ ಚರ್ಚೆಗಳು ಮುನ್ನಲೆಗೆ ಬಂದಿವೆ. ಭಾರತೀಯ ಸಂವಿಧಾನದಲ್ಲಿ 25 -28 ನೇ ವಿಧಿಯ ಅನುಸಾರ ನೀಡಲಾಗಿರುವ ಮೂಲಭೂತ ಹಕ್ಕುಗಳಲ್ಲಿ ಸ್ವಾತಂತ್ರ್ಯದ ಹಕ್ಕು ಕೂಡಾ ಒಂದು. ನಮ್ಮಲ್ಲಿನ ಧಾರ್ಮಿಕ, ಭೌಗೋಳಿಕ ಹಾಗೂ ಜನಾಂಗೀಯ ಹಾಗೂ ಇನ್ನಿತರೆ ವೈವಿಧ್ಯತೆಯ ಕಾರಣದಿಂದಾಗಿಯೇ 1976 ರಲ್ಲಿ ಸಂವಿಧಾನದ ಪ್ರಸ್ತಾವನೆಯಲ್ಲಿ ತಿದ್ದುಪಡಿ ತಂದು ಭಾರತವನ್ನು ಜಾತ್ಯಾತೀತ ದೇಶವೆಂದು ಕರೆಯಲಾಗಿದೆ.

ಇನ್ನು ಧಾರ್ಮಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದಂತೆ ಭಾರತದ ಯಾವುದೇ ಪ್ರಜೆಯೂ ಕೂಡಾ ಶಾಂತಿಯುತವಾಗಿ ಸಂವಿಧಾನದ ಚೌಕಟ್ಟಿನಲ್ಲಿ ತಾನು ಇಚ್ಛಿಸುವ ಧರ್ಮವನ್ನು ಆಯ್ಕೆ ಮಾಡಿಕೊಂಡು ಅದನ್ನು ಪ್ರಚಾರ ಮಾಡಬಹುದಾಗಿದೆ. ಆದರೆ ಧಾರ್ಮಿಕ ಸಾಮರಸ್ಯವನ್ನು ಮೂಡಿಸುವ ಉದ್ದೇಶದಿಂದ ಸಂವಿಧಾನದಲ್ಲಿ ನೀಡಿದ ಈ ಅವಕಾಶವನ್ನು ಅರ್ಥ ಮಾಡಿಕೊಳ್ಳದೇ ಬಹಳಷ್ಟು ಮಂದಿ ಎಡವಿದ್ದಾರೆ. ಹಾಗಾಗಿಯೇ ಧಾರ್ಮಿಕ ಅಸಹನೆ ಉಂಟಾಗಿ ಕೋಮು ಗಲಭೆಗಳು ಉಂಟಾಗಿದ್ದು 1984 ರಲ್ಲಿ ದೆಹಲಿಯಲ್ಲಿ ನಡೆದ ಸಿಖ್ಖರ ಹತ್ಯೆ, 1990 ರಲ್ಲಿ ಕಾಶ್ಮೀರ ಮತ್ತು ಪಂಜಾಬ್ ನಲ್ಲಿ ನಡೆದ ಹಿಂದೂ ವಿರೋಧಿ ಕಲಹಗಳು, 2002 ರ ಗುಜರಾತ್ ಹತ್ಯಾಕಾಂಡ ಹಾಗೂ 2008 ರಲ್ಲಿ ಓರಿಸ್ಸಾದಲ್ಲಿ ನಡೆದ ಕ್ರೈಸ್ತರ ಕಲಹಗಳನ್ನು ನಾವು ಕಾಣಬಹುದು.

ಜಾತ್ಯಾತೀತ ತತ್ವಗಳ ನಮ್ಮ ದೇಶದಲ್ಲಿ ಆಯಾ ರಾಜ್ಯಗಳಲ್ಲಿ ನಿರ್ದಿಷ್ಟವಾದ ಧಾರ್ಮಿಕ ಆಚರಣೆಗಳಿವೆ. ಉದಾಹರಣೆಗೆ ಮುಸ್ಲೀಮರು ಹೆಚ್ಚಾಗಿರುವ ಜಮ್ಮು ಕಾಶ್ಮೀರದಲ್ಲಿ ಇಸ್ಲಾಂ ಧರ್ಮದ ಆಚರಣೆಗಳು ಹೆಚ್ಚಾಗಿದ್ದರೆ, ಸಿಖ್ಖರು ಹೆಚ್ಚಾಗಿರುವ ಪಂಜಾಬಿನಲ್ಲಿ ಸಿಖ್ ಧರ್ಮದ ಆಚರಣೆಗಳು ಹೆಚ್ಚಾಗಿವೆ. ಇನ್ನು ಕ್ರೈಸ್ತ ಸಮುದಾಯದ ಜನರು ಹೆಚ್ಚಾಗಿರುವ ನಾಗಾಲ್ಯಾಂಡ್, ಮೇಘಾಲಯ ಮತ್ತು ಮಿಜೋರಾಂನಲ್ಲಿ ಆ ಧರ್ಮದ ಆಚರಣೆಗಳು ಜನ ಸಾಮಾನ್ಯರ ಸಹಜ ಸಂಪ್ರದಾಯಗಳಂತಿವೆ. ಇನ್ನು ಸಿಕ್ಕಿಂ, ಲಡಾಕ್, ಅರುಣಾಚಲ ಪ್ರದೇಶ, ಮಹಾರಾಷ್ಟ್ರ ಹಾಗೂ ಡಾರ್ಜಿಲಿಂಗ್ ನಲ್ಲಿ ಬೌದ್ಧರ ಜನಸಂಖ್ಯೆಯು ಗಣನೀಯವಾಗಿದೆ. ಸಿಖ್, ಬೌದ್ಧ, ಜೈನ, ಕ್ರೈಸ್ತ ಮತ್ತು ಮುಸ್ಲಿಂ ಧರ್ಮಗಳು ಭಾರತದ ಪ್ರಾದೇಶಿಕ ಅಸ್ಮಿತೆಯ ಭಾಗವಾಗಿದ್ದು ಮುಸ್ಲೀಮರು ಅಲ್ಪಸಂಖ್ಯಾತರ ವಿಭಾಗದಲ್ಲಿ ಹೆಚ್ಚಿನ ಜನರನ್ನು ಹೊಂದಿದ ಸಮುದಾಯವಾಗಿದ್ದಾರೆ. ಹೀಗಿರುವಾಗಿ ಇಲ್ಲಿನ ಧಾರ್ಮಿಕ ವೈವಿಧ್ಯತೆಗಳನ್ನು ಅರ್ಥ ಮಾಡಿಕೊಳ್ಳದೇ ಕಲಹಗಳನ್ನು ಉಂಟು ಮಾಡಬಲ್ಲಂತಹ ಕಾಯ್ದೆಗಳನ್ನು ಜಾರಿ ಮಾಡಲು ಹೊರಟಿರುವುದು ಅರ್ಥಹೀನ

ಅಭಿವೃದ್ಧಿಶೀಲ ಸಮಾಜಗಳ ಅಧ್ಯಯನ ಕೇಂದ್ರದ ಸ್ಥಾಪಕರಾದ ರಜನಿ ಕೊಠಾರಿ ಅವರು “ಭಾರತವು ಮೂಲತಃ ಸಹಿಷ್ಣುತೆಯ ತತ್ವದ ಮೇಲೆ ನಿರ್ಮಿಸಲ್ಪಟ್ಟ ನಾಗರೀಕ ದೇಶವಾಗಿದೆ” ಎಂದು ಅಭಿಪ್ರಾಯ ಪಡುತ್ತಾರೆ. ಅದು ವಾಸ್ತವವೂ ಕೂಡಾ.

ಆದರೆ ಸಂವಿಧಾನದ ಆಶಯಗಳ ಬಗ್ಗೆ ಸರಿಯಾದ ತಿಳುವಳಿಕೆ ಮತ್ತು ಸಂವಿಧಾನದ ಕುರಿತು ಗೌರವ ಇಲ್ಲದ ಬಿಜೆಪಿಗರು ಧಾರ್ಮಿಕ ಅಸಹಿಷ್ಣುತೆಯನ್ನು ಹಬ್ಬುವ ಮೂಲಕ ಭಾರತದ ಸಾಮರಸ್ಯವನ್ನು ಹಾಳು ಮಾಡುವಂತಹ ಕೆಲಸವನ್ನು ಮಾಡುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಇದೀಗ ಕರೋನಾ ಮತ್ತು ಒಮೈಕ್ರಾನ್ ವೈರಸ್ ನ ತೊಂದರೆ ಇರುವ ಮತ್ತು ಜನ ಸಾಮಾನ್ಯರು ಬೆಲೆ ಏರಿಕೆ ಹಾಗೂ ಸರ್ಕಾರದ ದುರಾಡಳಿತದಿಂದ ತತ್ತರಿಸಿ ಹೋಗಿರುವ ಸಂದರ್ಭದಲ್ಲಿ ಧಾರ್ಮಿಕ ಕಲಹವನ್ನು ಸೃಷ್ಟಿಸಲು ಮುಂದಾಗಿರುವ ಇವರು ಅಸಂವಿಧಾನಿಕವಾಗಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡಲು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ನಿಜಕ್ಕೂ ಜನ ಸಾಮಾನ್ಯರ ಸಂಕಷ್ಟಗಳ ನಡುವೆ ಇವರು ಮಾಡುತ್ತಿರುವ ಕಪಿಚೇಷ್ಟೆಗಳು ತೀರಾ ಅಮಾನವೀಯವಾಗಿರುವಂತಹವು.

ಮತಾಂತರ ಎಂಬುದು ಸಂವಿಧಾನವು ವ್ಯಕ್ತಿಯೊಬ್ಬನಿಗೆ ನೀಡಿದ ಆಯ್ಕೆ. ಇಂತಹ ಸಂವಿಧಾನಿಕ ಆಯ್ಕೆಯನ್ನೇ ನಿಷೇಧಿಸಲು ಹೊರಟಿರುವ ಬಿಜೆಪಿಗರಿಗೆ ಸಂವಿಧಾನ ಎಂದರೇನು ಎಂದು ಇನ್ನೂ ಅರ್ಥವಾದಂತೆ ತೋರುತ್ತಿಲ್ಲ. ಕೇವಲ ಆರ್ ಎಸ್ ಎಸ್ ನ ಹಿತಾಸಕ್ತಿಯನ್ನು ಕಾಪಾಡುವ ಸಲುವಾಗಿ ರಾಜ್ಯವನ್ನು ಕಲಹದ ಕೇಂದ್ರವಾಗಿ ಮಾರ್ಪಡಿಸಲು ಹೊರಟಿರುವ ಮತ್ತು ಸಂವಿಧಾನದ ಮೂಲ ಆಶಯವನ್ನೇ ಅರಿಯದೇ ಅಜ್ಞಾನದಿಂದ ವರ್ತಿಸುತ್ತಿರುವ ಬಸವರಾಜ ಬೊಮ್ಮಾಯಿ ಅವರು ಅಸಂವಿಧಾನಿಕವಾಗಿ ವರ್ತಿಸುತ್ತಿದ್ದು ತಾವು ಮುಖ್ಯಮಂತ್ರಿ ಆಗಿರುವುದು ಸಂವಿಧಾನದ ಬಲದಿಂದ ಎಂಬುದನ್ನು ಮರೆತು ವರ್ತಿಸುತ್ತಿರುವುದು ದುರಂತ!

ಸಂವಿಧಾನಿಕ ವ್ಯವಸ್ಥೆಯಲ್ಲಿ ಜನ ಸಾಮಾನ್ಯರ ಸೇವೆಗಾಗಿ ಆಯ್ಕೆಯಾಗಿರುವ ಬಿಜೆಪಿಯ ಜನ ಪ್ರತಿನಿಧಿಗಳು ಧರ್ಮದ ಹೆಸರಲ್ಲಿ ಜನ ಸಾಮಾನ್ಯರ ಹಿತಕ್ಕೆ ವಿರುದ್ಧವಾದ ಮೌಢ್ಯದ ಪ್ರತಿಪಾದಕರಾಗಿ ಬದಲಾಗಿರುವುದು ಅವರ ದುರ್ಬಲ ಮನಸ್ಥಿತಿಯ ಮತ್ತು ಅತಿ ಅಜ್ಞಾನದ ಪ್ರತೀಕವಾಗಿದೆ.

ಹಿಂದೂ ಧರ್ಮದಿಂದ ಬೇರೆ ಧರ್ಮಕ್ಕೆ ಮತಾಂತರ ಆಗುವುದು ಹಿಂದೂ ಧರ್ಮದ ಉಳಿವಿಗೆ ಉಂಟಾಗುವ ಅಪಾಯವಾಗಿರುವುದರಿಂದ ಅದನ್ನು ತಡೆಯಲು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಲು ಹೊರಟಿರುವ ಬಿಜೆಪಿಗರು ತಮ್ಮದು ಜಾತಿ ಅಸಮಾನತೆ, ಅಸ್ಪೃಶ್ಯತೆ ಹಾಗೂ ಶೋಷಣೆಯನ್ನು ವಿಜೃಂಭಿಸುವ ಧರ್ಮ ಎಂಬುದನ್ನು ಮರೆಯಬಾರದು

ಈ ಹೊತ್ತಿಗೂ ಹಿಂದೂ ಧರ್ಮದ ಪರಿಧಿಯ ಒಳಗೆ ಜಾತಿಯ ಅಸಮಾನತೆಯ ಕಾರಣಕ್ಕೆ ದೌರ್ಜನ್ಯ ಅನುಭವಿಸುತ್ತಿರುವ ಮತ್ತು ಅನಗತ್ಯವಾಗಿ ಕೀಳರಿಮೆಯನ್ನು ಅನುಭವಿಸುತ್ತಿರುವ ಜನ ಸಮುದಾಯಕ್ಕೆ ಎಂದಿಗೂ ಕೂಡಾ ಹಿಂದೂ ಧರ್ಮ ಪ್ರೀತಿ ತೋರಿಸುವ ಮತ್ತು ಘನತೆಯಿಂದ ನಿಯಂತ್ರಿಸುವ ಪ್ರಯತ್ನವನ್ನು ಮಾಡಿಲ್ಲ. ಯಾವಾಗಲೋ ಒಮ್ಮೆ ಸಾರ್ವಜನಿಕವಾಗಿ ನೆನಪಾದಾಗ ಬರೀ ಬಾಯಿ ಮಾತಲ್ಲಿ ಆದರ್ಶ ಸಮಾಜದ ಬಗ್ಗೆ ಪ್ರವಚನ ನೀಡುವ ಮಂದಿ, ಅಂತರಂಗದಲ್ಲಿ ಅಸಮಾನತೆಯನ್ನು ಆರಾಧಿಸುವವರಾಗಿದ್ದಾರೆ. ದುರ್ದೈವ ಎಂದರೆ ಇದೇ ನೀಚ ಮನಸ್ಥಿತಿಗಳೇ ಸಾಮಾಜಿಕ ನ್ಯಾಯಕ್ಕಾಗಿ ಜಾರಿಗೊಳಿಸಿರುವ ಮೀಸಲಾತಿ ಹಾಗೂ ಇನ್ನಿತರೆ ಜನಪರ ಯೋಜನೆಗಳ ಜಾರಿಯ ವಿರೋಧಿಗಳಾಗಿದ್ದಾರೆ. ಇವರ ಬಾಯಿಂದ ಯಾವತ್ತೂ ಕೂಡಾ ಶೋಷಣೆಯ ವಿರುದ್ಧ ಪ್ರತಿರೋಧದ ದನಿ ಹೊರಡುವುದಿಲ್ಲ, ಸಮಾನತೆಗಾಗಿ ಹೋರಾಟವಂತೂ ಇಲ್ಲವೇ ಇಲ್ಲ. ದಿನ ಬೆಳಗಾದರೆ ಶೋಷಣೆಯನ್ನೇ ಅಸ್ತ್ರ ಮಾಡಿಕೊಂಡು ನಮ್ಮ ಧರ್ಮ ಬಿಟ್ಟು ಹೋಗಬೇಡಿ ಎಂದರೆ ಅದಕ್ಕೆ ನಗದೆ ಇನ್ನೇನು ಮಾಡಬೇಕು?

ಹಿಂದೂ ಧರ್ಮದ ಒಳಗೆ ಪ್ರಜ್ಞಾ ಪೂರ್ವಕವಾಗಿಯೇ ಆಚರಿಸುತ್ತಿರುವ ಜಾತಿ ಶ್ರೇಷ್ಠತೆ, ಅಸ್ಪೃಶ್ಯತೆ ಹಾಗೂ ಸಾಮಾಜಿಕ ಅಸಮಾನತೆಯಂತಹ ಅಮೇದ್ಯದ ವಿರುದ್ಧ ನಿರಂತರ ಹೋರಾಟ ನಡೆಸಿ, ಸಮಾಜದಲ್ಲಿ ಸಮಾನತೆ ಎಂಬುದು ಒಂದು ದೇಶದ ಆರೋಗ್ಯಕರ ಅಭಿವೃದ್ಧಿ ಹಾಗೂ ಮಾನವೀಯ ಮೌಲ್ಯಗಳ ದೃಷ್ಟಿಯಿಂದ ಎಷ್ಟು ಮುಖ್ಯ ಎಂಬ ಸಂಗತಿಯನ್ನು ಮನ ಮುಟ್ಟುವಂತೆ ಪ್ರತಿಪಾದಿಸಿದರೂ ಹಿಂದೂ ಧರ್ಮ ಸುಧಾರಣೆ ಮಾಡುವಲ್ಲಿ ಬಾಬಾ ಸಾಹೇಬರು ಯಶಸ್ಸು ಕಾಣಲಿಲ್ಲ. ಹೀಗಾಗಿಯೇ ಬೇಸರಗೊಂಡ ಅವರು ಹಿಂದೂ ಧರ್ಮವನ್ನು ತೊರೆಯುವಂತಹ ಪರಿಸ್ಥಿತಿ ಉಂಟಾಯಿತು.

ತನ್ನ ಸಹಜೀವಿಗಳೆಲ್ಲಾ ಘನತೆಯಿಂದ ಇರಬೇಕೆಂದು ಬಯಸಿದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬರಂತಹ ಮಹಾನ್ ವ್ಯಕ್ತಿಯನ್ನೇ ಸಂಕಟದಲ್ಲಿ ಮುಳುಗಿಸಿದ ಇವರ ಧರ್ಮದ ಕಲ್ಪನೆಯಲ್ಲಿ ಯಾವುದೇ ಪ್ರಾಮಾಣಿಕತೆ ಉಳಿದಿಲ್ಲ ಎಂಬುದನ್ನು ಈ ದೇಶದ ಪ್ರತಿಯೊಬ್ಬ ಪ್ರಜೆಯೂ ಅರ್ಥ ಮಾಡಿಕೊಳ್ಳಬೇಕು. ಬಾಬಾ ಸಾಹೇಬರ ವಿಷಯದಲ್ಲಿ ಮತಾಂತರ ಎಂಬುದು ಬೇರೊಂದು ಧರ್ಮದ ಆಕರ್ಷಣೆಗೆ ಒಳಗಾಗಿ ಹೋದ ಸಂಗತಿಯಾಗಿರಲಿಲ್ಲ, ಬದಲಿಗೆ ಹಿಂದೂ ಧರ್ಮದ ಒಳಗೇ ಘನತೆ ಮತ್ತು ಮಾನಸಿಕ ನೆಮ್ಮದಿಯಿಂದ ಬದುಕಲು ಸಾಧ್ಯವಾಗದೇ ಮಾಡಿಕೊಂಡ ಅನಿವಾರ್ಯವಾದ ಆಯ್ಕೆಯಾಗಿತ್ತು. ಹೀಗಾಗಿ ಮೂಲಭೂತ ಸಮಸ್ಯೆಗಳನ್ನು ಪರಿಹರಿಸದೇ ಹಿಂದೂ ಧರ್ಮದಿಂದ ಉಂಟಾಗುವ ಮತಾಂತರದ ಬಗ್ಗೆ ಮಾತನಾಡುವ ಹಕ್ಕು ಬಿಜೆಪಿಗರಿಗೆ ಇಲ್ಲ.

1935 ರಲ್ಲಿ ಹಿಂದೂ ಧರ್ಮ ತೊರೆಯುವಾಗ ಬಾಬಾ ಸಾಹೇಬರು “ಧಾರ್ಮಿಕ ಮತ್ತು ಸಾಮಾಜಿಕ ಘನತೆಯನ್ನು ಬಯಸಿ ಆಗುವ ಮತಾಂತರವನ್ನು ಯಾರಾದರೂ ಕೂಡಾ ಅಣಕಿಸಿದರೆ ಅಂತಹ ಮೂರ್ಖರ ಬಗ್ಗೆ ತಲೆ ಕೆಡಿಸಿಕೊಳ್ಳದೇ ಮುನ್ನಡೆಯಿರಿ” ಎಂದು ಹೇಳುತ್ತಾರೆ.

ಈ ನಿಟ್ಟಿನಲ್ಲಿ ಧಾರ್ಮಿಕತೆ ಎಂಬುದು ಸಂವಿಧಾನಿಕವಾದ ಸ್ವತಂತ್ರ ಆಯ್ಕೆಯೇ ವಿನಃ ಯಾರದ್ದೋ ಮತಿಗೆಟ್ಟ ಮೌಢ್ಯದ ಜನರ ಆಜ್ಞೆಗೆ ತಲೆ ಬಾಗಿ ಮಾಡುವ ಆಚರಣೆ ಅಲ್ಲ. ಈ ಸಂಗತಿಯನ್ನು ನಾವು ಅರ್ಥ ಮಾಡಿಕೊಳ್ಳಲೇಬೇಕು.

ಸಂವಿಧಾನವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೇ ಬಿಜೆಪಿಯ ಕೋಮು ಶಕ್ತಿಗಳು ಸನಾತನ ಧರ್ಮ, ಹಿಂದುತ್ವ, ವರ್ಣಾಶ್ರಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಾ ಸಮಾಜದಲ್ಲಿ ಅಸ್ಪೃಶ್ಯತೆ, ಅಸಮಾನತೆ ಹಾಗೂ ಶೋಷಣೆಯ ವಾತಾವರಣವನ್ನೇ ಮುಂದುವರೆಸುತ್ತಾ ಸಾಗಿದರೆ ಈ ದೇಶದ ಎಲ್ಲಾ ಶೋಷಿತ ಜನರೂ ಕೂಡಾ ಬಾಬಾ ಸಾಹೇಬರಂತೆಯೇ ಮತ್ತೊಮ್ಮೆ ಬೌದ್ಧ ಧರ್ಮವನ್ನು ಸ್ವೀಕರಿಸುವ ಮೂಲಕ ಬೌದ್ಧ ಧರ್ಮದ ಮಾನವೀಯ ತತ್ವಗಳ ಆಧಾರದ ಮೇಲೆ ಸಾಮಾಜಿಕತೆಯನ್ನು ಅಧಿಕೃತವಾಗಿ ರೂಪಿಸಿಕೊಂಡು ಅದರ ಆಧಾರದ ಮೇಲೆಯೇ ರಾಜಕೀಯ ಮಾಡಬೇಕಾಗುತ್ತದೆ ಎಂಬುದನ್ನು ನೆನಪಿಸಲು ಬಯಸುತ್ತೇನೆ.

ಮತಾಂತರ ನಿಷೇಧ ಕಾಯ್ದೆ ತರಲು ಹೊರಟಿರುವ ಬಿಜೆಪಿಗರೇ,

“ಯಾವುದೇ ಧರ್ಮದ ಆಚರಣೆಯನ್ನು ಮಾಡುತ್ತಿರುವ ವ್ಯಕ್ತಿಯನ್ನು ಅವರ ಇಚ್ಛೆಗೆ ವಿರುದ್ಧ ಬಲವಂತವಾಗಿ ಇಲ್ಲವೇ ಮೋಸದ ತಂತ್ರಗಳ ಮೂಲಕ ಮತಾಂತರ ಮಾಡಲು ಯತ್ನಿಸುವುದು ಸಂವಿಧಾನ ಬಾಹಿರವಾದ ಕೃತ್ಯ” ಎಂಬುದು ಸಾಮಾನ್ಯ ತಿಳುವಳಿಕೆ ಆಗಿದೆ. ಇನ್ನು ಐಚ್ಛಿಕ ಮತಾಂತರವನ್ನು ತಡೆಯುವುದೂ ಕೂಡಾ ಸಂವಿಧಾನ ಬಾಹಿರ ಎಂಬ ಬೇಗ ಅರಿತುಕೊಂಡು, ಇಂತಹ ಕೆಲಸಕ್ಕೆ ಬಾರದ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳುವುದನ್ನು ಬಿಟ್ಟು, ರೈತರು, ಯುವಕರು ಹಾಗೂ ಸದಾ ಶ್ರಮ ವಹಿಸಿ ದುಡಿಯುತ್ತಿರುವ ಜನ ಸಾಮಾನ್ಯರ ಹಿತಕ್ಕಾಗಿ ಕೆಲಸ ಮಾಡಬೇಕೆಂದು ಈ ಮೂಲಕ ನಾನು ಆಗ್ರಹಿಸುತ್ತೇನೆ!

(ಡಾ.ಹೆಚ್.ಸಿ ಮಹದೇವಪ್ಪನವರು ಮಾಜಿ ಸಚಿವರು, ಕಾಂಗ್ರೆಸ್ ಮುಖಂಡರು.)


ಇದನ್ನೂ ಓದಿ: ಮತಾಂತರ ಆರೋಪ: ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳದಿಂದ ಶಾಲೆ ಮೇಲೆ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮತಾಂತರ ನಿಷೇಧ ಕಾಯ್ದೆ ಜಾರಿಯಾದರೆ ಗುಲಾಮರಿಗೆ ಮತಾಂತರ ಮಾಡಲು ಕಷ್ಟ ಅನ್ನುವ ಅಳಲು

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...