Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ‘ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆ ಮಾಡುತ್ತಿದ್ದಾರೆ’ ಎಂಬುವುದು ನಿಜವೇ?

ಫ್ಯಾಕ್ಟ್‌ಚೆಕ್: ‘ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆ ಮಾಡುತ್ತಿದ್ದಾರೆ’ ಎಂಬುವುದು ನಿಜವೇ?

- Advertisement -
- Advertisement -

ಅಕ್ಕಿ ಗಿರಣಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆ ಮಾಡಲಾಗುತ್ತಿರುವ ದೃಶ್ಯಗಳು ಎಂದು ಪ್ರತಿಪಾದಿಸಿ ವೀಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಪ್ಲಾಸ್ಟಿಕ್ ಹಾಳೆಗಳನ್ನು ಯಂತ್ರಗಳ ಮೂಲಕ ಧಾನ್ಯಗಳ ಆಕಾರದಲ್ಲಿ ಸಣ್ಣ ಪ್ಲಾಸ್ಟಿಕ್ ಉಂಡೆಗಳಾಗಿ ಪರಿವರ್ತಿಸುವುದನ್ನು ಈ ವೀಡಿಯೊದಲ್ಲಿ ಕಾಣುತ್ತದೆ. ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಅಲ್ಲಿ ನಿಜಕ್ಕೂ ಏನು ಮಾಡುತ್ತಿದ್ದಾರೆ ಎಂದು ಪ್ಯಾಕ್ಟ್‌ಚೆಕ್ ಮಾಡೋಣ.

ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ:ಚೀನಾ ವಿಮಾನ ನಿಲ್ದಾಣದ ಚಿತ್ರ ಹಾಕಿ ಯುಪಿಯದ್ದು ಎಂದ ಬಿಜೆಪಿ ನಾಯಕರು!

ಫ್ಯಾಕ್ಟ್‌ಚೆಕ್‌

ವೀಡಿಯೊದ ಸ್ಕ್ರೀನ್‌ಶಾಟ್‌ಗಳನ್ನು ಬಳಸಿಕೊಂಡು ರಿವರ್ಸ್‌ ಇಮೇಜ್‌ ಹುಡುಕಾಟ ನಡೆಸಿದಾಗ, ಚೀನಾದ ಸುದ್ದಿ ವೆಬ್‌ಸೈಟ್ ‘Xinhuanet.com’ ಪ್ರಕಟಿಸಿದ ಲೇಖನದಲ್ಲಿ ಕೂಡಾ ಇದೇ ರೀತಿಯ ಚಿತ್ರಗಳು ಕಂಡುಬಂದಿದೆ. ಪ್ಲಾಸ್ಟಿಕ್ ಅಕ್ಕಿ ತಯಾರಿಸಲಾಗುತ್ತಿದೆ ಎಂಬ ಸುದ್ದಿಯೊಂದಿಗೆ ಈ ವೀಡಿಯೊ 2011 ರಿಂದ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದೆ ಎಂದು ವರದಿಯಾಗಿದೆ. ‘Xinhuanet.com’ ಇದನ್ನು ಪ್ಲಾಸ್ಟಿಕ್ ಉತ್ಪಾದನಾ ಕಂಪನಿಯಲ್ಲಿ ಪ್ಲಾಸ್ಟಿಕ್ ಗ್ರ್ಯಾನ್ಯುಲೇಷನ್ ಪ್ರಕ್ರಿಯೆಯ ದೃಶ್ಯಗಳು ಎಂದು ವರದಿ ಮಾಡಿದೆ.

ಲೇಖನದಲ್ಲಿ ಒದಗಿಸಲಾದ ವಿವರಗಳ ಪ್ರಕಾರ, ಹಲವಾರು ಪ್ಲಾಸ್ಟಿಕ್ ಉತ್ಪಾದನಾ ಕಂಪನಿಗಳು ಪ್ಲಾಸ್ಟಿಕ್ ಪೆಲೆಟೈಜರ್ ಯಂತ್ರಗಳನ್ನು ಬಳಸಿಕೊಂಡು ಈ ಮರು-ಬಳಕೆಯ ಪ್ಲಾಸ್ಟಿಕ್ ಉಂಡೆಗಳನ್ನು ಉತ್ಪಾದಿಸುತ್ತವೆ. ಈ ಅರೆ-ಸಿದ್ಧಪಡಿಸಿದ ಕಚ್ಚಾ ಪ್ಲಾಸ್ಟಿಕ್ ಕಣಗಳನ್ನು ಸಾಮಾನ್ಯವಾಗಿ ಸಂಗ್ರಹಣೆ ಮತ್ತು ಸಾಗಣೆಯ ಸಮಯದಲ್ಲಿ ವಸ್ತುಗಳನ್ನು ಒಡೆಯದೇ ಇರಲು ಅಥವಾ ಮುರಿಯದೇ ಇರಲು ಕುಶನ್ ಮಾಡಲು ಬಳಸಲಾಗುತ್ತದೆ. ಪ್ಲಾಸ್ಟಿಕ್ ಉತ್ಪಾದನಾ ಕಂಪನಿಯಲ್ಲಿ ಪ್ಲಾಸ್ಟಿಕ್ ಕಣಗಳ ಉತ್ಪಾದನೆ ಮಾಡುತ್ತಿರುವ ಇದೇ ರೀತಿಯ ವೀಡಿಯೊವನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಸೋಮನಾಥ ದೇವಾಲಯದ ದೃಶ್ಯಗಳನ್ನು ಕಾಶಿ ವಿಶ್ವನಾಥ ದೇವಾಲಯದ ವಿಡಿಯೊ ಎಂದು ಹಂಚಿಕೊಳ್ಳಲಾಗುತ್ತಿದೆ

ಅಲ್ಲದೆ, ಇನ್ನೊಬ್ಬ ಸಾಮಾಜಿಕ ಜಾಲತಾಣದ ಬಳಕೆದಾರರೊಬ್ಬರು ಹಂಚಿಕೊಂಡಿರುವ ಈ ವೀಡಿಯೊದ ಸ್ಪಷ್ಟ ಆವೃತ್ತಿಯನ್ನು ನಾವು ಗಮನಿಸಿದ್ದೇವೆ. ಇದರಲ್ಲಿ ಪ್ಲಾಸ್ಟಿಕ್ ಕಣಗಳನು ತುಂಬಿಸಿರುವ ಬ್ಯಾಗ್ ಮೇಲೆ ಬರೆದಿರುವ ‘ಇವಿಎ’ ಅನ್ನು ನಾವು ನೋಡಿದ್ದೇವೆ. ಎಥಿಲೀನ್ ವಿನೈಲ್ ಅಸಿಟೇಟ್ (ಇವಿಎ) ಪ್ಲಾಸ್ಟಿಕ್ ಕೈಗಾರಿಕೆಯಲ್ಲಿ ಈ ಪ್ಲಾಸ್ಟಿಕ್‌ ಕಣಗಳನ್ನು ತಯಾರಿಸಲಾಗುತ್ತದೆ. ಇದೇ ರೀತಿಯ ಬ್ಯಾಗ್ ವಿವಿಧ ಇ-ಕಾಮರ್ಸ್ ವೆಬ್‌ಸೈಟ್‌ಗಳಲ್ಲಿ ಕಂಡುಬಂದಿದೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ಬ್ಯಾಗ್‌ನಲ್ಲಿ, ನಾವು ‘ಹನ್ವಾ ಟೋಟಲ್ ಪೆಟ್ರೋಕೆಮಿಕಲ್ ಕಂಪನಿ ಲಿಮಿಟೆಡ್’ ಲೋಗೋವನ್ನು ಕೂಡಾ ನೋಡಬಹುದು. ಹನ್ವಾ ಟೋಟಲ್‌ ಪೆಟ್ರೋಕೆಮಿಕಲ್ ಕಂ. ಲಿಮಿಟೆಡ್ ದಕ್ಷಿಣ ಕೊರಿಯಾ ಮೂಲದ ರಾಸಾಯನಿಕ ಕಂಪನಿಯಾಗಿದೆ. ಹನ್ವಾ ಟೋಟಲ್ ಪೆಟ್ರೋಕೆಮಿಕಲ್ ಕಂ. ಲಿಮಿಟೆಡ್‌ನಲ್ಲಿ EVA ಪ್ಲಾಸ್ಟಿಕ್ ಗ್ರ್ಯಾನ್ಯೂಲ್ ಉತ್ಪಾದನೆಯ ವಿವರಗಳನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ತ್ರಿಪುರದಲ್ಲಿ ಜಿಹಾದ್‌‌ಗೆ ಮಸೀದಿ ಕರೆ ನೀಡಿತೆ? ವೈರಲ್‌ ವಿಡಿಯೊ ಎಲ್ಲಿಯದು?

2016 ರಲ್ಲಿ ನೈಜೀರಿಯಾ ಕಸ್ಟಮ್ಸ್ ಅಧಿಕಾರಿಗಳು 25 ಕೆಜಿಯ 102 ಅಕ್ಕಿ ಚೀಲಗಳನ್ನು “ಪ್ಲಾಸ್ಟಿಕ್ ಅಕ್ಕಿ” ತುಂಬಿದ್ದಾರೆ ಎಂದು ಆರೋಪಿಸಿ ವಶಪಡಿಸಿಕೊಂಡಿದ್ದರು. ನಂತರ, ನೈಜೀರಿಯಾ ಸರ್ಕಾರವು ವಶಪಡಿಸಿಕೊಂಡ ಅಕ್ಕಿ ಚೀಲಗಳಲ್ಲಿ ಪ್ಲಾಸ್ಟಿಕ್ ಅಕ್ಕಿಯನ್ನು ಹೊಂದಿಲ್ಲ ಎಂದು ಅಧಿಕೃತವಾಗಿ ಘೋಷಿಸಿತು. ಹಲವಾರು ಸುದ್ದಿ ವೆಬ್‌ಸೈಟ್‌ಗಳು ‘ಪ್ಲಾಸ್ಟಿಕ್ ಅಕ್ಕಿ’ ಪರಿಕಲ್ಪನೆಯು ಸುಳ್ಳು ಎಂದು ವರದಿ ಮಾಡಿವೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಈ ಎಲ್ಲಾ ಪುರಾವೆಗಳಿಂದ, ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊವು ಪ್ಲಾಸ್ಟಿಕ್ ಕಣಗಳ ಉತ್ಪಾದನಾ ಪ್ರಕ್ರಿಯೆಯನ್ನು ತೋರಿಸುತ್ತದೆಯೇ ಹೊರತು ಪ್ಲಾಸ್ಟಿಕ್ ಅಕ್ಕಿ ಅಲ್ಲ ಎಂದು ತೀರ್ಮಾನಿಸಬಹುದು.

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಸಹ ತನ್ನ ಸುಳ್ಳು ಬಸ್ಟರ್ಸ್‌ ವಿಭಾಗದಲ್ಲಿ ಪ್ಲಾಸ್ಟಿಕ್ ಅಕ್ಕಿ ತಯಾರಿಕೆ ಪ್ರತಿಪಾದನೆಯನ್ನು ತಳ್ಳಿಹಾಕಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಪ್ಲಾಸ್ಟಿಕ್ ಕಣಗಳ ಉತ್ಪಾದನಾ ಪ್ರಕ್ರಿಯೆಯ ವೀಡಿಯೊವನ್ನು ಅಕ್ಕಿ ಗಿರಣಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆಯ ದೃಶ್ಯಗಳಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಎಂಐಎಂಗೆ ಶಾರುಖ್‌ ಬೆಂಬಲವೆಂದು ಫೋಟೋ ತಿರುಚಿ ಅಪಪ್ರಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...