Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮಂಗಳೂರಿನಲ್ಲಿ ಮತ್ಸ್ಯಕನ್ಯೆ ಸಿಕ್ಕಿದೆ ಎಂಬುದು ನಿಜವಲ್ಲ

ಫ್ಯಾಕ್ಟ್‌ಚೆಕ್: ಮಂಗಳೂರಿನಲ್ಲಿ ಮತ್ಸ್ಯಕನ್ಯೆ ಸಿಕ್ಕಿದೆ ಎಂಬುದು ನಿಜವಲ್ಲ

- Advertisement -
- Advertisement -

ನೆಲ್ಲೂರು ಮೈಪಾಡು ಎಂಬಲ್ಲಿ ಮೀನುಗಾರರ ಬಲೆಯಲ್ಲಿ ಮತ್ಸ್ಯಕನ್ಯೆಯೊಂದು ಸಿಕ್ಕಿಕೊಂಡು ದಡಕ್ಕೆ ಬಂದಿರುವ ದೃಶ್ಯ ಎಂದೂ ಹಾಗೂ ಮಂಗಳೂರಿನ ಸಮುದ್ರದಲ್ಲಿ ಕಂಡುಬಂದ ಮತ್ಸ್ಯಕನ್ಯೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಬಲೆಗೆ ಸಿಕ್ಕಿಬಿದ್ದಿದ್ದ ಮತ್ಸ್ಯಕನ್ಯೆಯನ್ನು ಕೆಲವರು ಬಿಡಿಸುವ ದೃಶ್ಯಗಳನ್ನು ನೋಡಬಹುದು. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ.

ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊದ ಸ್ಕ್ರೀನ್‌ಶಾಟ್‌ಗಳನ್ನುರಿವರ್ಸ್‌ ಇಮೇಜ್‌ ಮೂಲಕ ಹುಡುಕಿದಾಗ ಶ್ರೀಲಂಕಾದ ಟ್ರಾವೆಲ್ ವ್ಲೋಗರ್ ಚಾನೆಲ್ ‘ಟ್ರಿಪ್ ಪಿಸ್ಸೊ’ 07 ಜೂನ್ 2021 ರಂದು ತಮ್ಮ ಯೂಟ್ಯೂಬ್‌ನಲ್ಲಿ ಇದೇ ರೀತಿಯ ದೃಶ್ಯಗಳಿರುವ ವೀಡಿಯೊವನ್ನು ಪ್ರಕಟಿಸಿರುವುದು ಕಂಡುಬಂದಿದೆ. ‘Real Mermaid caught in Sri Lanka | TRIP PISSO’ ( ಶ್ರೀಲಂಕಾದಲ್ಲಿ ಸಿಕ್ಕಿಬಿದ್ದ ನಿಜವಾದ  ಮತ್ಸ್ಯಕನ್ಯೆ | ಟ್ರಿಪ್ ಪಿಸ್ಸೋ)  ಶೀರ್ಷಿಕೆಯಡಿಯಲ್ಲಿ ಈ ವೀಡಿಯೊವನ್ನು ಪ್ರಕಟಿಸಲಾಗಿದೆ. ವೈರಲ್‌ ಆದ ವೀಡಿಯೋದಲ್ಲಿ ಕಾಣುತ್ತಿರುವ ದೃಶ್ಯಗಳು ಕಿರುಚಿತ್ರದ ತುಣುಕುಗಳು ಎಂದು ಕಿರುಚಿತ್ರದ ವಿವರಣೆಯಿಂದ ಗೊತ್ತಾಗಿದೆ. ಸಾಗರಗಳಲ್ಲಿ ಹೆಚ್ಚುತ್ತಿರುವ ಮಾಲಿನ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ‘ವಿಶ್ವ ಸಾಗರ ದಿನ’ದ ಸಂದರ್ಭದಲ್ಲಿ 08 ಜೂನ್ 2021 ರಂದು ಈ ವೀಡಿಯೊವನ್ನು ನಿರ್ಮಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಕಿರುಚಿತ್ರ ಮೇಕಿಂಗ್ ವೀಡಿಯೋವನ್ನು 25 ಜೂನ್ 2021 ರಂದು ‘ಬಿಹೈಂಡ್ ಪಿಸ್ಸೋ’ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಕಟಿಸಲಾಗಿದೆ. ‘ಸ್ಕ್ರೀಮ್ ಆಫ್ ದಿ ಮೆರ್ಮೇಯ್ಡ್’ ಕಿರುಚಿತ್ರದ ಚಿತ್ರೀಕರಣವನ್ನು ವೀಡಿಯೊ ಸ್ಪಷ್ಟವಾಗಿ ತೋರಿಸುತ್ತದೆ. ಈ ಮೇಕಿಂಗ್ ವೀಡಿಯೋದಲ್ಲಿ, ಮತ್ಸ್ಯಕನ್ಯೆಯ ಪಾತ್ರವನ್ನು ನಿರ್ವಹಿಸುವ ಹುಡುಗಿ ಮತ್ತು ಆಕೆಗೆ ಇತರರು ಮೇಕಪ್ ಮಾಡುವುದನ್ನು ಸಹ ನಾವು ನೋಡಬಹುದು. ಇದೇ ವೀಡಿಯೋವನ್ನು ‘ಟ್ರಿಪ್ ಪಿಸ್ಸೋ’ ಫೇಸ್‌ಬುಕ್ ಪುಟದಲ್ಲೂ ಪ್ರಕಟಿಸಲಾಗಿದೆ. ಈ ವಿವರಗಳ ಆಧಾರದ ಮೇಲೆ, ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊವು ‘ಸ್ಕ್ರೀಮ್ ಆಫ್ ದಿ ಮೆರ್ಮೇಯ್ಡ್’ ಕಿರುಚಿತ್ರದ ದೃಶ್ಯಗಳನ್ನು ತೋರಿಸುತ್ತಿವೆ ಎಂಬುದು ಖಚಿತ.

ಒಟ್ಟಾರೆಯಾಗಿ‘ಸ್ಕ್ರೀಮ್ ಆಫ್ ದಿ ಮೆರ್ಮೇಯ್ಡ್’ ಕಿರುಚಿತ್ರದ ದೃಶ್ಯಗಳನ್ನು ನೆಲ್ಲೂರು ಮೈಪಾಡುವಿನಲ್ಲಿ ಬಲೆಗೆ ಸಿಕ್ಕಿಬಿದ್ದ ಮತ್ಸ್ಯಕನ್ಯೆ ಎಂದೂ, ಕರ್ನಾಟಕದಲ್ಲಿ ಮಂಗಳೂರಿನ ಸಮುದ್ರದಲ್ಲಿ ಕಂಡುಬಂದ ಮತ್ಸ್ಯಕನ್ಯೆ ಎಂದೂ ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಬ್ರಿಟನ್ ರಾಣಿಗಿಂತ ಸೋನಿಯಾ ಶ್ರೀಮಂತೆ ಎಂಬುದು ಸುಳ್ಳು ಸುದ್ದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...