Homeಕರ್ನಾಟಕಉತ್ತರ ಕನ್ನಡದಲ್ಲಿ ತರಕಾರಿ ದುಬಾರಿ; ಕೃಷಿಕ-ಗ್ರಾಹಕ ಕಂಗಾಲು

ಉತ್ತರ ಕನ್ನಡದಲ್ಲಿ ತರಕಾರಿ ದುಬಾರಿ; ಕೃಷಿಕ-ಗ್ರಾಹಕ ಕಂಗಾಲು

- Advertisement -
- Advertisement -

ಅಕಾಲಿಕ ಮಳೆಯಿಂದ ಭತ್ತ, ಗೋವಿನಜೋಳ, ಹತ್ತಿ, ಕಬ್ಬು, ಅಡಿಕೆ ನೀರುಪಾಲಾಗಿ ರೈತರ ಬದುಕು ಮೂರಾಬಟ್ಟೆಯಾಗಿದ್ದರೆ, ಮತ್ತೊಂದೆಡೆ ತರಕಾರಿ ಬಳೆದು ಬದುಕತ್ತಿದ್ದ ಕೃಷಿಕರ ಕೈಗೆ ಫಸಲು ಸಿಗದಂತಾಗಿದೆ. ನಿರಂತರ ಮಳೆಯ ಮಧ್ಯೆ ಅಳಿದುಳಿದ ತರಕಾರಿ ಮಾರುಕಟ್ಟೆಗೆ ಬರುತ್ತಿದ್ದು ಗಣಮಟ್ಟ ಇಲ್ಲದಾಗಿದೆ. ಇದರಿಂದಾಗಿ ಸಾಮಾನ್ಯವಾಗಿ ಎಲ್ಲ ತರಕಾರಿ ವಿಪರೀತ ತುಟ್ಟಿಯಾಗಿದ್ದು, ಕೃಷಿಕ ಮತ್ತು ಗ್ರಾಹಕ ಇಬ್ಬರ ಕಣ್ಣಲ್ಲೂ ನೀರು ತರಿಸುತ್ತಿದೆ!

ಅನಾಹುತಕಾರಿ ಮಳೆಗೆ ವಿಶೇಷವಾಗಿ ಟೊಮೊಟೊ ಬೆಳೆ ನೆಲ ಕಚ್ಚಿದ್ದು, ಇದ್ದರಿಂದಾಗಿ ಒಂದು ಕೆಜಿ.ಗೆ 80 ರಿಂದ 100ರೂ ಕೊಡಬೇಕಾಗಿದೆ. ಟೊಮೇಟೊದಂತೆ ಉಳಿದ ಕಾಯಿ-ಪಲ್ಲೆ ದರವೂ ಏರಿಕೆಯಾಗಿದೆ. ಇದು ಮಧ್ಯಮ ವರ್ಗದ ಬದುಕನ್ನು ದುರ್ಬರಗೊಳಿಸಿಬಿಟ್ಟಿದೆ. ಉತ್ತರ ಕನ್ನಡಕ್ಕೆ ಪಕ್ಕದ ಧಾರವಾಡ, ಬೆಳಗಾವಿ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಂದ ತರಕಾರಿ-ಟೊಮೇಟೊ ಸರಬರಾಜಾಗುತ್ತದೆ. ಅಲ್ಲೆಲ್ಲ ಮಳೆಯ ಹೊಡೆತಕ್ಕೆ ತರಕಾರಿ ಬೆಳೆ ನಾಶವಾಗಿದೆ. ಇದರಿಂದಾಗಿ ಜಿಲ್ಲೆಯ ತರಕಾರಿ ಮಾರುಕಟ್ಟೆ ಮೇಲೆ ವ್ಯತಿರಿಕ್ತ ಪರಿಣಾಮವಾಗಿದ್ದು, ಗ್ರಾಹಕ ತರಕಾರಿ ಬೆಲೆಯೇರಿಕೆಗೆ ಬೆಚ್ಚಿಬಿದ್ದಿದ್ದಾನೆ!

ಎರಡು ವಾರದ ಹಿಂದೆ ಇದ್ದಕ್ಕಿದಂತೆ ಟೊಮೊಟೊ ದರ ಕೆಜಿಗೆ 100 ರೂ.ದಾಟಿತ್ತು. ನಂತರದ ವಾರದಲ್ಲಿ 40 ರಿಂದ 60 ರೂ.ಗೆ ಇಳಿದಿತ್ತು. ಈಗ ಮತ್ತೆ 70 ರಿಂದ 80 ರೂಗೆ ಏರಿಕೆಯಾಗಿದೆ. ಜತೆಗೆ ಬೇರೆಬೇರೆ ಕಾಯಿ-ಪಲ್ಲೆಯೂ 60 ರಿಂದ 80ರ ಆಸುಪಾಸಿನಲ್ಲೆ ಗಿರಕಿ ಹೊಡೆಯುತ್ತಿರುವುದು ಎಲ್ಲ ವರ್ಗದ ಗ್ರಾಹಕರನ್ನು ದಿಕ್ಕೆಡಿಸಿದೆ. ಅಲ್ಪ-ಸ್ವಲ್ಪ ಏರಿಕೆಯಾದರೆ ಹೇಗಾದರೂ ಸಂಬಾಳಿಸಿ ಕಾಲ ಕಳೆಯಬಹುದು; ಆದರೆ ಈ ರೀತಿ 4-6 ಪಟ್ಟು ದುಬಾರಿಯಾದರೆ ಬದುಕುವುದಾದರೂ ಹೇಗೆ? ಎಂದು ಜನರು ಹೇಳುತ್ತಾರೆ. ನಮಗೇನೂ ಸಂಬಳ-ಕೂಲಿ ಹೆಚ್ಚಾಗಿಲ್ಲ. ದಿನಸಿ, ತರಕಾರಿ ಬೆಲೆ ಮಾತ್ರ ಒಂದೇ ಸಮನೆ ಗಗನಕ್ಕೆ ನೇಗೆಯುತ್ತಿದೆಯೆಂದು ಅಂದಿನ ತುತ್ತು ಅಂದು ಗಳಿಸಿ ತಿನ್ನುವ ಮಂದಿ ಗೋಗರೆಯುತ್ತಾರೆ!

ಇಷ್ಟೇಕೆ ತರಕಾರಿ ದರ ಏರಿಕೆಯಾಗುತ್ತಿದೆ. ನೀವು ಹೇಗೆ ಖರೀದಿಸಲು ಸಾಧ್ಯವಾಗುತ್ತದೆ ಎಂದು ತರಕಾರಿ ವ್ಯಾಪಾರಿಗಳನ್ನು ಕೇಳಿದರೆ, ತರಕಾರಿ ಬೆಳೆಯುವ ಹತ್ತಿರದ ಪ್ರದೇಶಗಳಲ್ಲಿನ ನಿರಂತರ ಅಕಾಲಿಕ ಮಳೆ ಹಾವಳಿಯಿಂದ ಟೊಮ್ಯಾಟೊ ಗಿಡಗಳು ಮತ್ತಿತರ ತರಕಾರಿ ಫಸಲು ಕೊಳೆತುಹೋಗಿದೆ. ದೂರದ ನಾಸಿಕ್‌ನಿಂದ ಟೊಮ್ಯಾಟೊ ತರಿಸುತ್ತಿದ್ದೇವೆ. ಹಾಗಾಗಿ ಸಾಗಾಣಿಕಾ ವೆಚ್ಚ ಮತ್ತು ದುಬಾರಿ ಖರೀದಿಯಿಂದ ತುಟ್ಟಿ ಮಾರದಿದ್ದರೆ ನಮಗೇನು ಗಿಟ್ಟುವುದಿಲ್ಲ ಎಂದು ಬೇಸರದಿಂದಲೆ ಹೇಳುತ್ತಾರೆ. ಮಹಾರಾಷ್ಟ್ರ ಕಡೆಯಿಂದ ಜಿಲ್ಲೆಗೆ ಪ್ರತಿ ದಿನ ಟನ್‌ಗಟ್ಟಲೆ ಟೊಮೇಟೊ ಬರುತ್ತಿದ್ದು ದರವೂ ಗಾಬರಿ ಹುಟ್ಟಿಸುವಂತಿದೆ.

ಉತ್ತರ ಕನ್ನಡಕ್ಕೆ ಹೊರ ಜಿಲ್ಲೆಗಳಿಂದ ಬರುವ ತರಕಾರಿ ಬೆಲೆ ಸದ್ಯಕ್ಕೆ ಚೇತರಿಸಿಕೊಳ್ಳುವ ಸಾಧ್ಯತೆ ಕಾಣಿಸುತ್ತಿಲ್ಲ. ಹಾಗಂತ ಗೋಕರ್ಣ ಸೀಮೆಯ ತರಕಾರಿ ತಾಜಾ ಮತ್ತು ಸ್ವಲ್ಪ ಕಡಿಮೆ ಬೆಲೆಗೆ ಸಿಗತ್ತಿದೆ. ಆ ಭಾಗದ ಹಾಲಕ್ಕಿ ಒಕ್ಕಲು ಬುಡಕಟ್ಟಿನ ಮಂದಿ ಮತ್ತಿತರ ಸಮುದಾಯದವರು ತರಕಾರಿ ಬೆಳೆಯುತ್ತಿದ್ದು ಅದಕ್ಕೆ ವಿಶೇಷ ಬೇಡಿಕೆಯಿದೆ. ಆದರೆ ಜಿಲ್ಲೆಯ ಬೇಡಿಕೆ ಪೂರೈಸುವಷ್ಟು ಪ್ರಮಾಣದಲ್ಲಿ ಗೋಕರ್ಣ ಸೀಮೆಯಲ್ಲಿ ತರಕಾರಿ ಬೆಳೆಯಿಲ್ಲ. ಕೃಷಿ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳಿಯ ಶಾಸಕರು ಒಳ್ಳೆಯ ಗುಣಮಟ್ಟದ ಗೋಕರ್ಣ ಸೀಮೆ ತರಕಾರಿ ಕೃಷಿ ವಿಸ್ತರಣೆಗೆ ಯೋಚಿಸಬೇಕಿದೆಯೆಂಬ ಆಗ್ರಹ ಬಹಳ ಹಿಂದಿನದು. ಈ ದುಬಾರಿ ದಿನಮಾನದಲ್ಲಿ ಗೋಕರ್ಣ ಸೀಮೆ ತರಕಾರಿ ಕ್ಷೇತ್ರ ವಿಸ್ತರಣೆ ಪ್ರೋತ್ಸಾಹಿಸುವ ಅಗತ್ಯದ ಮಾತು ಮತ್ತೆ ಕೇಳಿ ಬರುತ್ತಿದೆ.

ಉತ್ತರ ಕನ್ನಡದ ತರಕಾರಿ ದರ (ಪ್ರತಿ ಕೆಜಿಗೆ)
ಚವಳಿ : 80ರೂ.
ತೊಂಡೆಕಾಯಿ : 30-50ರೂ
ಬೀಟ್ರೂಟ್ : 40-50ರೂ
ಬೆಂಡೆಕಾಯಿ : 60-70ರೂ
ಬೀನ್ಸ್ : 100-120ರೂ
ಹಾಗಲಕಾಯಿ : 80ರೂ.
ಹಸಿ ಮೆಣಸು : 60ರೂ
ನವಿಲುಕೋಸ್ : 60ರೂ

ನುಗ್ಗೆಕಾಯಿ : 100ರೂ
ಬದನೆಕಾಯಿ : 80ರೂ
ಟೊಮ್ಯಾಟೊ : 70-80ರೂ
ಈರುಳ್ಳಿ: 40-50ರೂ
ಬಟಾಣಿ : 30ರೂ
ಹೀರೆಕಾಯಿ : 60ರೂ
ಕ್ಯಾರೇಟ್ : 80ರೂ
ಸೌತೆಕಾಯಿ : 70ರೂ
ಹರಗಿ-1 ಕಟ್ಟು : 10ರೂ
ಬಸಳೆ-1ಕಟ್ಟು : 40ರೂ


ಇದನ್ನೂ ಓದಿ: ಟೊಮಟೊ ಟ್ರಾಲ್‌: ‘ಬೆಲೆ ಏರಿಕೆಕಂಡು ತರಹೇವಾರಿ ಮೀಮ್ಸ್ಸೃಷ್ಟಿ; ನೋಡಿ ನಕ್ಕುಬಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...