Homeಕರ್ನಾಟಕಉತ್ತರ ಕನ್ನಡದಲ್ಲಿ ತರಕಾರಿ ದುಬಾರಿ; ಕೃಷಿಕ-ಗ್ರಾಹಕ ಕಂಗಾಲು

ಉತ್ತರ ಕನ್ನಡದಲ್ಲಿ ತರಕಾರಿ ದುಬಾರಿ; ಕೃಷಿಕ-ಗ್ರಾಹಕ ಕಂಗಾಲು

- Advertisement -
- Advertisement -

ಅಕಾಲಿಕ ಮಳೆಯಿಂದ ಭತ್ತ, ಗೋವಿನಜೋಳ, ಹತ್ತಿ, ಕಬ್ಬು, ಅಡಿಕೆ ನೀರುಪಾಲಾಗಿ ರೈತರ ಬದುಕು ಮೂರಾಬಟ್ಟೆಯಾಗಿದ್ದರೆ, ಮತ್ತೊಂದೆಡೆ ತರಕಾರಿ ಬಳೆದು ಬದುಕತ್ತಿದ್ದ ಕೃಷಿಕರ ಕೈಗೆ ಫಸಲು ಸಿಗದಂತಾಗಿದೆ. ನಿರಂತರ ಮಳೆಯ ಮಧ್ಯೆ ಅಳಿದುಳಿದ ತರಕಾರಿ ಮಾರುಕಟ್ಟೆಗೆ ಬರುತ್ತಿದ್ದು ಗಣಮಟ್ಟ ಇಲ್ಲದಾಗಿದೆ. ಇದರಿಂದಾಗಿ ಸಾಮಾನ್ಯವಾಗಿ ಎಲ್ಲ ತರಕಾರಿ ವಿಪರೀತ ತುಟ್ಟಿಯಾಗಿದ್ದು, ಕೃಷಿಕ ಮತ್ತು ಗ್ರಾಹಕ ಇಬ್ಬರ ಕಣ್ಣಲ್ಲೂ ನೀರು ತರಿಸುತ್ತಿದೆ!

ಅನಾಹುತಕಾರಿ ಮಳೆಗೆ ವಿಶೇಷವಾಗಿ ಟೊಮೊಟೊ ಬೆಳೆ ನೆಲ ಕಚ್ಚಿದ್ದು, ಇದ್ದರಿಂದಾಗಿ ಒಂದು ಕೆಜಿ.ಗೆ 80 ರಿಂದ 100ರೂ ಕೊಡಬೇಕಾಗಿದೆ. ಟೊಮೇಟೊದಂತೆ ಉಳಿದ ಕಾಯಿ-ಪಲ್ಲೆ ದರವೂ ಏರಿಕೆಯಾಗಿದೆ. ಇದು ಮಧ್ಯಮ ವರ್ಗದ ಬದುಕನ್ನು ದುರ್ಬರಗೊಳಿಸಿಬಿಟ್ಟಿದೆ. ಉತ್ತರ ಕನ್ನಡಕ್ಕೆ ಪಕ್ಕದ ಧಾರವಾಡ, ಬೆಳಗಾವಿ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಂದ ತರಕಾರಿ-ಟೊಮೇಟೊ ಸರಬರಾಜಾಗುತ್ತದೆ. ಅಲ್ಲೆಲ್ಲ ಮಳೆಯ ಹೊಡೆತಕ್ಕೆ ತರಕಾರಿ ಬೆಳೆ ನಾಶವಾಗಿದೆ. ಇದರಿಂದಾಗಿ ಜಿಲ್ಲೆಯ ತರಕಾರಿ ಮಾರುಕಟ್ಟೆ ಮೇಲೆ ವ್ಯತಿರಿಕ್ತ ಪರಿಣಾಮವಾಗಿದ್ದು, ಗ್ರಾಹಕ ತರಕಾರಿ ಬೆಲೆಯೇರಿಕೆಗೆ ಬೆಚ್ಚಿಬಿದ್ದಿದ್ದಾನೆ!

ಎರಡು ವಾರದ ಹಿಂದೆ ಇದ್ದಕ್ಕಿದಂತೆ ಟೊಮೊಟೊ ದರ ಕೆಜಿಗೆ 100 ರೂ.ದಾಟಿತ್ತು. ನಂತರದ ವಾರದಲ್ಲಿ 40 ರಿಂದ 60 ರೂ.ಗೆ ಇಳಿದಿತ್ತು. ಈಗ ಮತ್ತೆ 70 ರಿಂದ 80 ರೂಗೆ ಏರಿಕೆಯಾಗಿದೆ. ಜತೆಗೆ ಬೇರೆಬೇರೆ ಕಾಯಿ-ಪಲ್ಲೆಯೂ 60 ರಿಂದ 80ರ ಆಸುಪಾಸಿನಲ್ಲೆ ಗಿರಕಿ ಹೊಡೆಯುತ್ತಿರುವುದು ಎಲ್ಲ ವರ್ಗದ ಗ್ರಾಹಕರನ್ನು ದಿಕ್ಕೆಡಿಸಿದೆ. ಅಲ್ಪ-ಸ್ವಲ್ಪ ಏರಿಕೆಯಾದರೆ ಹೇಗಾದರೂ ಸಂಬಾಳಿಸಿ ಕಾಲ ಕಳೆಯಬಹುದು; ಆದರೆ ಈ ರೀತಿ 4-6 ಪಟ್ಟು ದುಬಾರಿಯಾದರೆ ಬದುಕುವುದಾದರೂ ಹೇಗೆ? ಎಂದು ಜನರು ಹೇಳುತ್ತಾರೆ. ನಮಗೇನೂ ಸಂಬಳ-ಕೂಲಿ ಹೆಚ್ಚಾಗಿಲ್ಲ. ದಿನಸಿ, ತರಕಾರಿ ಬೆಲೆ ಮಾತ್ರ ಒಂದೇ ಸಮನೆ ಗಗನಕ್ಕೆ ನೇಗೆಯುತ್ತಿದೆಯೆಂದು ಅಂದಿನ ತುತ್ತು ಅಂದು ಗಳಿಸಿ ತಿನ್ನುವ ಮಂದಿ ಗೋಗರೆಯುತ್ತಾರೆ!

ಇಷ್ಟೇಕೆ ತರಕಾರಿ ದರ ಏರಿಕೆಯಾಗುತ್ತಿದೆ. ನೀವು ಹೇಗೆ ಖರೀದಿಸಲು ಸಾಧ್ಯವಾಗುತ್ತದೆ ಎಂದು ತರಕಾರಿ ವ್ಯಾಪಾರಿಗಳನ್ನು ಕೇಳಿದರೆ, ತರಕಾರಿ ಬೆಳೆಯುವ ಹತ್ತಿರದ ಪ್ರದೇಶಗಳಲ್ಲಿನ ನಿರಂತರ ಅಕಾಲಿಕ ಮಳೆ ಹಾವಳಿಯಿಂದ ಟೊಮ್ಯಾಟೊ ಗಿಡಗಳು ಮತ್ತಿತರ ತರಕಾರಿ ಫಸಲು ಕೊಳೆತುಹೋಗಿದೆ. ದೂರದ ನಾಸಿಕ್‌ನಿಂದ ಟೊಮ್ಯಾಟೊ ತರಿಸುತ್ತಿದ್ದೇವೆ. ಹಾಗಾಗಿ ಸಾಗಾಣಿಕಾ ವೆಚ್ಚ ಮತ್ತು ದುಬಾರಿ ಖರೀದಿಯಿಂದ ತುಟ್ಟಿ ಮಾರದಿದ್ದರೆ ನಮಗೇನು ಗಿಟ್ಟುವುದಿಲ್ಲ ಎಂದು ಬೇಸರದಿಂದಲೆ ಹೇಳುತ್ತಾರೆ. ಮಹಾರಾಷ್ಟ್ರ ಕಡೆಯಿಂದ ಜಿಲ್ಲೆಗೆ ಪ್ರತಿ ದಿನ ಟನ್‌ಗಟ್ಟಲೆ ಟೊಮೇಟೊ ಬರುತ್ತಿದ್ದು ದರವೂ ಗಾಬರಿ ಹುಟ್ಟಿಸುವಂತಿದೆ.

ಉತ್ತರ ಕನ್ನಡಕ್ಕೆ ಹೊರ ಜಿಲ್ಲೆಗಳಿಂದ ಬರುವ ತರಕಾರಿ ಬೆಲೆ ಸದ್ಯಕ್ಕೆ ಚೇತರಿಸಿಕೊಳ್ಳುವ ಸಾಧ್ಯತೆ ಕಾಣಿಸುತ್ತಿಲ್ಲ. ಹಾಗಂತ ಗೋಕರ್ಣ ಸೀಮೆಯ ತರಕಾರಿ ತಾಜಾ ಮತ್ತು ಸ್ವಲ್ಪ ಕಡಿಮೆ ಬೆಲೆಗೆ ಸಿಗತ್ತಿದೆ. ಆ ಭಾಗದ ಹಾಲಕ್ಕಿ ಒಕ್ಕಲು ಬುಡಕಟ್ಟಿನ ಮಂದಿ ಮತ್ತಿತರ ಸಮುದಾಯದವರು ತರಕಾರಿ ಬೆಳೆಯುತ್ತಿದ್ದು ಅದಕ್ಕೆ ವಿಶೇಷ ಬೇಡಿಕೆಯಿದೆ. ಆದರೆ ಜಿಲ್ಲೆಯ ಬೇಡಿಕೆ ಪೂರೈಸುವಷ್ಟು ಪ್ರಮಾಣದಲ್ಲಿ ಗೋಕರ್ಣ ಸೀಮೆಯಲ್ಲಿ ತರಕಾರಿ ಬೆಳೆಯಿಲ್ಲ. ಕೃಷಿ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳಿಯ ಶಾಸಕರು ಒಳ್ಳೆಯ ಗುಣಮಟ್ಟದ ಗೋಕರ್ಣ ಸೀಮೆ ತರಕಾರಿ ಕೃಷಿ ವಿಸ್ತರಣೆಗೆ ಯೋಚಿಸಬೇಕಿದೆಯೆಂಬ ಆಗ್ರಹ ಬಹಳ ಹಿಂದಿನದು. ಈ ದುಬಾರಿ ದಿನಮಾನದಲ್ಲಿ ಗೋಕರ್ಣ ಸೀಮೆ ತರಕಾರಿ ಕ್ಷೇತ್ರ ವಿಸ್ತರಣೆ ಪ್ರೋತ್ಸಾಹಿಸುವ ಅಗತ್ಯದ ಮಾತು ಮತ್ತೆ ಕೇಳಿ ಬರುತ್ತಿದೆ.

ಉತ್ತರ ಕನ್ನಡದ ತರಕಾರಿ ದರ (ಪ್ರತಿ ಕೆಜಿಗೆ)
ಚವಳಿ : 80ರೂ.
ತೊಂಡೆಕಾಯಿ : 30-50ರೂ
ಬೀಟ್ರೂಟ್ : 40-50ರೂ
ಬೆಂಡೆಕಾಯಿ : 60-70ರೂ
ಬೀನ್ಸ್ : 100-120ರೂ
ಹಾಗಲಕಾಯಿ : 80ರೂ.
ಹಸಿ ಮೆಣಸು : 60ರೂ
ನವಿಲುಕೋಸ್ : 60ರೂ

ನುಗ್ಗೆಕಾಯಿ : 100ರೂ
ಬದನೆಕಾಯಿ : 80ರೂ
ಟೊಮ್ಯಾಟೊ : 70-80ರೂ
ಈರುಳ್ಳಿ: 40-50ರೂ
ಬಟಾಣಿ : 30ರೂ
ಹೀರೆಕಾಯಿ : 60ರೂ
ಕ್ಯಾರೇಟ್ : 80ರೂ
ಸೌತೆಕಾಯಿ : 70ರೂ
ಹರಗಿ-1 ಕಟ್ಟು : 10ರೂ
ಬಸಳೆ-1ಕಟ್ಟು : 40ರೂ


ಇದನ್ನೂ ಓದಿ: ಟೊಮಟೊ ಟ್ರಾಲ್‌: ‘ಬೆಲೆ ಏರಿಕೆಕಂಡು ತರಹೇವಾರಿ ಮೀಮ್ಸ್ಸೃಷ್ಟಿ; ನೋಡಿ ನಕ್ಕುಬಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...